ಮನರಂಜನೆ

ಗುರುವಿನ ಜೊತೆಗೆ ‘ಜಂಬೂ ಸರ್ಕಸ್’ಗೆ ಹೊರಟ ಪ್ರವೀಣ್‍ ತೇಜ್‍

ನಟ ಪ್ರವೀಣ್‍ ತೇಜ್‍ ಅವರನ್ನು ‘ಜಾಲಿ ಡೇಸ್‍’ ಮೂಲಕ ಕನ್ನಡ ಚಿತ್ರರಂಗಕ್ಕೆ ಪರಿಚಯಿಸಿದವರು ಹಿರಿಯ ನಿರ್ದೇಶಕ ಎಂ.ಡಿ. ಶ್ರೀಧರ್‍. ಈಗ 15 ವರ್ಷಗಳ ನಂತರ ಪ್ರವೀಣ್ ತೇಜ್‍ ಅಭಿನಯದಲ್ಲಿ ಒಂದು ಚಿತ್ರ ಮಾಡಿದ್ದಾರೆ ಶ್ರೀಧರ್. ಹೆಸರು ‘ಜಾಲಿ ಡೇಸ್‍’.

ದರ್ಶನ್ ಅಭಿನಯದ ‘ಒಡೆಯ’ ನಂತರ ಎಂ.ಡಿ. ಶ್ರೀಧರ್‍ ನಿರ್ದೇಶನದ ಯಾವೊಂದು ಚಿತ್ರವೂ ಬಿಡುಗಡೆ ಆಗಿರಲಿಲ್ಲ. ಈಗ ಅವರು ಸದ್ದಿಲ್ಲದೆ ‘ಜಂಬೂ ಸರ್ಕಸ್‍’ ಎಂಬ ಚಿತ್ರ ಮಾಡಿ ಮುಗಿಸಿದ್ದಾರೆ. ಈ ಚಿತ್ರ ಸದ್ಯದಲ್ಲೇ ಬಿಡುಗಡೆ ಆಗಲಿದ್ದು, ಅದಕ್ಕೂ ಮುನ್ನ ಇತ್ತೀಚೆಗೆ ಟೀಸರ್‍ ಬಿಡುಗಡೆ ಆಗಿದೆ.

ಮಹತಿ ಕಂಬೈನ್ಸ್ನಡಿ ಎಚ್.ಸಿ. ಸುರೇಶ್ ನಿರ್ಮಾಣ ಮಾಡಿರುವ ‘ಜಂಬೂ ಸವಾರಿ’ ಚಿತ್ರದದಲ್ಲಿ ಪ್ರವೀಣ್ ತೇಜ್‍ಗೆ ನಾಯಕಿಯಾಗಿ ಅಂಜಲಿ ಅನೀಶ್ ನಟಿಸಿದ್ದಾರೆ. ಚಿತ್ರದಲ್ಲಿ ಸ್ವಾತಿ, ಲಕ್ಷ್ಮೀ ಸಿದ್ದಯ್ಯ, ಅಚ್ಚುತ್ ಕುಮಾರ್, ರವಿಶಂಕರ್ ಗೌಡ, ಅವಿನಾಶ್ ಮುಂತಾದವರು ನಟಿಸಿದ್ದಾರೆ.

