ಮನರಂಜನೆ

‘ಹನುಮಾನ್‍’ ನಿರ್ಮಾಪಕರಿಂದ ‘ಬಿಲ್ಲ ರಂಗ ಭಾಷಾ’ ನಿರ್ಮಾಣ

ಸುದೀಪ್‍ ಹುಟ್ಟುಹಬ್ಬಕ್ಕೆ (ಸೆ 02) ಒಂದು ಸರ್‍ಪ್ರೈಸ್‍ ಕೊಡುವುದಾಗಿ ನಿರ್ದೇಶಕ ಅನೂಪ್‍ ಭಂಡಾರಿ ಹೇಳಿಕೊಂಡಿದ್ದರು. ಈ ಕುರಿತು ಸೋಷಿಯಲ್‍ ಮೀಡಿಯಾದಲ್ಲಿ ಪೋಸ್ಟ್ ಹಾಕಿದ್ದ ಅವರು, The Men will be right back ಎಂದು ಬರೆದುಕೊಂಡಿದ್ದಾರೆ. ಸೆಪ್ಟೆಂಬರ್ 02ರಂದು ಹೊಸ ಸುದ್ದಿಯೊಂದನ್ನು ಘೋಷಿಸುವುದಾಗಿ ಹೇಳಿದ್ದರು.

ಅದರಂತೆ, ಇಂದು ‘ಬಿಲ್ಲ ರಂಗ ಭಾಷಾ’ ಚಿತ್ರದ ಅಧಿಕೃತ ಘೋಷಣೆಯಾಗಿದೆ. ಈ ಚಿತ್ರವು ವಿಕ್ರಾಂತ್ ರೋಣಗೂ ಮೊದಲೇ ಶುರುವಾಗಬೇಕಿತ್ತು. ಆದರೆ, ಕಾರಣಾಂತರಗಳಿಂದ ತಡವಾಗಿ ಇದೀಗ ಶುರುವಾಗುತ್ತಿದೆ. ಇದೊಂದು ಪ್ಯಾನ್‍ ಇಂಡಿಯಾ ಚಿತ್ರವಾಗಿದ್ದು, ತೆಲುಗಿನಲ್ಲ ‘ಹನುಮಾನ್’ ಎಂಬ ಬ್ಲಾಕ್ಬಸ್ಟರ್ ಚಿತ್ರವನ್ನು ನಿರ್ಮಿಸಿದ್ದ ನಿರಂಜನ್‍ ರೆಡ್ಡಿ ಮತ್ತು ಚೈತನ್ಯ ರೆಡ್ಡಿ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ.

ಇನ್ನು, ಇತ್ತೀಚೆಗೆ ಈ ಚಿತ್ರದ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸುದೀಪ್‍, ‘‘ಬಿಲ್ಲ ರಂಗ ಭಾಷಾ’ ಸದ್ಯದಲ್ಲೇ ಪ್ರಾರಂಭವಾಗಲಿದೆ. ಆರೇಳು ವರ್ಷಗಳಿಂದ ಕೆಲಸ ನಡೆಯುತ್ತಿದೆ. ‘ವಿಕ್ರಾಂತ್‍ ರೋಣ’ಗೂ ಮೊದಲೇ ಆ ಚಿತ್ರ ಮಾಡಬೇಕೆನ್ನುವ ಯೋಚನೆ ಇತ್ತು. ‘ವಿಕ್ರಾಂತ್‍ ರೋಣ’ ಚಿತ್ರವನ್ನು ನಾವು ಮಾಡಿದ್ದೇ ‘ಬಿಲ್ಲ ರಂಗ ಭಾಷಾ’ ಮಾಡುವುದಕ್ಕೆ ಸಾಧ್ಯವೋ ಇಲ್ಲವೋ ಎಂದು ನೋಡುವುದಕ್ಕೆ. ಏಕೆಂದರೆ, ನಮ್ಮ ಹತ್ತಿರ ದುಡ್ಡಿರಬಹುದು. ಆದರೆ, ಸಾಮರ್ಥ್ಯ ಇರುತ್ತದೋ ಇಲ್ಲವೋ ಗೊತ್ತಿರುವುದಿಲ್ಲ. ನಾವು ಹೇಳೋಕೆ ಹೋಗಿ ಅದು ತೆರೆಯ ಮೇಲೆ ಜೋಕ್‍ ಆಗಿ ಕಾಣಿಸಬಹುದು. ಹಾಗಾಗಿ, ಮೊದಲು ಈ ಚಿತ್ರ ಆಗುತ್ತಾ ಎಂದು ಗೊತ್ತಾಗಬೇಕಿದ್ದರೆ, ಬೇರೆ ಏನಾದರೂ ಮಾಡಬೇಕು. ‘ವಿಕ್ರಾಂತ್‍ ರೋಣ’ ಮಾಡಿದ್ದರಿಂದ ನಮ್ಮ ಸಾಮರ್ಥ್ಯ ಅರ್ಥವಾಯಿತು’ ಎಂದಿದ್ದಾರೆ ಸುದೀಪ್.

