ಮನರಂಜನೆ

ಗನ್‍ ಹಿಡಿದ ಪ್ರಿಯಾಂಕಾ ಚೋಪ್ರಾ; ರಾಜಮೌಳಿ ಚಿತ್ರಕ್ಕೆ ನಾಯಕಿ

ಎಸ್‍.ಎಸ್‍. ರಾಜಮೌಳಿ ನಿರ್ದೇಶನದ ‘ಗ್ಲೋಬ್‍ ಟ್ರೋಟರ್’ ಚಿತ್ರತಂಡದಿಂದ ಪೃಥ್ವಿರಾಜ್‍ ಸುಕುಮಾರನ್‍ ಅವರ ಪೋಸ್ಟರ್ ಕಳೆದ ವಾರವಷ್ಟೇ ಬಿಡುಗಡೆಯಾಗಿತ್ತು. ಇದೀಗ ಚಿತ್ರತಂಡವು ಪ್ರಿಯಾಂಕಾ ಚೋಪ್ರಾ ಅವರ ಪೋಸ್ಟರ್ ಬಿಡುಗಡೆ ಮಾಡಿದೆ.

ಪ್ರಿಯಾಂಕಾ ಈ ಚಿತ್ರದಲ್ಲಿ ಮಂದಾಕಿನಿ ಎಂಬ ಪಾತ್ರವನ್ನು ನಿರ್ವಹಿಸುತ್ತಿದ್ದು, ಹಳದಿ ಸೀರೆ ಉಟ್ಟು ಗನ್ ‍ಹಿಡಿದಿರುವ ಪೋಸ್ಟರ್ ಈಗಾಗಲೇ ವೈರಲ್‍ ಆಗಿದೆ. ಈ ಚಿತ್ರದಲ್ಲಿ ಪ್ರಿಯಾಂಕಾ, ಮಹೇಶ್‍ ಬಾಬುಗೆ ನಾಯಕಿಯಾಗಿ ನಟಿಸುತ್ತಿದ್ದಾರೆ. ಇನ್ನು, ಕುಂಭ ಎಂಬ ಪಾತ್ರದಲ್ಲಿ ಮಲಯಾಳಂನ ಸ್ಟಾರ್ ನಟ ಪೃಥ್ವಿರಾಜ್‍ ಸಹ ನಟಿಸುತ್ತಿದ್ದಾರೆ.

ಇದನ್ನು ಓದಿ: ವಿಕ್ರಮ್‍ ರವಿಚಂದ್ರನ್‍ ಅಭಿನಯದ ‘ಮುಧೋಳ್‍’ ಬಿಡುಗಡೆ ಯಾವಾಗ ಗೊತ್ತಾ?

ಇದಕ್ಕೂ ಮೊದಲು ಈ ಚಿತ್ರವನ್ನು SSMB 28 ಎಂಬ ಹೆಸರಿನಲ್ಲಿ ತಾತ್ಕಾಲಿಕವಾಗಿ ಕರೆಯಲಾಗುತ್ತಿತ್ತು. ಈ ಚಿತ್ರದ ಚಿತ್ರೀಕರಣ ಈಗಾಗಲೇ ಪ್ರಾರಂಭವಾಗಿದ್ದು, ರಾಮೋಜಿ ರಾವ್‍ ಫಿಲಂ ಸಿಟಿಯಲ್ಲಿ ಬೃಹತ್‍ ಸೆಟ್‍ಗಳನ್ನು ನಿರ್ಮಿಸಿ ಚಿತ್ರೀಕರಣ ಮಾಡಲಾಗುತ್ತಿದೆ. ಈ ಭಾಗದ ಚಿತ್ರೀಕರಣದಲ್ಲಿ ಮಹೇಶ್‍ ಬಾಬು, ಪ್ರಿಯಾಂಕಾ ಚೋಪ್ರಾ, ಪೃಥ್ವಿರಾಜ್‍ ಮುಂತಾದವರು ಭಾಗವಹಿಸಿದ್ದಾರಂತೆ.

ಅಂದಹಾಗೆ, ಈ ಚಿತ್ರಕ್ಕೆ ‘ಗ್ಲೋಬ್‍ ಟ್ರೋಟರ್’ ಎಂಬ ಹೆಸರಿಡಲಾಗಿದೆ ಎಂದ ಹೇಳಲಾಗುತ್ತಿದೆ. ನವೆಂಬರ್‍ 15ರಂದು ರಾಮೋಜಿ ಫಿಲಂ ಸಿಟಿಯಲ್ಲಿ ಚಿತ್ರದ ಬೃಹತ್‍ ಕಾರ್ಯಕ್ರಮ ಆಯೋಜಿಸಲಾಗಿದ್ದು, ಈ ಕಾರ್ಯಕ್ರಮದಲ್ಲಿ ಚಿತ್ರದ ಬಗ್ಗೆ ಮತ್ತಷ್ಟು ಮಾಹಿತಿ ಹೊರಬೀಳುವ ಸಾಧ್ಯತೆ ಇದೆ. ಈ ಕಾರ್ಯಕ್ರಮದಲ್ಲಿ 50 ಸಾವಿರ ಜನ ಭಾಗವಹಿಸುವ ನಿರೀಕ್ಷೆ ಇದೆ.

