ಮನರಂಜನೆ

ಬಲರಾಮನಿಗೆ ನಾಯಕಿಯಾದ ಪ್ರಿಯಾ ಆನಂದ್ …

ನಟಿ ಪ್ರಿಯಾ ಆನಂದ್‍ಗೆ ಕನ್ನಡ ಚಿತ್ರರಂಗ ಹೊಸದೇನಲ್ಲ. ಈಗಾಗಲೇ ಅವರು ಪುನೀತ್‍ ರಾಜಕುಮಾರ್‍ ಅಭಿನಯದ ‘ರಾಜ್‍ಕುಮಾರ’ ಮತ್ತು ‘ಯುವರತ್ನ’, ಗಣೇಶ್‍ ಅಭಿನಯದ ‘ಆರೆಂಜ್‍’ ಮತ್ತು ಶಿವರಾಜಜಕುಮಾರ್‍ ಅಭಿನಯದ ‘ಕರಟಕ ದಮನಕ’ ಚಿತ್ರಗಳಲ್ಲಿ ನಟಿಸಿದ್ದರು. ಇದೇ ಮೊದಲ ಬಾರಿಗೆ ಅವರು ಕನ್ನಡದಲ್ಲಿ ರೆಟ್ರೋ ಚಿತ್ರವೊಂದರಲ್ಲಿ ಅಭಿನಯಿಸುತ್ತಿದ್ದಾರೆ.

ಕಳೆದ ವರ್ಷ ‘ಕರಟಕ ದಮನಕ’ ಚಿತ್ರದಲ್ಲಿ ಕಾಣಿಸಿಕೊಂಡು ಮರೆಯಾಗಿದ್ದ ಬಹುಭಾಷಾ ನಟಿ ಪ್ರಿಯಾ ಆನಂದ್‍, ಇದೀಗ ‘ಬಲರಾಮನ ದಿನಗಳು’ ಚಿತ್ರದಲ್ಲಿ ವಿನೋದ್‍ ಪ್ರಭಾಕರ್‍ ಜೋಡಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ.

‘ಬಲರಾಮನ ದಿನಗಳು’ ಚಿತ್ರವು ಬೆಂಗಳೂರು ಭೂಗತಲೋಕದ ಕುರಿತಾದ ಇನ್ನೊಂದು ಚಿತ್ರ. 80ರ ಕಾಲಘಟ್ಟದ ರೆಟ್ರೋ ಶೈಲಿಯ ಚಿತ್ರ. ಈ ಚಿತ್ರವನ್ನು ಕಳೆದ ವರ್ಷವೇ ಘೋಷಣೆ ಮಾಡಲಾಗಿತ್ತು ಮತ್ತು ಈಗಾಗಲೇ ಚಿತ್ರದ ಚಿತ್ರೀಕರಣ ಸಹ ಪ್ರಾರಂಭವಾಗಿದೆ. ವಿನೋದ್ ಪ್ರಭಾಕರ್ ಅಭಿನಯದ 25ನೇ ಚಿತ್ರವಾಗಿರುವ ‘ಬಲರಾಮನ ದಿನಗಳು’ಗೆ ನಾಯಕಿಯಾಗಿ ಪ್ರಿಯಾ ಆನಂದ್‍ ಬಂದಿದ್ದಾರೆ. ದಿನ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ನಾಯಕಿ ಪ್ರಿಯಾ ಆನಂದ್ ಅವರಿಗೆ ಚಿತ್ರತಂಡ ಸ್ವಾಗತ ಹೇಳಿದೆ.

‘ಆ ದಿನಗಳು’ ಖ್ಯಾತಿಯ ಕೆ‌.ಎಂ. ಚೈತನ್ಯ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಈ ಚಿತ್ರಕ್ಕೆ ಎರಡು ಹಂತಗಳ ಚಿತ್ರೀಕರಣ ಮುಕ್ತಾಯವಾಗಿದ್ದು, ಜನವರಿ 15 ರಿಂದ ಮೂರನೇ ಹಂತದ ಚಿತ್ರೀಕರಣ ಆರಂಭವಾಗಲಿದೆ‌.‌

ಇದು ನೈಜ ಘಟನೆಯನ್ನಾಧರಿಸಿದ ಚಿತ್ರವಲ್ಲ ಎನ್ನುವ ಚೈತನ್ಯ, ‘ಇದು 80-90ರ ದಶಕದ ಕಾಲಘಟ್ಟದ ಭೂಗತಲೋಕದ ಕಥೆ. ಯಾವುದೇ ನೈಜ ಘಟನೆ ಅಥವಾ ವ್ಯಕ್ತಿಯ ಕುರಿತಾದ ಚಿತ್ರವಲ್ಲ. ಇದೊಂದು ಕಾಲ್ಪನಿಕ ಕಥೆ’ ಎನ್ನುತ್ತಾರೆ.

ತಮಿಳು ಮತ್ತು ತೆಲುಗಿನಲ್ಲಿ ‘ಕಬಾಲಿ’, ‘ಕಾಲ’, ‘ಕಲ್ಕಿ 2898 AD’ ಮುಂತಾದ ಯಶಸ್ವಿ ಚಿತ್ರಗಳಿಗೆ ಸಂಗೀತ ಸಂಯೋಜಿಸಿರುವ ಜನಪ್ರಿಯ ಸಂಗೀತ ನಿರ್ದೇಶಕ ಸಂತೋಷ್‍ ನಾರಾಯಣ್‍, ‘ಬಲರಾಮನ ದಿನಗಳು’ ಚಿತ್ರದ ಮೂಲಕ ಕನ್ನಡಕ್ಕೆ ಬಂದಿದ್ದಾರೆ. ಈ ಚಿತ್ರವನ್ನು ಪದ್ಮಾವತಿ ಫಿಲಂಸ್ ಬ್ಯಾನರ್‍ನಡಿ ಪದ್ಮಾವತಿ ಜಯರಾಂ ಮತ್ತು ಶ್ರೇಯಸ್‍ ಜೊತೆಯಾಗಿ ನಿರ್ಮಿಸುತ್ತಿದ್ದಾರೆ.

ಭೂಮಿಕಾ

Recent Posts

ಓದುಗರ ಪತ್ರ: ಬಂಡಾಯದ ಹೊಳೆ

ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…

8 hours ago

ಓದುಗರ ಪತ್ರ: ಆತಂಕಕಾರಿ ವಿಚಾರ

ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…

8 hours ago

ಓದುಗರ ಪತ್ರ: ಜ್ಞಾಪಿಸಿಕೊಳ್ಳಬೇಕಿತ್ತು, ಕೃತಜ್ಞತೆ ಹೇಳಬೇಕಿತ್ತು…

ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…

8 hours ago

ಮನುಕುಲದ ಏರಿಳಿತಗಳಿಗೆ ಸಾಕ್ಷಿದಾರರಾದ ಈ ಪೀಳಿಗೆಗಳು

ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…

8 hours ago

ನನೆಗುದಿಗೆ ಬಿದ್ದ ರಾಜ್‌ಘಾಟ್ ಮಾದರಿ ಗಾಂಧಿ ಸ್ಮಾರಕ

ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…

8 hours ago

ಅನಿಲ್ ಚಿಕ್ಕಮಾದುಗೆ ಕೈತಪ್ಪಿದ ಸಚಿವ ಸ್ಥಾನ; ಕ್ಷೇತ್ರದ ಜನರಿಗೆ ನಿರಾಸೆ

ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…

8 hours ago