ಮನರಂಜನೆ

ರಂಜನಿ ರಾಘವನ್‍ ನಿರ್ದೇಶನದಲ್ಲಿ ‘ಡಿ ಡಿ ಢಿಕ್ಕಿ’ ಹೊಡೆಯುತ್ತಿದ್ದಾರೆ ಪ್ರೇಮ್

ನಟಿ ಮತ್ತು ‘ಕನ್ನಡತಿ’ ಧಾರಾವಾಹಿ ಖ್ಯಾತಿಯ ರಂಜಿನಿ ರಾಘವನ್‍ ಒಂದು ಚಿತ್ರ ನಿರ್ದೇಶನ ಮಾಡುತ್ತಿದ್ದಾರೆ ಎಂಬ ಸುದ್ದಿ ಕೆಲವು ತಿಂಗಳುಗಳ ಹಿಂದೆ ಕೇಳಿ ಬಂದಿತ್ತು. ಆದರೆ, ಆ ಚಿತ್ರ ಯಾವುದು? ಯಾರು ನಟಿಸುತ್ತಿದ್ದಾರೆ? ಎಂಬ ಮಾಹಿತಿಯನ್ನು ಅವರು ಬಿಟ್ಟುಕೊಟ್ಟಿರಲಿಲ್ಲ. ಈಗ ಚಿತ್ರದ ಶೀರ್ಷಿಕೆ ಅನಾವರಣವಾಗಿದ್ದು, ಚಿತ್ರಕ್ಕೆ ‘ಡಿ ಡಿ ಢಿಕ್ಕಿ’ ಎಂಬ ಹೆಸರನ್ನು ಇಡಲಾಗಿದೆ.

ಈ ಚಿತ್ರದಲ್ಲಿ ‘ನೆನಪಿರಲಿ’ ಪ್ರೇಮ್‍ ನಾಯಕನಾಗಿ ಕಾಣಿಸಿಕೊಂಡರೆ, ಅವರ ಮಗನಾಗಿ ಗಣೇಶ್‍ ಮಗ ವಿಹಾನ್‍ ನಟಿಸುತ್ತಿದ್ದಾನೆ. ಈ ಚಿತ್ರವನ್ನು ನಿರ್ದೇಶಕ ಜಡೇಶ್‍ ಕೆ. ಹಂಪಿ, ರಾಮಕೃಷ್ಣ ಮತ್ತು ಆನಂದ್ ಕುಮಾರ್ ಜೊತೆಯಾಗಿ ನಿರ್ಮಿಸುತ್ತಿದ್ದಾರೆ. ಹಂಪಿ ಪಿಕ್ಚರ್ಸ್ ಎಂಬ ಹೊಸ ನಿರ್ಮಾಣ ಸಂಸ್ಥೆಯನ್ನು ಪ್ರಾರಂಭಿಸಿರುವ ಜಡೇಶ್, R K & A K ಎಂಟರ್ಟೈನ್ಮೆಂಟ್ ಸಂಸ್ಥೆ ಜೊತೆಗೆ ಈ ಚಿತ್ರ ನಿರ್ಮಿಸುತ್ತಿದ್ದಾರೆ. ಶುಕ್ರವಾರ, ಪ್ರೇಮ್‍ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದು, ಈ ಸಂದರ್ಭದಲ್ಲಿ ಶೀರ್ಷಿಕೆ ಅನಾವರಣವಾಗಿದೆ.

ಈ ಚಿತ್ರದ ಕುರಿತು ಮಾತನಾಡುವ ರಂಜನಿ ರಾಘವನ್, ‘ಈ ಚಿತ್ರದ ಮೂಲಕ ಕಾಮಿಡಿ ಮೂಲಕ ಭಾವನಾತ್ಮಕ ಸನ್ನಿವೇಶಗಳನ್ನು ತೋರಿಸುವ ಪ್ರಯತ್ನ ಮಾಡಲಾಗಿದೆ. ನಾಯಕ ಗಣೇಶ್ ಪುತ್ರ ವಿಹಾನ್ ಚಿತ್ರದಲ್ಲಿ ಪ್ರೇಮ್ ಅವರ ಪುತ್ರನಾಗಿ ಅಭಿನಯಿಸಿದ್ದಾರೆ. ಇಳಯರಾಜ ಅವರು ಚಿತ್ರಕ್ಕೆ ನಾಲ್ಕು ಹಾಡುಗಳನ್ನು ಸಂಯೋಜಿಸಿದ್ದಾರೆ. ಇದೊಂದು ಸಂಗೀತ ಪ್ರಧಾನ ಚಿತ್ರವೂ ಆಗಲಿದೆ. ಈಗಾಗಲೇ ಶೇ. 60ರಷ್ಟು ಮಾತಿನ ಭಾಗದ ಚಿತ್ರೀಕರಣ ಮುಗಿದಿದೆ’ ಎಂದರು.

