ಮನರಂಜನೆ

ಸಿನಿಮಾ ಮೂಲಕ ಪುನೀತ್‌ ಜೀವಂತ: ನಟಿ ರಮ್ಯ

ಬೆಂಗಳೂರು: ಪುನೀತ್‌ ರಾಜಕುಮಾರ್‌ 50ನೇ ಜನ್ಮದಿನದ ಪ್ರಯುಕ್ತ  ರೀ-ರಿಲೀಸ್‌ ಆದ ʼಅಪ್ಪುʼ ಸಿನಿಮಾ  ನೋಡಲು ವೀರೇಶ್‌ ಚಿತ್ರಮಂದಿರಕ್ಕೆ ಬಂದ ಸ್ಯಾಂಡಲ್‌ವುಡ್‌ ಕ್ವೀನ್‌ ರಮ್ಯ, ಸಿನಿಮಾಗಳ ಮೂಲಕ ಪುನೀತ್‌ ಜೀವಂತವಾಗಿದ್ದಾರೆ ಎಂದು ಹೇಳಿದ್ದಾರೆ.

ʼಅಪ್ಪುʼ ಸಿನಿಮಾ ರಿಲೀಸ್‌ ಆದಾಗ ಥಿಯೇಟರ್‌ಗೆ ಬಂದು ನೋಡಿದ ಆ ಹಳೆಯ ನೆನಪೆಲ್ಲಾ ಈಗ ಬರುತ್ತಿದೆ.
ಇದನ್ನೆಲ್ಲಾ ನೋಡಿದರೆ ಅಪ್ಪು ಇಲ್ಲ ಅಂತ ನಂಬೋಕೆ ಆಗುತ್ತಿಲ್ಲ. ಆದರೆ, ಸಿನಿಮಾದ ಮೂಲಕ ಅವರು ನಮ್ಮ ಮಧ್ಯ ಜೀವಂತವಾಗಿದ್ದಾರೆ ಎಂದು ಸ್ಮರಿಸಿದ್ದಾರೆ.

ಅಪ್ಪು ಸಿನಿಮಾ ರಿಲೀಸ್‌ ಅಗಿ 23 ವರ್ಷಗಳಾಗಿವೆ. ಮೊದಲ ಬಾರಿ ʼಅಪ್ಪುʼ ಸಿನಿಮಾ ನೋಡಿದಾಗ ನಾನು ಕೂಡ ಅಭಿಮಾನಿಯಾಗಿ ಹೋಗಿ ಸಿನಿಮಾ ನೋಡಿದ್ದೆ, ನಂತರ ಪುನೀತ್‌ ಜೊತೆ ನಾನು ಕೂಡ ಸಿನಿಮಾ ಮಾಡಿದ್ದೇನೆ. ಈಗ ಆ ಚಿತ್ರಗಳನ್ನು ನೋಡಿದಾಗ ಎಲ್ಲವೂ ನೆನಪಾಗುತ್ತದೆ ಎಂದರು.

ಇನ್ನೂ ಪುರಿ ಜಗನ್ನಾಥ ʼಅಪ್ಪುʼ ನಿರ್ದೇಶನ ಮಾಡಿದ್ದು, ಪುನೀತ್‌ಗೆ ನಾಯಕಿಯಾಗಿ ರಕ್ಷಿತಾ ನಟಿಸಿದ್ದರು. ಈ ಸಿನಿಮಾಗೆ ಪಾರ್ವತಮ್ಮ ರಾಜಕುಮಾರ್‌ ಹಣ ಹೂಡಿದ್ದರು. 2002ರಲ್ಲಿ ಈ ಸಿನಿಮಾ ರಿಲೀಸ್‌ ಆಗಿ ಯಶಸ್ವಿ ಪ್ರದರ್ಶನ ಕಂಡಿತ್ತು.

