ಈ ಹಿಂದೆ ಪುನೀತ್ ರಾಜಕುಮಾರ್ ಅಭಿನಯದಲ್ಲಿ ‘ರಣವಿಕ್ರಮ’ ಮತ್ತು ‘ನಟಸಾರ್ವಭೌಮ’ ಚಿತ್ರಗಳನ್ನು ಪವನ್ ಒಡೆಯರ್ ನಿರ್ದೇಶನ ಮಾಡಿದ್ದರು. ಈಗ ಶಿವರಾಜಕುಮಾರ್ ಅಭಿನಯದಲ್ಲಿ ಹೊಸ ಚಿತ್ರವೊಂದನ್ನು ನಿರ್ದೇಶಿಸುವುದಕ್ಕೆ ಪವನ್ ಒಡೆಯರ್ ಸಜ್ಜಾಗಿದ್ದಾರೆ.
‘ಭೈರತಿ ರಣಗಲ್’ ಚಿತ್ರದ ಯಶಸ್ಸಿನಲ್ಲಿ ತೇಲುತ್ತಿರುವ ಶಿವರಾಜಕುಮಾರ್, ಸಾಲುಸಾಲು ಚಿತ್ರಗಳಲ್ಲಿ ನಟಿಸುವುದಕ್ಕೆ ಒಪ್ಪಿಕೊಂಡಿದ್ದಾರೆ. ಈ ಮಧ್ಯೆ, ಅವರ ಅಭಿನಯದಲ್ಲಿ ಪವನ್ ಒಡೆಯರ್ ಒಂದು ಚಿತ್ರವನ್ನು ನಿರ್ದೇಶಿಸುತ್ತಿರುವುದಷ್ಟೇ ಅಲ್ಲ, ಆ ಚಿತ್ರವನ್ನು ಅವರೇ ನಿರ್ಮಾಣ ಮಾಡುತ್ತಿದ್ದಾರೆ.
ಪವನ್ ಈ ಹಿಂದೆ ತಮ್ಮ ಬ್ಯಾನರ್ನಿಂದ ‘ಡೊಳ್ಳು’ ಮತ್ತು ‘ವೆಂಕ್ಯಾ’ ಚಿತ್ರಗಳನ್ನು ನಿರ್ಮಾಣ ಮಾಡಿದ್ದಾರೆ. ಮೊದಲ ಚಿತ್ರ ನಿರ್ಮಾಣದಲ್ಲಿಯೇ ರಾಷ್ಟ್ರ ಪ್ರಶಸ್ತಿ ಪಡೆದುಕೊಂಡಿದ್ದಾರೆ. ಇದಲ್ಲದೆ, ‘ಅವಸ್ತಿ vs ಅವಸ್ತಿ’ ಎಂಬ ಬಾಲಿವುಡ್ ಚಿತ್ರದ ನಿರ್ಮಾಣದಲ್ಲಿ ತೊಡಗಿಸಿಕೊಂಡಿದ್ದಾರೆ. ಈಗ ಪವನ್ ಒಡೆಯರ್ ತಮ್ಮ ಒಡೆಯರ್ ಮೂವೀಸ್ ಬ್ಯಾನರ್ ನಡಿ ನಾಲ್ಕನೇ ಚಿತ್ರ ನಿರ್ಮಿಸುತ್ತಿದ್ದಾರೆ.
2025ಕ್ಕೆ ಶಿವಣ್ಣ ಹಾಗೂ ಪವನ್ ಜೋಡಿಯ ಹೊಸ ಚಿತ್ರ ಟೇಕಾಫ್ ಆಗಲಿದೆ. ಈ ಚಿತ್ರದ ಕುರಿತು ಮಾತನಾಡಿರುವ ಪವನ್ ಒಡೆಯರ್, ‘ಪ್ರತಿಯೊಬ್ಬ ನಿರ್ದೇಶಕರಿಗೂ ಶಿವಣ್ಣನಿಗೆ ಚಿತ್ರ ಮಾಡಬೇಕೆಂಬ ಕನಸು ಇರುತ್ತದೆ. ನನ್ನ ಈ ಕನಸು ಈಗ ನನಸಾಗುತ್ತದೆ. ಥ್ರಿಲ್ಲರ್ ಜೊತೆಗೆ ಔಟ್ ಅಂಡ್ ಔಟ್ ಕಮರ್ಷಿಯಲ್ ಚಿತ್ರ ಇದಾಗಿದ್ದು, ಈ ಚಿತ್ರದಲ್ಲಿ ಶಿವಣ್ಣ ವಿಭಿನ್ನವಾಗಿ ಕಾಣಲಿದ್ದಾರೆ’ ಎಂದು ಹೇಳಿದ್ದಾರೆ.