ಇದು ತಮ್ಮ ಜೀವನದಲ್ಲೇ ದೊಡ್ಡ ಚಿತ್ರವಾಗಲಿದೆ ಎಂದಿರುವ ಅವರು, ‘’ವಿಕ್ರಾಂತ್ ರೋಣ’ ನಂತರ ಒಂದು ತಂಡವಾಯಿತು. ನಮಗೆ ನಮ್ಮ ಮೇಲೆ ನಂಬಿಕೆ ಬಂತು. ಈಗ ‘ಬಿಲ್ಲ ರಂಗ ಭಾಷಾ’ ಮಾಡುವುದಕ್ಕೆ ಕೈ ಹಾಕಿದ್ದೇವೆ. ಈ ಚಿತ್ರ ನನ್ನ ಮತ್ತು ಅನೂಪ್‍ ಚಿತ್ರಜೀವನದಲ್ಲೇ ದೊಡ್ಡ ಸಿನಿಮಾಗಳು. ಚಿತ್ರಕ್ಕೆ ಸಾಕಷ್ಟು ರೀಸರ್ಚ್ ಕೆಲಸದ ಅವಶ್ಯಕತೆ ಇತ್ತು. ಅದಕ್ಕೆ ಸಾಕಷ್ಟು ಸಮಯವಾಯಿತು. ಇದೊಂದು ಅಪರೂಪದ ಚಿತ್ರವಾಗಿರುತ್ತದೆ’ ಎಂದು ಅವರು ಹೇಳಿದ್ದರು.

‘ಬಿಲ್ಲ ರಂಗ ಭಾಷಾ’ ಚಿತ್ರವು ಸದ್ಯದಲ್ಲೇ ಪ್ರಾರಂಭವಾಗಲಿದ್ದು, 2025ರಲ್ಲಿ ಬಿಡುಗಡೆ ಆಗಲಿದೆ ಎಂದು ಸುದೀಪ್‍ ಹೇಳಿಕೊಂಡಿದ್ದಾರೆ.

ಭೂಮಿಕಾ

Recent Posts

ಅಸ್ಸಾಂನಲ್ಲಿ ಭೀಕರ ಪ್ರವಾಹ: ಜನಜೀವನ ಅಸ್ತವ್ಯಸ್ತ

ದಿಸ್ಪುರ್:‌ ನೆರೆಯ ರಾಜ್ಯ ಅರುಣಾಚಲ ಪ್ರದೇಶದಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಭೀಕರ ಪ್ರವಾಹ ಸೃಷ್ಟಿಯಾಗಿದೆ. ಭಾರೀ…

