ಮನರಂಜನೆ

ಪ್ಯಾನ್‍ ಇಂಡಿಯಾ ಸಿನಿಮಾ ನಂಬಿ ನಿರ್ಮಾಪಕರು ಹಾಳಾಗ್ತಿದ್ದಾರೆ: ಕೆ. ಮಂಜು

ಪ್ಯಾನ್‍ ಇಂಡಿಯಾ ಮಾಡೋದಕ್ಕೆ ಕನ್ನಡ ಚಿತ್ರರಂಗದಲ್ಲಿ ಸ್ಟಾರ್‍ಗಳ ಸಿನಿಮಾ ಕಡಿಮೆಯಾಗುತ್ತಿದೆ, ಇದರಿಂದ ಬಜೆಟ್‍ ಸಹ ಹೆಚ್ಚಾಗುತ್ತಿದೆ, ನಿರ್ಮಾಪಕರಿಗೆ ನಷ್ಟ ಜಾಸ್ತಿಯಾಗುತ್ತಿದೆ ಎಂಬ ಮಾತುಗಳು ಕನ್ನಡ ಚಿತ್ರರಂಗದಲ್ಲಿ ಕೇಳಿಬರುತ್ತಿದೆ. ಇತ್ತೀಚೆಗೆ ಹಿರಿಯ ಸಂಗೀತ ನಿರ್ದೇಶಕ ಮತ್ತು ಗೀತರಚನೆಕಾರ ಹಂಸಲೇಖ ಸಹ ಪ್ಯಾನ್‍ ಇಂಡಿಯಾ ಎಂಬ ಹುಚ್ಚಿನಿಂದಾಗಿ ಕನ್ನಡದ ಸ್ಟಾರ್‍ಗಳಿಗೆ ಕನ್ನಡದ ಬೇರುಗಳು ಕಟ್‍ ಆಗಿದೆ ಎಂದು ಹೇಳಿದ್ದರು.

ಈಗ ಪ್ಯಾನ್‍ ಇಂಡಿಯಾ ಸಿನಿಮಾದ ಕುರಿತು ಹಿರಿಯ ನಿರ್ಮಾಪಕ ಕೆ. ಮಂಜು ಸಹ ಮಾತನಾಡಿದ್ದಾರೆ. ‘ಪ್ಯಾನ್ ಇಂಡಿಯಾ ನಮ್ಮನ್ನು ಉದ್ಧಾರ ಮಾಡಲ್ಲ, ಯಾರನ್ನೋ ಮೆಚ್ಚಿಸೋಕೆ ಪ್ಯಾನ್ ಇಂಡಿಯಾ ಮಾಡುತ್ತಿದ್ದಾರೆ. ಅದನ್ನು ನಂಬಿಕೊಂಡು ಹಲವು ನಿರ್ಮಾಪಕರು ಹಾಳಾಗುತ್ತಿದ್ದಾರೆ. ‘ಕೆಜಿಎಫ್‍’ ಚಿತ್ರದ ನಂತರ ಎಲ್ಲರೂ ಪ್ಯಾನ್ ಇಂಡಿಯಾ ಸಿನಿಮಾ ಮಾಡುವುದಕ್ಕೆ ಮುಂದಾಗಿದ್ದಾರೆ. ಕನಸು ಕಾಣುವುದು ತಪ್ಪಲ್ಲ. ಆದರೆ, ಎಲ್ಲ ಸಿನಿಮಾ ಪ್ಯಾನ್ ಇಂಡಿಯಾ ಆಗುವುದಿಲ್ಲ. ಯಾರನ್ನೋ ನಂಬಿಕೊಂಡು ಸಿನಿಮಾ ಮಾಡಬೇಡಿ, ಕನ್ನಡ ನಂಬಿಕೊಂಡು ಸಿನಿಮಾ ಮಾಡಿ ಎಂದಿದ್ದಾರೆ. ಪ್ಯಾನ್ ಇಂಡಿಯಾದಿಂದ ದುಡ್ಡು ಹುಟ್ಟುವುದಿಲ್ಲ ಎಂದಿದ್ದಾರೆ.

