ಮನರಂಜನೆ

ಕುಂಭನಾದ ಪೃಥ್ವಿರಾಜ್‍: ಮಹೇಶ್‍ ಬಾಬುಗೆ ವಿಲನ್‍

ಎಸ್‍.ಎಸ್‍.ರಾಜಮೌಳಿ ನಿರ್ದೇಶನದ ಹೊಸ ಚಿತ್ರದಲ್ಲಿ ಮಹೇಶ್ ಬಾಬು ನಟಿಸುತ್ತಿರುವ ಸುದ್ದಿ ಗೊತ್ತೇ ಇದೆ. ಈ ಚಿತ್ರದ ಚಿತ್ರೀಕರಣ ಈಗಾಗಲೇ ಪ್ರಾರಂಭವಾಗಿದ್ದು, ರಾಮೋಜಿ ರಾವ್‍ ಫಿಲಂ ಸಿಟಿಯಲ್ಲಿ ಬೃಹತ್‍ ಸೆಟ್‍ಗಳನ್ನು ನಿರ್ಮಿಸಿ ಚಿತ್ರೀಕರಣ ಮಾಡಲಾಗುತ್ತಿದೆ. ಈ ಚಿತ್ರದಲ್ಲಿ ಮಹೇಶ್‍ ಬಾಬುಗೆ ನಾಯಕಿಯಾಗಿ ಪ್ರಿಯಾಂಕಾ ಚೋಪ್ರಾ ಕಾಣಿಸಿಕೊಳ್ಳುತ್ತಿರುವ ಸುದ್ದಿ ಗೊತ್ತೇ ಇದೆ. ಈ ಚಿತ್ರದಲ್ಲಿ ವಿಲನ್‍ ಯಾರಾಗಬಹುದು ಎಂಬ ಪ್ರಶ್ನೆ ಎಲ್ಲರಲ್ಲೂ ಇದ್ದೇ ಇತ್ತು. ಅದಕ್ಕೀಗ ಉತ್ತರ ಸಿಕ್ಕಿದೆ.

ಮಹೇಶ್‍ ಬಾಬು ಎದುರು ವಿಲನ್‍ ಆಗಿ ಮಲಯಾಳಂನ ಜನಪ್ರಿಯ ನಟ ಪೃಥ್ವಿರಾಜ್‍ ಸುಕುಮಾರನ್‍ ನಟಿಸುತ್ತಿದ್ದಾರೆ. ಪೃಥ್ವಿರಾಜ್‍ಗೆ ವಿಲನ್‍ ಪಾತ್ರಗಳು ಹೊಸದೇನಲ್ಲ. ಈಗಾಗಲೇ ಹಿಂದಿಯ ‘ಬಡೇ ಮಿಯಾ ಚೋಟೇ ಮಿಯಾ’ ಸೇರಿದಂತೆ ಕೆಲವು ಚಿತ್ರಗಳಲ್ಲಿ ಅವರು ನೆಗೆಟಿವ್ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಇದೀಗ ರಾಜಮೌಳಿ ಚಿತ್ರದಲ್ಲೂ ಅವರು ಕುಂಭ ಎಂಬ ಪಾತ್ರದಲ್ಲಿ ಅವರು ಕಾಣಿಸಿಕೊಳ್ಳುತ್ತಿದ್ದಾರೆ.

