ಮನರಂಜನೆ

ಗನ್‍ ಹಿಡಿದ ಪ್ರಿಯಾಂಕಾ ಚೋಪ್ರಾ; ರಾಜಮೌಳಿ ಚಿತ್ರಕ್ಕೆ ನಾಯಕಿ

ಎಸ್‍.ಎಸ್‍. ರಾಜಮೌಳಿ ನಿರ್ದೇಶನದ ‘ಗ್ಲೋಬ್‍ ಟ್ರೋಟರ್’ ಚಿತ್ರತಂಡದಿಂದ ಪೃಥ್ವಿರಾಜ್‍ ಸುಕುಮಾರನ್‍ ಅವರ ಪೋಸ್ಟರ್ ಕಳೆದ ವಾರವಷ್ಟೇ ಬಿಡುಗಡೆಯಾಗಿತ್ತು. ಇದೀಗ ಚಿತ್ರತಂಡವು ಪ್ರಿಯಾಂಕಾ ಚೋಪ್ರಾ ಅವರ ಪೋಸ್ಟರ್ ಬಿಡುಗಡೆ ಮಾಡಿದೆ.

ಪ್ರಿಯಾಂಕಾ ಈ ಚಿತ್ರದಲ್ಲಿ ಮಂದಾಕಿನಿ ಎಂಬ ಪಾತ್ರವನ್ನು ನಿರ್ವಹಿಸುತ್ತಿದ್ದು, ಹಳದಿ ಸೀರೆ ಉಟ್ಟು ಗನ್ ‍ಹಿಡಿದಿರುವ ಪೋಸ್ಟರ್ ಈಗಾಗಲೇ ವೈರಲ್‍ ಆಗಿದೆ. ಈ ಚಿತ್ರದಲ್ಲಿ ಪ್ರಿಯಾಂಕಾ, ಮಹೇಶ್‍ ಬಾಬುಗೆ ನಾಯಕಿಯಾಗಿ ನಟಿಸುತ್ತಿದ್ದಾರೆ. ಇನ್ನು, ಕುಂಭ ಎಂಬ ಪಾತ್ರದಲ್ಲಿ ಮಲಯಾಳಂನ ಸ್ಟಾರ್ ನಟ ಪೃಥ್ವಿರಾಜ್‍ ಸಹ ನಟಿಸುತ್ತಿದ್ದಾರೆ.

ಇದನ್ನು ಓದಿ: ವಿಕ್ರಮ್‍ ರವಿಚಂದ್ರನ್‍ ಅಭಿನಯದ ‘ಮುಧೋಳ್‍’ ಬಿಡುಗಡೆ ಯಾವಾಗ ಗೊತ್ತಾ?

ಇದಕ್ಕೂ ಮೊದಲು ಈ ಚಿತ್ರವನ್ನು SSMB 28 ಎಂಬ ಹೆಸರಿನಲ್ಲಿ ತಾತ್ಕಾಲಿಕವಾಗಿ ಕರೆಯಲಾಗುತ್ತಿತ್ತು. ಈ ಚಿತ್ರದ ಚಿತ್ರೀಕರಣ ಈಗಾಗಲೇ ಪ್ರಾರಂಭವಾಗಿದ್ದು, ರಾಮೋಜಿ ರಾವ್‍ ಫಿಲಂ ಸಿಟಿಯಲ್ಲಿ ಬೃಹತ್‍ ಸೆಟ್‍ಗಳನ್ನು ನಿರ್ಮಿಸಿ ಚಿತ್ರೀಕರಣ ಮಾಡಲಾಗುತ್ತಿದೆ. ಈ ಭಾಗದ ಚಿತ್ರೀಕರಣದಲ್ಲಿ ಮಹೇಶ್‍ ಬಾಬು, ಪ್ರಿಯಾಂಕಾ ಚೋಪ್ರಾ, ಪೃಥ್ವಿರಾಜ್‍ ಮುಂತಾದವರು ಭಾಗವಹಿಸಿದ್ದಾರಂತೆ.

ಅಂದಹಾಗೆ, ಈ ಚಿತ್ರಕ್ಕೆ ‘ಗ್ಲೋಬ್‍ ಟ್ರೋಟರ್’ ಎಂಬ ಹೆಸರಿಡಲಾಗಿದೆ ಎಂದ ಹೇಳಲಾಗುತ್ತಿದೆ. ನವೆಂಬರ್‍ 15ರಂದು ರಾಮೋಜಿ ಫಿಲಂ ಸಿಟಿಯಲ್ಲಿ ಚಿತ್ರದ ಬೃಹತ್‍ ಕಾರ್ಯಕ್ರಮ ಆಯೋಜಿಸಲಾಗಿದ್ದು, ಈ ಕಾರ್ಯಕ್ರಮದಲ್ಲಿ ಚಿತ್ರದ ಬಗ್ಗೆ ಮತ್ತಷ್ಟು ಮಾಹಿತಿ ಹೊರಬೀಳುವ ಸಾಧ್ಯತೆ ಇದೆ. ಈ ಕಾರ್ಯಕ್ರಮದಲ್ಲಿ 50 ಸಾವಿರ ಜನ ಭಾಗವಹಿಸುವ ನಿರೀಕ್ಷೆ ಇದೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಪೌರ ಕಾರ್ಮಿಕರಿಗೆ ಸೌಲಭ್ಯ ಕಲ್ಪಿಸಿ

