ಮನರಂಜನೆ

‘ಕೊತ್ತಲವಾಡಿ’ ಮೂಲಕ ಮೂರು ಆಸೆಗಳನ್ನು ಈಡೇರಿಸಿಕೊಂಡ ಪೃಥ್ವಿ

ಪೃಥ್ವಿ ಅಂಬಾರ್‌ ಚಿತ್ರದಿಂದ ಚಿತ್ರಕ್ಕೆ ವಿಭಿನ್ನ ಪಾತ್ರಗಳನ್ನು ಮಾಡುತ್ತಾ ಬಂದಿದ್ದಾರೆ. ಆದರೆ, ಇದುವರೆಗೂ ಅವರು ಹೆಚ್ಚಾಗಿ ನಟಿಸಿರುವುದು ಸಾಫ್ಟ್ ಪಾತ್ರಗಳಿಂದಲೇ. ಈಗ ಇದೇ ಮೊದಲ ಬಾರಿಗೆ ‘ಕೊತ್ತಲವಾಡಿ’ ಚಿತ್ರದಲ್ಲಿ ಅವರು ಹಳ್ಳಿಯ ಯುವಕನಾಗಿಯಷ್ಟೇ ಅಲ್ಲ, rough and tough ಎನ್ನುವಂತಹ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಚಿತ್ರದ ಬಗ್ಗೆ ಸಾಕಷ್ಟು ನಿರೀಕ್ಷೆಗಳನ್ನು ಸಹ ಇಟ್ಟುಕೊಂಡಿದ್ದಾರೆ.

‘ಕೊತ್ತಲವಾಡಿ’ ಚಿತ್ರವು ಆಗಸ್ಟ್.01ರಂದು ಬಿಡಗುಡೆಯಾಗುತ್ತಿದ್ದು, ಈ ಕುರಿತಾಗಿ ಅವರು ಒಂದಿಷ್ಟು ವಿಷಯಗಳನ್ನು ಹಂಚಿಕೊಂಡಿದ್ದಾರೆ. ‘ಈ ಚಿತ್ರದಲ್ಲಿ ಬರೀ ನನ್ನ ಪಾತ್ರ ಮಾತ್ರ ಮುಖ್ಯವಲ್ಲ. ಇಲ್ಲಿ ಎಲ್ಲಾ ಪಾತ್ರಗಳಿಗೂ ತನ್ನದೇ ಆದ ಪ್ರಾಮುಖ್ಯತೆ ಇದೆ. ಸಿನಿಮಾ ನೋಡಿ ಹೊರ ಬಂದಾಗ, ಗೋಪಾಲಕೃಷ್ಣ ದೇಶಪಾಂಡೆ ಅವರು ಮಾಡಿದ ಪಾತ್ರ ಎಲ್ಲರಿಗೂ ಹೆಚ್ಚು ಇಷ್ಟವಾಗುತ್ತದೆ ಎಂಬ ನಂಬಿಕೆ ನನಗಿದೆ. ನಿರ್ದೇಶಕರು ಎಲ್ಲಾ ಪಾತ್ರಗಳಿಗೂ ಅದರದ್ದೇ ಆದ ಮಹತ್ವ ಕೊಟ್ಟಿದ್ದಾರೆ. ಅದೇ ಈ ಚಿತ್ರದ ಹೈಲೈಟ್‍ ಎಂದರೆ ತಪ್ಪಿಲ್ಲ’ ಎನ್ನುತ್ತಾರೆ ಪೃಥ್ವಿ.

