ಸುದೀಪ್ ಹುಟ್ಟುಹಬ್ಬಕ್ಕೆ (ಸೆ 02) ಒಂದು ಸರ್ಪ್ರೈಸ್ ಕೊಡುವುದಾಗಿ ನಿರ್ದೇಶಕ ಅನೂಪ್ ಭಂಡಾರಿ ಹೇಳಿಕೊಂಡಿದ್ದರು. ಈ ಕುರಿತು ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಾಕಿದ್ದ ಅವರು, The Men will be right back ಎಂದು ಬರೆದುಕೊಂಡಿದ್ದಾರೆ. ಸೆಪ್ಟೆಂಬರ್ 02ರಂದು ಹೊಸ ಸುದ್ದಿಯೊಂದನ್ನು ಘೋಷಿಸುವುದಾಗಿ ಹೇಳಿದ್ದರು.
ಅದರಂತೆ, ಇಂದು ‘ಬಿಲ್ಲ ರಂಗ ಭಾಷಾ’ ಚಿತ್ರದ ಅಧಿಕೃತ ಘೋಷಣೆಯಾಗಿದೆ. ಈ ಚಿತ್ರವು ವಿಕ್ರಾಂತ್ ರೋಣಗೂ ಮೊದಲೇ ಶುರುವಾಗಬೇಕಿತ್ತು. ಆದರೆ, ಕಾರಣಾಂತರಗಳಿಂದ ತಡವಾಗಿ ಇದೀಗ ಶುರುವಾಗುತ್ತಿದೆ. ಇದೊಂದು ಪ್ಯಾನ್ ಇಂಡಿಯಾ ಚಿತ್ರವಾಗಿದ್ದು, ತೆಲುಗಿನಲ್ಲ ‘ಹನುಮಾನ್’ ಎಂಬ ಬ್ಲಾಕ್ಬಸ್ಟರ್ ಚಿತ್ರವನ್ನು ನಿರ್ಮಿಸಿದ್ದ ನಿರಂಜನ್ ರೆಡ್ಡಿ ಮತ್ತು ಚೈತನ್ಯ ರೆಡ್ಡಿ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ.
ಇನ್ನು, ಇತ್ತೀಚೆಗೆ ಈ ಚಿತ್ರದ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸುದೀಪ್, ‘‘ಬಿಲ್ಲ ರಂಗ ಭಾಷಾ’ ಸದ್ಯದಲ್ಲೇ ಪ್ರಾರಂಭವಾಗಲಿದೆ. ಆರೇಳು ವರ್ಷಗಳಿಂದ ಕೆಲಸ ನಡೆಯುತ್ತಿದೆ. ‘ವಿಕ್ರಾಂತ್ ರೋಣ’ಗೂ ಮೊದಲೇ ಆ ಚಿತ್ರ ಮಾಡಬೇಕೆನ್ನುವ ಯೋಚನೆ ಇತ್ತು. ‘ವಿಕ್ರಾಂತ್ ರೋಣ’ ಚಿತ್ರವನ್ನು ನಾವು ಮಾಡಿದ್ದೇ ‘ಬಿಲ್ಲ ರಂಗ ಭಾಷಾ’ ಮಾಡುವುದಕ್ಕೆ ಸಾಧ್ಯವೋ ಇಲ್ಲವೋ ಎಂದು ನೋಡುವುದಕ್ಕೆ. ಏಕೆಂದರೆ, ನಮ್ಮ ಹತ್ತಿರ ದುಡ್ಡಿರಬಹುದು. ಆದರೆ, ಸಾಮರ್ಥ್ಯ ಇರುತ್ತದೋ ಇಲ್ಲವೋ ಗೊತ್ತಿರುವುದಿಲ್ಲ. ನಾವು ಹೇಳೋಕೆ ಹೋಗಿ ಅದು ತೆರೆಯ ಮೇಲೆ ಜೋಕ್ ಆಗಿ ಕಾಣಿಸಬಹುದು. ಹಾಗಾಗಿ, ಮೊದಲು ಈ ಚಿತ್ರ ಆಗುತ್ತಾ ಎಂದು ಗೊತ್ತಾಗಬೇಕಿದ್ದರೆ, ಬೇರೆ ಏನಾದರೂ ಮಾಡಬೇಕು. ‘ವಿಕ್ರಾಂತ್ ರೋಣ’ ಮಾಡಿದ್ದರಿಂದ ನಮ್ಮ ಸಾಮರ್ಥ್ಯ ಅರ್ಥವಾಯಿತು’ ಎಂದಿದ್ದಾರೆ ಸುದೀಪ್.
ಇದು ತಮ್ಮ ಜೀವನದಲ್ಲೇ ದೊಡ್ಡ ಚಿತ್ರವಾಗಲಿದೆ ಎಂದಿರುವ ಅವರು, ‘’ವಿಕ್ರಾಂತ್ ರೋಣ’ ನಂತರ ಒಂದು ತಂಡವಾಯಿತು. ನಮಗೆ ನಮ್ಮ ಮೇಲೆ ನಂಬಿಕೆ ಬಂತು. ಈಗ ‘ಬಿಲ್ಲ ರಂಗ ಭಾಷಾ’ ಮಾಡುವುದಕ್ಕೆ ಕೈ ಹಾಕಿದ್ದೇವೆ. ಈ ಚಿತ್ರ ನನ್ನ ಮತ್ತು ಅನೂಪ್ ಚಿತ್ರಜೀವನದಲ್ಲೇ ದೊಡ್ಡ ಸಿನಿಮಾಗಳು. ಚಿತ್ರಕ್ಕೆ ಸಾಕಷ್ಟು ರೀಸರ್ಚ್ ಕೆಲಸದ ಅವಶ್ಯಕತೆ ಇತ್ತು. ಅದಕ್ಕೆ ಸಾಕಷ್ಟು ಸಮಯವಾಯಿತು. ಇದೊಂದು ಅಪರೂಪದ ಚಿತ್ರವಾಗಿರುತ್ತದೆ’ ಎಂದು ಅವರು ಹೇಳಿದ್ದರು.
‘ಬಿಲ್ಲ ರಂಗ ಭಾಷಾ’ ಚಿತ್ರವು ಸದ್ಯದಲ್ಲೇ ಪ್ರಾರಂಭವಾಗಲಿದ್ದು, 2025ರಲ್ಲಿ ಬಿಡುಗಡೆ ಆಗಲಿದೆ ಎಂದು ಸುದೀಪ್ ಹೇಳಿಕೊಂಡಿದ್ದಾರೆ.
ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್ಟಿಆರ್ ಹಾಗೂ ಎಚ್ಎಸ್ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…
ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…
ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…