ಮನರಂಜನೆ

ಪುನೀತ್‍ ಆಯ್ತು; ಈಗ ಶಿವರಾಜಕುಮಾರ್ ಚಿತ್ರಕ್ಕೆ ಪವನ್‍ ಒಡೆಯರ್‍ ನಿರ್ದೇಶನ

ಈ ಹಿಂದೆ ಪುನೀತ್ ರಾಜಕುಮಾರ್‍ ಅಭಿನಯದಲ್ಲಿ ‘ರಣವಿಕ್ರಮ’ ಮತ್ತು ‘ನಟಸಾರ್ವಭೌಮ’ ಚಿತ್ರಗಳನ್ನು ಪವನ್‍ ಒಡೆಯರ್‍ ನಿರ್ದೇಶನ ಮಾಡಿದ್ದರು. ಈಗ ಶಿವರಾಜಕುಮಾರ್‍ ಅಭಿನಯದಲ್ಲಿ ಹೊಸ ಚಿತ್ರವೊಂದನ್ನು ನಿರ್ದೇಶಿಸುವುದಕ್ಕೆ ಪವನ್‍ ಒಡೆಯರ್‍ ಸಜ್ಜಾಗಿದ್ದಾರೆ.

‘ಭೈರತಿ ರಣಗಲ್‍’ ಚಿತ್ರದ ಯಶಸ್ಸಿನಲ್ಲಿ ತೇಲುತ್ತಿರುವ ಶಿವರಾಜಕುಮಾರ್,‍ ಸಾಲುಸಾಲು ಚಿತ್ರಗಳಲ್ಲಿ ನಟಿಸುವುದಕ್ಕೆ ಒಪ್ಪಿಕೊಂಡಿದ್ದಾರೆ. ಈ ಮಧ್ಯೆ, ಅವರ ಅಭಿನಯದಲ್ಲಿ ಪವನ್‍ ಒಡೆಯರ್‍ ಒಂದು ಚಿತ್ರವನ್ನು ನಿರ್ದೇಶಿಸುತ್ತಿರುವುದಷ್ಟೇ ಅಲ್ಲ, ಆ ಚಿತ್ರವನ್ನು ಅವರೇ ನಿರ್ಮಾಣ ಮಾಡುತ್ತಿದ್ದಾರೆ.

ಪವನ್‍ ಈ ಹಿಂದೆ ತಮ್ಮ ಬ್ಯಾನರ್‍ನಿಂದ ‘ಡೊಳ್ಳು’ ಮತ್ತು ‘ವೆಂಕ್ಯಾ’ ಚಿತ್ರಗಳನ್ನು ನಿರ್ಮಾಣ ಮಾಡಿದ್ದಾರೆ. ಮೊದಲ ಚಿತ್ರ ನಿರ್ಮಾಣದಲ್ಲಿಯೇ ರಾಷ್ಟ್ರ ಪ್ರಶಸ್ತಿ ಪಡೆದುಕೊಂಡಿದ್ದಾರೆ. ಇದಲ್ಲದೆ, ‘ಅವಸ್ತಿ vs ಅವಸ್ತಿ’ ಎಂಬ ಬಾಲಿವುಡ್ ಚಿತ್ರದ ನಿರ್ಮಾಣದಲ್ಲಿ ತೊಡಗಿಸಿಕೊಂಡಿದ್ದಾರೆ. ಈಗ ಪವನ್ ಒಡೆಯರ್ ತಮ್ಮ ಒಡೆಯರ್ ಮೂವೀಸ್ ಬ್ಯಾನರ್ ನಡಿ ನಾಲ್ಕನೇ ಚಿತ್ರ ನಿರ್ಮಿಸುತ್ತಿದ್ದಾರೆ‌‌.

2025ಕ್ಕೆ ಶಿವಣ್ಣ ಹಾಗೂ ಪವನ್ ಜೋಡಿಯ ಹೊಸ ಚಿತ್ರ ಟೇಕಾಫ್ ಆಗಲಿದೆ. ಈ ಚಿತ್ರದ ಕುರಿತು ಮಾತನಾಡಿರುವ ಪವನ್ ಒಡೆಯರ್, ‘ಪ್ರತಿಯೊಬ್ಬ ನಿರ್ದೇಶಕರಿಗೂ ಶಿವಣ್ಣನಿಗೆ ಚಿತ್ರ ಮಾಡಬೇಕೆಂಬ ಕನಸು ಇರುತ್ತದೆ. ನನ್ನ ಈ ಕನಸು ಈಗ ನನಸಾಗುತ್ತದೆ. ಥ್ರಿಲ್ಲರ್ ಜೊತೆಗೆ ಔಟ್ ಅಂಡ್ ಔಟ್ ಕಮರ್ಷಿಯಲ್ ಚಿತ್ರ ಇದಾಗಿದ್ದು, ಈ ಚಿತ್ರದಲ್ಲಿ ಶಿವಣ್ಣ ವಿಭಿನ್ನವಾಗಿ ಕಾಣಲಿದ್ದಾರೆ’ ಎಂದು ಹೇಳಿದ್ದಾರೆ.

