ಮನರಂಜನೆ

ತಂತ್ರಜ್ಞಾನದ ಮೂಲಕ ಬೆಳಕಿಗೆ ಬಂದ ಪುನೀತ್‍; ಅಪ್ಪು‌ Fandom ಆ್ಯಪ್ ಅನಾವರಣ

ಜಗತ್ತಿನಲ್ಲಿ ಸಾವಿರಾರು ಆ್ಯಪ್‍ಗಳಿವೆ. ಆದರೆ, ನಟನ ಅಭಿಮಾನಿಗಳಿಗೆಂದೇ ಇದೇ ಮೊದಲ ಬಾರಿಗೆ ಆ್ಯಪ್‍ ಒಂದನ್ನು ರೂಪಿಸಲಾಗಿದೆ. ಅದೇ ಅಪ್ಪು‌ Fandom ಆ್ಯಪ್‍. ಈ ಆ್ಯಪ್‍ ಅನ್ನು ಉಪಮುಖ್ಯಮಂತ್ರಿ ಡಿ.ಕೆ‌. ಶಿವಕುಮಾರ್ ಶನಿವಾರ ಅನಾವರಣಗೊಳಿಸಿದ್ದಾರೆ.

ಈ ಆ್ಯಪ್‍ ಅನ್ನು ಸ್ಟಾರ್ ಫ್ಯಾನ್ಡಮ್ ಆ್ಯಪ್ ಸಂಸ್ಥೆಯು ರೂಪಿಸಿದೆ. ಆ್ಯಪ್‍ ಅನಾವರಣ ಸಂದರ್ಭದಲ್ಲಿ ಸಂಸ್ಥೆಯ ಅಧ್ಯಕ್ಷ ಡಾ.ಸಮರ್ಥ ರಾಘವ ನಾಗಭೂಷಣಂ, ಅಶ್ವಿನಿ ಪುನೀತ್‍ ರಾಜಕುಮಾರ್‍ ಸಹ ಹಾಜರಿದ್ದರು.

ಈ ಸಂದರ್ಭದಲ್ಲಿ ಮಾತನಾಡಿದ ಡಿ.ಕೆ. ಶಿವಕುಮಾರ್‍, ‘ರಾಮಾಯಣ ಮತ್ತು ಮಹಾಭಾರತಗಳು ಅನೇಕ ವರ್ಷಗಳಿಂದ ನಮ್ಮ ನಡುವೆ ಉಳಿದುಕೊಂಡಿವೆ. ಪುನೀತ್ ರಾಜಕುಮಾರ್ ಅವರು ಮಾಡಿರುವ ಕೆಲಸಗಳು ಹೊಸ ತಂತ್ರಜ್ಞಾನದ ಮೂಲಕ ನಮ್ಮ ನಡುವೆ ಜೀವಂತವಾಗಿರುತ್ತವೆ. ಎಐ‌ ತಂತ್ರಜ್ಞಾನದ ಮೂಲಕ ಭೀಮ, ಅರ್ಜುನ, ರಾಮ ಹೀಗೆ ಅನೇಕ ಪಾತ್ರಗಳನ್ನು ನೈಜತೆಗೆ ಹತ್ತಿರವಾದಂತೆ ಚಿತ್ರಿಸಲಾಗುತ್ತಿದೆ. ಅದೇ ರೀತಿ ಈ ಆ್ಯಪ್ನಲ್ಲಿ ಪುನೀತ್‍ ಅವರನ್ನು ಬಾಲ್ಯದಿಂದ ಇಲ್ಲಿಯವರೆಗೂ ಸೃಷ್ಟಿಸಲಾಗಿದೆ. ಪುನೀತ್ ಅವರು ಕೊನೆಯುಸಿರೆಳೆದ ಸಂದರ್ಭದಲ್ಲಿ ಎಷ್ಟೊಂದು ಅಭಿಮಾನಿಗಳು ಅವರಿಗಾಗಿ ಮಿಡಿದಿದ್ದಾರೆ. ನೂರಾರು ಪ್ರತಿಮೆಗಳನ್ನು ಸ್ಥಾಪಿಸಿದ್ದಾರೆ. ಅವರ ಹೆಸರನ್ನು ತಮ್ಮ ಮಕ್ಕಳಿಗೆ ಇಟ್ಟಿದ್ದಾರೆ. ಕತ್ತಲೆಗೆ ಹೋಗಿರುವ ಅಪ್ಪು, ತಂತ್ರಜ್ಞಾನದ ಮೂಲಕ ಬೆಳಕಿಗೆ ಬಂದಿದ್ದಾರೆ” ಎಂದು ಹೇಳಿದರು.