ಒಡೆಯರ್ ಮೂವೀಸ್ ಬ್ಯಾನರ್ ನಡಿ ಅಪೇಕ್ಷಾ ಪವನ್ ಒಡೆಯರ್ ಹಾಗೂ ಪವನ್ ಒಡೆಯರ್ ಈ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ. ಆರ್ನಾ ಕ್ರಿಯೇಟಿವ್ ಸಂಸ್ಥೆಯು ನಿರ್ಮಾಣದಲ್ಲಿ ಕೈಜೋಡಿಸಲಿದೆ.
ಎರಡು ವರ್ಷಗಳ ಹಿಂದೆ ಬಿಡುಗಡೆಯಾದ ‘ರೆಮೋ’ ಚಿತ್ರದ ನಂತರ ಪವನ್ ಒಡೆಯರ್ ಯಾವೊಂದು ಚಿತ್ರವನ್ನೂ ನಿರ್ದೇಶನ ಮಾಡಿರಲಿಲ್ಲ. ನಿರ್ಮಾಣದಲ್ಲಿ ತೊಡಗಿಸಿಕೊಂಡಿದ್ದ ಪವನ್, ಹಿಂದಿಯಲ್ಲಿ ‘ಅವಸ್ತಿ ವರ್ಸಸ್ ಅವಸ್ತಿ’ ಎಂಬ ಚಿತ್ರ ನಿರ್ದೇಶನದಲ್ಲಿ ತೊಡಗಿಸಿಕೊಂಡಿದ್ದರು. ಪರಂಬ್ರತಾ ಚಟ್ಟೋಪಾಧ್ಯಯ್, ಗೀತಾ ಬಸ್ರಾ ಮುಂತಾದವರು ಈ ಚಿತ್ರದಲ್ಲಿ ನಟಿಸಿದ್ದು, ಚಿತ್ರ ಇನ್ನಷ್ಟೇ ಬಿಡುಗಡೆಯಾಗಬೇಕಿದೆ.
ಅಮೇರಿಕಾದಲ್ಲಿ ಡೊನಾಲ್ಡ್ ಟ್ರಂಪ್ ವಿರುದ್ಧವೇ ಭುಗಿಲೆದ್ದ ಆಕ್ರೋಶ 80 ಲಕ್ಷ ಜನರಿಂದ ನೋ ಕಿಂಗ್ಸ್ ಚಳುವಳಿ ಟ್ರಂಪ್ ನೀತಿ ವಿರೋಧಿಸಿ…
೫೦ ಜೆಸಿಬಿ, ೩೦ ಟಿಪ್ಪರ್ಗಳು, ೮ ಟ್ರಾಕ್ಟರ್ಗಳು, ೫೦೦ ಮಂದಿ ಪೌರಕಾರ್ಮಿಕರು ಭಾಗಿ ಮೈಸೂರು: ನಗರದ ಹೊರ ವರ್ತುಲ ರಸ್ತೆಯಲ್ಲಿ…
ಯಶಸ್ವಿಯಾಗಿ ಜಾತ್ರೆ ನಡೆಸಲು ಶಾಸಕ, ಡಿಸಿ ಪಣ; ರಥೋತ್ಸವದ ನಂತರ ವಿವಿಧೆಡೆ ಅರವಟ್ಟಿಗೆಗಳ ಸೇವೆ ನಂಜನಗೂಡು: ಇಲ್ಲಿನ ಶ್ರೀಕಂಠೇಶ್ವರಸ್ವಾಮಿ ಜಾತ್ರೆಗೆ…
ಅಕ್ಷತಾ ಹೆಣ್ಣಿನ ತಾಯ್ತನ ಆಕೆ ಗರ್ಭವತಿಯೆಂದು ತಿಳಿದಾಗಿನಿಂದಲೇ ಜಾಗೃತವಾಗುತ್ತದೆ. ತನಗೆ ಹುಟ್ಟಲಿರುವ ಮಗುವಿನ ಬಗ್ಗೆ ಅಂದಿನಿಂದಲೇ ಬಣ್ಣಬಣ್ಣದ ಕನಸುಗಳನ್ನು ಕಾಣಲಾರಂಭಿಸುತ್ತಾಳೆ.…
ಸಿರಿ ಮೈಸೂರು ಮುಖಕ್ಕೆ ಪ್ರಸಾದನ ಮಾಡಿಕೊಂಡು, ಭಾರೀ ವಸ್ತ್ರ ಧರಿಸಿ, ಕತ್ತಿ ಹಿಡಿದು, ವೀರಭದ್ರನ ಧ್ಯಾನ ಮಾಡಿ ವೇದಿಕೆ ಏರಿ…
ಸ್ವಾಮಿ ಪೊನ್ನಾಚಿ ಮಹದೇಶ್ವರನ ಬೆಟ್ಟದ ಪೋಡಿನಿಂದ ಬಂದು ನಮ್ಮ ಮನೆಯಲ್ಲಿ ದನ ಮೇಯಿಸುತ್ತಿದ್ದ ಬೊಮ್ಮ ನನ್ನು ಕಂಡರೆ ನನಗೆ ಅಸಾಧ್ಯ…