ಮನರಂಜನೆ

ಬಲರಾಮನಿಗೆ ನಾಯಕಿಯಾದ ಪ್ರಿಯಾ ಆನಂದ್ …

ನಟಿ ಪ್ರಿಯಾ ಆನಂದ್‍ಗೆ ಕನ್ನಡ ಚಿತ್ರರಂಗ ಹೊಸದೇನಲ್ಲ. ಈಗಾಗಲೇ ಅವರು ಪುನೀತ್‍ ರಾಜಕುಮಾರ್‍ ಅಭಿನಯದ ‘ರಾಜ್‍ಕುಮಾರ’ ಮತ್ತು ‘ಯುವರತ್ನ’, ಗಣೇಶ್‍ ಅಭಿನಯದ ‘ಆರೆಂಜ್‍’ ಮತ್ತು ಶಿವರಾಜಜಕುಮಾರ್‍ ಅಭಿನಯದ ‘ಕರಟಕ ದಮನಕ’ ಚಿತ್ರಗಳಲ್ಲಿ ನಟಿಸಿದ್ದರು. ಇದೇ ಮೊದಲ ಬಾರಿಗೆ ಅವರು ಕನ್ನಡದಲ್ಲಿ ರೆಟ್ರೋ ಚಿತ್ರವೊಂದರಲ್ಲಿ ಅಭಿನಯಿಸುತ್ತಿದ್ದಾರೆ.

ಕಳೆದ ವರ್ಷ ‘ಕರಟಕ ದಮನಕ’ ಚಿತ್ರದಲ್ಲಿ ಕಾಣಿಸಿಕೊಂಡು ಮರೆಯಾಗಿದ್ದ ಬಹುಭಾಷಾ ನಟಿ ಪ್ರಿಯಾ ಆನಂದ್‍, ಇದೀಗ ‘ಬಲರಾಮನ ದಿನಗಳು’ ಚಿತ್ರದಲ್ಲಿ ವಿನೋದ್‍ ಪ್ರಭಾಕರ್‍ ಜೋಡಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ.

‘ಬಲರಾಮನ ದಿನಗಳು’ ಚಿತ್ರವು ಬೆಂಗಳೂರು ಭೂಗತಲೋಕದ ಕುರಿತಾದ ಇನ್ನೊಂದು ಚಿತ್ರ. 80ರ ಕಾಲಘಟ್ಟದ ರೆಟ್ರೋ ಶೈಲಿಯ ಚಿತ್ರ. ಈ ಚಿತ್ರವನ್ನು ಕಳೆದ ವರ್ಷವೇ ಘೋಷಣೆ ಮಾಡಲಾಗಿತ್ತು ಮತ್ತು ಈಗಾಗಲೇ ಚಿತ್ರದ ಚಿತ್ರೀಕರಣ ಸಹ ಪ್ರಾರಂಭವಾಗಿದೆ. ವಿನೋದ್ ಪ್ರಭಾಕರ್ ಅಭಿನಯದ 25ನೇ ಚಿತ್ರವಾಗಿರುವ ‘ಬಲರಾಮನ ದಿನಗಳು’ಗೆ ನಾಯಕಿಯಾಗಿ ಪ್ರಿಯಾ ಆನಂದ್‍ ಬಂದಿದ್ದಾರೆ. ದಿನ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ನಾಯಕಿ ಪ್ರಿಯಾ ಆನಂದ್ ಅವರಿಗೆ ಚಿತ್ರತಂಡ ಸ್ವಾಗತ ಹೇಳಿದೆ.

‘ಆ ದಿನಗಳು’ ಖ್ಯಾತಿಯ ಕೆ‌.ಎಂ. ಚೈತನ್ಯ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಈ ಚಿತ್ರಕ್ಕೆ ಎರಡು ಹಂತಗಳ ಚಿತ್ರೀಕರಣ ಮುಕ್ತಾಯವಾಗಿದ್ದು, ಜನವರಿ 15 ರಿಂದ ಮೂರನೇ ಹಂತದ ಚಿತ್ರೀಕರಣ ಆರಂಭವಾಗಲಿದೆ‌.‌

ಇದು ನೈಜ ಘಟನೆಯನ್ನಾಧರಿಸಿದ ಚಿತ್ರವಲ್ಲ ಎನ್ನುವ ಚೈತನ್ಯ, ‘ಇದು 80-90ರ ದಶಕದ ಕಾಲಘಟ್ಟದ ಭೂಗತಲೋಕದ ಕಥೆ. ಯಾವುದೇ ನೈಜ ಘಟನೆ ಅಥವಾ ವ್ಯಕ್ತಿಯ ಕುರಿತಾದ ಚಿತ್ರವಲ್ಲ. ಇದೊಂದು ಕಾಲ್ಪನಿಕ ಕಥೆ’ ಎನ್ನುತ್ತಾರೆ.

