ಮನರಂಜನೆ

‘ಹನುಮಾನ್‍’ ನಿರ್ಮಾಪಕರಿಂದ ‘ಬಿಲ್ಲ ರಂಗ ಭಾಷಾ’ ನಿರ್ಮಾಣ

ಸುದೀಪ್‍ ಹುಟ್ಟುಹಬ್ಬಕ್ಕೆ (ಸೆ 02) ಒಂದು ಸರ್‍ಪ್ರೈಸ್‍ ಕೊಡುವುದಾಗಿ ನಿರ್ದೇಶಕ ಅನೂಪ್‍ ಭಂಡಾರಿ ಹೇಳಿಕೊಂಡಿದ್ದರು. ಈ ಕುರಿತು ಸೋಷಿಯಲ್‍ ಮೀಡಿಯಾದಲ್ಲಿ ಪೋಸ್ಟ್ ಹಾಕಿದ್ದ ಅವರು, The Men will be right back ಎಂದು ಬರೆದುಕೊಂಡಿದ್ದಾರೆ. ಸೆಪ್ಟೆಂಬರ್ 02ರಂದು ಹೊಸ ಸುದ್ದಿಯೊಂದನ್ನು ಘೋಷಿಸುವುದಾಗಿ ಹೇಳಿದ್ದರು.

ಅದರಂತೆ, ಇಂದು ‘ಬಿಲ್ಲ ರಂಗ ಭಾಷಾ’ ಚಿತ್ರದ ಅಧಿಕೃತ ಘೋಷಣೆಯಾಗಿದೆ. ಈ ಚಿತ್ರವು ವಿಕ್ರಾಂತ್ ರೋಣಗೂ ಮೊದಲೇ ಶುರುವಾಗಬೇಕಿತ್ತು. ಆದರೆ, ಕಾರಣಾಂತರಗಳಿಂದ ತಡವಾಗಿ ಇದೀಗ ಶುರುವಾಗುತ್ತಿದೆ. ಇದೊಂದು ಪ್ಯಾನ್‍ ಇಂಡಿಯಾ ಚಿತ್ರವಾಗಿದ್ದು, ತೆಲುಗಿನಲ್ಲ ‘ಹನುಮಾನ್’ ಎಂಬ ಬ್ಲಾಕ್ಬಸ್ಟರ್ ಚಿತ್ರವನ್ನು ನಿರ್ಮಿಸಿದ್ದ ನಿರಂಜನ್‍ ರೆಡ್ಡಿ ಮತ್ತು ಚೈತನ್ಯ ರೆಡ್ಡಿ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ.

ಇನ್ನು, ಇತ್ತೀಚೆಗೆ ಈ ಚಿತ್ರದ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸುದೀಪ್‍, ‘‘ಬಿಲ್ಲ ರಂಗ ಭಾಷಾ’ ಸದ್ಯದಲ್ಲೇ ಪ್ರಾರಂಭವಾಗಲಿದೆ. ಆರೇಳು ವರ್ಷಗಳಿಂದ ಕೆಲಸ ನಡೆಯುತ್ತಿದೆ. ‘ವಿಕ್ರಾಂತ್‍ ರೋಣ’ಗೂ ಮೊದಲೇ ಆ ಚಿತ್ರ ಮಾಡಬೇಕೆನ್ನುವ ಯೋಚನೆ ಇತ್ತು. ‘ವಿಕ್ರಾಂತ್‍ ರೋಣ’ ಚಿತ್ರವನ್ನು ನಾವು ಮಾಡಿದ್ದೇ ‘ಬಿಲ್ಲ ರಂಗ ಭಾಷಾ’ ಮಾಡುವುದಕ್ಕೆ ಸಾಧ್ಯವೋ ಇಲ್ಲವೋ ಎಂದು ನೋಡುವುದಕ್ಕೆ. ಏಕೆಂದರೆ, ನಮ್ಮ ಹತ್ತಿರ ದುಡ್ಡಿರಬಹುದು. ಆದರೆ, ಸಾಮರ್ಥ್ಯ ಇರುತ್ತದೋ ಇಲ್ಲವೋ ಗೊತ್ತಿರುವುದಿಲ್ಲ. ನಾವು ಹೇಳೋಕೆ ಹೋಗಿ ಅದು ತೆರೆಯ ಮೇಲೆ ಜೋಕ್‍ ಆಗಿ ಕಾಣಿಸಬಹುದು. ಹಾಗಾಗಿ, ಮೊದಲು ಈ ಚಿತ್ರ ಆಗುತ್ತಾ ಎಂದು ಗೊತ್ತಾಗಬೇಕಿದ್ದರೆ, ಬೇರೆ ಏನಾದರೂ ಮಾಡಬೇಕು. ‘ವಿಕ್ರಾಂತ್‍ ರೋಣ’ ಮಾಡಿದ್ದರಿಂದ ನಮ್ಮ ಸಾಮರ್ಥ್ಯ ಅರ್ಥವಾಯಿತು’ ಎಂದಿದ್ದಾರೆ ಸುದೀಪ್.

