ಮನರಂಜನೆ

ರಂಜನಿ ರಾಘವನ್‍ ನಿರ್ದೇಶನದಲ್ಲಿ ‘ಡಿ ಡಿ ಢಿಕ್ಕಿ’ ಹೊಡೆಯುತ್ತಿದ್ದಾರೆ ಪ್ರೇಮ್

ನಟಿ ಮತ್ತು ‘ಕನ್ನಡತಿ’ ಧಾರಾವಾಹಿ ಖ್ಯಾತಿಯ ರಂಜಿನಿ ರಾಘವನ್‍ ಒಂದು ಚಿತ್ರ ನಿರ್ದೇಶನ ಮಾಡುತ್ತಿದ್ದಾರೆ ಎಂಬ ಸುದ್ದಿ ಕೆಲವು ತಿಂಗಳುಗಳ ಹಿಂದೆ ಕೇಳಿ ಬಂದಿತ್ತು. ಆದರೆ, ಆ ಚಿತ್ರ ಯಾವುದು? ಯಾರು ನಟಿಸುತ್ತಿದ್ದಾರೆ? ಎಂಬ ಮಾಹಿತಿಯನ್ನು ಅವರು ಬಿಟ್ಟುಕೊಟ್ಟಿರಲಿಲ್ಲ. ಈಗ ಚಿತ್ರದ ಶೀರ್ಷಿಕೆ ಅನಾವರಣವಾಗಿದ್ದು, ಚಿತ್ರಕ್ಕೆ ‘ಡಿ ಡಿ ಢಿಕ್ಕಿ’ ಎಂಬ ಹೆಸರನ್ನು ಇಡಲಾಗಿದೆ.

ಈ ಚಿತ್ರದಲ್ಲಿ ‘ನೆನಪಿರಲಿ’ ಪ್ರೇಮ್‍ ನಾಯಕನಾಗಿ ಕಾಣಿಸಿಕೊಂಡರೆ, ಅವರ ಮಗನಾಗಿ ಗಣೇಶ್‍ ಮಗ ವಿಹಾನ್‍ ನಟಿಸುತ್ತಿದ್ದಾನೆ. ಈ ಚಿತ್ರವನ್ನು ನಿರ್ದೇಶಕ ಜಡೇಶ್‍ ಕೆ. ಹಂಪಿ, ರಾಮಕೃಷ್ಣ ಮತ್ತು ಆನಂದ್ ಕುಮಾರ್ ಜೊತೆಯಾಗಿ ನಿರ್ಮಿಸುತ್ತಿದ್ದಾರೆ. ಹಂಪಿ ಪಿಕ್ಚರ್ಸ್ ಎಂಬ ಹೊಸ ನಿರ್ಮಾಣ ಸಂಸ್ಥೆಯನ್ನು ಪ್ರಾರಂಭಿಸಿರುವ ಜಡೇಶ್, R K & A K ಎಂಟರ್ಟೈನ್ಮೆಂಟ್ ಸಂಸ್ಥೆ ಜೊತೆಗೆ ಈ ಚಿತ್ರ ನಿರ್ಮಿಸುತ್ತಿದ್ದಾರೆ. ಶುಕ್ರವಾರ, ಪ್ರೇಮ್‍ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದು, ಈ ಸಂದರ್ಭದಲ್ಲಿ ಶೀರ್ಷಿಕೆ ಅನಾವರಣವಾಗಿದೆ.

ಈ ಚಿತ್ರದ ಕುರಿತು ಮಾತನಾಡುವ ರಂಜನಿ ರಾಘವನ್, ‘ಈ ಚಿತ್ರದ ಮೂಲಕ ಕಾಮಿಡಿ ಮೂಲಕ ಭಾವನಾತ್ಮಕ ಸನ್ನಿವೇಶಗಳನ್ನು ತೋರಿಸುವ ಪ್ರಯತ್ನ ಮಾಡಲಾಗಿದೆ. ನಾಯಕ ಗಣೇಶ್ ಪುತ್ರ ವಿಹಾನ್ ಚಿತ್ರದಲ್ಲಿ ಪ್ರೇಮ್ ಅವರ ಪುತ್ರನಾಗಿ ಅಭಿನಯಿಸಿದ್ದಾರೆ. ಇಳಯರಾಜ ಅವರು ಚಿತ್ರಕ್ಕೆ ನಾಲ್ಕು ಹಾಡುಗಳನ್ನು ಸಂಯೋಜಿಸಿದ್ದಾರೆ. ಇದೊಂದು ಸಂಗೀತ ಪ್ರಧಾನ ಚಿತ್ರವೂ ಆಗಲಿದೆ. ಈಗಾಗಲೇ ಶೇ. 60ರಷ್ಟು ಮಾತಿನ ಭಾಗದ ಚಿತ್ರೀಕರಣ ಮುಗಿದಿದೆ’ ಎಂದರು.