ಈ ಚಿತ್ರದಲ್ಲಿ ಹಳ್ಳಿಯ ಗಟ್ಟಿಗನಾಗಿ ಅಭಿನಯಿಸಿರುವ ಅವರು, ‘ಕೊತ್ತಲವಾಡಿ ಎಂದರೆ ಆ ಗ್ರಾಮದ ಕಥೆಯಲ್ಲ. ಕರ್ನಾಟಕದಲ್ಲಿ ಯಾವ ಹಳ್ಳಿಯ ಕಥೆ ಬೇಕಾದರೂ ಆಗಬಹುದು. ಹಳ್ಳಿಯ ರಾಜಕೀಯದ ಸುತ್ತ ನಡೆಯುವ ಕಥೆ ಇದು. ಹಳ್ಳಿಯ ಯಾವುದೇ ಸಮಸ್ಯೆ ಎದುರಾದರೂ ಅಲ್ಲಿನ ಹುಡುಗರು ಎದ್ದು ನಿಲ್ಲುತ್ತಾರೆ. ಅದನ್ನು ಪ್ರಮುಖವಾಗಿ ಇಲ್ಲಿ ತೋರಿಸಲಾಗಿದೆ. ಅದರ ಜೊತೆಗೆ, ಮುಖಂಡರು ಹಳ್ಳಿಯ ಹುಡುಗರನ್ನು ಹೇಗೆ ಬಳಸಿಕೊಳ್ಳುತ್ತಾರೆ ಎಂಬ ಹಲವು ಪದರಗಳು ಇವೆ. ನಾನು ಈ ಚಿತ್ರವನ್ನು ಒಪ್ಪಿಕೊಳ್ಳುವುದಕ್ಕೆ, ಈ ಪಾತ್ರ ಮಾಡುವುದಕ್ಕೆ ಮುಖ್ಯ ಕಾರಣ ಕಥೆ ಮತ್ತು ಪಾತ್ರ. ನನಗೆ ಹಳ್ಳಿಯ ಗಟ್ಟಿಗನ ಪಾತ್ರ ಮಾಡಬೇಕು ಎಂದು ನನಗೆ ಬಹಳ ದಿನಗಳಿಂದ ಆಸೆ ಇತ್ತು. ಮಂಡ್ಯ ಸೊಗಡಿನ ಚಿತ್ರ ಮಾಡುವ ಆಸೆಯೂ ಇತ್ತು. ಜೊತೆಗೆ ಗೋಪಾಲಕಷ್ಣ ದೇಶಪಾಂಡೆ ಜೊತೆಗೆ ನಟಿಸುವ ಅವಕಾಶ ಸಿಕ್ಕಿದ್ದು. ಅದಕ್ಕೆ ಈ ಚಿತ್ರ ಒಪ್ಪಿಕೊಂಡೆ. ನನಗೆ ಈ ಚಿತ್ರವನ್ನು ಯಶ್ ಅವರ ತಾಯಿ ಪುಷ್ಪಾ ಅರುಣ್ ಕುಮಾರ್ ಅವರು ನಿರ್ಮಿಸುತ್ತಿರುವ ವಿಷಯ ಗೊತ್ತಿರಲಿಲ್ಲ. ಚಿತ್ರೀಕರಣವೆಲ್ಲಾ ಮುಗಿದ ನಂತರ ಗೊತ್ತಾಯಿತು’ ಎನ್ನುತ್ತಾರೆ.

ಪೃಥ್ವಿ ಮೂಲತಃ ಕರಾಳಿಯವರು. ಕರಾವಳಿಯವರಿಗೆ ಮಂಡ್ಯ ಭಾಷೆ ಮಾತಾಡುವುದು ಕಷ್ಟ. ಹಾಗಿರುವಾಗ, ಚಿತ್ರದ ಸಂಭಾಷಣೆಗಳನ್ನು ಹೇಳುವುದು ಎಷ್ಟು ಕಷ್ಟವಾಯಿತು ಎಂಬ ಪ್ರಶ್ನೆಗೆ ಉತ್ತರಿಸಿರುವ ಅವರು, ‘ಈ ಕುರಿತು ಒಂದಿಷ್ಟು ಸಿನಿಮಾಗಳನ್ನು ನೋಡಿದೆ. ಹಾಗೆಯೇ ಮಾತನಾಡುತ್ತಾ ಆಡುತ್ತಾ ಸುಲಭವಾಯಿತು. ನಮ್ಮ ನಿರ್ದೇಶಕರು ಚಿತ್ರದ ಪೂರಾ ಸಂಭಾಷಣೆ ವಿಷಯದಲ್ಲಿ ನನಗೆ ಸಾಕಷ್ಟು ಸಹಾಯ ಮಾಡಿದರು. ರಘು ನಿಡುವಳ್ಳಿ ಚಿತ್ರಕ್ಕೆ ಸಂಭಾಷಣೆ ಬರೆದಿದ್ದಾರೆ. ಅವರ ಸಂಭಾಷಣೆಗಳು ಸುಲಭ ಅಂತೆನಿಸಿತು. ಕೇಳಿದರೆ ಎಲ್ಲೂ ಆಭಾಸ ಎಂದೆನಿಸುವುದಿಲ್ಲ’ ಎನ್ನುತ್ತಾರೆ.

