ಮನರಂಜನೆ

‘ಅಜಾಗ್ರತ’ ನಿರ್ದೇಶಕರಿಗೆ ಕಾರು ಕೊಟ್ಟ ನಿರ್ಮಾಪಕರು

ದರ್ಶನ್‍ ಅಭಿನಯದ ‘ಕಾಟೇರ’ ಚಿತ್ರಕ್ಕೆ ಚಿತ್ರಕಥೆ ಬರೆದು ಮಾಸ್ತಿ ಮಂಜು ಮತ್ತು ಕಥೆ ಬರೆದ ಜಡೇಶ್‍ ಹಂಪಿ ಅವರ ಕೆಲಸದಿಂದ ಖುಷಿಯಾಗಿ ನಿರ್ಮಾಪಕ ರಾಕ್‍ಲೈನ್‍ ವೆಂಕಟೇಶ್‍, ಅವರಿಬ್ಬರಿಗೂ ಕಾರನ್ನು ಉಡುಗೊರೆಯಾಗಿ ಕೊಟ್ಟಿದ್ದರು. ಚಿತ್ರ ಬಿಡುಗಡೆಯಾಗಿ 100 ದಿನಗಳನ್ನು ಪೂರೈಸಿದ ಸಂದರ್ಭದಲ್ಲಿ ಇಬ್ಬರಿಗೂ ಕಾರು ಉಡುಗೊರೆಯಾಗಿ ನೀಡಲಾಗಿತ್ತು.

ಈಗ್ಯಾಕೆ ಈ ಮಾತು ಎಂದರೆ, ಚಿತ್ರ ಬಿಡುಗಡೆಯಾದ ಮೇಲೆ ಕಲಾವಿದರು ಮತ್ತು ತಂತ್ರಜ್ಞರ ಕೆಲಸ ನೋಡಿ ಅವರಿಗೆ ನಿರ್ಮಾಪಕರಿಗೆ ಕಾರು ಕೊಡಿಸುವುದು ವಾಡಿಕೆ. ಆದರೆ, ಚಿತ್ರ ಬಿಡುಗಡೆಯಾಗುವ ಮುನ್ನವೇ ಚಿತ್ರದ ನಿರ್ದೇಶಕರಿಗೆ ನಿರ್ಮಾಪಕರು ಕಾರು ಕೊಟ್ಟ ಘಟನೆ ಕನ್ನಡ ಚಿತ್ರರಂಗದಲ್ಲಾಗಿದೆ.

‘ಅಜಾಗ್ರತಾ’ ಎಂಬ ಪ್ಯಾನ್‍ ಇಂಡಿಯಾ ಚಿತ್ರವನ್ನು ರಾಧಿಕಾ ಕುಮಾರಸ್ವಾಮಿ ನಿರ್ಮಿಸುವುದರ ಜೊತೆಗೆ ಅದರಲ್ಲಿ ನಾಯಕಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಚಿತ್ರವನ್ನು ಅವರು ತಮ್ಮ ಸಹೋದರ ರವಿರಾಜ್‍ ಹೆಸರಲ್ಲಿ ನಿರ್ಮಿಸುತ್ತಿದ್ದಾರೆ. ಎಂ. ಶಶಿಧರ್ ನಿರ್ದೇಶನದ ‘ಅಜಾಗ್ರತ’ ಚಿತ್ರದ ಚಿತ್ರೀಕರಣ ಹಾಗೂ ಪೋಸ್ಟ್ ಪ್ರೊಡಕ್ಷನ್ ವರ್ಕ್ ಮುಗಿದು ಚಿತ್ರದ ರಫ್ ಕಾಪಿ ಬಂದಿದೆ. ಚಿತ್ರವನ್ನು ನೋಡಿದ ನಿರ್ಮಾಪಕರಿಗೆ ಚಿತ್ರ ಬಹಳ ಇಷ್ಟವಾಗಿದೆಯಂತೆ. ಒಂದೊಳ್ಳೆಯ ಚಿತ್ರ ಮಾಡಿಕೊಟ್ಟ ನಿರ್ದೇಶಕರಿಗೆ ನಿರ್ಮಾಪಕರು ಒಂದು ಕಾರು ಉಡುಗೊರೆಯಾಗಿ ನೀಡಿದ್ದಾರೆ.