ಪ್ಯಾನ್‍ ಇಂಡಿಯಾ ಸಿನಿಮಾದಿಂದ ನಿರ್ಮಾಪಕರು ಹೈರಣಾಗಿದ್ದಾರೆ ಎನ್ನುವ ಮಂಜು, ‘ಕನ್ನಡದಲ್ಲಿ ಬಹಳಷ್ಟು ನಿರ್ದೇಶಕರು ಮಾತೆತ್ತಿದರೆ ಪ್ಯಾನ್‍ ಇಂಡಿಯಾ ಸಿನಿಮಾ ಮಾಡುತ್ತೀನಿ ಎನ್ನುತ್ತಾರೆ. ಆದರೆ, ಅದಕ್ಕೆ ಬಜೆಟ್‍ ಹಾಕೋರು ಯಾರು? ಎಂಬ ಪ್ರಶ್ನೆಗೆ ಉತ್ತರವಿಲ್ಲ. ಪ್ಯಾನ್ ಇಂಡಿಯಾ ಸಿನಿಮಾ ಮಾಡುವುದಕ್ಕೆ ಎಲ್ಲರಿಂದಲೂ ಸಾಧ್ಯವಿಲ್ಲ. ಹಾಗಾಗಿಯೇ, ಬಹಳಷ್ಟು ನಿರ್ಮಾಪಕರು ಸಿನಿಮಾ ಮಾಡಬೇಕೋ, ಬೇಡವೋ ಎಂಬ ಗೊಂದಲದಲ್ಲಿದ್ದಾರೆ ಎನ್ನುತ್ತಾರೆ ಮಂಜು.

ಅಂದಹಾಗೆ, ಕೆ. ಮಂಜು ಇದೆಲ್ಲಾ ಮಾತನಾಡಿದ್ದು ‘ಹಗ್ಗ’ ಚಿತ್ರದ ಟೀಸರ್‍ ಬಿಡುಗಡೆಯಾದ ಮೇಲೆ. ಇದಾಗಿ ಎರಡೇ ದಿನಗಳ ನಂತರ ವಿನೋದ್‍ ದೊಂಡಾಳೆ ಆತ್ಮಹತ್ಯೆಯ ಸುದ್ದಿ ಬಂದಿದೆ. ವಿನೋದ್, ಎರಡು ವರ್ಷಗಳ ಹಿಂದೆ ಸತೀಶ್ ನೀನಾಸಂ ಅಭಿನಯದಲ್ಲಿ ‘ಅಶೋಕಾ ಬ್ಲೇಡ್‍’ ಎಂಬ ಚಿತ್ರವನ್ನು ಪ್ರಾರಂಭಿಸಿದ್ದರು. ಮೊದಲು ಕನ್ನಡ ಚಿತ್ರ ಎಂದು ಶುರುವಾದ ‘ಅಶೋಕಾ ಬ್ಲೇಡ್‍’, ಪ್ಯಾನ್‍ ಇಂಡಿಯಾ ಚಿತ್ರವಾಗಿ ಎರಡು ಭಾಗಗಳಲ್ಲಿ ಬಿಡುಗಡೆಯಾಗುತ್ತಿದೆ ಎಂದು ಸುದ್ದಿಯಾಯ್ತು. ಹೀಗೆ ಚಿತ್ರ ದೊಡ್ಡದಾಗ, ಸಾಲವೂ ಹೆಚ್ಚಾಗಿ, ಅದನ್ನು ತೀರಿಸಲಾಗದೆ, ಚಿತ್ರವನ್ನೂ ಮುಗಿಸಲಾಗದೆ ವಿನೋದ್‍ ನೇಣಿಗೆ ಶರಣಾಗಿದ್ದು ದುರಂತ.