ಆಂದೋಲನ ಡೆಸ್ಕ್

Recent Posts

ಪತ್ನಿ ಕೊಲೆಗೈದಿದ್ದ ಪತಿಗೆ ಜೀವಾವಧಿ ಶಿಕ್ಷೆ

ಮಂಡ್ಯ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ತೀರ್ಪು ಮಂಡ್ಯ:ಪತ್ನಿಯನ್ನು ಕೊಲೆಗೈದಿದ್ದ ಅಪರಾಧ ಸಾಬೀತಾದ ಹಿನ್ನೆಲೆಯಲ್ಲಿ ಪತಿಗೆ ೨ನೇ ಅಪರ ಜಿಲ್ಲಾ…

37 mins ago

ಓದುಗರ ಪತ್ರ: ಜಾಗೃತಿ

ಜಾಗೃತಿ ಉಳುಮೆಗೆ ಮಳೆಯಿಲ್ಲದೆ ಕುಲುಮೆಯಾಗಿದೆ ಇಳೆ ಹೆಚ್ಚಿದ ತಾಪಮಾನ ಬದಲಾವಣೆಯ ಹವಾಮಾನಕೆ ದೇಹದ ಆಂತರಿಕ ತಂಪು ವಿಫಲ ಅದಕೆ ಹೆಚ್ಚುತ್ತಿದೆ…

45 mins ago

ಓದುಗರ ಪತ್ರ: ಅಶ್ಲೀಲ ಹಾಡು ನಿಷೇಧ ಸ್ವಾಗತಾರ್ಹ

ಶಾಲಾ ಕಾರ್ಯಕ್ರಮಗಳಲ್ಲಿ ಅಶ್ಲೀಲ ಹಾಡುಗಳಿಗೆ ಶಿಕ್ಷಣ ಇಲಾಖೆ ನಿಷೇಧ ಹೇರಿರುವುದು ಸ್ವಾಗತಾರ್ಹ. ಇಂದಿನ ಶೇ.೮೦ರಷ್ಟು ಸಿನಿಮಾ ಹಾಡುಗಳು ದ್ವಂದ್ವಾರ್ಥ ಹಾಗೂ…

46 mins ago

ಓದುಗರ ಪತ್ರ: ರೈಲು ಟಿಕೆಟ್ ಕಾಯ್ದಿರಿಸುವ ಸ್ಥಳದಲ್ಲಿ ಕೆಲಸ ಮಾಡದ ಎಸಿ

ಮೈಸೂರು ರೈಲ್ವೆ ನಿಲ್ದಾಣದ ಟಿಕೆಟ್ ಕಾಯ್ದಿರಿಸುವ ವಿಭಾಗದಲ್ಲಿ ಫ್ಯಾನ್ ಹಾಗೂ ಎಸಿ ಯಾವುದೂ ಕೆಲಸ ಮಾಡುತ್ತಿಲ್ಲ. ಇದರಿಂದಾಗಿ ಟಿಕೆಟ್ ಮುಂಗಡವಾಗಿ…

48 mins ago

ಓದುಗರ ಪತ್ರ: ಅಸಂಘಟಿತ ಕಾರ್ಮಿಕರಿಗೆ ರಕ್ಷಣೆ ನೀಡಿ

ಜೀವನ ನಿರ್ವಹಣೆಗಾಗಿ ಪ್ರತಿಯೊಬ್ಬರೂ ಉದ್ಯೋಗ ಮಾಡುವುದು ಅನಿವಾರ್ಯವಾಗಿದೆ. ಅಸಂಘಟಿತ ಕಾರ್ಮಿ ಕರು ಅದರಲ್ಲೂ ಮುಖ್ಯವಾಗಿ ಕಟ್ಟಡ ನಿರ್ಮಾಣ, ಎಲೆಕ್ಟ್ರಿಕ್ ಕೆಲಸ,…

51 mins ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ: ಚಿತ್ರಮಂದಿರಗಳನ್ನು ಉಳಿಸಲು ಚಿತ್ರೋದ್ಯಮ ಹುಡುಕುತ್ತಿದೆ ದಾರಿ

ಚಿತ್ರಮಂದಿರಗಳಿಂದ ಪ್ರೇಕ್ಷಕರನ್ನು ಅಟ್ಟುತ್ತಿರುವ ಪ್ರದರ್ಶಕರ ವಿರುದ್ಧ ಕ್ರಮ ಕೈಗೊಳ್ಳಬೇಕು’ ಎಂದು ತಮಿಳುನಾಡು ಸರ್ಕಾರಕ್ಕೆ ಕಳೆದ ವರ್ಷ ತಮಿಳುನಾಡಿನ ಹೈಕೋರ್ಟ್ ಆದೇಶ…

54 mins ago