‘ಕೊತ್ತಲವಾಡಿ’ ಚಿತ್ರವನ್ನು ಯಶ್‍ ತಾಯಿ ಪುಷ್ಪಾ ಅರುಣ್ ಕುಮಾರ್, ಪಿಎ ಪ್ರೊಡಕ್ಷನ್ಸ್ ಲಾಂಛನದಲ್ಲಿ ನಿರ್ಮಾಣ ಮಾಡುತ್ತಿದ್ದಾರೆ. ಚಿತ್ರಕ್ಕೆ ವಿಕಾಸ್‌ ವಸಿಷ್ಠ ಸಂಗೀತ, ಕಾರ್ತಿಕ್ ಎಸ್. ಛಾಯಾಗ್ರಹಣ, ರಘು ನಿಡುವಳ್ಳಿ ಸಂಭಾಷಣೆ ಇದೆ. ಶ್ರೀರಾಜ್‍ ಕಥೆ-ಚಿತ್ರಕಥೆ ಬರೆದು ನಿರ್ದೇಶಿಸಿರುವ ಈ ಚಿತ್ರದಲ್ಲಿ ಗೋಪಾಲಕೃಷ್ಣ ದೇಶಪಾಂಡೆ, ರಾಜೇಶ್ ನಟರಂಗ ಅವರಂತಹ ಅನುಭವಿ ಕಲಾವಿದರು ಈ ಚಿತ್ರದಲ್ಲಿ ನಟಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಕೊಡಗು ಜಿಲ್ಲೆಯಲ್ಲಿ ಕಳೆದ 24 ಗಂಟೆಯಲ್ಲಿ ಸುರಿದ ಮಳೆಯ ವಿವರ

ಕೊಡಗು: ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 37 ಮಿ.ಮೀ. ಮಳೆಯಾಗಿದೆ. ಕಳೆದ…

11 hours ago

ಹಾರಂಗಿ ಜಲಾಶಯದ ಇಂದಿನ ನೀರಿನ ಮಟ್ಟ

ಮಡಿಕೇರಿ: ಹಾರಂಗಿ ಜಲಾಶಯದಲ್ಲಿ ನೀರಿನ ಮಟ್ಟ ಗರಿಷ್ಠ ಮಟ್ಟಕ್ಕೆ ತಲುಪಿದೆ. ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, ಇಂದು 2,858.45…

11 hours ago

ತಮಿಳುನಾಡಿಗೆ ನಿತ್ಯ 9 ಸಾವಿರ ಕ್ಯೂಸೆಕ್ ನೀರು ಹರಿಸಿ – CWRC ಶಿಫಾರಸು ಎತ್ತಿಹಿಡಿದ CWMA

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ, ಅಂದರೆ CWRCಯ ಶಿಫಾರಸನ್ನು ಕಾವೇರಿ ನೀರು…

11 hours ago

ಓದುಗರ ಪತ್ರ: ಭವಿಷ್ಯದ ಬೆಳಕಾಗಲಿ!

ಭವಿಷ್ಯದ ಬೆಳಕಾಗಲಿ! ಎಲ್ಲರ ಒಳಗೊಳ್ಳುವ ಎಲ್ಲರ ಹಿತ ಅಭ್ಯುದಯದ ಹೊಸ ದೇಶ ಕಟ್ಟುವುದಾಗಿ ಗುಡುಗುತಿದೆ ಜೆನ್ ಝೀ ಪಡೆ! ಈ…

14 hours ago

ಓದುಗರ ಪತ್ರ: ಓದುಗರ ಪತ್ರ ಚಾಮುಂಡಿಬೆಟ್ಟ: ನೋ-ಫ್ಲೈಝೋನ್ ಆಗಲಿ

ತಿರುಪತಿಯ ಮಾದರಿಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೂ ನೋ -ಫ್ಲೈಝೋನ್ ಘೋಷಣೆಗೆ ಗಂಭೀರವಾಗಿ ಪರಿಶೀಲಿಸುವಂತೆ ಸಂಸದ ಯದುವೀರ್ ಅವರು ಕೇಂದ್ರ ನಾಗರಿಕ ವಿಮಾನಯಾನ…

14 hours ago

ಓದುಗರ ಪತ್ರ: ಪ್ರೇಕ್ಷಕರ ಆಸಕ್ತಿಗೆ ತಕ್ಕಂತೆ ಕಾರ್ಯಕ್ರಮ ಆಯೋಜಿಸಿ

ಈ ವರ್ಷದ ನಾಡ ಹಬ್ಬ ದಸರಾದಲ್ಲಿ ನಡೆಯುವ ಕವಿಗೋಷ್ಠಿಗೆ, ಕವಿಗೋಷ್ಠಿಯ ಉಪಸಮಿತಿಯವರು ಅರ್ಜಿ ಸಲ್ಲಿಸಲು ತಿಳಿಸಿದ್ದಾರೆ. ಪ್ರಧಾನ ಕವಿಗೋಷ್ಠಿ, ಯುವ…

14 hours ago