ಮನರಂಜನೆ

‘ಅಜಾಗ್ರತ’ ನಿರ್ದೇಶಕರಿಗೆ ಕಾರು ಕೊಟ್ಟ ನಿರ್ಮಾಪಕರು

ದರ್ಶನ್‍ ಅಭಿನಯದ ‘ಕಾಟೇರ’ ಚಿತ್ರಕ್ಕೆ ಚಿತ್ರಕಥೆ ಬರೆದು ಮಾಸ್ತಿ ಮಂಜು ಮತ್ತು ಕಥೆ ಬರೆದ ಜಡೇಶ್‍ ಹಂಪಿ ಅವರ ಕೆಲಸದಿಂದ ಖುಷಿಯಾಗಿ ನಿರ್ಮಾಪಕ ರಾಕ್‍ಲೈನ್‍ ವೆಂಕಟೇಶ್‍, ಅವರಿಬ್ಬರಿಗೂ ಕಾರನ್ನು ಉಡುಗೊರೆಯಾಗಿ ಕೊಟ್ಟಿದ್ದರು. ಚಿತ್ರ ಬಿಡುಗಡೆಯಾಗಿ 100 ದಿನಗಳನ್ನು ಪೂರೈಸಿದ ಸಂದರ್ಭದಲ್ಲಿ ಇಬ್ಬರಿಗೂ ಕಾರು ಉಡುಗೊರೆಯಾಗಿ ನೀಡಲಾಗಿತ್ತು.

ಈಗ್ಯಾಕೆ ಈ ಮಾತು ಎಂದರೆ, ಚಿತ್ರ ಬಿಡುಗಡೆಯಾದ ಮೇಲೆ ಕಲಾವಿದರು ಮತ್ತು ತಂತ್ರಜ್ಞರ ಕೆಲಸ ನೋಡಿ ಅವರಿಗೆ ನಿರ್ಮಾಪಕರಿಗೆ ಕಾರು ಕೊಡಿಸುವುದು ವಾಡಿಕೆ. ಆದರೆ, ಚಿತ್ರ ಬಿಡುಗಡೆಯಾಗುವ ಮುನ್ನವೇ ಚಿತ್ರದ ನಿರ್ದೇಶಕರಿಗೆ ನಿರ್ಮಾಪಕರು ಕಾರು ಕೊಟ್ಟ ಘಟನೆ ಕನ್ನಡ ಚಿತ್ರರಂಗದಲ್ಲಾಗಿದೆ.

‘ಅಜಾಗ್ರತಾ’ ಎಂಬ ಪ್ಯಾನ್‍ ಇಂಡಿಯಾ ಚಿತ್ರವನ್ನು ರಾಧಿಕಾ ಕುಮಾರಸ್ವಾಮಿ ನಿರ್ಮಿಸುವುದರ ಜೊತೆಗೆ ಅದರಲ್ಲಿ ನಾಯಕಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಚಿತ್ರವನ್ನು ಅವರು ತಮ್ಮ ಸಹೋದರ ರವಿರಾಜ್‍ ಹೆಸರಲ್ಲಿ ನಿರ್ಮಿಸುತ್ತಿದ್ದಾರೆ. ಎಂ. ಶಶಿಧರ್ ನಿರ್ದೇಶನದ ‘ಅಜಾಗ್ರತ’ ಚಿತ್ರದ ಚಿತ್ರೀಕರಣ ಹಾಗೂ ಪೋಸ್ಟ್ ಪ್ರೊಡಕ್ಷನ್ ವರ್ಕ್ ಮುಗಿದು ಚಿತ್ರದ ರಫ್ ಕಾಪಿ ಬಂದಿದೆ. ಚಿತ್ರವನ್ನು ನೋಡಿದ ನಿರ್ಮಾಪಕರಿಗೆ ಚಿತ್ರ ಬಹಳ ಇಷ್ಟವಾಗಿದೆಯಂತೆ. ಒಂದೊಳ್ಳೆಯ ಚಿತ್ರ ಮಾಡಿಕೊಟ್ಟ ನಿರ್ದೇಶಕರಿಗೆ ನಿರ್ಮಾಪಕರು ಒಂದು ಕಾರು ಉಡುಗೊರೆಯಾಗಿ ನೀಡಿದ್ದಾರೆ.

‘ನಿರ್ದೇಶಕರು ಕಥೆ ಹೇಳಿದ ರೀತಿಯಲ್ಲೇ, ಅದಕ್ಕೂ ಹೆಚ್ಚಾಗಿಯೇ ಚಿತ್ರವನ್ನು ಬಹಳ ಚೆನ್ನಾಗಿ ಮಾಡಿ ಮುಗಿಸಿದ್ದಾರೆ. ಚಿತ್ರ ಅದ್ಭುತವಾಗಿ ಮೂಡಿಬಂದಿದೆ. ಚಿತ್ರ ನೋಡಿ ನನಗೆ ತುಂಬಾ ಖುಷಿಯಾಗಿದೆ. ಚಿತ್ರವನ್ನು ಉತ್ತಮವಾಗಿ ನಿರ್ದೇಶಿಸಿರುವ ನಿರ್ದೇಶಕರಿಗೆ ಉಡುಗೊರೆ ನೀಡುವ ಮನಸ್ಸಾಯಿತು. ಹಾಗಾಗಿ ಫಾರ್ಚ್ಯೂನರ್ ಕಾರನ್ನು ಉಡುಗೊರೆಯಾಗಿ ನೀಡುತ್ತೀದ್ದೇನೆ’ ಎಂದು ನಿರ್ಮಾಪಕ ರವಿರಾಜ್ ತಿಳಿಸಿದ್ದಾರೆ.
ಬಾಲಿವುಡ್ ನ ಖ್ಯಾತ ನಟ ಶ್ರೇಯಸ್ ತಲ್ಪಾಡೆ ಈ ಚಿತ್ರದ ನಾಯಕರಾಗಿ ನಟಿಸಿರುವ ಈ ಚಿತ್ರದ ನಾಯಕಿಯಾಗಿ ರಾಧಿಕಾ ಕುಮಾರಸ್ವಾಮಿ ಅಭಿನಯಿಸಿದ್ದಾರೆ. ಮಿಕ್ಕಂತೆ ತಮಿಳು ನಟ ಬಾಬಿ ಸಿಂಹ, ತೆಲುಗು ನಟರಾದ ರಾವ್ ರಮೇಶ್‌, ಸುನೀಲ್, ಆದಿತ್ಯ ಮೆನನ್, ರಾಘವೇಂದ್ರ ಶ್ರವಣ್, ದೇವರಾಜ್, ಜಯಪ್ರಕಾಶ್, ವಿನಯಾ ಪ್ರಸಾದ್ ಮುಂತಾದವರು ಈ ಚಿತ್ರದಲ್ಲಿ ನಟಿಸಿದ್ದಾರೆ.