ಭೂಮಿಕಾ

Recent Posts

ಓದುಗರ ಪತ್ರ: ಎಸ್‌ಐಆರ್: ಶಿಕ್ಷಣ ಸಂಸ್ಥೆಗಳಿಗೆ ಸೂಕ್ತ ಮಾರ್ಗದರ್ಶನ ಅಗತ್ಯ

ಎಸ್‌ಐಆರ್ ಪ್ರಕ್ರಿಯೆ ಪ್ರಾರಂಭವಾದ ನಂತರ ಮಾಧ್ಯಮಗಳಲ್ಲಿ ಕೆಲವು ಬಿಎಲ್‌ಒಗಳು ನಿವಾಸಿಗಳ ಸ್ಥಳಕ್ಕೆ ಬಾರದೆ ಅವರಿದ್ದ ಕಡೆಗೇ ಕರೆಸಿಕೊಂಡು ಕೆಲಸ ನಿರ್ವಹಿಸುವ…

3 hours ago

ಓದುಗರ ಪತ್ರ: ದಸರಾದಲ್ಲಿ ಕಂಬಳ ಬೇಕೇ?

ಸಾಂಸ್ಕೃತಿಕ ನಗರ ಮೈಸೂರಿನಲ್ಲಿ ನಾಡಹಬ್ಬ ದಸರಾ ೧೬೧೦ ರಲ್ಲಿ ಪ್ರಾರಂಭವಾಗಿ, ಇಲ್ಲಿನ ಸಂಸ್ಕೃತಿಗಳನ್ನು ಅಳವಡಿಸಿಕೊಂಡು ಆಚರಿಸುತ್ತಿರುವುದು ಎಲ್ಲರಿಗೂ ತಿಳಿದಿರುವ ಸಂಗತಿ.ಇತ್ತೀಚಿನ…

3 hours ago

ಉಪನಗರ ಯೋಜನೆ ಖಂಡಿತ ಅಭಿವೃದ್ಧಿಯಲ್ಲ

ಆರ್.ಪಿ.ವೆಂಕಟೇಶಮೂರ್ತಿ ಬೆಂಗಳೂರು ಮತ್ತು ಸುತ್ತಮುತ್ತಲಿನ ದುಃಸ್ಥಿತಿಗೆ ಎಲ್ಲ ರಾಜಕೀಯ ಪಕ್ಷಗಳ ಕೊಡುಗೆ ಇದೆ, ರಾಜಕೀಯ ನಾಯಕರು ದಯಮಾಡಿ ಆತ್ಮಾವಲೋಕನ ಮಾಡಿಕೊಳ್ಳಬೇಕು.…

3 hours ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ: ಬಗೆದಷ್ಟು ಬಹಿರಂಗ; ರಾಮಮಂದಿರ ಕಾಣಿಕೆ ಲೂಟಿ

ಹಲವು ದಶಕಗಳ ಹೋರಾಟದಿಂದ ಎರಡೂವರೆ ವರ್ಷಗಳ ಹಿಂದೆ ನನಸಾದ ಹಿಂದುಗಳ ಧಾರ್ಮಿಕ ಶ್ರದ್ಧಾ ಕೇಂದ್ರವಾದ ಶ್ರೀರಾಮ ಮಂದಿರದಗಿರುವ ಭಕ್ತರ ಕಾಣಿಕೆಯ…

3 hours ago

ಎಸ್‌ಐಆರ್: ಮಿಶ್ರ ಪ್ರತಿಕ್ರಿಯೆ

ಕೆ.ಎಸ್.ಚಂದ್ರಶೇಖರ ಮೂರ್ತಿ ‘ಸಂವಿಧಾನಬದ್ಧ ಪ್ರಕ್ರಿಯೆ; ಕಾರ್ಯವಿಧಾನದ ಬಗ್ಗೆ ಅಸಮಾಧಾನ’ ಸಾಹಿತಿಗಳು, ಗಣ್ಯರು, ಮುಖಂಡರ ಅಭಿಪ್ರಾಯ ಮೈಸೂರು: ಭಾರತೀಯ ಚುನಾವಣಾ ಆಯೋಗದ…

3 hours ago