2 hours ago

ಕೈಕೊಟ್ಟ ಮುಂಗಾರು: ಕಬಿನಿ ಜಲಾಶಯದ ನೀರಿನ ಮಟ್ಟ ಮತ್ತಷ್ಟು ಕುಸಿತ

ಎಚ್.ಡಿ.ಕೋಟೆ: ಈ ಬಾರಿ ಮುಂಗಾರು ಮಳೆ ಕೈಕೊಟ್ಟ ಪರಿಣಾಮ ರಾಜ್ಯದ ಜಲಾಶಯಗಳು ಬರಿದಾಗುತ್ತಿವೆ. ರಾಜ್ಯದಲ್ಲಿ ಮೊದಲು ಭರ್ತಿಯಾಗುವ ಜಲಾಶಯ ಎಂಬ…

2 hours ago

ರಾಮಮಂದಿರದಲ್ಲಿ ಅಕ್ರಮ; ತಪ್ಪಿತಸ್ಥರಿಗೆ ಶಿಕ್ಷೆಯಾಗಲಿ

ಉತ್ತರ ಪ್ರದೇಶದ ಅಯೋಧ್ಯಾ ರಾಮಮಂದಿರದಲ್ಲಿ ಕಾಣಿಕೆ ಹಣ ಹಾಗೂ ದೇಣಿಗೆಯನ್ನು ದುರ್ಬಳಕೆ ಮಾಡಿರುವುದು ಅನೂಹ್ಯ ಪ್ರಕರಣ. ಇದರಿಂದ ಕೋಟ್ಯಂತರ ಜನರ…

7 hours ago

ರಾಜ್ಯದಲ್ಲಿ ಭಾರತೀಯ ಜನತಾ ಪಕ್ಷಕ್ಕೆ ಮೇಜರ್ ಸರ್ಜರಿಗೆ ಕೇಂದ್ರ ವರಿಷ್ಠರ ಚಿಂತನೆ

ಬೆಂಗಳೂರು ಡೈರಿ  ಆರ್.ಟಿ.ವಿಠ್ಠಲಮೂರ್ತಿ  ಹಲವು ಲಿಂಗಾಯತ ಮಠಗಳಿಗೆ ಮುಖ್ಯಮಂತ್ರಿ ಡಿಕೆಶಿ ಅವರು ಆಪ್ಯಾಯಮಾನ ಕರ್ನಾಟಕದಲ್ಲಿ ಪಕ್ಷಕ್ಕೆ ಮೇಜರ್ ಸರ್ಜರಿ ಮಾಡಲು…

7 hours ago

ಅವನತಿಯತ್ತ ಸಾಗಿದ ಅಗಸನ ಕೆರೆಯ ಪುನಶ್ಚೇತನ

ಭೇರ್ಯ ಮಹೇಶ್ ಕೆ.ಆರ್.ನಗರ: ಧರ್ಮಸ್ಥಳ ಸಂಸ್ಥೆಯಿಂದ ಕೆರೆ ಅಭಿವೃದ್ಧಿ; ಗ್ರಾಮಸ್ಥರು, ರೈತರಿಂದಲೂ ಸಹಕಾರ  ಕೆ.ಆರ್.ನಗರ: ಹೂಳು ತುಂಬಿ ಅವನತಿಯ ಹಾದಿ…

7 hours ago

2 ವರ್ಷಗಳಿಂದ ಕಬ್ಬು ಅರೆಯದ ಚುಂಚನಕಟ್ಟೆ ಶ್ರೀರಾಮ ಸಕ್ಕರೆ ಕಾರ್ಖಾನೆ

ಆನಂದ್ ಹೊಸೂರು ಕಬ್ಬಿಗೆ ಕಾರ್ಖಾನೆಗಳಿಂದ ಬೇಡಿಕೆಯಿದ್ದರೂ ರೈತರಿಗೆ ದುಬಾರಿ ಸಾಗಣೆ ವೆಚ್ಚ ಭರಿಸುವ ಅನಿವಾರ್ಯತೆ  ಹೊಸೂರು: ಮಾಜಿ ಶಾಸಕ ದಿವಂಗತ…

7 hours ago