ಮನರಂಜನೆ

ಹಳೆ‌ಯ ಗರ್ಲ್ ಫ್ರೆಂಡ್‍ಗೆ ಪೃಥ್ವಿ ಅಂಬಾರ್ ಶುಭಾಶಯ: ಆಲ್ಬಂ ಸಾಂಗ್ ಬಿಡುಗಡೆ

ನಮ್ಮಲ್ಲಿ ಆಲ್ಬಂ ಹಾಡುಗಳ ಟ್ರೆಂಡ್ ಕಡಿಮೆ. ಅದರಲ್ಲೂ ಸಿನಿಮಾ ನಟ-ನಟಿಯರು ಆಲ್ಬಂ ಹಾಡುಗಳಲ್ಲಿ ಕಾಣಿಸಿಕೊಳ್ಳುವುದು ಇನ್ನೂ ಕಡಿಮೆಯೇ. ಹೀಗಿರುವಾಗ, ಸಿನಿಮಾ ನಟ-ನಟಿಯರು ಇಂತಹ ಆಲ್ಬಂ ಹಾಡುಗಳಲ್ಲಿ ಕಾಣಿಸಿಕೊಳ್ಳುವುದು ಇನ್ನೂ ವಿರಳವೇ. ಹೀಗಿರುವಾಗಲೇ ನಟ ಪೃಥ್ವಿ ಅಂಬಾರ್‍ ಇಂಥದ್ದೊಂದು ಪ್ರಯತ್ನಕ್ಕೆ ಕೈಹಾಕಿದ್ದಾರೆ. ಸದ್ದಿಲ್ಲದೆ, ‘ಶುಭಾಶಯ’ ಎಂಬ ವೀಡಿಯೋ ಆಲ್ಬಂನಲ್ಲಿ ಕಾಣಿಸಿಕೊಂಡಿದ್ದಾರೆ.

ಜನಪ್ರಿಯ ಗೀತರಚನೆಕಾರ ನಾಗಾರ್ಜುನ್ ಶರ್ಮಾ ಸಾಹಿತ್ಯ ಬರೆದು ನಿರ್ದೇಶಿಸಿರುವ ‘ಶುಭಾಶಯ’ ಎಂಬ ಹೊಸ ಆಲ್ಬಂ ಗೀತೆ ಅನಾವರಣಗೊಂಡಿದೆ. ನಿರ್ದೇಶಕ ತರುಣ್ ಸುಧೀರ್ ಹಾಗೂ ಸೋನಲ್ ದಂಪತಿ ಇತ್ತೀಚೆಗೆ ‘ಶುಭಾಶಯ’ ಆಲ್ಬಂ ಗೀತೆಯನ್ನು ಬಿಡುಗಡೆ ಮಾಡಿ ಇಡೀ ತಂಡಕ್ಕೆ ಶುಭಾಶಯ ತಿಳಿಸಿದರು.

ಇದನ್ನು ಓದಿ: ಕಾಂತಾರ – ಅಧ್ಯಾಯ 1’ ಚಿತ್ರಕ್ಕೆ ನಟ-ಗಾಯಕ ದಿಲ್ಜಿತ್ ದೋಸಾಂಜ್ ಎಂಟ್ರಿ

ಈ ಹಾಡಿನ ಕುರಿತು ಮಾತನಾಡುವ ಪೃಥ್ವಿ, ‘ಕೆಲವು ಚಿತ್ರತಂಡಗಳ ಜೊತೆಗೆ ಸೇರಿಕೊಂಡರೆ, ನಾವು ಸಹ ಸಾಕಷ್ಟು ಕಲಿಯುವುದಕ್ಕೆ ಸಿಗುತ್ತದೆ. ನಾನು ಈ ಹಾಡಿನ ಚಿತ್ರೀಕರಣದಲ್ಲಿ ಸಾಕಷ್ಟು ಕಲಿತಿದ್ದೇನೆ. ನಾಗಾರ್ಜುನ ಶರ್ಮ ಅವರ ಜೊತೆಗೆ ನನಗೆ ಅಷ್ಟೇನೂ ಒಡನಾಟವಿರಲಿಲ್ಲ. ಅವರೊಬ್ಬ ಒಳ್ಳೆಯ ತಂತ್ರಜ್ಞ. ಮುಂದಿನ ದಿನಗಳಲ್ಲಿ ಅವರೊಬ್ಬ ಒಳ್ಳೆಯ ನಿರ್ದೇಶಕರಾಗುತ್ತಾರೆ ಎಂಬ ನಂಬಿಕೆ ಇದೆ. ಇಷ್ಟು ಚೆನ್ನಾಗಿ ನಾನು ಯಾವ ಚಿತ್ರದಲ್ಲೂ ಕಾಣಿಸಿರಲಿಲ್ಲ. ಈ ಹಾಡಿನಲ್ಲಿ ಕಾಣಿಸಿಕೊಂಡಿದ್ದೇನೆ’ ಎಂದರು.

