ಮನರಂಜನೆ

ಹಳೆ‌ಯ ಗರ್ಲ್ ಫ್ರೆಂಡ್‍ಗೆ ಪೃಥ್ವಿ ಅಂಬಾರ್ ಶುಭಾಶಯ: ಆಲ್ಬಂ ಸಾಂಗ್ ಬಿಡುಗಡೆ

ನಮ್ಮಲ್ಲಿ ಆಲ್ಬಂ ಹಾಡುಗಳ ಟ್ರೆಂಡ್ ಕಡಿಮೆ. ಅದರಲ್ಲೂ ಸಿನಿಮಾ ನಟ-ನಟಿಯರು ಆಲ್ಬಂ ಹಾಡುಗಳಲ್ಲಿ ಕಾಣಿಸಿಕೊಳ್ಳುವುದು ಇನ್ನೂ ಕಡಿಮೆಯೇ. ಹೀಗಿರುವಾಗ, ಸಿನಿಮಾ ನಟ-ನಟಿಯರು ಇಂತಹ ಆಲ್ಬಂ ಹಾಡುಗಳಲ್ಲಿ ಕಾಣಿಸಿಕೊಳ್ಳುವುದು ಇನ್ನೂ ವಿರಳವೇ. ಹೀಗಿರುವಾಗಲೇ ನಟ ಪೃಥ್ವಿ ಅಂಬಾರ್‍ ಇಂಥದ್ದೊಂದು ಪ್ರಯತ್ನಕ್ಕೆ ಕೈಹಾಕಿದ್ದಾರೆ. ಸದ್ದಿಲ್ಲದೆ, ‘ಶುಭಾಶಯ’ ಎಂಬ ವೀಡಿಯೋ ಆಲ್ಬಂನಲ್ಲಿ ಕಾಣಿಸಿಕೊಂಡಿದ್ದಾರೆ.

ಜನಪ್ರಿಯ ಗೀತರಚನೆಕಾರ ನಾಗಾರ್ಜುನ್ ಶರ್ಮಾ ಸಾಹಿತ್ಯ ಬರೆದು ನಿರ್ದೇಶಿಸಿರುವ ‘ಶುಭಾಶಯ’ ಎಂಬ ಹೊಸ ಆಲ್ಬಂ ಗೀತೆ ಅನಾವರಣಗೊಂಡಿದೆ. ನಿರ್ದೇಶಕ ತರುಣ್ ಸುಧೀರ್ ಹಾಗೂ ಸೋನಲ್ ದಂಪತಿ ಇತ್ತೀಚೆಗೆ ‘ಶುಭಾಶಯ’ ಆಲ್ಬಂ ಗೀತೆಯನ್ನು ಬಿಡುಗಡೆ ಮಾಡಿ ಇಡೀ ತಂಡಕ್ಕೆ ಶುಭಾಶಯ ತಿಳಿಸಿದರು.

ಇದನ್ನು ಓದಿ: ಕಾಂತಾರ – ಅಧ್ಯಾಯ 1’ ಚಿತ್ರಕ್ಕೆ ನಟ-ಗಾಯಕ ದಿಲ್ಜಿತ್ ದೋಸಾಂಜ್ ಎಂಟ್ರಿ

ಈ ಹಾಡಿನ ಕುರಿತು ಮಾತನಾಡುವ ಪೃಥ್ವಿ, ‘ಕೆಲವು ಚಿತ್ರತಂಡಗಳ ಜೊತೆಗೆ ಸೇರಿಕೊಂಡರೆ, ನಾವು ಸಹ ಸಾಕಷ್ಟು ಕಲಿಯುವುದಕ್ಕೆ ಸಿಗುತ್ತದೆ. ನಾನು ಈ ಹಾಡಿನ ಚಿತ್ರೀಕರಣದಲ್ಲಿ ಸಾಕಷ್ಟು ಕಲಿತಿದ್ದೇನೆ. ನಾಗಾರ್ಜುನ ಶರ್ಮ ಅವರ ಜೊತೆಗೆ ನನಗೆ ಅಷ್ಟೇನೂ ಒಡನಾಟವಿರಲಿಲ್ಲ. ಅವರೊಬ್ಬ ಒಳ್ಳೆಯ ತಂತ್ರಜ್ಞ. ಮುಂದಿನ ದಿನಗಳಲ್ಲಿ ಅವರೊಬ್ಬ ಒಳ್ಳೆಯ ನಿರ್ದೇಶಕರಾಗುತ್ತಾರೆ ಎಂಬ ನಂಬಿಕೆ ಇದೆ. ಇಷ್ಟು ಚೆನ್ನಾಗಿ ನಾನು ಯಾವ ಚಿತ್ರದಲ್ಲೂ ಕಾಣಿಸಿರಲಿಲ್ಲ. ಈ ಹಾಡಿನಲ್ಲಿ ಕಾಣಿಸಿಕೊಂಡಿದ್ದೇನೆ’ ಎಂದರು.