ಈ ಚಿತ್ರವನ್ನು ಪ್ರೇಮ್‍ ಮೊದಲು ಒಪ್ಪಿರಲಿಲ್ಲವಂತೆ. ‘ಈ ಕಥೆ ನನ್ನ ಮನ ಮುಟ್ಟಿತು. ರಂಜನಿ ಅವರು ಅಂತಹ ಒಳ್ಳೆಯ ಕಥೆ ಮಾಡಿಕೊಂಡಿದ್ದಾರೆ. ಇಳಯರಾಜ ಅವರು ಸಂಗೀತ ನೀಡಿರುವುದು ಚಿತ್ರದ ತೂಕವನ್ನು ಮತ್ತಷ್ಟು ಹೆಚ್ಚಿಸಿದೆ. ಈ ಚಿತ್ರದ ಚಿತ್ರೀಕರಣ ಮುಗಿಸಿ ಮನೆಗೆ ಹೋದ ನಂತರ ಚಿತ್ರದ ಸನ್ನಿವೇಶಗಳನ್ನು ನೆನಪಿಸಿಕೊಂಡು ಅತ್ತಿದ್ದು ಉಂಟು. ಗಣೇಶ್ ಪುತ್ರ ವಿಹಾನ್ ಕೂಡ ಅದ್ಭುತ ಕಲಾವಿದ. ವಿವಿಧ ಕಾರಣಗಳಿಂದ ತಮ್ಮ ಊರನ್ನು ಬಿಟ್ಟು ಬೆಂಗಳೂರಿಗೆ ಬಂದ ಎಷ್ಟೋ ಜನರನ್ನು ನಾವು ಊರು ಬಿಟ್ಟು ಬಂದಿದ್ದು ತಪ್ಪಾಯಿತಾ? ಎಂಬ ಪ್ರಶ್ನೆ ಈ ಚಿತ್ರ ನೋಡಿದ ಮೇಲೆ ಮೂಡುವುದಂತೂ ಖಂಡಿತಾ’ ಎಂದರು

ಈ ಚಿತ್ರಕ್ಕೆ ಆರೂರು ಸುಧಾಕರ್‍ ಶೆಟ್ಟಿ ಛಾಯಾಗ್ರಹಣ ಮಾಡಿದರೆ, ಸುಧೀರ್ ಕ್ರಿಯೇಟಿವ್ ಹೆಡ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

ಆಂದೋಲನ ಡೆಸ್ಕ್

Recent Posts

ರಷ್ಯಾ ಮೇಲೆ ಉಕ್ರೇನ್‌ ಭೀಕರ ಡ್ರೋನ್‌ ದಾಳಿ: 4 ಮಂದಿ ಸಾವು

ಮಾಸ್ಕೋ: ಉಕ್ರೇನ್‌ ಶನಿವಾರ ರಾತ್ರೋರಾತ್ರಿ ಮಾಸ್ಕೋ ಸೇರಿದಂತೆ ರಷ್ಯಾದ ಅನೇಕ ಭಾಗಗಳನ್ನು ಗುರಿಯಾಗಿಸಿಕೊಂಡು ಡ್ರೋನ್‌ ದಾಳಿ ನಡೆಸಿದೆ. ಈ ವೈಮಾನಿಕ…

5 hours ago

ಮೈಸೂರಿನಲ್ಲಿ ಜನರೊಂದಿಗೆ ಜನತಾದಳ ಕಾರ್ಯಕ್ರಮ

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನೇ ಸೋಲಿಸಿದ ಕ್ಷೇತ್ರ ಎಂಬ ಖ್ಯಾತಿ ಹೊಂದಿರುವ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಭಾನುವಾರ ನಡೆದ ಜನರೊಂದಿಗೆ ಜನತಾದಳ…

6 hours ago

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡ ಪರಿಣಾಮ ರಾಜ್ಯದ ಅನೇಕ ಕಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…

7 hours ago

ಕಳೆದ ಮೂರು ದಿನಗಳಿಂದ ಮಹದೇಶ್ವರ ಬೆಟ್ಟಕ್ಕೆ ಲಕ್ಷಾಂತದ ಮಂದಿ ಭಕ್ತರು ಭೇಟಿ

ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು : ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ…

7 hours ago

ಕಾಡಿನಲ್ಲಿ ಅಕ್ರಮವಾಗಿ ಚರ್ಚ್‌ ನಿರ್ಮಾಣ: 40ಕ್ಕೂ ಹೆಚ್ಚು ಜನರ ಬಂಧನ

ಕೊಡಗು: ಕಾಡಿನೊಳಗೆ ಅಕ್ರಮವಾಗಿ ನಿರ್ಮಿಸಿಕೊಂಡಿದ್ದ ಚರ್ಚ್‌ ಉದ್ಘಾಟನೆಗೆ ಬಂದಿದ್ದ 40ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಕೊಡಗಿನಲ್ಲಿ…

8 hours ago

ಹಾರ್ಮುಜ್‌ ದಾಟಿ ಸುರಕ್ಷಿತವಾಗಿ ಭಾರತಕ್ಕೆ ಬಂತು 20,000 ಟನ್‌ ಎಲ್‌ಪಿಜಿ ಟ್ಯಾಂಕರ್‌

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ನಿರಂತರ ಉದ್ವಿಗ್ನತೆ ಮತ್ತು ಹೆಚ್ಚುತ್ತಿರುವ ಇಂಧನ ಬೆಲೆಗಳ ನಡುವೆಯೇ ಸುಮಾರು 20,000 ಟನ್ ಎಲ್‍ಪಿಜಿಯನ್ನು ಹೊತ್ತ…

8 hours ago