ಇದನ್ನು ಓದಿ: ಜಾಕಿ ರಿ ರಿಲೀಸ್; ತೆರೆ ಮೇಲೆ ಅಪ್ಪು ನೋಡಿ ಭಾವುಕರಾದ ಅಶ್ವಿನಿ ಪುನೀತ್‌ ರಾಜ್‌ಕುಮಾರ್

ಇನ್ನು, ಪುನೀತ್‍ ಅವರನ್ನು ರಾಜಕೀಯಕ್ಕೆ ಸೆಳೆಯುವುದಕ್ಕೆ ಪ್ರಯತ್ನಿಸಿದ್ದಾಗಿ ಹೇಳಿಕೊಂಡ ಡಿ.ಕೆ. ಶಿವಕುಮಾರ್‍, ‘ಪುನೀತ್ ರಾಜಕುಮಾರ್ ಅವರನ್ನು ರಾಜಕಾರಣಕ್ಕೆ ಸೆಳೆಯಲು ನಾನು ಚಾಕಲೇಟ್ ಕೊಟ್ಟೆ. ಆದರೆ, ಅವರು ಒಪ್ಪಿಕೊಳ್ಳಲಿಲ್ಲ. ಅಶ್ವಿನಿ ಅವರನ್ನೂ ಸಹ ಆಹ್ವಾನಿಸಿದೆ. ಅವರೂ ಸಹ ತಮ್ಮ ಪತಿ ಹಾದಿಯಲ್ಲೇ ನಡೆಯುವುದಾಗಿ ತಿಳಿಸಿದರು. ರಾಜಕಾರಣಕ್ಕೆ ಬರಲಿಲ್ಲ’ ಎಂದು ಹೇಳಿದರು.

ಅಶ್ವಿನಿ ಪುನೀತ್ ರಾಜ್‌ಕುಮಾರ್ ಮಾತನಾಡಿ, ‘ಅಪ್ಪು ಯಾವಾಗಲೂ ಹೊಸತನದ ಕಡೆಗೆ ಹುಡುಕಾಟ ನಡೆಸುತ್ತಿದ್ದರು. ಹೊಸತನದ ಹುಡುಕಾಟದಿಂದಲೇ ಹೊಸಬರಿಗೆ ಅವಕಾಶ ಕೊಡಲೆಂದೇ ಪಿಆರ್‌ಕೆ ಕೂಡ ಶುರುವಾಗಿದ್ದು. ಚಿತ್ರರಂಗಕ್ಕೆ ಏನಾದರೂ ಕೊಡುಗೆ ಕೊಡಬೇಕು ಎಂದು ಹೇಳುತ್ತಿದ್ದರು. ಸಮರ್ಥ್ ಅವರ ಟೀಂ ಒಂದು ಐಡಿಯಾ ತೆಗೆದುಕೊಂಡು ಬಂದಿದ್ದರು. ಅದನ್ನು ಸಾಕಷ್ಟು ಡೆವೆಲೆಪ್ ಮಾಡಿ ಈ ಆ್ಯಪ್‍ ಮಾಡಲಾಗಿದೆ. ಇದರಲ್ಲಿ ಬರೀ ಪುನೀತ್‍ ಅವರ ಸಿನಿಮಾ ಕುರಿತಾಗಿಯಷ್ಟೇ ಅಲ್ಲ, ಫಿಟ್ನೆಸ್, ಮಕ್ಕಳಿಗಾಗಿ ವಿಶೇಷ ಕಂಟೆಟ್‌ಗಳು, ಸಿನಿಮಾ ಸುದ್ದಿಗಳು ಇರಲಿವೆ’ ಎಂದರು.

ಡಾ.ಸಮರ್ಥ ರಾಘವ ನಾಗಭೂಷಣಂ ಮಾತನಾಡಿ, ‘Fandom ಆ್ಯಪ್ ಮಾಡಬೇಕು ಎಂದು ಯೋಚನೆ ಬಂದಾಗ ಮೊದಲು ಹಾಗೂ ಕೊನೆಯ ಹೆಸರು ಅಂದರೆ ಅದು ‌ಪುನೀತ್ ಅವರದ್ದು. ಕನ್ನಡದ ಪ್ರತಿ ಹೃದಯವನ್ನು ಅವರು ಮುಟ್ಟಿದ್ದಾರೆ. ಅವರ ವ್ಯಕ್ತಿತ್ವವನ್ನು ಮುಂದೆ ಹೇಗೆ ತೆಗೆದುಕೊಂಡು ಹೋಗುತ್ತೇವೆ ಅನ್ನೋದನ್ನು ಆ್ಯಪ್‍ನಲ್ಲಿ ನೋಡಬಹುದು’ ಎಂದರು.