ಈ ಚಿತ್ರವನ್ನು ಪ್ರೇಮ್‍ ಮೊದಲು ಒಪ್ಪಿರಲಿಲ್ಲವಂತೆ. ‘ಈ ಕಥೆ ನನ್ನ ಮನ ಮುಟ್ಟಿತು. ರಂಜನಿ ಅವರು ಅಂತಹ ಒಳ್ಳೆಯ ಕಥೆ ಮಾಡಿಕೊಂಡಿದ್ದಾರೆ. ಇಳಯರಾಜ ಅವರು ಸಂಗೀತ ನೀಡಿರುವುದು ಚಿತ್ರದ ತೂಕವನ್ನು ಮತ್ತಷ್ಟು ಹೆಚ್ಚಿಸಿದೆ. ಈ ಚಿತ್ರದ ಚಿತ್ರೀಕರಣ ಮುಗಿಸಿ ಮನೆಗೆ ಹೋದ ನಂತರ ಚಿತ್ರದ ಸನ್ನಿವೇಶಗಳನ್ನು ನೆನಪಿಸಿಕೊಂಡು ಅತ್ತಿದ್ದು ಉಂಟು. ಗಣೇಶ್ ಪುತ್ರ ವಿಹಾನ್ ಕೂಡ ಅದ್ಭುತ ಕಲಾವಿದ. ವಿವಿಧ ಕಾರಣಗಳಿಂದ ತಮ್ಮ ಊರನ್ನು ಬಿಟ್ಟು ಬೆಂಗಳೂರಿಗೆ ಬಂದ ಎಷ್ಟೋ ಜನರನ್ನು ನಾವು ಊರು ಬಿಟ್ಟು ಬಂದಿದ್ದು ತಪ್ಪಾಯಿತಾ? ಎಂಬ ಪ್ರಶ್ನೆ ಈ ಚಿತ್ರ ನೋಡಿದ ಮೇಲೆ ಮೂಡುವುದಂತೂ ಖಂಡಿತಾ’ ಎಂದರು

ಈ ಚಿತ್ರಕ್ಕೆ ಆರೂರು ಸುಧಾಕರ್‍ ಶೆಟ್ಟಿ ಛಾಯಾಗ್ರಹಣ ಮಾಡಿದರೆ, ಸುಧೀರ್ ಕ್ರಿಯೇಟಿವ್ ಹೆಡ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

ಆಂದೋಲನ ಡೆಸ್ಕ್

Recent Posts

ಗಾಂಧಿ ಅಭಿಯಾನ ಅರಿವಿನ ಯಾನ | ಸತ್ಯದ ಆರಾಧಕ ಮೌನವನ್ನು ಅವಲಂಬಿಸುವುದು ಅವಶ್ಯಕ

ನಾನು ಶಾಕಾಹಾರಿ ಮಂಡಲಿಯ ಕಾರ್ಯಕಾರಿ ಸಮಿತಿಯ ಸದಸ್ಯನಾಗಿ ಆರಿಸಲ್ಪಟ್ಟೆನು. ಆದರ ಪ್ರತಿ ಯೊಂದು ಸಭೆಗೂ ನಾನು ತಪ್ಪದೆ ಹಾಜರಾಗುತ್ತಿದ್ದೆ. ಆದರೆ…

7 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಆಗಸ್ಟ್‌ 22 ಶನಿವಾರ  

8 hours ago

ಧಾವಂತ ಬದುಕಿಗೆ ಹೊಸ ಚೈತನ್ಯ ನೀಡುವ ಅರವಟ್ಟಿಗೆ

ಸಾಮಾಜಿಕ ಕಳವಳಿಯ ನೆಲೆಯಲ್ಲಿ ಮೂಡಿರುವ ಕಥಾ ಸಂಕಲನ ಹೆಚ್.ಎಸ್.ಸಿದ್ದಮಲ್ಲಿಕಾರ್ಜುನಸ್ವಾಮಿ, ಹುಂಡೀಪುರ ಸಾಹಿತಿ ಕೊತ್ತಲವಾಡಿ ಶಿವಕುಮಾರ್ ಅವರ ಹೊಸ ಕೃತಿ ‘ಅರವಟ್ಟಿಗೆ’…

9 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಗಾಂಧೀಜಿ ಆತ್ಮಕತೆಯ ಶತಮಾನೋತ್ಸವಕ್ಕೆ ಆಂದೋಲನ ಕೈಜೋಡಿಸಿರುವುದು ಐತಿಹಾಸಿಕ

ಪ್ರೊ. ಜಿ. ಬಿ. ಶಿವರಾಜು, ಟ್ರಸ್ಟಿ, ಕಸ್ತೂರ ಬಾ ಗಾಂಧಿ ಆಶ್ರಮ ಗಾಂಧೀಜಿ ಆತ್ಮಕತೆ ‘ಸತ್ಯದೊಡನೆ ನನ್ನ ಅನ್ವೇಷಣೆ’ಗೆ ೧೦೦…

9 hours ago

ಸಾರ್ವಜನಿಕ ಸ್ಥಳದಲ್ಲಿ ಜಾತಿ ನಿಂದನೆಯಾದರೆ ಮಾತ್ರ ಎಸ್‌ಸಿ,ಎಸ್‌ಟಿ ಕಾಯ್ದೆ ಅನ್ವಯ ; ಸುಪ್ರೀಂ ಕೋರ್ಟ್‌

ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…

24 hours ago

ಆರೋಪದಿಂದ ಮುಕ್ತನಾಗಿ ಹೊರಬರುತ್ತೇನೆ : ಸಚಿವ ನಾಗೇಂದ್ರ ವಿಶ್ವಾಸ

ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…

1 day ago