ಮನರಂಜನೆ

ಸಿನಿಮಾ ಮೂಲಕ ಪುನೀತ್‌ ಜೀವಂತ: ನಟಿ ರಮ್ಯ

ಬೆಂಗಳೂರು: ಪುನೀತ್‌ ರಾಜಕುಮಾರ್‌ 50ನೇ ಜನ್ಮದಿನದ ಪ್ರಯುಕ್ತ  ರೀ-ರಿಲೀಸ್‌ ಆದ ʼಅಪ್ಪುʼ ಸಿನಿಮಾ  ನೋಡಲು ವೀರೇಶ್‌ ಚಿತ್ರಮಂದಿರಕ್ಕೆ ಬಂದ ಸ್ಯಾಂಡಲ್‌ವುಡ್‌ ಕ್ವೀನ್‌ ರಮ್ಯ, ಸಿನಿಮಾಗಳ ಮೂಲಕ ಪುನೀತ್‌ ಜೀವಂತವಾಗಿದ್ದಾರೆ ಎಂದು ಹೇಳಿದ್ದಾರೆ.

ʼಅಪ್ಪುʼ ಸಿನಿಮಾ ರಿಲೀಸ್‌ ಆದಾಗ ಥಿಯೇಟರ್‌ಗೆ ಬಂದು ನೋಡಿದ ಆ ಹಳೆಯ ನೆನಪೆಲ್ಲಾ ಈಗ ಬರುತ್ತಿದೆ.
ಇದನ್ನೆಲ್ಲಾ ನೋಡಿದರೆ ಅಪ್ಪು ಇಲ್ಲ ಅಂತ ನಂಬೋಕೆ ಆಗುತ್ತಿಲ್ಲ. ಆದರೆ, ಸಿನಿಮಾದ ಮೂಲಕ ಅವರು ನಮ್ಮ ಮಧ್ಯ ಜೀವಂತವಾಗಿದ್ದಾರೆ ಎಂದು ಸ್ಮರಿಸಿದ್ದಾರೆ.

ಅಪ್ಪು ಸಿನಿಮಾ ರಿಲೀಸ್‌ ಅಗಿ 23 ವರ್ಷಗಳಾಗಿವೆ. ಮೊದಲ ಬಾರಿ ʼಅಪ್ಪುʼ ಸಿನಿಮಾ ನೋಡಿದಾಗ ನಾನು ಕೂಡ ಅಭಿಮಾನಿಯಾಗಿ ಹೋಗಿ ಸಿನಿಮಾ ನೋಡಿದ್ದೆ, ನಂತರ ಪುನೀತ್‌ ಜೊತೆ ನಾನು ಕೂಡ ಸಿನಿಮಾ ಮಾಡಿದ್ದೇನೆ. ಈಗ ಆ ಚಿತ್ರಗಳನ್ನು ನೋಡಿದಾಗ ಎಲ್ಲವೂ ನೆನಪಾಗುತ್ತದೆ ಎಂದರು.

ಇನ್ನೂ ಪುರಿ ಜಗನ್ನಾಥ ʼಅಪ್ಪುʼ ನಿರ್ದೇಶನ ಮಾಡಿದ್ದು, ಪುನೀತ್‌ಗೆ ನಾಯಕಿಯಾಗಿ ರಕ್ಷಿತಾ ನಟಿಸಿದ್ದರು. ಈ ಸಿನಿಮಾಗೆ ಪಾರ್ವತಮ್ಮ ರಾಜಕುಮಾರ್‌ ಹಣ ಹೂಡಿದ್ದರು. 2002ರಲ್ಲಿ ಈ ಸಿನಿಮಾ ರಿಲೀಸ್‌ ಆಗಿ ಯಶಸ್ವಿ ಪ್ರದರ್ಶನ ಕಂಡಿತ್ತು.

ಆಂದೋಲನ ಡೆಸ್ಕ್

Recent Posts

ಹಣ ದ್ವಿಗುಣಗೊಳಿಸುವುದಾಗಿ ೨೮ ಲಕ್ಷ ರೂ. ವಂಚನೆ; ದೂರು ದಾಖಲು

ಕೊಳ್ಳೇಗಾಲ: ಹಣ ದ್ವಿಗುಣಗೊಳಿಸಿಕೊಡುವುದಾಗಿ ಆಮಿಷ ಒಡ್ಡಿ, ಒಟ್ಟು ೨೮.೮೮ ಲಕ್ಷ ರೂ.ಗಳನ್ನು ವಂಚಿಸಿರುವ ಬಗ್ಗೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಮಮತಾ…

9 hours ago

ಅಂಬಳೆ: ಚಾಮುಂಡೇಶ್ವರಿ ದೇಗುಲದಲ್ಲಿ ಕಳ್ಳತನ

ಯಳಂದೂರು:ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿರುವ ಸುವರ್ಣಾವತಿ ನದಿ ದಡಲ್ಲಿರುವ ಐತಿಹಾಸಿಕ ಚಾಮುಂಡೇಶ್ವರಿ ದೇಗುದಲ್ಲಿ ಗುರುವಾರ ರಾತ್ರಿ ಕಳ್ಳತನ ನಡೆದಿದ್ದು, ಲಕ್ಷಾಂತರ ರೂ.…

9 hours ago

ಇಂಡಿಗೋ ವಿಮಾನ ಹಾರಾಟದಲ್ಲಿ ವ್ಯತ್ಯಯ ಬೆನ್ನಲ್ಲೇ ಪೈಲಟ್‌ಗಳ ರಜಾ ನಿಯಮ ಸಡಿಲಿಸಿದ ಡಿಜಿಸಿಎ

ನವದೆಹಲಿ: ದೇಶಾದ್ಯಂತ ಇಂಡಿಗೋ ವಿಮಾನದ ಹಾರಾಟದಲ್ಲಿ ಭಾರೀ ವ್ಯತ್ಯಯ ಉಂಟಾದ ಬೆನ್ನಲ್ಲೇ ಕೇಂದ್ರ ನಾಗರಿಕ ವಿಮಾನಯಾನ ನಿರ್ದೇಶನಾಲಯ ಪೈಲಟ್‌ಗಳ ರಜಾ…

10 hours ago

ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ: ಸತೀಶ್‌ ಜಾರಕಿಹೊಳಿ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ…

11 hours ago

ಶಾಲಾ ಪಠ್ಯದಲ್ಲಿ ಭಗವದ್ಗೀತೆ ಬೋಧನೆ: ಕೇಂದ್ರದ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ಗೆ ಎಚ್‌ಡಿಕೆ ಪತ್ರ

ನವದೆಹಲಿ: ಕಾಲಾತೀತ, ಮೌಲ್ಯಾಧರಿತ ಆದರ್ಶಗಳನ್ನು ಒಳಗೊಂಡಿರುವ ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು…

12 hours ago

ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ: ತಹಶೀಲ್ದಾರ್‌ ಶಿವಕುಮಾರ್‌ ಕಾಸ್ನೂರು

ನಂಜನಗೂಡು: ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ ಎಂದು ತಹಶೀಲ್ದಾರ್‌ ಶಿವಕುಮಾರ್‌ ಕಾಸ್ನೂರು ಹೇಳಿದರು. ನಂಜನಗೂಡು ನಗರದ ಕಾಲೇಜೊಂದರಲ್ಲಿ ಆಯೋಜಿಸಿದ್ದ…

13 hours ago