ಮನರಂಜನೆ

‘ಡ್ರೀಮ್ ಥಿಯೇಟರ್’ ಮೂಲಕ ಮತ್ತೆ ಕನ್ನಡಕ್ಕೆ ಬಂದ ಪ್ರಿಯಾಂಕಾ‌ ಮೋಹನ್

ಶಿವರಾಜ್‌ ಕುಮಾರ್ ‍ಮತ್ತು ಧನಂಜಯ್‍ ಅಭಿನಯದ ‘666 ಆಪರೇಷನ್ ಡ್ರೀಮ್ ಥಿಯೇಟರ್’ ಚಿತ್ರಕ್ಕಾಗಿ ಸತತ ಚಿತ್ರೀಕರಣ ನಡೆಯುತ್ತಿದೆ. ಈ ಚಿತ್ರದಲ್ಲಿ ನಾಯಕಿಯಾರಾಗಬಹುದು ಎಂಬ ಕುತಹಲ ಎಲ್ಲರಲ್ಲೂ ಇದ್ದೇ ಇತ್ತು. ಈ ಚಿತ್ರಕ್ಕೀಗ ಬಹುಭಾಷಾ ನಟಿ ಪ್ರಿಯಾಂಕಾ ಮೋಹನ್ ಎಂಟ್ರಿ ಕೊಟ್ಟಿದ್ದಾರೆ.

ದಕ್ಷಿಣ ಚಿತ್ರರಂಗದಲ್ಲಿ ಖ್ಯಾತಿ ಗಳಿಸಿರುವ ಪ್ರಿಯಾಂಕಾ ಮೋಹನ್ ಈಗ ‘666 ಆಪರೇಷನ್ ಡ್ರೀಮ್ ಥಿಯೇಟರ್’ ಸಿನಿಮಾದ ‌ಭಾಗವಾಗಿದ್ದಾರೆ. ವಿಶೇಷವೆಂದರೆ, ಈ ಪ್ರಿಯಾಂಕಾ ಮೊದಲು ಬಣ್ಣ ಹಚ್ಚಿದ್ದು ಕನ್ನಡ ಚಿತ್ರವೊಂದಕ್ಕೆ. 2019ರಲ್ಲಿ ಬಿಡುಗಡೆಯಾದ ‘ಒಂದು ಕಥೆ ಹೇಳ್ಲಾ’ ಚಿತ್ರದ ಮೂಲಕ ಪ್ರಿಯಾಂಕಾ ಮೊದಲು ಬಣ್ಣ ಹಚ್ಚಿದ್ದರು.

ಆ ನಂತರ ತೆಲುಗಿನ ‘ಗ್ಯಾಂಗ್‌ಲೀಡರ್’, ‘ಸರಿಪೋದ ಶನಿವಾರಂ’, ತಮಿಳಿನ ‘ಡಾಕ್ಟರ್’, ‘ಟಿಕ್‌ಟಾಕ್’, ‘ಕ್ಯಾಪ್ಟನ್ ಮಿಲ್ಲರ್’, ‘ಬ್ರದರ್’ ಮುಂತಾದ ಸಿನಿಮಾಗಳಲ್ಲಿ ಪ್ರಿಯಾಂಕ ಮೋಹನ್ ನಟಿಸಿದ್ದಾರೆ. ಪವನ್ ಕಲ್ಯಾಣ್, ನಾನಿ, ಧನುಷ್, ಶಿವಕಾರ್ತಿಕೇಯನ್ ಮುಂತಾದ ಹೀರೋಗಳ ಎದುರು ನಟಿಸಿದ್ದಾರೆ. ಈಗ ಹೇಮಂತ್ ರಾವ್ ನಿರ್ದೇಶನದ 80ರ ದಶಕದ ಬಾಂಡ್ ಶೈಲಿಯ ಚಿತ್ರದ ಮೂಲಕ ವಾಪಸ್ಸಾಗಿದ್ದಾರೆ.

