ಮನರಂಜನೆ

‘ಅಜಾಗ್ರತ’ ನಿರ್ದೇಶಕರಿಗೆ ಕಾರು ಕೊಟ್ಟ ನಿರ್ಮಾಪಕರು

ದರ್ಶನ್‍ ಅಭಿನಯದ ‘ಕಾಟೇರ’ ಚಿತ್ರಕ್ಕೆ ಚಿತ್ರಕಥೆ ಬರೆದು ಮಾಸ್ತಿ ಮಂಜು ಮತ್ತು ಕಥೆ ಬರೆದ ಜಡೇಶ್‍ ಹಂಪಿ ಅವರ ಕೆಲಸದಿಂದ ಖುಷಿಯಾಗಿ ನಿರ್ಮಾಪಕ ರಾಕ್‍ಲೈನ್‍ ವೆಂಕಟೇಶ್‍, ಅವರಿಬ್ಬರಿಗೂ ಕಾರನ್ನು ಉಡುಗೊರೆಯಾಗಿ ಕೊಟ್ಟಿದ್ದರು. ಚಿತ್ರ ಬಿಡುಗಡೆಯಾಗಿ 100 ದಿನಗಳನ್ನು ಪೂರೈಸಿದ ಸಂದರ್ಭದಲ್ಲಿ ಇಬ್ಬರಿಗೂ ಕಾರು ಉಡುಗೊರೆಯಾಗಿ ನೀಡಲಾಗಿತ್ತು.

ಈಗ್ಯಾಕೆ ಈ ಮಾತು ಎಂದರೆ, ಚಿತ್ರ ಬಿಡುಗಡೆಯಾದ ಮೇಲೆ ಕಲಾವಿದರು ಮತ್ತು ತಂತ್ರಜ್ಞರ ಕೆಲಸ ನೋಡಿ ಅವರಿಗೆ ನಿರ್ಮಾಪಕರಿಗೆ ಕಾರು ಕೊಡಿಸುವುದು ವಾಡಿಕೆ. ಆದರೆ, ಚಿತ್ರ ಬಿಡುಗಡೆಯಾಗುವ ಮುನ್ನವೇ ಚಿತ್ರದ ನಿರ್ದೇಶಕರಿಗೆ ನಿರ್ಮಾಪಕರು ಕಾರು ಕೊಟ್ಟ ಘಟನೆ ಕನ್ನಡ ಚಿತ್ರರಂಗದಲ್ಲಾಗಿದೆ.

‘ಅಜಾಗ್ರತಾ’ ಎಂಬ ಪ್ಯಾನ್‍ ಇಂಡಿಯಾ ಚಿತ್ರವನ್ನು ರಾಧಿಕಾ ಕುಮಾರಸ್ವಾಮಿ ನಿರ್ಮಿಸುವುದರ ಜೊತೆಗೆ ಅದರಲ್ಲಿ ನಾಯಕಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಚಿತ್ರವನ್ನು ಅವರು ತಮ್ಮ ಸಹೋದರ ರವಿರಾಜ್‍ ಹೆಸರಲ್ಲಿ ನಿರ್ಮಿಸುತ್ತಿದ್ದಾರೆ. ಎಂ. ಶಶಿಧರ್ ನಿರ್ದೇಶನದ ‘ಅಜಾಗ್ರತ’ ಚಿತ್ರದ ಚಿತ್ರೀಕರಣ ಹಾಗೂ ಪೋಸ್ಟ್ ಪ್ರೊಡಕ್ಷನ್ ವರ್ಕ್ ಮುಗಿದು ಚಿತ್ರದ ರಫ್ ಕಾಪಿ ಬಂದಿದೆ. ಚಿತ್ರವನ್ನು ನೋಡಿದ ನಿರ್ಮಾಪಕರಿಗೆ ಚಿತ್ರ ಬಹಳ ಇಷ್ಟವಾಗಿದೆಯಂತೆ. ಒಂದೊಳ್ಳೆಯ ಚಿತ್ರ ಮಾಡಿಕೊಟ್ಟ ನಿರ್ದೇಶಕರಿಗೆ ನಿರ್ಮಾಪಕರು ಒಂದು ಕಾರು ಉಡುಗೊರೆಯಾಗಿ ನೀಡಿದ್ದಾರೆ.

