ಮನರಂಜನೆ

‘ಡ್ರೀಮ್ ಥಿಯೇಟರ್’ ಮೂಲಕ ಮತ್ತೆ ಕನ್ನಡಕ್ಕೆ ಬಂದ ಪ್ರಿಯಾಂಕಾ‌ ಮೋಹನ್

ಶಿವರಾಜ್‌ ಕುಮಾರ್ ‍ಮತ್ತು ಧನಂಜಯ್‍ ಅಭಿನಯದ ‘666 ಆಪರೇಷನ್ ಡ್ರೀಮ್ ಥಿಯೇಟರ್’ ಚಿತ್ರಕ್ಕಾಗಿ ಸತತ ಚಿತ್ರೀಕರಣ ನಡೆಯುತ್ತಿದೆ. ಈ ಚಿತ್ರದಲ್ಲಿ ನಾಯಕಿಯಾರಾಗಬಹುದು ಎಂಬ ಕುತಹಲ ಎಲ್ಲರಲ್ಲೂ ಇದ್ದೇ ಇತ್ತು. ಈ ಚಿತ್ರಕ್ಕೀಗ ಬಹುಭಾಷಾ ನಟಿ ಪ್ರಿಯಾಂಕಾ ಮೋಹನ್ ಎಂಟ್ರಿ ಕೊಟ್ಟಿದ್ದಾರೆ.

ದಕ್ಷಿಣ ಚಿತ್ರರಂಗದಲ್ಲಿ ಖ್ಯಾತಿ ಗಳಿಸಿರುವ ಪ್ರಿಯಾಂಕಾ ಮೋಹನ್ ಈಗ ‘666 ಆಪರೇಷನ್ ಡ್ರೀಮ್ ಥಿಯೇಟರ್’ ಸಿನಿಮಾದ ‌ಭಾಗವಾಗಿದ್ದಾರೆ. ವಿಶೇಷವೆಂದರೆ, ಈ ಪ್ರಿಯಾಂಕಾ ಮೊದಲು ಬಣ್ಣ ಹಚ್ಚಿದ್ದು ಕನ್ನಡ ಚಿತ್ರವೊಂದಕ್ಕೆ. 2019ರಲ್ಲಿ ಬಿಡುಗಡೆಯಾದ ‘ಒಂದು ಕಥೆ ಹೇಳ್ಲಾ’ ಚಿತ್ರದ ಮೂಲಕ ಪ್ರಿಯಾಂಕಾ ಮೊದಲು ಬಣ್ಣ ಹಚ್ಚಿದ್ದರು.

ಆ ನಂತರ ತೆಲುಗಿನ ‘ಗ್ಯಾಂಗ್‌ಲೀಡರ್’, ‘ಸರಿಪೋದ ಶನಿವಾರಂ’, ತಮಿಳಿನ ‘ಡಾಕ್ಟರ್’, ‘ಟಿಕ್‌ಟಾಕ್’, ‘ಕ್ಯಾಪ್ಟನ್ ಮಿಲ್ಲರ್’, ‘ಬ್ರದರ್’ ಮುಂತಾದ ಸಿನಿಮಾಗಳಲ್ಲಿ ಪ್ರಿಯಾಂಕ ಮೋಹನ್ ನಟಿಸಿದ್ದಾರೆ. ಪವನ್ ಕಲ್ಯಾಣ್, ನಾನಿ, ಧನುಷ್, ಶಿವಕಾರ್ತಿಕೇಯನ್ ಮುಂತಾದ ಹೀರೋಗಳ ಎದುರು ನಟಿಸಿದ್ದಾರೆ. ಈಗ ಹೇಮಂತ್ ರಾವ್ ನಿರ್ದೇಶನದ 80ರ ದಶಕದ ಬಾಂಡ್ ಶೈಲಿಯ ಚಿತ್ರದ ಮೂಲಕ ವಾಪಸ್ಸಾಗಿದ್ದಾರೆ.

‘666 ಆಪರೇಷನ್ ಡ್ರೀಮ್ ಥಿಯೇಟರ್’ ಚಿತ್ರತಂಡ ಸೇರ್ಪಡೆ ಬಗ್ಗೆ ಮಾತನಾಡಿರುವ ಪ್ರಿಯಾಂಕಾ ಮೋಹನ್, ‘ನಾನು ಶಿವರಾಜಕುಮಾರ್ ಅವರ ಸಿನಿಮಾಗಳನ್ನು ನೋಡುತ್ತಾ ಬೆಳೆದವಳು. ‘666 ಆಪರೇಷನ್ ಡ್ರೀಮ್ ಥಿಯೇಟರ್’ ಚಿತ್ರದ ಭಾಗವಾಗುವುದು ನನ್ನ ಕನಸು ನನಸಾಗಿದೆ. ಹೇಮಂತ್ ರಾವ್ ಜೊತೆಗೆ ಕೆಲಸ ಮಾಡುವ ಆಸೆ ಇತ್ತು. ಅದು ಇಷ್ಟು ಬೇಗ ಆಗುತ್ತದೆ ಎಂದು ಭಾವಿಸಿರಲಿಲ್ಲ’ ಎನ್ನುತ್ತಾರೆ.