ಇದು ತಮ್ಮ ಜೀವನದಲ್ಲೇ ದೊಡ್ಡ ಚಿತ್ರವಾಗಲಿದೆ ಎಂದಿರುವ ಅವರು, ‘’ವಿಕ್ರಾಂತ್ ರೋಣ’ ನಂತರ ಒಂದು ತಂಡವಾಯಿತು. ನಮಗೆ ನಮ್ಮ ಮೇಲೆ ನಂಬಿಕೆ ಬಂತು. ಈಗ ‘ಬಿಲ್ಲ ರಂಗ ಭಾಷಾ’ ಮಾಡುವುದಕ್ಕೆ ಕೈ ಹಾಕಿದ್ದೇವೆ. ಈ ಚಿತ್ರ ನನ್ನ ಮತ್ತು ಅನೂಪ್‍ ಚಿತ್ರಜೀವನದಲ್ಲೇ ದೊಡ್ಡ ಸಿನಿಮಾಗಳು. ಚಿತ್ರಕ್ಕೆ ಸಾಕಷ್ಟು ರೀಸರ್ಚ್ ಕೆಲಸದ ಅವಶ್ಯಕತೆ ಇತ್ತು. ಅದಕ್ಕೆ ಸಾಕಷ್ಟು ಸಮಯವಾಯಿತು. ಇದೊಂದು ಅಪರೂಪದ ಚಿತ್ರವಾಗಿರುತ್ತದೆ’ ಎಂದು ಅವರು ಹೇಳಿದ್ದರು.

‘ಬಿಲ್ಲ ರಂಗ ಭಾಷಾ’ ಚಿತ್ರವು ಸದ್ಯದಲ್ಲೇ ಪ್ರಾರಂಭವಾಗಲಿದ್ದು, 2025ರಲ್ಲಿ ಬಿಡುಗಡೆ ಆಗಲಿದೆ ಎಂದು ಸುದೀಪ್‍ ಹೇಳಿಕೊಂಡಿದ್ದಾರೆ.

ಭೂಮಿಕಾ

Recent Posts

ಎಚ್‌.ಡಿ.ಕೋಟೆ: ಗುಜರಿ ಗೋಡೌನ್‌ಗೆ ಬೆಂಕಿ: ಲಕ್ಷಾಂತರ ರೂ ಬೆಲೆಬಾಳುವ ಸಾಮಗ್ರಿ ನಾಶ

ಎಚ್.ಡಿ.ಕೋಟೆ: ತಾಲೂಕಿನ ಹ್ಯಾಂಡ್‌ಪೋಸ್ಟ್ ಜಕ್ಕಳ್ಳಿ ಸಮೀಪವಿರುವ ಜಫ್ರುಲ್ಲಾ ಎಂಬುವರಿಗೆ ಸೇರಿದ ಗುಜರಿ ಗೋಡೌನ್‌ಗೆ ಬೆಂಕಿ ತಗುಲಿ, ಲಕ್ಷಾಂತರ ರೂಪಾಯಿ ವೆಚ್ಚದ…