ಈ ಹಾಡಿನಲ್ಲಿ ಪೇಂಟರ್ ಒಬ್ಬನ ಪ್ರೇಮಕಥೆಯನ್ನು ನಾಗಾರ್ಜುನ್ ಶರ್ಮ ಕಟ್ಟಿಕೊಟ್ಟಿದ್ದಾರೆ. ಪೃಥ್ವಿ ಅಂಬಾರ್ ಪೇಂಟರ್ ಆಗಿ, ಆತನ ಪ್ರೇಯಸಿಯಾಗಿ ಅಂಜಲಿ ಅನೀಶ್ ನಟಿಸಿದ್ದಾರೆ. ‘ಅವಳು ಹೋಗು ಅಂದಾಗಲೇ ಸತ್ತಿದ್ದೆ, ಈಗ ಪೂರ್ತಿ ಮಣ್ಣಾಗಿದ್ದೇನೆ, ಆದರೂ ಅವಳಿಗೆ ಕೋರಲು ಹೊರಟಿರುವೆ ಶುಭಾಶಯ‌ …’ ಎಂದು ಶುರುವಾಗುವ ಹಾಡನ್ನು ಸಿನಿಮಾ ರೀತಿಯೇ ಸುಂದರವಾಗಿ ಚಿತ್ರೀಕರಣ ಮಾಡಲಾಗಿದೆ.

ತನ್ನ ಹಳೆಯ ಪ್ರೇಮಿಯ ಮದುವೆಗೆ ಹೋಗಿ ಪ್ರಿಯಕರ ಶುಭಾಶಯ ಕೋರುವುದೇ ‘ಶುಭಾಶಯ’ ಆಲ್ಬಂ ಸಾಂಗ್ ಹೈಲೆಟ್. ಜಸ್ಕರಣ್ ಸಿಂಗ್ ಈ ಗೀತೆಗೆ ಧ್ವನಿಯಾಗಿದ್ದು, ಜೋ ಕೋಸ್ಟಾ ಸಂಗೀತ ಹಾಡಿನ ಅಂದ ಹೆಚ್ಚಿಸಿದೆ. ವೈಷ್ಣವಿ ಫಿಲ್ಮಂಸ್ ಬ್ಯಾನರ್ ಈ ಆಲ್ಬಂ ಹಾಡನ್ನು ನಿರ್ಮಿಸಿದ್ದು, ವೈಷ್ಣವಿ ಫಿಲ್ಮಂಸ್ ಯೂಟ್ಯೂಬ್ ನಲ್ಲಿ ಶುಭಾಶಯ ಆಲ್ಬಂ ಸಾಂಗ್ ವೀಕ್ಷಣೆಗೆ ಲಭ್ಯವಿದೆ.

ಆಂದೋಲನ ಡೆಸ್ಕ್

Recent Posts

ಗ್ಯಾರಂಟಿ ಪರಿಷ್ಕರಣೆ; ಅರ್ಹರಿಗೆ ಅನ್ಯಾಯ ಆಗಬಾರದು

೨೦೨೩ರ ವಿಧಾನಸಭಾ ಚುನಾವಣೆಯಲ್ಲಿ ನೀಡಿದ್ದ ಭರವಸೆಯಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಜಾರಿಗೊಳಿಸಿದ್ದರು. ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹಜ್ಯೋತಿ,…

4 hours ago

ರಾಜ್ಯ ರಾಜಕಾರಣದ ಬೆಳವಣಿಗೆಯ ಲಾಭ ಪಡೆಯಲು ಬಿಜೆಪಿ-ಜಾ.ದಳ ಮಿತ್ರಕೂಟ ಯತ್ನ

ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ  ಮುಂಬರುವ ವಿಧಾನಸಭಾ ಚುನಾವಣೆಗೆ ತಂತಮ್ಮ ಪಕ್ಷದ ವೈಯಕ್ತಿಕ ಬಲ ಹೆಚ್ಚಿಸಿಕೊಳ್ಳಲೂ ಕೂಡ ತಂತ್ರ ರಾಜ್ಯ ಕಾಂಗ್ರೆಸ್‌ನ…

4 hours ago

ಕೊಡಗಿನ ಮಲ್ಲಳ್ಳಿ ಫಾಲ್ಸ್‌ನಲ್ಲಿ ಅಭದ್ರತೆ

ಲಕ್ಷ್ಮೀಕಾಂತ್ ಕೊಮಾರಪ್ಪ ಎಚ್ಚರಿಕೆ ಫಲಕ, ಕಾವಲು ಸಿಬ್ಬಂದಿ ಇಲ್ಲ; ಪ್ರವಾಸಿಗರಿಗೆ ಇಲ್ಲಿಲ್ಲ ರಕ್ಷಣೆ ಸೋಮವಾರಪೇಟೆ: ಕೊಡಗಿನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾದ…

5 hours ago

ಮುಚ್ಚುವ ಆತಂಕದಲ್ಲಿ ಶತಮಾನ ಕಂಡ ಶಾಲೆ

ಮಂಜು ಕೋಟೆ ಕೋಟೆ ಸರ್ಕಾರಿ ಹಿರಿಯ ಪ್ರಾಥಮಿಕ ಬಾಲಕರ ಮಾದರಿ ಶಾಲೆ; ಮಕ್ಕಳ ದಾಖಲಾತಿಯೇ ಇಲ್ಲದೆ ೧, ೨ನೇ ತರಗತಿಗಳು…

5 hours ago

ಸರ್ಕಾರಿ ಕಚೇರಿ; ಮೂಲ ಸೌಕರ್ಯಗಳಿಗೆ ಗೋರಿ!

ಪ್ರಶಾಂತ್ ಎಸ್. ಮೈಸೂರು : ಇಲ್ಲಿ ಕುಡಿಯಲು ನೀರಿಲ್ಲ... ಕುಳಿತುಕೊಳ್ಳಲು ಕುರ್ಚಿ ಇಲ್ಲ... ನಿಸರ್ಗ ಕರೆಗೆ ತುರ್ತಾದರೆ ಪರಿಸ್ಥಿತಿ ಏನೋ…

5 hours ago