ಮನರಂಜನೆ

ಗನ್‍ ಹಿಡಿದ ಪ್ರಿಯಾಂಕಾ ಚೋಪ್ರಾ; ರಾಜಮೌಳಿ ಚಿತ್ರಕ್ಕೆ ನಾಯಕಿ

ಎಸ್‍.ಎಸ್‍. ರಾಜಮೌಳಿ ನಿರ್ದೇಶನದ ‘ಗ್ಲೋಬ್‍ ಟ್ರೋಟರ್’ ಚಿತ್ರತಂಡದಿಂದ ಪೃಥ್ವಿರಾಜ್‍ ಸುಕುಮಾರನ್‍ ಅವರ ಪೋಸ್ಟರ್ ಕಳೆದ ವಾರವಷ್ಟೇ ಬಿಡುಗಡೆಯಾಗಿತ್ತು. ಇದೀಗ ಚಿತ್ರತಂಡವು ಪ್ರಿಯಾಂಕಾ ಚೋಪ್ರಾ ಅವರ ಪೋಸ್ಟರ್ ಬಿಡುಗಡೆ ಮಾಡಿದೆ.

ಪ್ರಿಯಾಂಕಾ ಈ ಚಿತ್ರದಲ್ಲಿ ಮಂದಾಕಿನಿ ಎಂಬ ಪಾತ್ರವನ್ನು ನಿರ್ವಹಿಸುತ್ತಿದ್ದು, ಹಳದಿ ಸೀರೆ ಉಟ್ಟು ಗನ್ ‍ಹಿಡಿದಿರುವ ಪೋಸ್ಟರ್ ಈಗಾಗಲೇ ವೈರಲ್‍ ಆಗಿದೆ. ಈ ಚಿತ್ರದಲ್ಲಿ ಪ್ರಿಯಾಂಕಾ, ಮಹೇಶ್‍ ಬಾಬುಗೆ ನಾಯಕಿಯಾಗಿ ನಟಿಸುತ್ತಿದ್ದಾರೆ. ಇನ್ನು, ಕುಂಭ ಎಂಬ ಪಾತ್ರದಲ್ಲಿ ಮಲಯಾಳಂನ ಸ್ಟಾರ್ ನಟ ಪೃಥ್ವಿರಾಜ್‍ ಸಹ ನಟಿಸುತ್ತಿದ್ದಾರೆ.

ಇದನ್ನು ಓದಿ: ವಿಕ್ರಮ್‍ ರವಿಚಂದ್ರನ್‍ ಅಭಿನಯದ ‘ಮುಧೋಳ್‍’ ಬಿಡುಗಡೆ ಯಾವಾಗ ಗೊತ್ತಾ?

ಇದಕ್ಕೂ ಮೊದಲು ಈ ಚಿತ್ರವನ್ನು SSMB 28 ಎಂಬ ಹೆಸರಿನಲ್ಲಿ ತಾತ್ಕಾಲಿಕವಾಗಿ ಕರೆಯಲಾಗುತ್ತಿತ್ತು. ಈ ಚಿತ್ರದ ಚಿತ್ರೀಕರಣ ಈಗಾಗಲೇ ಪ್ರಾರಂಭವಾಗಿದ್ದು, ರಾಮೋಜಿ ರಾವ್‍ ಫಿಲಂ ಸಿಟಿಯಲ್ಲಿ ಬೃಹತ್‍ ಸೆಟ್‍ಗಳನ್ನು ನಿರ್ಮಿಸಿ ಚಿತ್ರೀಕರಣ ಮಾಡಲಾಗುತ್ತಿದೆ. ಈ ಭಾಗದ ಚಿತ್ರೀಕರಣದಲ್ಲಿ ಮಹೇಶ್‍ ಬಾಬು, ಪ್ರಿಯಾಂಕಾ ಚೋಪ್ರಾ, ಪೃಥ್ವಿರಾಜ್‍ ಮುಂತಾದವರು ಭಾಗವಹಿಸಿದ್ದಾರಂತೆ.

ಅಂದಹಾಗೆ, ಈ ಚಿತ್ರಕ್ಕೆ ‘ಗ್ಲೋಬ್‍ ಟ್ರೋಟರ್’ ಎಂಬ ಹೆಸರಿಡಲಾಗಿದೆ ಎಂದ ಹೇಳಲಾಗುತ್ತಿದೆ. ನವೆಂಬರ್‍ 15ರಂದು ರಾಮೋಜಿ ಫಿಲಂ ಸಿಟಿಯಲ್ಲಿ ಚಿತ್ರದ ಬೃಹತ್‍ ಕಾರ್ಯಕ್ರಮ ಆಯೋಜಿಸಲಾಗಿದ್ದು, ಈ ಕಾರ್ಯಕ್ರಮದಲ್ಲಿ ಚಿತ್ರದ ಬಗ್ಗೆ ಮತ್ತಷ್ಟು ಮಾಹಿತಿ ಹೊರಬೀಳುವ ಸಾಧ್ಯತೆ ಇದೆ. ಈ ಕಾರ್ಯಕ್ರಮದಲ್ಲಿ 50 ಸಾವಿರ ಜನ ಭಾಗವಹಿಸುವ ನಿರೀಕ್ಷೆ ಇದೆ.

ಆಂದೋಲನ ಡೆಸ್ಕ್

Recent Posts

ಹೋಟೆಲ್,ರೆಸ್ಟೋರೆಂಟ್‌ಗಳ ಮೇಲೆ ಮುಂದುವರೆದ ದಾಳಿ

ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…

4 hours ago

ನಂ.ಗೂಡು | ಮತ್ತೆ ಕಳಚಿ ಬೀಳುತ್ತಿರುವ ಸೇತುವೆಯ ಸೀಲಿಂಗ್ ಕಾಂಕ್ರೀಟ್

ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…

6 hours ago

ರಾವಣನ ಪಾತ್ರವನ್ನ ನನಗಿಂತ ಉತ್ತಮವಾಗಿ ಯಾರೂ ಮಾಡಲು ಸಾಧ್ಯವಿಲ್ಲ : ಯಶ್

ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…

7 hours ago

ರಾಜ್ಯಗಳಿಗೆ ನೀಡುವ ವಿಪತ್ತು ಪರಿಹಾರದಲ್ಲೂ ಕೇಂದ್ರದಿಂದ ವಂಚನೆ : ಸಿಎಜಿ ವರದಿ

ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…

7 hours ago

ಶಾಸಕರ ಭರವಸೆ ಬಳಿಕ ಪ್ರತಿಭಟನೆ ಹಿಂಪಡೆತ : ಮೃತರ ಕುಟುಂಬಕ್ಕೆ ತಲಾ ₹15 ಲಕ್ಷ ಪರಿಹಾರ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…

10 hours ago

ವಾರಣಾಸಿ ಏರ್‌ಫೋರ್ಟ್‌ | ಶಸ್ತ್ರಾಸ್ತ್ರ ತಪಾಸಣೆ ವೇಳೆ ಆಕಸ್ಮಿಕ ಗುಂಡಿನ ದಾಳಿ ; ಇಬ್ಬರಿಗೆ ಗಾಯ

ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…

11 hours ago