ಮೈಸೂರಿನಲ್ಲಿ ಅಧಿಕಾರಿಗಳ ನಿರ್ಲಕ್ಷ್ಯದಿಂದ ಪೌರಕಾರ್ಮಿಕರು ಸಮವಸ್ತ್ರ, ಗುಣಮಟ್ಟದ ಬೆಳಗಿನ ಉಪಾಹಾರ ಮೊದಲಾದ ಸೌಲಭ್ಯಗಳಿಲ್ಲದೇ ಬವಣೆ ಪಡುತ್ತಿರುವುದು, ನಗರ ಪಾಲಿಕೆಯಲ್ಲಿ ೮೪…

2 hours ago

ಓದುಗರ ಪತ್ರ: ಪರೀಕ್ಷೆ ವೇಳೆ ಆರೋಗ್ಯ ಏರುಪೇರಾದರೆ ಬದಲಿ ವ್ಯವಸ್ಥೆ ಕಲ್ಪಿಸಿ

ದೇಶದ ಪ್ರಗತಿಗೆ ಶಿಕ್ಷಣ ಪ್ರಮುಖವಾಗಿದೆ. ಶಾಲಾ, ಕಾಲೇಜು ಹಂತದ ಪರೀಕ್ಷೆಗಳು ಮತ್ತು ಸರ್ಕಾರಿ ಹುದ್ದೆಗಳ ನೇಮಕಾತಿಗೆ ನಡೆಯುವ ಪರೀಕ್ಷಾ ಕೊಠಡಿಯಲ್ಲಿ…

2 hours ago

ಓದುಗರ ಪತ್ರ: ಅಂಚೆ ಕಚೇರಿ ಚಲನ್‌ಗಳು ಕನ್ನಡದಲ್ಲಿರಲಿ

ಅಂಚೆ ಕಚೇರಿಗಳಲ್ಲಿ ಗ್ರಾಹಕರು ಹಣ ಕಟ್ಟುವ ಉಳಿತಾಯ ಖಾತೆ, ಆರ್‌ಡಿ , ಪಿಪಿಎಫ್, ಎಂಐಎಸ್ ಹಾಗೂ ಅಂಚೆ ಕಚೇರಿಯ ವಿವಿಧ…

2 hours ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ: ರಾಜ್ಯ ಸರ್ಕಾರದ ಮೇಲೆ ರಾಜ್ಯಪಾಲರ ಸವಾರಿಗೆ ಬೇಕಿದೆ ಕಡಿವಾಣ

ರಾಜ್ಯಗಳ ಆಡಳಿತ ಸಂವಿಧಾನಬದ್ಧವಾಗಿ ನಡೆಯುವಂತೆ ಮೇಲುಸ್ತುವಾರಿಯಾಗಿ ಕೇಂದ್ರ ಸರ್ಕಾರದ ಶಿಫಾರಸಿನಂತೆ ರಾಷ್ಟ್ರಪತಿ ಅವರು ರಾಜ್ಯಪಾಲರನ್ನು ನೇಮಕ ಮಾಡುವುದು ೧೯೫೦ರಿಂದ ನಡೆದುಕೊಂಡು…

2 hours ago

ಮೂಗಿನ ನೇರಕ್ಕೆ ಇತಿಹಾಸವನ್ನು ತಿರುಚುವುದಿದೆಯಲ್ಲಾ….

‘ಕುಸೂ ಕುಸೂ ಹೇಳಪ್ಪ ಹೇಳು ನನ್ನ ಕಂದಾ. ಅವ್ವಾ... ನಾಳಕ ಬಾವುಟದ ಹಬ್ಬ. ಬಾವುಟ ಏರಿಸೋ ಹಬ್ಬ. ಇಸ್ಕೂಲಿಗೆ ಹೊತ್ತಿಗೆ…

2 hours ago

ಸಂವಿಧಾನ ನಮ್ಮ ಬಳಿ ಇದೆ, ಆದರೆ ಅದರ ಧ್ವನಿ ಎಲ್ಲಿದೆ?

ಸಂವಿಧಾನ ನಮಗೆ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ನೀಡಿದೆ. ಆದರೆ ವಾಸ್ತವದಲ್ಲಿ ನಾವು ಎಷ್ಟು ಮುಕ್ತರಾಗಿದ್ದೇವೆ? ಭ್ರಷ್ಟಾಚಾರ, ಪರಿಸರ ನಾಶ, ಮಾಲಿನ್ಯ ಹಾಗೂ…

2 hours ago