‘666 ಆಪರೇಷನ್ ಡ್ರೀಮ್ ಥಿಯೇಟರ್’ ಚಿತ್ರತಂಡ ಸೇರ್ಪಡೆ ಬಗ್ಗೆ ಮಾತನಾಡಿರುವ ಪ್ರಿಯಾಂಕಾ ಮೋಹನ್, ‘ನಾನು ಶಿವರಾಜಕುಮಾರ್ ಅವರ ಸಿನಿಮಾಗಳನ್ನು ನೋಡುತ್ತಾ ಬೆಳೆದವಳು. ‘666 ಆಪರೇಷನ್ ಡ್ರೀಮ್ ಥಿಯೇಟರ್’ ಚಿತ್ರದ ಭಾಗವಾಗುವುದು ನನ್ನ ಕನಸು ನನಸಾಗಿದೆ. ಹೇಮಂತ್ ರಾವ್ ಜೊತೆಗೆ ಕೆಲಸ ಮಾಡುವ ಆಸೆ ಇತ್ತು. ಅದು ಇಷ್ಟು ಬೇಗ ಆಗುತ್ತದೆ ಎಂದು ಭಾವಿಸಿರಲಿಲ್ಲ’ ಎನ್ನುತ್ತಾರೆ.

ಡಾ. ವೈಶಾಕ್ ಜೆ ಗೌಡ ಅವರ ವೈಶಾಕ್ ಜೆ ಫಿಲ್ಮ್ಸ್ ಬ್ಯಾನರ್ ಅಡಿಯಲ್ಲಿ ನಿರ್ಮಿಸಲಾಗುತ್ತಿರುವ ಚಿತ್ರಕ್ಕೆ ಹೇಮಂತ್‍ ರಾವ್‍ ಕಥೆ-ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. ಎರಡು ಹಂತದ ಚಿತ್ರೀಕರಣ ಮುಗಿಸಿರುವ ಚಿತ್ರತಂಡ, ಡಿಸೆಂಬರ್ ಮೊದಲ ವಾರದಲ್ಲಿ ಮೂರನೇ ಹಂತದ ಶೂಟಿಂಗ್ ನಡೆಸಲು ಯೋಜನೆ ಹಾಕಿಕೊಂಡಿದೆ. ಚಿತ್ರಕ್ಕೆ ಚರಣ್‌ ರಾಜ್‌ ಸಂಗೀತ ನಿರ್ದೇಶನ ಮತ್ತು ಅದ್ವೈತ ಗುರುಮೂರ್ತಿ ಛಾಯಾಗ್ರಹಣವಿದೆ.

ಆಂದೋಲನ ಡೆಸ್ಕ್

Recent Posts

ಮಾನವ ಕಲಿಯಬೇಕಾದ ಬದುಕಿನ ಪಾಠಗಳು

ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ  ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…

47 mins ago

ಸಾವಿರಾರು ಹೆರಿಗೆ ಮಾಡಿಸಿದ ಫ್ಲಾರೆನ್ಸ್ ನೈಟಿಂಗೇಲ್ ಗೀತಾ ‘ಮಾ’

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…

51 mins ago

ಸಿದ್ದರಾಮಯ್ಯ ಸಿದ್ಧಾಂತದ ಹೋರಾಟಕ್ಕೆ ಅಂತ್ಯವೆಂಬುದೇ ಇಲ್ಲ

ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…

56 mins ago

ಕಣ್ಮನ ಸೆಳೆಯುತ್ತಿದೆ ಮಲ್ಲಳ್ಳಿ ಜಲಪಾತ!

ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…

1 hour ago

ಓದುಗರ ಪತ್ರ: ಸ್ಥಾನ…ಮಾನ !

ಸ್ಥಾನ...ಮಾನ ! ಅಳೆದೂ ಸುರಿದು ಅಲ್ಲಿಂದಿಲ್ಲಿಗೆ ಓಡಾಡಿ ಕೊಟ್ಟೂ ಕೊಡಲಾಗದೆ ಬಿಟ್ಟೂ ಇರಲಾಗದೆ ಉಳಿಸಿಕೊಂಡಿರುವುದು ಒಂದೇ ಒಂದು ಮಂತ್ರಿ ಸ್ಥಾನ…

1 hour ago

ಓದುಗರ ಪತ್ರ: ಸಚಿವ ಸ್ಥಾನ: ಹಿರಿಯರ ನಿರ್ಲಕ್ಷ್ಯ ಸರಿಯಲ್ಲ

ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ನೇತೃತ್ವದ ಮಂತ್ರಿಮಂಡಲ ವಿಸ್ತರಣೆಯಾಗಿ ೨೦ ಸ್ಥಾನಗಳ ಪೈಕಿ ೧೯ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕಾರ…

1 hour ago