ತಮಿಳು ಮತ್ತು ತೆಲುಗಿನಲ್ಲಿ ‘ಕಬಾಲಿ’, ‘ಕಾಲ’, ‘ಕಲ್ಕಿ 2898 AD’ ಮುಂತಾದ ಯಶಸ್ವಿ ಚಿತ್ರಗಳಿಗೆ ಸಂಗೀತ ಸಂಯೋಜಿಸಿರುವ ಜನಪ್ರಿಯ ಸಂಗೀತ ನಿರ್ದೇಶಕ ಸಂತೋಷ್‍ ನಾರಾಯಣ್‍, ‘ಬಲರಾಮನ ದಿನಗಳು’ ಚಿತ್ರದ ಮೂಲಕ ಕನ್ನಡಕ್ಕೆ ಬಂದಿದ್ದಾರೆ. ಈ ಚಿತ್ರವನ್ನು ಪದ್ಮಾವತಿ ಫಿಲಂಸ್ ಬ್ಯಾನರ್‍ನಡಿ ಪದ್ಮಾವತಿ ಜಯರಾಂ ಮತ್ತು ಶ್ರೇಯಸ್‍ ಜೊತೆಯಾಗಿ ನಿರ್ಮಿಸುತ್ತಿದ್ದಾರೆ.

ಭೂಮಿಕಾ

Recent Posts

ಸಿದ್ದರಾಮಯ್ಯ ಆಪ್ತ ಕಾರ್ಯದರ್ಶಿ, ವಿಶೇಷ ಕರ್ತವ್ಯಾಧಿಕಾರಿಗಳ ವರ್ಗಾವಣೆ

ಬೆಂಗಳೂರು : ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ಸಲ್ಲಿಸಿದ ಸಿದ್ದರಾಮಯ್ಯ ಅವರು ತಮ್ಮ ವಿದಾಯದ ಕೊನೇ ಕ್ಷಣದಲ್ಲೂ ಮಹತ್ವದ ಕ್ರಮ ಕೈಗೊಂಡಿದ್ದು,…

6 hours ago

ನನಗೆ ರಾಷ್ಟ್ರ ರಾಜಕಾರಣದಲ್ಲಿ ಆಸಕ್ತಿ ಇಲ್ಲ, ರಾಜ್ಯ ರಾಜಕೀಯದಲ್ಲೇ ಮುಂದುವರಿಯುತ್ತೇನೆ : ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು : ನನಗೆ ರಾಷ್ಟ್ರ ರಾಜಕಾರಣದಲ್ಲಿ ಆಸಕ್ತಿ ಇಲ್ಲ. ರಾಜ್ಯ ರಾಜಕಾರಣದಲ್ಲೇ ಮುಂದುವರಿಯುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಸಿಎಂ…

9 hours ago

ಹೈಕಮಾಂಡ್‌ ಸೂಚನೆಯಂತೆ ರಾಜೀನಾಮೆ : ಸಿದ್ದರಾಮಯ್ಯ ಸುದ್ದಿಗೋಷ್ಠಿಯ ಹೈಲೆಟ್ಸ್‌

ಬೆಂಗಳೂರು : ಹೈಕಮಾಂಡ್‌ ಸೂಚನೆಯಂತೆ ನಾನು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ…

10 hours ago

ಯಾರೇ ಸಿಎಂ ಆದರೂ ಕರ್ನಾಟಕ ಅಭಿವೃದ್ಧಿಯಾಗಲ್ಲ: ವಿಜಯೇಂದ್ರ

ಕೊಪ್ಪಳ: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡುವ ವಿಚಾರ ಸಂಬಂಧ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ. ಈ ಬಗ್ಗೆ…

12 hours ago

ಅಧಿಕಾರ ಬದಲಾವಣೆ ಎನ್ನುವುದು ಹೈಕಮಾಂಡ್ ನಿರ್ಧಾರ: ಶಾಸಕ ತನ್ವೀರ್‌ ಸೇಠ್‌

ಮೈಸೂರು: ಅಧಿಕಾರ ಬದಲಾವಣೆ ಎನ್ನುವುದು ಹೈಕಮಾಂಡ್‌ ನಿರ್ಧಾರ ಎಂದು ಶಾಸಕ ತನ್ವೀರ್‌ ಸೇಠ್‌ ಹೇಳಿದ್ದಾರೆ. ಸಿಎಂ ಸಿದ್ದರಾಮಯ್ಯ ಅಧಿಕಾರ ಹಸ್ತಾಂತರ…

13 hours ago

ಮುಂದೆಯೂ ಇದೇ ರೀತಿ ಸಹಕಾರ ನೀಡಿ: ಮಂತ್ರಿಗಳಿಗೆ ಡಿಸಿಎಂ ಡಿಕೆಶಿ ಮನವಿ

ಬೆಂಗಳೂರು: ಬ್ರೇಕ್‌ಫಾಸ್ಟ್‌ ಸಭೆಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಮಂತ್ರಿಗಳ ಜೊತೆ ಸಹಕಾರವನ್ನು ಕೇಳಿದ್ದಾರೆ. ಸಿಎಂ ಹುದ್ದೆಗೆ ಇಂದು ಸಿದ್ದರಾಮಯ್ಯ ರಾಜೀನಾಮೆ…

14 hours ago