ಮನರಂಜನೆ

ಪುನೀತ್‌ ರಾಜ್‌ಕುಮಾರ್‌ 49ನೇ ಹುಟ್ಟುಹಬ್ಬ: ಮೈಸೂರಲ್ಲಿ ಮನೆಮಾಡಿದ ಸಂಭ್ರಮ!

ಮೈಸೂರು: ಕರ್ನಾಟಕ ರತ್ನ ದಿ. ಪುನಿತ್‌ ರಾಜ್‌ಕುಮಾರ್‌ ಅವರ 49ನೇ ಹುಟ್ಟುಹಬ್ಬವನ್ನು ಅವರ ಅಭಿಮಾನಿಗಳು ನಗರದಾದ್ಯಂತ ಸಡಗರ ಸಂಭ್ರಮದಿಂದ ಆಚರಿಸಿದ್ದಾರೆ.

ನಗರದ ಪ್ರಮುಖ ಬೀದಿಗಳಲ್ಲಿ ಪುನೀತರಿಗೆ ಗೌರವ ನಮನ ಸಲ್ಲಿಸಿರುವ ಅಭಿಮಾನಿಗಳು, ನಟನ ಹೆಸರಿನಲ್ಲಿ ಸಾರ್ವಜನಿಕರಿಗೆ ಅನ್ನದಾನ ಮಾಡಿದ್ದಾರೆ.

ವಿಶ್ವದಾಖಲೆಯ ಆರ್ಟಿಸ್ಟ್‌ ಪುನೀತ್‌ ಕುಮಾರ್‌, ರಂಗೋಲಿ ಕಲೆಗಾರ್ತಿ ಲಕ್ಷ್ಮೀ ಮತ್ತು ತಂಡದಿಂದ ಅರಮನೆಯ ಕೋಟೆ ಆಂಜನೇಯ ದೇವಾಲಯದ ಮುಂಭಾಗ ರಂಗೋಲಿಯಿಂದ ಪುನೀತ್‌ ರಾಜ್‌ಕುಮಾರ್‌ ಅವರ ಚಿತ್ರವನ್ನು ಬಿಡಿಸಿದ್ದಾರೆ.

ಇನ್ನು ಮೈಸೂರಿನ ಅಗ್ರಹಾರ ವೃತ್ತದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಪುನೀತ್‌ ಅವರ 50 ಅಡಿ ಕಟೌಟ್‌ ನಿರ್ಮಿಸಿ ಅಭಿಮಾನ ಮೆರೆದಿದ್ದಾರೆ.

ಪುನೀತ್‌ ರಾಜ್‌ಕುಮಾರ್‌ ಗೆ ದೇಶ ಮಾತ್ರವಲ್ಲದೇ ವಿದೇಶದಲ್ಲಿಯೂ ಫ್ಯಾನ್ಸ್‌ ಫಾಲೋಯಿಂಗ್‌ ಇರುವುದು ಗೊತ್ತೇಯಿದೆ. ಅದರಂತೆ ಅಮೆರಿಕದ ನ್ಯೂಯಾರ್ಕ್ ಸಿಟಿಯ ಎಂಟರ್‌ಟೈನ್‌ಮೆಂಟ್ ಹಬ್ ಎಂದು ಕರೆಯುವ ಟೈಮ್ ಸ್ಕ್ವೇರ್‌ನಲ್ಲಿ ಕನ್ನಡ ಚಿತ್ರ ನಟ ದಿ. ಪುನೀತ್ ರಾಜ್‌ಕುಮಾರ್ ಅಭಿಮಾನಿಗಳು ಅವರ ಹುಟ್ಟುಹಬ್ಬವನ್ನು ಅದ್ಧೂರಿಯಾಗಿ ಆಚರಿಸಿದ್ದಾರೆ. ಟೈಮ್ ಸ್ಕ್ವೇರ್ ಮೇಲೆ ಪುನೀತ್ ರಾಜ್‌ಕುಮಾರ್ ಮತ್ತು ಅವರ ಪತ್ನಿ ಅಶ್ವಿನಿ ಪುನೀತ್ ರಾಜ್‌ಕುಮಾರ್ ಅವರ ಫೋಟೋ ಹಾಕಿ ಸಂಭ್ರಮಿಸಲಾಗಿದೆ. ಈ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ.