‘ನಿರ್ದೇಶಕರು ಕಥೆ ಹೇಳಿದ ರೀತಿಯಲ್ಲೇ, ಅದಕ್ಕೂ ಹೆಚ್ಚಾಗಿಯೇ ಚಿತ್ರವನ್ನು ಬಹಳ ಚೆನ್ನಾಗಿ ಮಾಡಿ ಮುಗಿಸಿದ್ದಾರೆ. ಚಿತ್ರ ಅದ್ಭುತವಾಗಿ ಮೂಡಿಬಂದಿದೆ. ಚಿತ್ರ ನೋಡಿ ನನಗೆ ತುಂಬಾ ಖುಷಿಯಾಗಿದೆ. ಚಿತ್ರವನ್ನು ಉತ್ತಮವಾಗಿ ನಿರ್ದೇಶಿಸಿರುವ ನಿರ್ದೇಶಕರಿಗೆ ಉಡುಗೊರೆ ನೀಡುವ ಮನಸ್ಸಾಯಿತು. ಹಾಗಾಗಿ ಫಾರ್ಚ್ಯೂನರ್ ಕಾರನ್ನು ಉಡುಗೊರೆಯಾಗಿ ನೀಡುತ್ತೀದ್ದೇನೆ’ ಎಂದು ನಿರ್ಮಾಪಕ ರವಿರಾಜ್ ತಿಳಿಸಿದ್ದಾರೆ.
ಬಾಲಿವುಡ್ ನ ಖ್ಯಾತ ನಟ ಶ್ರೇಯಸ್ ತಲ್ಪಾಡೆ ಈ ಚಿತ್ರದ ನಾಯಕರಾಗಿ ನಟಿಸಿರುವ ಈ ಚಿತ್ರದ ನಾಯಕಿಯಾಗಿ ರಾಧಿಕಾ ಕುಮಾರಸ್ವಾಮಿ ಅಭಿನಯಿಸಿದ್ದಾರೆ. ಮಿಕ್ಕಂತೆ ತಮಿಳು ನಟ ಬಾಬಿ ಸಿಂಹ, ತೆಲುಗು ನಟರಾದ ರಾವ್ ರಮೇಶ್‌, ಸುನೀಲ್, ಆದಿತ್ಯ ಮೆನನ್, ರಾಘವೇಂದ್ರ ಶ್ರವಣ್, ದೇವರಾಜ್, ಜಯಪ್ರಕಾಶ್, ವಿನಯಾ ಪ್ರಸಾದ್ ಮುಂತಾದವರು ಈ ಚಿತ್ರದಲ್ಲಿ ನಟಿಸಿದ್ದಾರೆ.

‘ಅಜಾಗ್ರತ’ ಚಿತ್ರವು ತೆಲುಗು, ಕನ್ನಡ ಸೇರಿದಂತೆ ಏಳು ಭಾಷೆಗಳಲ್ಲಿ ನಿರ್ಮಾಣವಾಗುತ್ತಿದೆ. ಸಂದೀಪ್ ವಲ್ಲೂರಿ ಛಾಯಾಗ್ರಹಣ, ಶ್ರೀಹರಿ ಸಂಗೀತ ಈ ಚಿತ್ರಕ್ಕಿದೆ.