‘ಅಜಾಗ್ರತ’ ಚಿತ್ರವು ತೆಲುಗು, ಕನ್ನಡ ಸೇರಿದಂತೆ ಏಳು ಭಾಷೆಗಳಲ್ಲಿ ನಿರ್ಮಾಣವಾಗುತ್ತಿದೆ. ಸಂದೀಪ್ ವಲ್ಲೂರಿ ಛಾಯಾಗ್ರಹಣ, ಶ್ರೀಹರಿ ಸಂಗೀತ ಈ ಚಿತ್ರಕ್ಕಿದೆ.

ಭೂಮಿಕಾ

Recent Posts

ಸಿಡಿಲು ಬಡಿದು ರೈತ ಸಾವು

ಬೆಟ್ಟದಪುರ: ಸಿಡಿಲು ಬಡಿದು ರೈತನೊಬ್ಬ ಮೃತಪಟ್ಟಿರುವ ಘಟನೆ ಪಿರಿಯಾಪಟ್ಟಣ ತಾಲ್ಲೂಕಿನ ಸಂಗರಶೆಟ್ಟಹಳ್ಳಿ ಗ್ರಾಮದಲ್ಲಿ ಶುಕ್ರವಾರ ನಡೆದಿದೆ. ಗ್ರಾಮದ ಎಸ್.ಟಿ.ಆನಂದ್ (೬೦)…

37 mins ago

ಟಾಟಾ ಏಸ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

ಗುಂಡ್ಲುಪೇಟೆ: ಟಾಟಾ ಏಸ್ ಹಾಗೂ ಬೈಕ್ ನಡುವೆ ಅಪಘಾತವಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಚಾಮರಾಜನಗರ-ಗುಂಡ್ಲುಪೇಟೆ ರಸ್ತೆಯ…

44 mins ago

ಒಂದು ವಾರ ವಿದೇಶಕ್ಕೆ ಹಾರಿದ ಪ್ರಧಾನಿ ಮೋದಿ: ಫ್ರಾನ್ಸ್, ಸ್ಲೋವಾಕಿಯಾ ಪ್ರವಾಸ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಫ್ರಾನ್ಸ್ ಮತ್ತು ಸ್ಲೊವಾಕಿಯಾಕ್ಕೆ ಒಂದು ವಾರದ ಭೇಟಿಗಾಗಿ ತೆರಳಿದ್ದಾರೆ. ಈ ಸಂದರ್ಭದಲ್ಲಿ…

2 hours ago

ಉಡುಪಿ ಶ್ರೀಕೃಷ್ಣಮಠಕ್ಕೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಭೇಟಿ

ಉಡುಪಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಇಂದು ಉಡುಪಿಯ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ಶ್ರೀಕೃಷ್ಣನ ದರ್ಶನ…

3 hours ago

ಓದುಗರ ಪತ್ರ: ಡಿಕೆಶಿ ಸೂಚನೆ ಸ್ವಾಗತಾರ್ಹ

ಮುಖ್ಯಮಂತ್ರಿಗಳಾದ ಕೆಲವೇ ದಿನಗಳಲ್ಲಿ ಡಿ.ಕೆ.ಶಿವಕುಮಾರ್ ಅವರು ಸರ್ಕಾರಿ ಅಧಿಕಾರಿಗಳು, ನೌಕರರು ಹಾಗೂ ಸಿಬ್ಬಂದಿಗಳು ಬೆಳಿಗ್ಗೆ ೧೦ ಗಂಟೆಗೆ ಹಾಜರಾತಿ ದಾಖಲಿಸುವಂತೆ…

6 hours ago

ಓದುಗರ ಪತ್ರ: ಸರ್ಕಾರಿ ನೌಕರರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೇ ದಾಖಲಿಸಲಿ

ಸರ್ಕಾರಿ ಶಾಲೆಗಳಿಗೆ ಮಕ್ಕಳು ಬರುತ್ತಿಲ್ಲ ಅಂತ ನೆಪ ಹೇಳಿ ಸರ್ಕಾರಿ ಶಾಲೆಗಳನ್ನು ಮುಚ್ಚಲು ಮುಂದಾಗಿರುವುದು ಸರಿಯಲ್ಲ. ಖಾಸಗಿ ಶಾಲೆಗಳಲ್ಲಿ ಪ್ರವೇಶ…

6 hours ago