 

ಒಡೆಯರ್‌ ಮೂವೀಸ್ ಬ್ಯಾನರ್ ನಡಿ ಅಪೇಕ್ಷಾ ಪವನ್ ಒಡೆಯರ್ ಹಾಗೂ ಪವನ್ ಒಡೆಯರ್ ಈ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ. ಆರ್ನಾ ಕ್ರಿಯೇಟಿವ್ ಸಂಸ್ಥೆಯು ನಿರ್ಮಾಣದಲ್ಲಿ ಕೈಜೋಡಿಸಲಿದೆ.

ಎರಡು ವರ್ಷಗಳ ಹಿಂದೆ ಬಿಡುಗಡೆಯಾದ ‘ರೆಮೋ’ ಚಿತ್ರದ ನಂತರ ಪವನ್‍ ಒಡೆಯರ್‍ ಯಾವೊಂದು ಚಿತ್ರವನ್ನೂ ನಿರ್ದೇಶನ ಮಾಡಿರಲಿಲ್ಲ. ನಿರ್ಮಾಣದಲ್ಲಿ ತೊಡಗಿಸಿಕೊಂಡಿದ್ದ ಪವನ್‍, ಹಿಂದಿಯಲ್ಲಿ ‘ಅವಸ್ತಿ ವರ್ಸಸ್ ಅವಸ್ತಿ’ ಎಂಬ ಚಿತ್ರ ನಿರ್ದೇಶನದಲ್ಲಿ ತೊಡಗಿಸಿಕೊಂಡಿದ್ದರು. ಪರಂಬ್ರತಾ ಚಟ್ಟೋಪಾಧ್ಯಯ್‍, ಗೀತಾ ಬಸ್ರಾ ಮುಂತಾದವರು ಈ ಚಿತ್ರದಲ್ಲಿ ನಟಿಸಿದ್ದು, ಚಿತ್ರ ಇನ್ನಷ್ಟೇ ಬಿಡುಗಡೆಯಾಗಬೇಕಿದೆ.

ಭೂಮಿಕಾ

Recent Posts

ನಾಳೆ ರಾಜ್ಯಪಾಲರ ಭೇಟಿಗೆ ಸಮಯ ಕೋರಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ನಾಳೆ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರ ಭೇಟಿಗೆ ಸಮಯ ಕೋರಿದ್ದಾರೆ ಎಂದು ಸಿಎಂ…

2 hours ago

ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ ಎಬೋಲಾ ಪ್ರಕರಣ ನೆಗೆಟಿವ್:‌ ದಿನೇಶ್‌ ಗುಂಡೂರಾವ್‌ ಸ್ಪಷ್ಟನೆ

ಬೆಂಗಳೂರು: ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ ಎಬೋಲಾ ಪ್ರಕರಣದ ಲ್ಯಾಬ್‌ ರಿಪೋರ್ಟ್‌ನಲ್ಲಿ ನೆಗೆಟಿವ್‌ ಎಂದು ವರದಿ ಬಂದಿದೆ ಎಂದು ಸಚಿವ ದಿನೇಶ್‌…

2 hours ago

ಬೆಂಗಳೂರಿಗೂ ಎಂಟ್ರಿ ಕೊಟ್ಟಿತೇ ಮಹಾಮಾರಿ ಎಬೋಲಾ?

ಬೆಂಗಳೂರು: ಉಗಾಂಡಾದಿಂದ ಬಂದಿದ್ದ ಮಹಿಳೆಯಲ್ಲಿ ಎಬೋಲಾ ಸೋಂಕಿನ ಲಕ್ಷಣಗಳು ಪತ್ತೆಯಾಗಿದ್ದು, ಆಕೆಯನ್ನು ಪ್ರತ್ಯೇಕ ವಾರ್ಡ್‌ನಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸೋಂಕು ದೃಢೀಕರಣಕ್ಕಾಗಿ…

4 hours ago

ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್‌ ಮನೆ ಮೇಲೆ ಇ.ಡಿ ದಾಳಿ

ತಿರುವನಂತಪುರ: ಸಿಎಂಆರ್‌ಎಲ್‌ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ತೀವ್ರಗೊಳಿಸಿರುವ ಜಾರಿ ನಿರ್ದೇಶನಾಲಯ ಇಂದು ಕೇರಳದ ಮಾಜಿ ಸಿಎಂ…

5 hours ago

ನಾಳೆ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ

ಬೆಂಗಳೂರು: ನಾಳೆ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಸಲ್ಲಿಸುವ ಸಾಧ್ಯತೆಗಳು ದಟ್ಟವಾಗಿವೆ. ಮೇ.29ರಂದು ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆ ನಡೆಯುವ…

6 hours ago

ಕಪಿಲಾ ತೀರದಲ್ಲಿ ಮುಂದುವರಿದ ಬಿಸಿ ನೀರಿನ ಸುಲಿಗೆ

ಎಸ್.ಎಸ್.ಭಟ್ ನಂಜನಗೂಡು: ಅಧಿಕಾರಿಗಳ ನೋಟಿಸ್‌ಗೂ ಕ್ಯಾರೆ ಎನ್ನದ ಶ್ರೀಕಂಠೇಶ್ವರ ದೇವಾಲಯದ ಸಿಬ್ಬಂದಿ ನಂಜನಗೂಡು: ಇಲ್ಲಿನ ಪ್ರಸಿದ್ಧ ಶ್ರೀಕಂಠೇಶ್ವರ ದೇವಾಲಯದ ಕಪಿಲಾ…

9 hours ago