ಭೂಮಿಕಾ

Recent Posts

ಪೂರ್ಣ ಸಿದ್ಧವಾಗದ ಎಕ್ಸ್‌ಪ್ರೇಸ್‌ ವೇ : ಟೋಲ್‌ ಕಡಿತ

ಹೊಸದಿಲ್ಲಿ : ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಂಚರಿಸುವ ಸಾರ್ವಜನಿಕರಿಗೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ಮಹತ್ವದ ಸುದ್ದಿಯೊಂದನ್ನು ನೀಡಿದೆ.…

4 hours ago

ಸೇವಾ ತೀರ್ಥ ಸಂಕೀರ್ಣ ಉದ್ಘಾಟಿಸಿದ ಪ್ರಧಾನಿ ಮೋದಿ

ಹೊಸದಿಲ್ಲಿ : ಪ್ರಧಾನ ಮಂತ್ರಿ ಕಾರ್ಯಾಲಯ (ಪಿಎಂಒ), ರಾಷ್ಟ್ರೀಯ ಭದ್ರತಾ ಮಂಡಳಿ ಸಚಿವಾಲಯ ಮತ್ತು ಸಂಪುಟ ಸಚಿವಾಲಯಗಳನ್ನು ಒಳಗೊಂಡಿರುವ ‘ಸೇವಾ…

5 hours ago

T20 World Cup | ಕೆನಡಾ ವಿರುದ್ಧ ಯುಎಇಗೆ ರೋಚಕ ಜಯ

ಹೊಸದಿಲ್ಲಿ : ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ಶುಕ್ರವಾರ ನಡೆದ ‘ಡಿ’ಗುಂಪಿನ ಪಂದ್ಯದಲ್ಲಿ ಯುಎಇ ಕ್ರಿಕೆಟ್ ತಂಡವು ಕೆನಡಾ ತಂಡವನ್ನು ಐದು…

5 hours ago

ದಳಪತಿ ವಿಜಯ್‌ ರ‍್ಯಾಲಿಯಲ್ಲಿ ನಿಲ್ಲದ ದುರಂತ : ಮತ್ತೊಬ್ಬನ ಸಾವು

ಸೇಲಂ : ತಮಿಳಿಗ ವೆಟ್ರಿ ಕಳಗಂ(ಟಿವಿಕೆ) ಪಕ್ಷದ ರ‍್ಯಾಲಿ ವೇಳೆ ಕುಸಿದು ಬಿದ್ದ ವ್ಯಕ್ತಿಯೊಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗದ ಮಧ್ಯೆ…

5 hours ago

ರೈಲ್‌ಒನ್‌ ಆಪ್‌ : ಒಂದೇ ಕಡೆ ಸಿಗಲಿದೆ ರೈಲು ಸೌಲಭ್ಯಗಳು

ಬೆಂಗಳೂರು : ಭಾರತೀಯ ರೈಲ್ವೆಯು ತನ್ನ ಅಧಿಕೃತ ಆಪ್ ‘ರೈಲ್‌ಒನ್’ ಅನ್ನು ಇತ್ತೀಚೆಗೆ ಬಿಡುಗಡೆ ಮಾಡಿದೆ. ಇದರಲ್ಲಿ ರೈಲ್ವೆ ಸೇವೆಗಳೆಲ್ಲವೂ…

6 hours ago

ತಾರಿಖ್‌ ರೆಹಮಾನ್‌ ಬಾಂಗ್ಲಾದೇಶದ ನೂತನ ಪ್ರಧಾನಿ

ಢಾಕಾ : ಬಾಂಗ್ಲಾದೇಶ ಸಾರ್ವತ್ರಿಕ ಚುನಾವಣೆಯಲ್ಲಿ ಬಾಂಗ್ಲಾದೇಶ ನ್ಯಾಷನಲ್ ಪಾರ್ಟಿ(ಬಿಎನ್‌ಪಿ) ಗೆದ್ದು ಬೀಗಿದೆ. ಸಂಸತ್ತಿನ ಒಟ್ಟು 300 ಸ್ಥಾನಗಳ ಪೈಕಿ…

6 hours ago