6 hours ago

ವಂದೇ ಭಾರತ್‌ ರೈಲಿನಲ್ಲಿ ಕೊಟ್ಟ ಮೊಸರಿನಲ್ಲಿ ಹುಳು ಪತ್ತೆ: IRCTCಗೆ 10 ಲಕ್ಷ ರೂ ದಂಡ

ಪಾಟ್ನಾ: ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಪ್ರಯಾಣಿಕರಿಗೆ ನೀಡಿದ ಮೊಸರಿನಲ್ಲಿ ಹುಳುಗಳು ಪತ್ತೆಯಾದ ಹಿನ್ನೆಲೆಯಲ್ಲಿ ರೈಲ್ವೆ ಇಲಾಖೆ ಐಆರ್‌ಸಿಟಿಸಿಗೆ 10…

6 hours ago

ಹನೂರು: ಬಿಆರ್‌ಟಿ ವನ್ಯಜೀವಿ ವ್ಯಾಪ್ತಿಯಲ್ಲಿ ಕಾಡ್ಗಿಚ್ಚು: 80 ಎಕರೆಗೂ ಹೆಚ್ಚು ಅರಣ್ಯ ನಾಶ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶ ಬೈಲೂರು ವಲಯ ವ್ಯಾಪ್ತಿಯ…

6 hours ago

ಪಾಲಿಕೆ ಬಜೆಟ್‌ ಸತ್ವ ಇಲ್ಲದ ಬಜೆಟ್‌: ಮಾಜಿ ಮೇಯರ್‌ ಶಿವಕುಮಾರ್‌ ಆಕ್ರೋಶ

ಮೈಸೂರು: ಜನಸ್ನೇಹಿ ಪಾದಾಚಾರಿ ಮಾರ್ಗಗಳ ಅಭಿವೃದ್ಧಿಗೆ 10 ಕೋಟಿ ರೂ ಮೀಸಲಿಟ್ಟಿರುವ ಪಾಲಿಕೆಯು ಪಾರಂಪರಿಕ ಕಟ್ಟಡಗಳ ಅಭಿವೃದ್ಧಿಗೆ ನಯಾಪೈಸೆ ಅನುದಾನ…

7 hours ago

ಗುಂಡ್ಲುಪೇಟೆ| ಮದ್ದೂರು ವಲಯದಲ್ಲಿ ಮತ್ತೆರಡು ಹುಲಿ ಪ್ರತ್ಯಕ್ಷ

ಗುಂಡ್ಲುಪೇಟೆ: ತಾಲ್ಲೂಕಿನ ಮದ್ದೂರು ವಲಯದಲ್ಲಿ ಮತ್ತೆರಡು ಹುಲಿಗಳು ಪ್ರತ್ಯಕ್ಷವಾಗಿದ್ದು, ಸ್ಥಳೀಯರಲ್ಲಿ ಆತಂಕ ಮನೆಮಾಡಿದೆ. ಹುಲಿಗಳ ಚಲನವಲನದ ದೃಶ್ಯ ಡ್ರೋನ್ ಕ್ಯಾಮೆರಾದಲ್ಲಿ…

7 hours ago

ಬಜೆಟ್‌ ಮೂಲಕ ಜನರನ್ನು ಸಾಲದ ಕೂಪಕ್ಕೆ ತಳ್ಳಿದ ಸರ್ಕಾರ: ಆರ್‌.ಅಶೋಕ್‌ ವಾಗ್ದಾಳಿ

ಬೆಂಗಳೂರು: ಕಾಂಗ್ರೆಸ್‌ ಸರ್ಕಾರ ಬಜೆಟ್‌ ಮೂಲಕ ಜನರನ್ನು ಸಾಲದ ಕೂಪಕ್ಕೆ ತಳ್ಳಿರುವುದನ್ನು ಅಧಿವೇಶನದಲ್ಲಿ ಮನವರಿಕೆ ಮಾಡಿಕೊಟ್ಟಿದ್ದೇವೆ. ಹಾಗೆಯೇ ಅನೇಕ ಸಮಸ್ಯೆಗಳನ್ನು…

7 hours ago