‘ಜಂಬೂ ಸರ್ಕಸ್‍’ ಚಿತ್ರದ ಕುರಿತು ಮಾತನಾಡಿದ ಶ್ರೀಧರ್, ‘ಮದುವೆಯೊಂದರಲ್ಲಿ ಸುರೇಶ್ ಸಿಕ್ಕಿದ್ದರು. ಆಗ ಒಂದು ಲೈನ್ ಹೇಳಿ ನಮಗೊಂದು ಸಿನಿಮಾ ಮಾಡಿಕೋಡಿ ಎಂದರು. ಇದು ಗೆಳೆಯರಿಬ್ಬರ ಕಥೆ. ಒಂದೇ ಶಾಲೆ, ಕಾಲೇಜ್‌ನಲ್ಲಿ ಓದಿ, ಒಂದೇ ಮಂಟಪದಲ್ಲಿ ಒಂದೇ ದಿನ ಮದುವೆ ಆಗುತ್ತಾರೆ. ಒಂದೇ ಏರಿಯಾದಲ್ಲಿ ಎದಿರು ಬದಿರು ಮನೆ ಮಾಡುತ್ತಾರೆ. ಕೊನೆಗೆ ಅವರಿಗೆ ಒಂದೇ ದಿನ ಮಕ್ಕಳೂ ಕೂಡ ಆಗುತ್ತವೆ. ಇವರ ಗೆಳೆತನ ಅವರ ಹೆಂಡತಿಯರಿಗೆ ಇಷ್ಟ ಇರಲ್ಲ. ಹಾಗಾಗಿ ಮಕ್ಕಳನ್ನು ವೈರಿಗಳಂತೆ ಬೆಳೆಸುತ್ತಾರೆ. ವೈರಿಗಳಾಗಿ ಬೆಳೆದ ನಾಯಕ-ನಾಯಕಿ ಮುಂದೆ ಏನೆಲ್ಲಾ ಮಾಡುತ್ತಾರೆ, ಅವರಿಬ್ಬರ ನಡುವೆ ಏನೆಲ್ಲಾ ನಡೆಯುತ್ತದೆ ಎಂಬುದೇ ಈ ಚಿತ್ರದ ಕಥೆ. ಇದರಲ್ಲಿ ಮೂರು ಫೈಟ್ ಮತ್ತು ಮೂರು ಹಾಡುಗಳಿವೆ’ ಎಂದು ಮಾಹಿತಿ ನೀಡಿದರು.

ನಿರ್ಮಾಪಕ ಹೆಚ್.ಸಿ. ಸುರೇಶ್ 30 ವರ್ಷಗಳಿಂದ ಚಿತ್ರರಂಗದಲ್ಲಿದ್ದಾರೆ. ‘ಫ್ಯಾಮಿಲಿ ಸಿಮಿಮಾ ಮಾಡಬೇಕು ಎಂದುಕೊಂಡಾಗ ಈ‌ ಕಥೆ ರೆಡಿಯಾಯಿತು. ಒಂದು ತಂಡವಾಗಿ ಮಾಡಿದ ಸಿನಿಮಾ ಇದು. ನಿರ್ದೇಶಕರು ಹೆಚ್ಚಿನ ಜವಾಬ್ದಾರಿ ತೆಗೆದುಕೊಂಡು ಒಂದು ಒಳ್ಳೆಯ ಚಿತ್ರ ಮಾಡಿಕೊಟ್ಟಿದ್ದಾರೆ’ ಎಂದರು.

‘ಜಾಲಿ ಡೇಸ್’ ಸಿನಿಮಾ ದಿನಗಳು ನೆನಪಿಗೆ ಬರುತ್ತಿದೆ ಎಂದು ಮಾತು ಪ್ರಾರಂಭಿಸಿದ ಪ್ರವೀಣ್‍ ತೇಜ್‍, ‘ನಾನು ಚಿತ್ರರಂಗಕ್ಕೆ ಬಂದು 15 ವರ್ಷ ಆಯ್ತು. ಈಗಲೂ ಭಯ ಇದೆ. ನನ್ನ ಮೊದಲ ಸಿನಿಮಾ ನಿರ್ದೇಶಕರಾದ ಶ್ರೀಧರ್‍ ಅವರ ಜೊತೆ ಮತ್ತೆ ಸಿನಿಮಾ ಮಾಡಿದ್ದು ವಿಶೇಷ. ಎರಡು ಕುಟುಂಬಗಳ ನಡುವಿನ ಕಥೆ ಈ ಚಿತ್ರದಲ್ಲಿದೆ’ ಎಂದರು.

ನಾಯಕಿ ಅಂಜಲಿ ಇದಕ್ಕೂ ಮೊದಲು ‘ಪದವಿಪೂರ್ವ’ ಚಿತ್ರಕ್ಕೆ ನಾಯಕಿಯಾಗಿದ್ದರು. ಈಗ ಈ ಚಿತ್ರದಲ್ಲಿ ನಟಿಸಿದ್ದಾರೆ. ಚಿತ್ರಕ್ಕೆ ಕೃಷ್ಣಕುಮಾರ್ ಛಾಯಾಗ್ರಹಣ, ರಘು ನಿಡುವಳ್ಳಿ ಸಂಭಾಷಣೆ, ವಾಸುಕಿ ವೈಭವ್‍ ಸಂಗೀತವಿದೆ.

