ಬೆಂಗಳೂರು: ಪುನೀತ್ ರಾಜಕುಮಾರ್ 50ನೇ ಜನ್ಮದಿನದ ಪ್ರಯುಕ್ತ ರೀ-ರಿಲೀಸ್ ಆದ ʼಅಪ್ಪುʼ ಸಿನಿಮಾ ನೋಡಲು ವೀರೇಶ್ ಚಿತ್ರಮಂದಿರಕ್ಕೆ ಬಂದ ಸ್ಯಾಂಡಲ್ವುಡ್ ಕ್ವೀನ್ ರಮ್ಯ, ಸಿನಿಮಾಗಳ ಮೂಲಕ ಪುನೀತ್ ಜೀವಂತವಾಗಿದ್ದಾರೆ ಎಂದು ಹೇಳಿದ್ದಾರೆ.
ʼಅಪ್ಪುʼ ಸಿನಿಮಾ ರಿಲೀಸ್ ಆದಾಗ ಥಿಯೇಟರ್ಗೆ ಬಂದು ನೋಡಿದ ಆ ಹಳೆಯ ನೆನಪೆಲ್ಲಾ ಈಗ ಬರುತ್ತಿದೆ.
ಇದನ್ನೆಲ್ಲಾ ನೋಡಿದರೆ ಅಪ್ಪು ಇಲ್ಲ ಅಂತ ನಂಬೋಕೆ ಆಗುತ್ತಿಲ್ಲ. ಆದರೆ, ಸಿನಿಮಾದ ಮೂಲಕ ಅವರು ನಮ್ಮ ಮಧ್ಯ ಜೀವಂತವಾಗಿದ್ದಾರೆ ಎಂದು ಸ್ಮರಿಸಿದ್ದಾರೆ.
ಅಪ್ಪು ಸಿನಿಮಾ ರಿಲೀಸ್ ಅಗಿ 23 ವರ್ಷಗಳಾಗಿವೆ. ಮೊದಲ ಬಾರಿ ʼಅಪ್ಪುʼ ಸಿನಿಮಾ ನೋಡಿದಾಗ ನಾನು ಕೂಡ ಅಭಿಮಾನಿಯಾಗಿ ಹೋಗಿ ಸಿನಿಮಾ ನೋಡಿದ್ದೆ, ನಂತರ ಪುನೀತ್ ಜೊತೆ ನಾನು ಕೂಡ ಸಿನಿಮಾ ಮಾಡಿದ್ದೇನೆ. ಈಗ ಆ ಚಿತ್ರಗಳನ್ನು ನೋಡಿದಾಗ ಎಲ್ಲವೂ ನೆನಪಾಗುತ್ತದೆ ಎಂದರು.
ಇನ್ನೂ ಪುರಿ ಜಗನ್ನಾಥ ʼಅಪ್ಪುʼ ನಿರ್ದೇಶನ ಮಾಡಿದ್ದು, ಪುನೀತ್ಗೆ ನಾಯಕಿಯಾಗಿ ರಕ್ಷಿತಾ ನಟಿಸಿದ್ದರು. ಈ ಸಿನಿಮಾಗೆ ಪಾರ್ವತಮ್ಮ ರಾಜಕುಮಾರ್ ಹಣ ಹೂಡಿದ್ದರು. 2002ರಲ್ಲಿ ಈ ಸಿನಿಮಾ ರಿಲೀಸ್ ಆಗಿ ಯಶಸ್ವಿ ಪ್ರದರ್ಶನ ಕಂಡಿತ್ತು.
ಬೆಂಗಳೂರು : ಭಾರತವನ್ನು ಆತ್ಮನಿರ್ಭರ ರಾಷ್ಟ್ರವನ್ನಾಗಿಸುವ ದಿಶೆಯಲ್ಲಿ ಕರ್ನಾಟಕದಂತಹ ಸ್ವಾವಲಂಬಿ ರಾಜ್ಯಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಕೃಷಿಯಿಂದ ಕೈಗಾರಿಕೆವರೆಗೆ ಹಾಗೂ…
ಹನೂರು : ತಾಲೂಕಿನ ಮಲೆ ಮಹದೇಶ್ವರ ವನ್ಯಜೀವಿಧಾಮ ವ್ಯಾಪ್ತಿಯ ತಾಳುಬೆಟ್ಟದಿಂದ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ದಾಳಿ…
ಬೆಂಗಳೂರು : ರಾಜ್ಯದ ಎಲ್ಲಾ ರೀತಿಯ ಸಿವಿಲ್ ಹುದ್ದೆಗಳಿಗೆ 2027ರ ಡಿಸೆಂಬರ್ 31ರವರೆಗೆ ಹೊರಡಿಸುವ ನೇಮಕಾತಿ ಅಧಿಸೂಚನೆಗಳಿಗೆ ಸಂಬಂಧಿಸಿದಂತೆ ಎಲ್ಲಾ…
ಮಂಡ್ಯ : ಸಾರ್ವಜನಿಕರಿಗೆ ಎಲೆಕ್ಟ್ರಿಕ್ ವಾಹನಗಳ ಚಾರ್ಜಿಂಗ್ ವ್ಯವಸ್ಥೆ ಕಲ್ಪಿಸುವ ಉದ್ದೇಶದಿಂದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಸೆಸ್ಕ್)ವು ಜಿಲ್ಲೆಯಲ್ಲಿ…
ಮಂಡ್ಯ : ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿಯದ್ದು ಬರಿ ಡಬಲ್ ಸ್ಟ್ಯಾಂಡರ್ಡ್ ನಾಟಕವಾಗಿದೆ. ಜಾತ್ಯತೀತ ಜನತಾದಳವನ್ನು ಓಡಿಸುವುದಕ್ಕೆ ಅವರಿಗೆ ತಾಕತ್ತಿದೆಯೇ?.…
ನಾಗಮಂಗಲ ನಕಲಿ ದಾಖಲೆ ಸೃಷ್ಟಿಸಿ ಸರ್ಕಾರಿ ಜಮೀನು ಕಬಳಿಕೆ ಪ್ರಕರಣ ಮಂಡ್ಯ : ನಾಗಮಂಗಲ ತಾಲ್ಲೂಕಿನ ನಕಲಿ ದಾಖಲೆ ಸೃಷ್ಟಿ…