ಮನರಂಜನೆ

‘ಡ್ರೀಮ್ ಥಿಯೇಟರ್’ ಮೂಲಕ ಮತ್ತೆ ಕನ್ನಡಕ್ಕೆ ಬಂದ ಪ್ರಿಯಾಂಕಾ‌ ಮೋಹನ್

ಶಿವರಾಜ್‌ ಕುಮಾರ್ ‍ಮತ್ತು ಧನಂಜಯ್‍ ಅಭಿನಯದ ‘666 ಆಪರೇಷನ್ ಡ್ರೀಮ್ ಥಿಯೇಟರ್’ ಚಿತ್ರಕ್ಕಾಗಿ ಸತತ ಚಿತ್ರೀಕರಣ ನಡೆಯುತ್ತಿದೆ. ಈ ಚಿತ್ರದಲ್ಲಿ ನಾಯಕಿಯಾರಾಗಬಹುದು ಎಂಬ ಕುತಹಲ ಎಲ್ಲರಲ್ಲೂ ಇದ್ದೇ ಇತ್ತು. ಈ ಚಿತ್ರಕ್ಕೀಗ ಬಹುಭಾಷಾ ನಟಿ ಪ್ರಿಯಾಂಕಾ ಮೋಹನ್ ಎಂಟ್ರಿ ಕೊಟ್ಟಿದ್ದಾರೆ.

ದಕ್ಷಿಣ ಚಿತ್ರರಂಗದಲ್ಲಿ ಖ್ಯಾತಿ ಗಳಿಸಿರುವ ಪ್ರಿಯಾಂಕಾ ಮೋಹನ್ ಈಗ ‘666 ಆಪರೇಷನ್ ಡ್ರೀಮ್ ಥಿಯೇಟರ್’ ಸಿನಿಮಾದ ‌ಭಾಗವಾಗಿದ್ದಾರೆ. ವಿಶೇಷವೆಂದರೆ, ಈ ಪ್ರಿಯಾಂಕಾ ಮೊದಲು ಬಣ್ಣ ಹಚ್ಚಿದ್ದು ಕನ್ನಡ ಚಿತ್ರವೊಂದಕ್ಕೆ. 2019ರಲ್ಲಿ ಬಿಡುಗಡೆಯಾದ ‘ಒಂದು ಕಥೆ ಹೇಳ್ಲಾ’ ಚಿತ್ರದ ಮೂಲಕ ಪ್ರಿಯಾಂಕಾ ಮೊದಲು ಬಣ್ಣ ಹಚ್ಚಿದ್ದರು.

ಆ ನಂತರ ತೆಲುಗಿನ ‘ಗ್ಯಾಂಗ್‌ಲೀಡರ್’, ‘ಸರಿಪೋದ ಶನಿವಾರಂ’, ತಮಿಳಿನ ‘ಡಾಕ್ಟರ್’, ‘ಟಿಕ್‌ಟಾಕ್’, ‘ಕ್ಯಾಪ್ಟನ್ ಮಿಲ್ಲರ್’, ‘ಬ್ರದರ್’ ಮುಂತಾದ ಸಿನಿಮಾಗಳಲ್ಲಿ ಪ್ರಿಯಾಂಕ ಮೋಹನ್ ನಟಿಸಿದ್ದಾರೆ. ಪವನ್ ಕಲ್ಯಾಣ್, ನಾನಿ, ಧನುಷ್, ಶಿವಕಾರ್ತಿಕೇಯನ್ ಮುಂತಾದ ಹೀರೋಗಳ ಎದುರು ನಟಿಸಿದ್ದಾರೆ. ಈಗ ಹೇಮಂತ್ ರಾವ್ ನಿರ್ದೇಶನದ 80ರ ದಶಕದ ಬಾಂಡ್ ಶೈಲಿಯ ಚಿತ್ರದ ಮೂಲಕ ವಾಪಸ್ಸಾಗಿದ್ದಾರೆ.

‘666 ಆಪರೇಷನ್ ಡ್ರೀಮ್ ಥಿಯೇಟರ್’ ಚಿತ್ರತಂಡ ಸೇರ್ಪಡೆ ಬಗ್ಗೆ ಮಾತನಾಡಿರುವ ಪ್ರಿಯಾಂಕಾ ಮೋಹನ್, ‘ನಾನು ಶಿವರಾಜಕುಮಾರ್ ಅವರ ಸಿನಿಮಾಗಳನ್ನು ನೋಡುತ್ತಾ ಬೆಳೆದವಳು. ‘666 ಆಪರೇಷನ್ ಡ್ರೀಮ್ ಥಿಯೇಟರ್’ ಚಿತ್ರದ ಭಾಗವಾಗುವುದು ನನ್ನ ಕನಸು ನನಸಾಗಿದೆ. ಹೇಮಂತ್ ರಾವ್ ಜೊತೆಗೆ ಕೆಲಸ ಮಾಡುವ ಆಸೆ ಇತ್ತು. ಅದು ಇಷ್ಟು ಬೇಗ ಆಗುತ್ತದೆ ಎಂದು ಭಾವಿಸಿರಲಿಲ್ಲ’ ಎನ್ನುತ್ತಾರೆ.