ಈ ಹಾಡಿನಲ್ಲಿ ಪೇಂಟರ್ ಒಬ್ಬನ ಪ್ರೇಮಕಥೆಯನ್ನು ನಾಗಾರ್ಜುನ್ ಶರ್ಮ ಕಟ್ಟಿಕೊಟ್ಟಿದ್ದಾರೆ. ಪೃಥ್ವಿ ಅಂಬಾರ್ ಪೇಂಟರ್ ಆಗಿ, ಆತನ ಪ್ರೇಯಸಿಯಾಗಿ ಅಂಜಲಿ ಅನೀಶ್ ನಟಿಸಿದ್ದಾರೆ. ‘ಅವಳು ಹೋಗು ಅಂದಾಗಲೇ ಸತ್ತಿದ್ದೆ, ಈಗ ಪೂರ್ತಿ ಮಣ್ಣಾಗಿದ್ದೇನೆ, ಆದರೂ ಅವಳಿಗೆ ಕೋರಲು ಹೊರಟಿರುವೆ ಶುಭಾಶಯ‌ …’ ಎಂದು ಶುರುವಾಗುವ ಹಾಡನ್ನು ಸಿನಿಮಾ ರೀತಿಯೇ ಸುಂದರವಾಗಿ ಚಿತ್ರೀಕರಣ ಮಾಡಲಾಗಿದೆ.

ತನ್ನ ಹಳೆಯ ಪ್ರೇಮಿಯ ಮದುವೆಗೆ ಹೋಗಿ ಪ್ರಿಯಕರ ಶುಭಾಶಯ ಕೋರುವುದೇ ‘ಶುಭಾಶಯ’ ಆಲ್ಬಂ ಸಾಂಗ್ ಹೈಲೆಟ್. ಜಸ್ಕರಣ್ ಸಿಂಗ್ ಈ ಗೀತೆಗೆ ಧ್ವನಿಯಾಗಿದ್ದು, ಜೋ ಕೋಸ್ಟಾ ಸಂಗೀತ ಹಾಡಿನ ಅಂದ ಹೆಚ್ಚಿಸಿದೆ. ವೈಷ್ಣವಿ ಫಿಲ್ಮಂಸ್ ಬ್ಯಾನರ್ ಈ ಆಲ್ಬಂ ಹಾಡನ್ನು ನಿರ್ಮಿಸಿದ್ದು, ವೈಷ್ಣವಿ ಫಿಲ್ಮಂಸ್ ಯೂಟ್ಯೂಬ್ ನಲ್ಲಿ ಶುಭಾಶಯ ಆಲ್ಬಂ ಸಾಂಗ್ ವೀಕ್ಷಣೆಗೆ ಲಭ್ಯವಿದೆ.