ಭೂಮಿಕಾ

Recent Posts

ಹಾರ್ಮುಝ್ ಜಲಸಂಧಿಯಲ್ಲಿ ಭಾರತೀಯ ಧ್ವಜ ಹೊಂದಿರುವ ಟ್ಯಾಂಕರ್ ಮೇಲೆ ದಾಳಿ

ನವದೆಹಲಿ : ಇರಾನ್-ಅಮೆರಿಕ ಉದ್ವಿಗ್ನತೆಯ ನಡುವೆ ಹಾರ್ಮುಝ್ ಜಲಸಂಧಿಯಲ್ಲಿ ಭಾರತೀಯ ಧ್ವಜ ಹೊಂದಿರುವ ಸೂಪರ್ ಟ್ಯಾಂಕರ್ ಮೇಲೆ ಇರಾನಿಯನ್ ಗನ್‌ಬೋಟ್‌ಗಳಿಂದ…

8 hours ago

ಮತ್ತೆ ಹೊರ್ಮುಜ್‌ ಬಂದ್‌ ಮಾಡಿದ ಇರಾನ್‌

ಟೆಹ್ರಾನ್ : ಅಮೆರಿಕ ಜೊತೆಗಿನ ಮಾತುಕತೆ ಭಾಗವಾಗಿ ಹೊರ್ಮುಜ್‌ ಜಲಸಂಧಿಯಲ್ಲಿ ಮುಕ್ತ ಸಂಚಾರಕ್ಕೆ ಅವಕಾಶ ಕಲ್ಪಿಸಿದ್ದ ಇರಾನ್‌, ತನ್ನ ನಿರ್ಧಾರವನ್ನು…

8 hours ago

ಚಿರತೆಯಿಂದ ಅತ್ತೆ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ : ಸಚಿವೆ ಹೆಬ್ಬಾಳ್ಕರ್‌ ಭರವಸೆ

ಬೆಂಗಳೂರು : ಮೈಸೂರಿನ ಸಿದ್ಧಾರ್ಥನಗರದ ಮನೆಯೊಂದರಲ್ಲಿ ಚಿರತೆ ಮಂಚದಡಿ ಅಡಗಿದ್ದ ವೇಳೆ ಪ್ರಾಣದ ಹಂಗು ತೊರೆದು ವೃದ್ಧ ಅತ್ತೆಯನ್ನು ಸುರಕ್ಷಿತವಾಗಿ…

9 hours ago

ದಕ್ಷಿಣ ಆಫ್ರಿಕಾದಿಂದ ಬನ್ನೇರುಘಟ್ಟ ಮೃಗಾಲಯಕ್ಕೆ ಬಂದ ನಾಲ್ಕು ಚೀತಾ

ಬೆಂಗಳೂರು : ಬನ್ನೇರುಘಟ್ಟ ಮೃಗಾಲಯಕ್ಕೆ ದಕ್ಷಿಣ ಆಫ್ರಿಕಾದಿಂದ ತರಿಸಿಕೊಂಡ 4 ಶಿವಂಗಿ (ಚೀತಾ)ಗಳನ್ನು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ…

10 hours ago

ಕಾಂಗ್ರೆಸ್ ಪಕ್ಷ ಮಹಿಳಾ ಮೀಸಲಾತಿಗೆ ವಿರೋಧಿಸಲ್ಲ: ಗೃಹ ಸಚಿವ ಪರಮೇಶ್ವರ್

ಬೆಂಗಳೂರು- ಕಾಂಗ್ರೆಸ್ ಪಕ್ಷ ಮಹಿಳಾ ಮೀಸಲಾತಿಗೆ ವಿರೋಧ ಇಲ್ಲ. ಕೇಂದ್ರ ಸರ್ಕಾರ ಲೋಕಸಭೆಯ ಸ್ಥಾನಗಳ ಸಂಖ್ಯೆ ಹೆಚ್ಚಿಸುವುದನ್ನು ಮಹಿಳಾ ಮೀಸಲಾತಿಯೊಂದಿಗೆ…

12 hours ago

ಉಡುಪಿ ಶ್ರೀಕೃಷ್ಣನ ದರ್ಶನ ಪಡೆದ ರಾಬರ್ಟ್‌ ವಾದ್ರಾ

ಉಡುಪಿ: ಶ್ರೀಕೃಷ್ಣ ಮಂದಿರಕ್ಕೆ ಸಂಸದೆ ಪ್ರಿಯಾಂಕಾ ಗಾಂಧಿ ಪತಿ ರಾಬರ್ಟ್‌ ವಾದ್ರಾ ಭೇಟಿ ನೀಡಿದರು. ಅವರ ಜನ್ಮದಿನದ ಪ್ರಯುಕ್ತ ಕೆಲವು…

14 hours ago