ನಟಿ ಮತ್ತು ‘ಕನ್ನಡತಿ’ ಧಾರಾವಾಹಿ ಖ್ಯಾತಿಯ ರಂಜಿನಿ ರಾಘವನ್ ಒಂದು ಚಿತ್ರ ನಿರ್ದೇಶನ ಮಾಡುತ್ತಿದ್ದಾರೆ ಎಂಬ ಸುದ್ದಿ ಕೆಲವು ತಿಂಗಳುಗಳ ಹಿಂದೆ ಕೇಳಿ ಬಂದಿತ್ತು. ಆದರೆ, ಆ ಚಿತ್ರ ಯಾವುದು? ಯಾರು ನಟಿಸುತ್ತಿದ್ದಾರೆ? ಎಂಬ ಮಾಹಿತಿಯನ್ನು ಅವರು ಬಿಟ್ಟುಕೊಟ್ಟಿರಲಿಲ್ಲ. ಈಗ ಚಿತ್ರದ ಶೀರ್ಷಿಕೆ ಅನಾವರಣವಾಗಿದ್ದು, ಚಿತ್ರಕ್ಕೆ ‘ಡಿ ಡಿ ಢಿಕ್ಕಿ’ ಎಂಬ ಹೆಸರನ್ನು ಇಡಲಾಗಿದೆ.
ಈ ಚಿತ್ರದಲ್ಲಿ ‘ನೆನಪಿರಲಿ’ ಪ್ರೇಮ್ ನಾಯಕನಾಗಿ ಕಾಣಿಸಿಕೊಂಡರೆ, ಅವರ ಮಗನಾಗಿ ಗಣೇಶ್ ಮಗ ವಿಹಾನ್ ನಟಿಸುತ್ತಿದ್ದಾನೆ. ಈ ಚಿತ್ರವನ್ನು ನಿರ್ದೇಶಕ ಜಡೇಶ್ ಕೆ. ಹಂಪಿ, ರಾಮಕೃಷ್ಣ ಮತ್ತು ಆನಂದ್ ಕುಮಾರ್ ಜೊತೆಯಾಗಿ ನಿರ್ಮಿಸುತ್ತಿದ್ದಾರೆ. ಹಂಪಿ ಪಿಕ್ಚರ್ಸ್ ಎಂಬ ಹೊಸ ನಿರ್ಮಾಣ ಸಂಸ್ಥೆಯನ್ನು ಪ್ರಾರಂಭಿಸಿರುವ ಜಡೇಶ್, R K & A K ಎಂಟರ್ಟೈನ್ಮೆಂಟ್ ಸಂಸ್ಥೆ ಜೊತೆಗೆ ಈ ಚಿತ್ರ ನಿರ್ಮಿಸುತ್ತಿದ್ದಾರೆ. ಶುಕ್ರವಾರ, ಪ್ರೇಮ್ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದು, ಈ ಸಂದರ್ಭದಲ್ಲಿ ಶೀರ್ಷಿಕೆ ಅನಾವರಣವಾಗಿದೆ.
ಈ ಚಿತ್ರದ ಕುರಿತು ಮಾತನಾಡುವ ರಂಜನಿ ರಾಘವನ್, ‘ಈ ಚಿತ್ರದ ಮೂಲಕ ಕಾಮಿಡಿ ಮೂಲಕ ಭಾವನಾತ್ಮಕ ಸನ್ನಿವೇಶಗಳನ್ನು ತೋರಿಸುವ ಪ್ರಯತ್ನ ಮಾಡಲಾಗಿದೆ. ನಾಯಕ ಗಣೇಶ್ ಪುತ್ರ ವಿಹಾನ್ ಚಿತ್ರದಲ್ಲಿ ಪ್ರೇಮ್ ಅವರ ಪುತ್ರನಾಗಿ ಅಭಿನಯಿಸಿದ್ದಾರೆ. ಇಳಯರಾಜ ಅವರು ಚಿತ್ರಕ್ಕೆ ನಾಲ್ಕು ಹಾಡುಗಳನ್ನು ಸಂಯೋಜಿಸಿದ್ದಾರೆ. ಇದೊಂದು ಸಂಗೀತ ಪ್ರಧಾನ ಚಿತ್ರವೂ ಆಗಲಿದೆ. ಈಗಾಗಲೇ ಶೇ. 60ರಷ್ಟು ಮಾತಿನ ಭಾಗದ ಚಿತ್ರೀಕರಣ ಮುಗಿದಿದೆ’ ಎಂದರು.