ಇದನ್ನು ಓದಿ:ಸತ್ಯಪ್ರಕಾಶ್ ‍ನಿರ್ದೇಶನದಲ್ಲಿ ಧೀರೇನ್‍ ಹೊಸ ಸಿನಿಮಾ

ಇತ್ತೀಚೆಗೆ, ಕುಂಭ ಪಾತ್ರದ ಪೋಸ್ಟರ್ ಬಿಡುಗಡೆಯಾಗಿದ್ದು, ಚಿತ್ರದಲ್ಲಿ ಪೃಥ್ವಿರಾಜ್ ಸುಕುಮಾರನ್‍ ಅಂಕವಿಕಲ ವಿಜ್ಞಾನಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ ಎಂಬ ಸುದ್ದಿ ಇದೆ. ಪೃಥ್ವಿರಾಜ್‍ ವ್ಹೀಲ್‍ ಚೇರ್ ಒಂದರಲ್ಲಿ ಕುಳಿತಿದ್ದು, ಅದಕ್ಕೆ ನಾಲ್ಕು ಕೈಗಳಿವೆ. ಈ ತರಹದ ಪಾತ್ರಗಳು ಇದಕ್ಕೂ ಮೊದಲು ಸೂರ್ಯ ಅಭಿನಯದ ‘24’, ‘ಕ್ರಿಶ್‍ 3’ ಮತ್ತು ಹಾಲಿವುಡ್‍ನ ‘ಸ್ಪೈಡರ್ ಮ್ಯಾನ್‍ 2’ ಚಿತ್ರಗಳಲ್ಲೂ ಬಂದಿತ್ತು. ‘24’ ಚಿತ್ರದಲ್ಲಿ ಸೂರ್ಯ ಈ ತರಹದ ಪಾತ್ರ ಮಾಡಿದರೆ, ‘ಕ್ರಿಶ್‍ 3’ ಚಿತ್ರದಲ್ಲಿ ವಿವೇಕ್‍ ಒಬೆರಾಯ್‍ ಮಾಡಿದ್ದರು. ನೆಟ್ಟಿಗರು ಪೃಥ್ವಿರಾಜ್‍ ಅವರ ಕುಂಭ ಪಾತ್ರವನ್ನು ಆ ಪಾತ್ರಗಳಿಗೆ ಹೋಲಿಕೆ ಮಾಡುತ್ತಿದ್ದಾರೆ.

ಅಂದಹಾಗೆ, ಈ ಚಿತ್ರಕ್ಕೆ ‘ಗ್ಲೋಬ್‍ ಟ್ರೋಟರ್’ ಎಂಬ ಹೆಸರಿಡಲಾಗಿದೆ ಎಂದ ಹೇಳಲಾಗುತ್ತಿದೆ. ಇದಕ್ಕೂ ಮೊದಲು ಈ ಚಿತ್ರವನ್ನು SSMB 28 ಎಂಬ ಹೆಸರಿನಲ್ಲಿ ತಾತ್ಕಾಲಿಕವಾಗಿ ಕರೆಯಲಾಗುತ್ತಿತ್ತು. ಈ ಚಿತ್ರದ ನಿಜವಾದ ಹೆಸರೇನು ಎಂಬ ವಿಷಯ ನವೆಂಬರ್.15ರಂದು ಗೊತ್ತಾಗಲಿದೆ. ಅಂದು ರಾಮೋಜಿ ಫಿಲಂ ಸಿಟಿಯಲ್ಲಿ ಒಂದು ಕಾರ್ಯಕ್ರಮ ಆಯೋಜಿಸಲಾಗಿದ್ದು, ಈ ಕಾರ್ಯಕ್ರಮದಲ್ಲಿ ಚಿತ್ರದ ಬಗ್ಗೆ ಮತ್ತಷ್ಟು ಮಾಹಿತಿ ಹೊರಬೀಳುವ ಸಾಧ್ಯತೆ ಇದೆ.

ಸದ್ಯ ಅದೇ ರಾಮೋಜಿ ಫಿಲಂ ಸಿಟಿಯಲ್ಲಿ ಚಿತ್ರದ ಕ್ಲೈಮ್ಯಾಕ್ಸ್ ಭಾಗದ ಚಿತ್ರೀಕರಣ ನಡೆಯುತ್ತಿದೆ ಎಂದು ಹೇಳಲಾಗಿದ್ದು, ಈ ಭಾಗದ ಚಿತ್ರೀಕರಣದಲ್ಲಿ ಮಹೇಶ್‍ ಬಾಬು, ಪ್ರಿಯಾಂಕಾ ಚೋಪ್ರಾ, ಪೃಥ್ವಿರಾಜ್‍ ಮುಂತಾದವರು ಭಾಗವಹಿಸಿದ್ದಾರಂತೆ.