ಡಾ. ವೈಶಾಕ್ ಜೆ ಗೌಡ ಅವರ ವೈಶಾಕ್ ಜೆ ಫಿಲ್ಮ್ಸ್ ಬ್ಯಾನರ್ ಅಡಿಯಲ್ಲಿ ನಿರ್ಮಿಸಲಾಗುತ್ತಿರುವ ಚಿತ್ರಕ್ಕೆ ಹೇಮಂತ್‍ ರಾವ್‍ ಕಥೆ-ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. ಎರಡು ಹಂತದ ಚಿತ್ರೀಕರಣ ಮುಗಿಸಿರುವ ಚಿತ್ರತಂಡ, ಡಿಸೆಂಬರ್ ಮೊದಲ ವಾರದಲ್ಲಿ ಮೂರನೇ ಹಂತದ ಶೂಟಿಂಗ್ ನಡೆಸಲು ಯೋಜನೆ ಹಾಕಿಕೊಂಡಿದೆ. ಚಿತ್ರಕ್ಕೆ ಚರಣ್‌ ರಾಜ್‌ ಸಂಗೀತ ನಿರ್ದೇಶನ ಮತ್ತು ಅದ್ವೈತ ಗುರುಮೂರ್ತಿ ಛಾಯಾಗ್ರಹಣವಿದೆ.

ಆಂದೋಲನ ಡೆಸ್ಕ್

Recent Posts

ಮೈಸೂರು| ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆ

ನಂಜನಗೂಡು: ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ. ಜಿಲ್ಲೆಯ ನಂಜನಗೂಡು…

6 mins ago

ಮೈಶುಗರ್‌ ಶಾಲಾ ಶಿಕ್ಷಕರಿಗೆ ನೆರವಾದ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ

ಮಂಡ್ಯ: ಸುಮಾರು 15 ತಿಂಗಳಿನಿಂದ ವೇತನ ಸಿಗದೇ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದ ಮಂಡ್ಯದ ಮೈಶುಗರ್‌ ಶಾಲೆಯ ಶಿಕ್ಷಕರ ಬಾಕಿ ವೇತನಕ್ಕಾಗಿ…

31 mins ago

ಸಮಾನತೆ ತರಲೆಂದೇ ಗ್ಯಾರಂಟಿ ಯೋಜನೆಗೆ ಕೋಟಿಗಟ್ಟಲೇ ಹಣ ಖರ್ಚಿ ಮಾಡ್ತಿರೋದು: ಸಿಎಂ ಸಿದ್ದರಾಮಯ್ಯ

ಹಾಸನ: ಗ್ಯಾರಂಟಿಗೆ ಕೋಟಿಗಟ್ಟಲೇ ಹಣ ಖರ್ಚು ಮಾಡ್ತಿರೋದು ಸಮಾನತೆ ತರಲು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು ಹಾಸನದಲ್ಲಿ…

57 mins ago

ಟಿಬಿ ಡ್ಯಾಂ ಕ್ರಸ್ಟ್‌ ಗೇಟ್‌ ಅಳವಡಿಕೆಗೆ ಚಾಲನೆ

ಬಳ್ಳಾರಿ: ಹೊಸಪೇಟೆ ಹೊರವಲಯದಲ್ಲಿರುವ ತುಂಗಭದ್ರಾ ಜಲಾಶಯದ ಕ್ರಸ್ಟ್‌ ಗೇಟ್‌ ಅಳವಡಿಕೆ ಕಾರ್ಯಕ್ಕೆ ಚಾಲನೆ ಸಿಕ್ಕಿದೆ. ಜಲಾಶಯದ ಮೇಲ್ಬಾಗದಲ್ಲಿ ಗೇಟ್‌ ಮುಂದೆ…

1 hour ago

ಮೈಸೂರು| ಮದುವೆ ಆಗುವುದಾಗಿ ನಂಬಿಸಿ ವಕೀಲೆಗೆ ಮೋಸ

ಮೈಸೂರು: ಮದುವೆ ಆಗುವುದಾಗಿ ನಂಬಿಸಿ ಮಹಿಳಾ ವಕೀಲೆಯೊಬ್ಬರೊಂದಿಗೆ ದೈಹಿಕ ಸಂಪರ್ಕ ಬೆಳೆಸಿ ನಂತರ ಮೋಸ ಮಾಡಿರುವ ಆರೋಪದ ಹಿನ್ನೆಲೆಯಲ್ಲಿ ವಕೀಲ…

2 hours ago

ಪುರಾವೆ ಇಲ್ಲದೇ ಯಾರ ಮೇಲೂ ತನಿಖೆ ಮಾಡಲ್ಲ: ಬಿ.ವೈ.ವಿಜಯೇಂದ್ರ

ಬೆಂಗಳೂರು: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರಿಗೆ ನೊಟೀಸ್ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪ್ರತಿಕ್ರಿಯೆ…

2 hours ago