ಈ ಚಿತ್ರವನ್ನು ಪ್ರೇಮ್ ಮೊದಲು ಒಪ್ಪಿರಲಿಲ್ಲವಂತೆ. ‘ಈ ಕಥೆ ನನ್ನ ಮನ ಮುಟ್ಟಿತು. ರಂಜನಿ ಅವರು ಅಂತಹ ಒಳ್ಳೆಯ ಕಥೆ ಮಾಡಿಕೊಂಡಿದ್ದಾರೆ. ಇಳಯರಾಜ ಅವರು ಸಂಗೀತ ನೀಡಿರುವುದು ಚಿತ್ರದ ತೂಕವನ್ನು ಮತ್ತಷ್ಟು ಹೆಚ್ಚಿಸಿದೆ. ಈ ಚಿತ್ರದ ಚಿತ್ರೀಕರಣ ಮುಗಿಸಿ ಮನೆಗೆ ಹೋದ ನಂತರ ಚಿತ್ರದ ಸನ್ನಿವೇಶಗಳನ್ನು ನೆನಪಿಸಿಕೊಂಡು ಅತ್ತಿದ್ದು ಉಂಟು. ಗಣೇಶ್ ಪುತ್ರ ವಿಹಾನ್ ಕೂಡ ಅದ್ಭುತ ಕಲಾವಿದ. ವಿವಿಧ ಕಾರಣಗಳಿಂದ ತಮ್ಮ ಊರನ್ನು ಬಿಟ್ಟು ಬೆಂಗಳೂರಿಗೆ ಬಂದ ಎಷ್ಟೋ ಜನರನ್ನು ನಾವು ಊರು ಬಿಟ್ಟು ಬಂದಿದ್ದು ತಪ್ಪಾಯಿತಾ? ಎಂಬ ಪ್ರಶ್ನೆ ಈ ಚಿತ್ರ ನೋಡಿದ ಮೇಲೆ ಮೂಡುವುದಂತೂ ಖಂಡಿತಾ’ ಎಂದರು
ಈ ಚಿತ್ರಕ್ಕೆ ಆರೂರು ಸುಧಾಕರ್ ಶೆಟ್ಟಿ ಛಾಯಾಗ್ರಹಣ ಮಾಡಿದರೆ, ಸುಧೀರ್ ಕ್ರಿಯೇಟಿವ್ ಹೆಡ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
ಶಿವಮೊಗ್ಗ: ಮಲೆನಾಡಿನಲ್ಲಿ ಭಾರೀ ಮಳೆಯಾಗುತ್ತಿರುವ ಪರಿಣಾಮ ವಿಶ್ವವಿಖ್ಯಾತ ಜೋಗ ಜಲಪಾತ ಜೀವಕಳೆ ಪಡೆದುಕೊಂಡಿದೆ. ಕಳೆದ ನಾಲ್ಕೈದು ದಿನಗಳಿಂದ ಶಿವಮೊಗ್ಗದಲ್ಲಿ ಭಾರೀ…
ಕೊಡಗು: ಜಿಲ್ಲೆಯಲ್ಲಿ ಕಳೆದ ನಾಲ್ಕೈದು ದಿನಗಳಿಂದ ಧಾರಾಕಾರ ಮಳೆಯಾಗುತ್ತಿದ್ದು, ರೈತರ ಮೊಗದಲ್ಲಿ ಮಂದಹಾಸ ಮನೆಮಾಡಿದೆ. ಜಿಲ್ಲೆಯ ಮಳೆಯ ವಿವರ ಈ…
ಮಡಿಕೇರಿ: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಗಜಪಡೆಗೆ ಆಯ್ಕೆ ಪ್ರಕ್ರಿಯೆಗೆ ಅಧಿಕೃತ ಚಾಲನೆ ಸಿಕ್ಕಿದೆ. ಇದರ ಭಾಗವಾಗಿ…
ತಿರುವನಂತಪುರಂ: ವಯನಾಡಿನಲ್ಲಿ ಮತ್ತೊಂದು ದುರಂತ ಸಂಭವಿಸಿದ್ದು, ಮೆಪ್ಪಾಡಿಯಲ್ಲಿ ಭಾರೀ ಮಳೆಯಿಂದಾಗಿ ಭೂಕುಸಿತ ಉಂಟಾಗಿದೆ. ವಯನಾಡಿನ ಸುರಂಗ ನಿರ್ಮಾಣ ಪ್ರದೇಶದ ಮೀನಾಕ್ಷಿ…
ಮಂಗಳೂರು: ತೂಗುಸೇತುವೆಗಳ ಸರದಾರ, ಸುಳ್ಯದ ವಿಶ್ವೇಶ್ವರಯ್ಯ ಎಂದೇ ಖ್ಯಾತರಾಗಿದ್ದ ಪದ್ಮಶ್ರೀ ಪುರಸ್ಕೃತ ಎಂಜಿನಿಯರ್ ಡಾ.ಗಿರೀಶ್ ಭಾರದ್ವಾಜ್ ಅವರು ಇಂದು ನಿಧನರಾಗಿದ್ದಾರೆ.…
ಕೊಡಗು: ಕಾಫಿ ತೋಟದಲ್ಲಿ ಕಾಡಾನೆ ಮೃತದೇಹ ಪತ್ತೆಯಾಗಿದೆ. ಕುಂಜಿಲ-ಕಕ್ಕಬೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾಲಡಿ ಗ್ರಾಮದಲ್ಲಿ ಘಟನೆ ನಡೆದಿದ್ದು, ಪರದಂಡ…