ಆಂದೋಲನ ಡೆಸ್ಕ್

Recent Posts

ಬಜೆಟ್ ಘೋಷಣೆ ಕಡತದಲ್ಲೇ ಉಳಿಯಬಾರದು ; ಕಾರ್ಯದರ್ಶಿಗಳಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಎಚ್ಚರಿಕೆ

ಬೆಂಗಳೂರು : ಬಜೆಟ್‌ನಲ್ಲಿ ಘೋಷಿಸಿದ ಯೋಜನೆಗಳು ಘೋಷಣೆಯಾಗಿಯೇ ಉಳಿಯಬಾರದು. ಅನುಷ್ಠಾನದಲ್ಲಿ ವಿಳಂಬವಾದರೆ ಸಂಬಂಧಪಟ್ಟ ಕಾರ್ಯದರ್ಶಿಗಳೇ ಹೊಣೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…

1 hour ago

ಟೆಂಪೋ-ಬೈಕ್‌ ಡಿಕ್ಕಿ : ಬೈಕ್‌ ಸವಾರ ಸಾವು ; ಓರ್ವ ಗಂಭೀರ

ಹನೂರು : ಮಲೆ ಮಹದೇಶ್ವರ ಬೆಟ್ಟದಿಂದ ತಮಿಳುನಾಡಿನ ಮೆಟ್ಟೂರಿಗೆ ತೆರಳುತ್ತಿದ್ದ ದ್ವಿಚಕ್ರ ವಾಹನ ಸವಾರನಿಗೆ ಟೆಂಪೋ ಡಿಕ್ಕಿ ಹೊಡೆದ ಪರಿಣಾಮ…

1 hour ago

NEET UG Exam | ನಾಳೆ ನೀಟ್ ಪರೀಕ್ಷೆ ; ʼಜೀರೋ ಲೀಕ್‌ʼ ಪಾಲಿಸಿ ಜಾರಿ

ಬೆಂಗಳೂರು : ದೇಶದ ಅತಿದೊಡ್ಡ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ ನೀಟ್ ಯುಜಿ ಭಾನುವಾರ…

2 hours ago

ಅಜ್ಜೀಪುರ ಸಫಾರಿ ಕೇಂದ್ರದಲ್ಲಿ ಬಿಳಿ ಬಣ್ಣದ ಜಿಂಕೆ ದರ್ಶನ

ಹನೂರು : ಅಜ್ಜೀಪುರದ ಬಳಿ ಸಫಾರಿಗೆ ತೆರಳಿದ್ದ ಪ್ರವಾಸಿಗರಿಗೆ ಅಪರೂಪದ ಬಿಳಿ ಜಿಂಕೆ ದರ್ಶನ ನೀಡುವ ಮೂಲಕ ಅಚ್ಚರಿ ಮೂಡಿಸಿದೆ.…

3 hours ago

ಬಿಜೆಪಿಯ ಬಡಜನ ವಿರೋಧಿ ಬಣ್ಣ ಮತ್ತೆ ಬಯಲು : ಸಚಿವ ಖಂಡ್ರೆ ಆಕ್ರೋಶ

ಬೆಂಗಳೂರು : ಪಂಚ ರಾಜ್ಯಗಳ ಮತದಾನ ಮುಗಿದ ಕೂಡಲೇ, ಕೇಂದ್ರ ಬಿಜೆಪಿ ಸರ್ಕಾರ ವಾಣಿಜ್ಯ ಬಳಕೆ ಅಡುಗೆ ಸಿಲಿಂಡರ್ ಹಾಗೂ…

4 hours ago

ಸಿಎಂ ಬದಲಾವಣೆ ಸಮಯ ಬಂದಿದೆ: ವಿಜಯೇಂದ್ರ

ಮೈಸೂರು: ರಾಜ್ಯದಲ್ಲಿ ಸಿಎಂ ಬದಲಾಗುವ ಸಮಯ ಬಂದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಇಂದು…

5 hours ago