ಆಂದೋಲನ ಡೆಸ್ಕ್

Recent Posts

ಅರ್ಜುನ ಆನೆ ಸ್ಮಾರಕ ಲೋಕರ್ಪಣೆ

ಹಾಸನ : ಯಸಳೂರಿನ ದಬ್ಬಳಿಕಟ್ಟೆ ನೆಡುತೋಪಿನಲ್ಲಿ ನಿರ್ಮಿಸಿರುವ ಹುತಾತ್ಮ ಅರ್ಜುನ ಆನೆಯ 650 ಕೆ.ಜಿ. ತೂಕದ ಸುಂದರ ಪ್ರತಿಮೆಯ ಸ್ಮಾರಕವನ್ನು…

18 mins ago

ಅಮೃತ್‌ಸರ, ಜಲಂಧರ್‌ನಲ್ಲಿ ಸ್ಫೋಟ : ಪಂಜಾಬ್‌ನಲ್ಲಿ ಕಟ್ಟೆಚ್ಚರ

ಅಮೃತ್‌ಸರ : ಪಂಜಾಬ್‌ನ ಅಮೃತ್‌ಸರ್ ಮತ್ತು ಜಲಂಧರ್‌ನ ಹೈ ಸೆಕ್ಯೂರಿಟಿ ವಲಯಗಳ ಬಳಿ ಮಂಗಳವಾರ ಕೆಲವೇ ಗಂಟೆಗಳ ಅಂತರದಲ್ಲಿ ಸ್ಛೋಟ…

24 mins ago

ದುಬಾರೆಯಲ್ಲಿ ತೂಗು ಸೇತುವೆಗೆ ಶಂಕುಸ್ಥಾಪನೆ ನೆರವೇರಿಸಿದ ಈಶ್ವರ ಖಂಡ್ರೆ

7.3 ಕೋಟಿ ರೂ. ವೆಚ್ಚದಲ್ಲಿ ತೂಗು ಸೇತುವೆ ನಿರ್ಮಾಣ ಶೀಘ್ರ :ಈಶ್ವರ ಖಂಡ್ರೆ ದುಬಾರೆ :  ವನ್ಯಜೀವಿಗಳ ಸಂಖ್ಯೆ ದಿನದಿಂದ…

36 mins ago

ಒಳಮೀಸಲಾತಿ ಜಾರಿ ಸರ್ಕಾರದ ಐತಿಹಾಸಿಕ ತೀರ್ಮಾನ : ಸಿಎಂ ಪ್ರತಿಪಾದನೆ

ಮೈಸೂರು : ರಾಜ್ಯದಲ್ಲಿ ಒಳಮೀಸಲಾತಿ ಜಾರಿಗೊಳಿಸುವಲ್ಲಿ ಕಾಂಗ್ರೆಸ್‌ ಸಫಲವಾಗಿದ್ದು, ಇದು ಸರ್ಕಾರದ ಐತಿಹಾಸಿಕ ತೀರ್ಮಾನವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.…

49 mins ago

ಮೈಸೂರು | ಉದ್ದೇಶಿತ ಮೇಲ್ಸೇತುವೆ ಪ್ರದೇಶಕ್ಕೆ ಈಶ್ವರ ಖಂಡ್ರೆ ಭೇಟಿ, ಪರಿಶೀಲನೆ

ಮೈಸೂರು : ಮೈಸೂರಿನ ಸಿದ್ದಿಕಿ ನಗರ, ಮಣಿಪಾಲ್ ಆಸ್ಪತ್ರೆ ವೃತ್ತದ ಬಳಿ ರಾ.ಹೆ.275ರಲ್ಲಿ ಉದ್ದೇಶಿತ ಮೇಲ್ಸೇತುವೆ ಸ್ಥಳಕ್ಕೆ ಅರಣ್ಯ, ಜೀವಿಶಾಸ್ತ್ರ…

1 hour ago

ಗೋಣಿಕೊಪ್ಪ | ಹುಲಿ ದಾಳಿಗೆ ಹಸು ಬಲಿ

ಗೋಣಿಕೊಪ್ಪ : ಇಲ್ಲಿಗೆ ಸಮೀಪದ ಬಿ.ಶೆಟ್ಟಿಗೇರಿಯಲ್ಲಿ ಇಂದು(ಮೇ.6) ಬೆಳಿಗ್ಗೆ ಹುಲಿ ದಾಳಿಗೆ ಹಸು ಬಲಿಯಾಗಿರುವ ಘಟನೆ ನಡೆದಿದೆ. ಬಿ.ಶೆಟ್ಟಿಗೇರಿ ಗ್ರಾಮದ…

1 hour ago