‘ನಿರ್ದೇಶಕರು ಕಥೆ ಹೇಳಿದ ರೀತಿಯಲ್ಲೇ, ಅದಕ್ಕೂ ಹೆಚ್ಚಾಗಿಯೇ ಚಿತ್ರವನ್ನು ಬಹಳ ಚೆನ್ನಾಗಿ ಮಾಡಿ ಮುಗಿಸಿದ್ದಾರೆ. ಚಿತ್ರ ಅದ್ಭುತವಾಗಿ ಮೂಡಿಬಂದಿದೆ. ಚಿತ್ರ ನೋಡಿ ನನಗೆ ತುಂಬಾ ಖುಷಿಯಾಗಿದೆ. ಚಿತ್ರವನ್ನು ಉತ್ತಮವಾಗಿ ನಿರ್ದೇಶಿಸಿರುವ ನಿರ್ದೇಶಕರಿಗೆ ಉಡುಗೊರೆ ನೀಡುವ ಮನಸ್ಸಾಯಿತು. ಹಾಗಾಗಿ ಫಾರ್ಚ್ಯೂನರ್ ಕಾರನ್ನು ಉಡುಗೊರೆಯಾಗಿ ನೀಡುತ್ತೀದ್ದೇನೆ’ ಎಂದು ನಿರ್ಮಾಪಕ ರವಿರಾಜ್ ತಿಳಿಸಿದ್ದಾರೆ.
ಬಾಲಿವುಡ್ ನ ಖ್ಯಾತ ನಟ ಶ್ರೇಯಸ್ ತಲ್ಪಾಡೆ ಈ ಚಿತ್ರದ ನಾಯಕರಾಗಿ ನಟಿಸಿರುವ ಈ ಚಿತ್ರದ ನಾಯಕಿಯಾಗಿ ರಾಧಿಕಾ ಕುಮಾರಸ್ವಾಮಿ ಅಭಿನಯಿಸಿದ್ದಾರೆ. ಮಿಕ್ಕಂತೆ ತಮಿಳು ನಟ ಬಾಬಿ ಸಿಂಹ, ತೆಲುಗು ನಟರಾದ ರಾವ್ ರಮೇಶ್‌, ಸುನೀಲ್, ಆದಿತ್ಯ ಮೆನನ್, ರಾಘವೇಂದ್ರ ಶ್ರವಣ್, ದೇವರಾಜ್, ಜಯಪ್ರಕಾಶ್, ವಿನಯಾ ಪ್ರಸಾದ್ ಮುಂತಾದವರು ಈ ಚಿತ್ರದಲ್ಲಿ ನಟಿಸಿದ್ದಾರೆ.

‘ಅಜಾಗ್ರತ’ ಚಿತ್ರವು ತೆಲುಗು, ಕನ್ನಡ ಸೇರಿದಂತೆ ಏಳು ಭಾಷೆಗಳಲ್ಲಿ ನಿರ್ಮಾಣವಾಗುತ್ತಿದೆ. ಸಂದೀಪ್ ವಲ್ಲೂರಿ ಛಾಯಾಗ್ರಹಣ, ಶ್ರೀಹರಿ ಸಂಗೀತ ಈ ಚಿತ್ರಕ್ಕಿದೆ.

ಭೂಮಿಕಾ

Recent Posts

ಓದುಗರ ಪತ್ರ: ನಂಜನಗೂಡು ಕೆ.ಹೆಚ್.ಬಿ. ಕಾಲೋನಿ ರಸ್ತೆ ದುರಸ್ತಿ ಮಾಡಿ

ರಾಜ್ಯದಲ್ಲಿ ಮೊಟ್ಟ ಮೊದಲ ಬಾರಿಗೆ ತಾಲ್ಲೂಕು ಮಟ್ಟದಲ್ಲಿ ಕರ್ನಾಟಕ ಗೃಹ ಮಂಡಳಿ(ಕೆಎಚ್‌ಬಿ) ಯಿಂದ ಮನೆಗಳನ್ನು ನಿರ್ಮಾಣ ಮಾಡಿ ಹಂಚಿಕೆ ಮಾಡಿದ್ದು…