ಆಂದೋಲನ ಡೆಸ್ಕ್

Recent Posts

ವೈರಮುಡಿ ಬ್ರಹ್ಮೋತ್ಸವದಲ್ಲಿ ಭಕ್ತರಿಗೆ ತೊಂದರೆ ಆಗದಂತೆ ಕ್ರಮವಹಿಸಿ: ಎನ್.ಚಲುವರಾಯಸ್ವಾಮಿ

ಮಂಡ್ಯ: 2026ರ ಸಾಲಿನ ಮೇಲುಕೋಟೆ ಶ್ರೀ ಚೆಲುವನಾರಾಯಣಸ್ವಾಮಿ ವೈರಮುಡಿ ಬ್ರಹ್ಮೋತ್ಸವವು ಮಾರ್ಚ್ 23ರಿಂದ ಏಪ್ರಿಲ್.4ರವರೆಗೆ ನಡೆಯಲಿದೆ. ಈ ಉತ್ಸವದ ಪ್ರಮುಖ…

1 hour ago

ಮಂಡ್ಯ ಜಿಲ್ಲೆಯಲ್ಲಿ ಅಭಿವೃದ್ಧಿ ಪರ್ವ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ

ಮಂಡ್ಯ: ಜಿಲ್ಲೆಯಲ್ಲಿ ಅಭಿವೃದ್ಧಿ ಪರ್ವ ಆರಂಭವಾಗಿದೆ. ನಾನು ಕೊಟ್ಟ ಮಾತಿನಂತೆ ನುಡಿದಂತೆ ನಡೆಯುತ್ತಿದ್ದೇನೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿಗೆ ತಿಳಿಸಿದ್ದಾರೆ.…

2 hours ago

ಶೇ.20ರಷ್ಟಾದರೂ ಕಮರ್ಷಿಯಲ್ ಸಿಲಿಂಡರ್ ಒದಗಿಸಲು ಕ್ರಮವಹಿಸಿ: ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ನಾರಾಯಣಗೌಡ

ಮೈಸೂರು: ಕೆಲವು ಕಡೆ ಊಟದ ವಿಚಾರಕ್ಕಾಗಿಯೇ ಪ್ರವಾಸಿಗರು ಹೋಟೆಲ್‌ ರೂಂ ಬುಕ್ಕಿಂಗ್‌ ಕ್ಯಾನ್ಸಲ್‌ ಮಾಡಿಕೊಂಡಿದ್ದಾರೆ ಎಂದು ಹೋಟೆಲ್‌ ಮಾಲೀಕರ ಸಂಘದ…

2 hours ago

ಯಾವುದೇ ಕಾರಣಕ್ಕೂ ಎನ್‌ಡಿಎ ಮೈತ್ರಿಕೂಟ ಸೇರಲ್ಲ: ಟಿವಿಕೆ ಸ್ಪಷ್ಟನೆ

ಚೆನ್ನೈ: ಟಿವಿಕೆ ಪಕ್ಷ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟ ಸೇರಲಿದೆ ಎಂಬ ಸುದ್ದಿಗಳು ಕೇಳಿಬರುತ್ತಿರುವ ಬೆನ್ನಲ್ಲೇ ಟಿವಿಕೆ ಈಗ ಸ್ಪಷ್ಟನೆ…

2 hours ago

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಮಾಜಿ ಅಧ್ಯಕ್ಷ ಜೈರಾಜ್‌ ನಿಧನ

ಬೆಂಗಳೂರು: ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಮಾಜಿ ಅಧ್ಯಕ್ಷ ಜೈರಾಜ್‌ ಅವರು ಅನಾರೋಗ್ಯದಿಂದ ನಿಧನರಾಗಿದ್ದಾರೆ. ತುಮಕೂರು ಜಿಲ್ಲೆಯ ಗುಬ್ಬಿ ಮೂದವರಾಗಿದ್ದ…

3 hours ago

ಜಮೀನುಗಳಲ್ಲಿ ಹುಲಿ ಹಾವಳಿ: ಕೂಲಿ ಕೆಲಸಕ್ಕೆ ಕಾರ್ಮಿಕರ ಹಿಂದೇಟು

ಚಾಮರಾಜನಗರ: ಜಿಲ್ಲೆಯಲ್ಲಿ ಮಾನವ ಮತ್ತು ವನ್ಯಜೀವಿಗಳ ನಡುವಿನ ಸಂಘರ್ಷ ತಾರಕಕ್ಕೇರಿದೆ. ಚಿರತೆ ಮತ್ತು ಆನೆಗಳ ದಾಳಿಯ ಬೆನ್ನಲ್ಲೇ, ಈಗ ಹುಲಿರಾಯನ…

4 hours ago