ಡಾ. ವೈಶಾಕ್ ಜೆ ಗೌಡ ಅವರ ವೈಶಾಕ್ ಜೆ ಫಿಲ್ಮ್ಸ್ ಬ್ಯಾನರ್ ಅಡಿಯಲ್ಲಿ ನಿರ್ಮಿಸಲಾಗುತ್ತಿರುವ ಚಿತ್ರಕ್ಕೆ ಹೇಮಂತ್‍ ರಾವ್‍ ಕಥೆ-ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. ಎರಡು ಹಂತದ ಚಿತ್ರೀಕರಣ ಮುಗಿಸಿರುವ ಚಿತ್ರತಂಡ, ಡಿಸೆಂಬರ್ ಮೊದಲ ವಾರದಲ್ಲಿ ಮೂರನೇ ಹಂತದ ಶೂಟಿಂಗ್ ನಡೆಸಲು ಯೋಜನೆ ಹಾಕಿಕೊಂಡಿದೆ. ಚಿತ್ರಕ್ಕೆ ಚರಣ್‌ ರಾಜ್‌ ಸಂಗೀತ ನಿರ್ದೇಶನ ಮತ್ತು ಅದ್ವೈತ ಗುರುಮೂರ್ತಿ ಛಾಯಾಗ್ರಹಣವಿದೆ.

ಆಂದೋಲನ ಡೆಸ್ಕ್

Recent Posts

ಮಕ್ಕಳ ಮನದಂಗಳದಲ್ಲಿ ಗಾಂಧೀ ಚಿಂತನೆಯ ಬೇರುಗಳು

ನನ್ನ ಆದರ್ಶ ವ್ಯಕ್ತಿ ಗಾಂಧಿ ಮಹಾತ್ಮ ಗಾಂಧೀಜಿ ತಮ್ಮ ಜೀವನದಲ್ಲಿ ಬಹಳ ಕಷ್ಟಪಟ್ಟು ಮೇಲೆ ಬಂದರು. ಭಾರತದ ಸ್ವಾತಂತ್ರ್ಯ ಕ್ಕಾಗಿ…

1 hour ago

ಗಾಂಧೀ ಅಭಿಯಾನ ಅರಿವಿನ ಯಾನ | ಗಾಂಧೀಜಿ ಅಹಿಂಸಾ ಮಾರ್ಗಕ್ಕೆ ಮೈಲಾರ ಮಹಾದೇವ

ದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಪ್ರಾಣತ್ಯಾಗ ಮಾಡಿದ ಮಹನೀಯರಲ್ಲಿ ಎದ್ದು ಕಾಣುವ ಹೆಸರು ಕರ್ನಾಟಕದ ಹೆಮ್ಮೆಯ ಪುತ್ರ ಮೈಲಾರ…

1 hour ago

ಗಾಂಧಿ ಅಭಿಯಾನ ಅರಿವಿನ ಯಾನ | ವಿಲಾಯತಿಗೆ ತೆರಳಲು ಅಮ್ಮ ಒಪ್ಪಿದರು

೧೮೮೭ನೇ ಇಸವಿಯಲ್ಲಿ ನಾನು ಮೆಟ್ರಿಕ್ ಪರೀಕ್ಷೆಯಲ್ಲಿ ತೇರ್ಗಡೆಯಾದೆನು. ಮೆಟ್ರಿಕ್ ಪರೀಕ್ಷೆಗೆ ಬೊಂಬಾಯಿ ಮತ್ತು ಅಹಮದಾಬಾದ್ ಎರಡೂ ಕೇಂದ್ರಗಳಾಗಿದ್ದವು. ನಾನು ಹತ್ತಿರದ…

2 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 27 ಶನಿವಾರ

5 hours ago

ಚಿರಕನಹಳ್ಳಿ ; ಬೋನಿಗೆ ಬಿದ್ದ ಹುಲಿ

ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಕುಂದಕೆರೆ ವಲಯದ ಚಿರಕನಹಳ್ಳಿ ಗ್ರಾಮದಲ್ಲಿ ಪೋತರಾಜು ಎಂಬುವವರ ಜಮೀನಿನಲ್ಲಿ ಅರಣ್ಯ…

21 hours ago

ವೆನಿಜುವೆಲಾ ಭೂಕಂಪ ; ಮೃತರ ಸಂಖ್ಯೆ 235ಕ್ಕೆ ಏರಿಕೆ

ಮುಂದುವರಿದ ರಕ್ಷಣಾ ಕಾರ್ಯಾಚರಣೆ ವೆನಿಜುವೆಲಾ : ವೆನಿಜುವೆಲಾದ ಉತ್ತರ ಭಾಗದಲ್ಲಿ ಬುಧವಾರ ಸಂಜೆ ಸಂಭವಿಸಿದ ಸತತ ಎರಡು ಪ್ರಬಲ ಭೂಕಂಪಗಳ…

21 hours ago