ಆಂದೋಲನ ಡೆಸ್ಕ್

Recent Posts

ಪುರಾವೆ ಇಲ್ಲದೇ ಯಾರ ಮೇಲೂ ತನಿಖೆ ಮಾಡಲ್ಲ: ಬಿ.ವೈ.ವಿಜಯೇಂದ್ರ

ಬೆಂಗಳೂರು: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರಿಗೆ ನೊಟೀಸ್ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪ್ರತಿಕ್ರಿಯೆ…

13 mins ago

ಎಚ್.ಡಿ.ಕೋಟೆ: ಬಸ್‌ ವ್ಯವಸ್ಥೆ ಇಲ್ಲದೇ ಶಾಲಾ ವಿದ್ಯಾರ್ಥಿಗಳ ಪರದಾಟ

ಎಚ್.ಡಿ.ಕೋಟೆ: ಬಸ್‌ ವ್ಯವಸ್ಥೆ ಇಲ್ಲದೇ ಶಾಲಾ ವಿದ್ಯಾರ್ಥಿಗಳು ಪರದಾಟ ನಡೆಸುತ್ತಿರುವ ಘಟನೆ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನಲ್ಲಿ ನಡೆದಿದೆ. ತಾಲ್ಲೂಕಿನ…

27 mins ago

ನಿರ್ಮಲಾನಂದನಾಥ ಶ್ರೀಗಳ ಸಮ್ಮುಖದಲ್ಲೇ ಬಹಿರಂಗವಾಗಿ ಕ್ಷಮೆಯಾಚಿಸಿದ ಎಚ್.ಡಿ.ಕುಮಾರಸ್ವಾಮಿ

ಮಂಡ್ಯ: ವಿಸಿ ಫಾರ್ಮ್‌ನ ಕೃಷಿ ಮೇಳದ ಕಾರ್ಯಕ್ರಮದಲ್ಲಿ ಆದಿಚುಂಚನಗಿರಿ ಶ್ರೀಗಳ ಸಮ್ಮುಖದಲ್ಲೇ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಬಹಿರಂಗವಾಗಿ ಕ್ಷಮೆಯಾಚಿಸಿದ್ದಾರೆ.…

39 mins ago

ಸರ್ಕಾರದ ವೈಫಲ್ಯದ ವಿರುದ್ಧ ಕೈ ಶಾಸಕರೇ ಅವಿಶ್ವಾಸ ನಿರ್ಣಯ ಮಂಡಿಸಿದ್ರೂ ಅಚ್ಚರಿಯಿಲ್ಲ: ವಿಜಯೇಂದ್ರ

ಬೆಂಗಳೂರು: ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿ ಸರ್ಕಾರದ ವೈಫಲ್ಯಗಳ ವಿರುದ್ಧ ಕಾಂಗ್ರೆಸ್ ಶಾಸಕರೇ ಅವಿಶ್ವಾಸ ನಿರ್ಣಯ ಮಂಡಿಸಿದರೂ ಅಚ್ಚರಿ ಇಲ್ಲ ಎಂದು…

54 mins ago

ಹುಣಸೂರು| ಗುರುಪುರದ ಬಳಿ ಒಂದು ವರ್ಷದ ಹುಲಿ ಮರಿ ಸೆರೆ

ಹುಣಸೂರು: ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕಿನ ಗುರುಪುರದ ಬಳಿಯ ಜಮೀನೊಂದರಲ್ಲಿ ಓಡಾಡುತ್ತಿದ್ದ ಒಂದು ವರ್ಷದ ಹುಲಿ ಮರಿಯನ್ನು ಅರಣ್ಯಾಧಿಕಾರಿಗಳು ಸೆರೆ…

1 hour ago

ಇಡಿಯಿಂದ ನನಗೆ ಕಿರುಕುಳ ನೀಡಲಾಗುತ್ತಿದೆ: ಡಿಸಿಎಂ ಡಿ.ಕೆ.ಶಿವಕುಮಾರ್‌ ಆಕ್ರೋಶ

ಬೆಂಗಳೂರು: ನ್ಯಾಷನಲ್‌ ಹೆರಾಲ್ಡ್‌ ಹಾಗೂ ಯಂಗ್‌ ಇಂಡಿಯಾ ಸಂಸ್ಥೆಗಳಿಗೆ ದೇಣಿಗೆ ನೀಡಿದ್ದಕ್ಕೆ ಇಡಿ ಸಮನ್ಸ್‌ ನೀಡಿದೆ. ಆ ಮೂಲಕ ನಮಗೆ…

2 hours ago