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ತಮ್ಮ ಫೇಸ್‌ ಬುಕ್‌ನಲ್ಲಿ ಪುನೀತ್‌ ಅವರ ಫೋಟೋ ಒಂದನ್ನು ಹಾಕಿ ಶುಭ ಕೋರಿದ್ದು, ಪುನೀತ್ ರಾಜ್‌ಕುಮಾರ್ ಅವರ ಸಾಮಾಜಿಕ ಕಾರ್ಯಗಳು ಬಹಳಷ್ಟು ಜನರಿಗೆ ಪ್ರೇರಣೆಯಾಗಿವೆ ಎಂದು ಸಾಲುಗಳನ್ನು ಬರೆದುಕೊಂಡಿದ್ದಾರೆ.

andolanait

Recent Posts

ಮೈಸೂರಿನ ಎಲ್ಲಾ ಕೆರೆಗಳ ಸರ್ವೆ ನಡೆಸಿ: ಅಪರ ಜಿಲ್ಲಾಧಿಕಾರಿ ಡಾ.ಪಿ.ಶಿವರಾಜು ಸೂಚನೆ

ಮೈಸೂರು: ಮೈಸೂರಿನ ಎಲ್ಲಾ ಕೆರೆಗಳ ಸರ್ವೆ ನಡೆಸಿ, ಒತ್ತುವರಿ ತೆರವುಗೊಳಿಸುವಂತೆ ಮೈಸೂರು ಅಪರ ಜಿಲ್ಲಾಧಿಕಾರಿ ಡಾ.ಪಿ.ಶಿವರಾಜು ಅವರು ಅಧಿಕಾರಿಗಳಿಗೆ ಸೂಚನೆ…

7 hours ago

ಚೀನಾದ ನಾಗರಿಕರಿಗೆ ಪ್ರವಾಸಿ ವೀಸಾ ಪುನರಾರಂಭಿಸಲು ಕೇಂದ್ರ ಸರ್ಕಾರ ಸಿದ್ಧತೆ

ನವದೆಹಲಿ: ಭಾರತ ಸರ್ಕಾರವು ಚೀನಾದ ನಾಗರಿಕರಿಗೆ ಪ್ರವಾಸಿ ವೀಸಾಗಳನ್ನು ಪುನರಾರಂಭಿಸಲು ಸಿದ್ಧತೆ ನಡೆಸುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ. ಗಾಲ್ವಾನ್‌ ಕಣಿವೆಯಲ್ಲಿ…

7 hours ago

ಶರದ್‌ ಪವಾರ್‌ ಆಸ್ಪತ್ರೆಯಿಂದ ಡಿಸ್ಚಾರ್ಜ್‌

ಮುಂಬೈ: ಆರೋಗ್ಯ ಸಮಸ್ಯೆಯಿಂದ ಮುಂಬೈನ್‌ ಆಸ್ಪತ್ರೆಗೆ ದಾಖಲಾಗಿದ್ದ ಶರದ್‌ ಪವಾರ್‌ ಅವರನ್ನು ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಮಾಡಲಾಗಿದೆ. ಶರದ್‌ ಪವಾರ್‌…

7 hours ago

ಪತ್ನಿ, ತಾಯಿಯನ್ನು ಕೊಂದು ಮಕ್ಕಳೊಂದಿಗೆ ರೈಲಿಗೆ ತಲೆಕೊಟ್ಟ ವ್ಯಕ್ತಿ

ಅಮರಾವತಿ: ವ್ಯಕ್ತಿಯೊಬ್ಬ ಪತ್ನಿ ಹಾಗೂ ತಾಯಿಯನ್ನು ಕತ್ತು ಹಿಸುಕಿ ಕೊಂದು ಬಳಿಕ ಇಬ್ಬರು ಮಕ್ಕಳೊಂದಿಗೆ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾದ…

9 hours ago

ಚಲುವಾಂಬ ಆಸ್ಪತ್ರೆಯಲ್ಲಿ ಮಗು ಸಾವು ಪ್ರಕರಣ: ಮರಣೋತ್ತರ ಪರೀಕ್ಷೆಗೆ ಮೃತದೇಹ ರವಾನೆ

ಮೈಸೂರು: ಇಲ್ಲಿನ ಚಲುವಾಂಬ ಆಸ್ಪತ್ರೆಯಲ್ಲಿ ಇರುವೆ ಕಚ್ಚಿ ಮಗು ಸಾವನ್ನಪ್ಪಿರುವ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮಗುವಿನ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆಂದು…

9 hours ago

ಹಾಸನ: ಮೂವರು ಇಟಿಎಫ್‌ ಸಿಬ್ಬಂದಿ ಮೇಲೆ ಕಾಡಾನೆ ದಾಳಿ

ಹಾಸನ: ಮೂವರು ಇಟಿಎಫ್‌ ಸಿಬ್ಬಂದಿ ಮೇಲೆ ಕಾಡಾನೆ ದಾಳಿ ಮಾಡಿರುವ ಘಟನೆ ಬೇಲೂರು ತಾಲ್ಲೂಕಿನ ಚೀಕನಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ…

9 hours ago