1 hour ago

ಓದುಗರ ಪತ್ರ: ಸರ್ಕಾರಿ ಶಾಲೆಗಳಿಗೆ ಮೂಲ ಸೌಕರ್ಯ ಕಲ್ಪಿಸಿ

ರಾಜ್ಯದಲ್ಲಿ, ಸುಮಾರು ಮೂರು ಸಾವಿರಕ್ಕೂ ಹೆಚ್ಚು ಸರ್ಕಾರಿ ಶಾಲಾ ಕಟ್ಟಡಗಳು ಶಿಥಿಲಗೊಂಡು, ಈ ಶಾಲೆಗಳು ಕುಸಿಯುವ ಹಂತ ತಲುಪಿವೆ ಎಂದು,…

1 hour ago

ಓದುಗರ ಪತ್ರ: ರಸ್ತೆ ಬದಿಯ ಒಣಗಿದ ಮರಗಳನ್ನು ತೆರವುಗೊಳಿಸಿ

ಎಚ್.ಡಿ.ಕೋಟೆ ತಾಲ್ಲೂಕಿನ ಮಾದಾಪುರ ಗ್ರಾಮದಿಂದ ಕೆಂಡಗಣ್ಣಸ್ವಾಮಿ ಗದ್ದಿಗೆ ಮಾರ್ಗವಾಗಿ ದಿನನಿತ್ಯ ಸಾವಿರಾರು ವಾಹನಗಳು ಸಂಚರಿಸುತ್ತವೆ. ರಸ್ತೆಯ ಎರಡೂ ಬದಿಗಳಲ್ಲಿರುವ ಬಹುತೇಕ…

1 hour ago

ಓದುಗರ ಪತ್ರ: ಪಾರಂಪರಿಕ ಕಟ್ಟಡಗಳ ಮಾಹಿತಿ ಫಲಕಗಳ ದುಸ್ಥಿತಿ

ಮೈಸೂರು ಮಹಾರಾಜರ ಕಾಲದಲ್ಲಿ ನಿರ್ಮಾಣಗೊಂಡ ಕಟ್ಟಡಗಳು ಇಂದಿಗೂ ಸದೃಢವಾಗಿ ಕಂಗೊಳಿಸುತ್ತಿರುವುದು ಮೈಸೂರಿನ ಭವ್ಯ ಪರಂಪರೆಗೆ ಸಾಕ್ಷಿಯಾಗಿವೆ. ಇಂತಹ ಪಾರಂಪರಿಕ ಕಟ್ಟಡಗಳ…

1 hour ago

ಕೊಡಗು ಜಿಲ್ಲೆಯಲ್ಲೇ ಎರಡನೇ ಸ್ಥಾನ ಪಡೆದ ರೈತ ಪುತ್ರಿ ನಂದಿತಾ

ಮಡಿಕೇರಿ: ಓದುವ ಛಲ, ಆತ್ಮವಿಶ್ವಾಸ, ಪ್ರೋತ್ಸಾಹ, ಮಾರ್ಗದರ್ಶನವಿದ್ದರೆ ಮಕ್ಕಳು ಸರ್ಕಾರಿ ಕಾಲೇಜಿನಲ್ಲಿ  ಓದಿದರೂ ಉತ್ತಮ ಅಂಕ ಗಳಿಸಲು ಸಾಧ್ಯವಿದೆ. ಇದಕ್ಕೆ…

1 hour ago

ಆಸ್ತಿ ವಿವಾದ: ಸೋದರಳಿಯನ ಕೊಲೆಗೆ ಸುಪಾರಿ ಕೊಟ್ಟ ಮಾವ

ಪಿರಿಯಾಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಪಿರಿಯಾಪಟ್ಟಣ: ತಂಗಿಗೆ ಆಸ್ತಿಯನ್ನು ನೀಡಲೇಬಾರದು ಎಂದು ತೀರ್ಮಾನಿಸಿ ತನ್ನ ಸೋದರ ಅಳಿಯನನ್ನು ಕೊಲ್ಲಲು…

2 hours ago