ಮನರಂಜನೆ

ಪುನೀತ್‌ ರಾಜ್‌ಕುಮಾರ್‌ 49ನೇ ಹುಟ್ಟುಹಬ್ಬ: ಮೈಸೂರಲ್ಲಿ ಮನೆಮಾಡಿದ ಸಂಭ್ರಮ!

ಮೈಸೂರು: ಕರ್ನಾಟಕ ರತ್ನ ದಿ. ಪುನಿತ್‌ ರಾಜ್‌ಕುಮಾರ್‌ ಅವರ 49ನೇ ಹುಟ್ಟುಹಬ್ಬವನ್ನು ಅವರ ಅಭಿಮಾನಿಗಳು ನಗರದಾದ್ಯಂತ ಸಡಗರ ಸಂಭ್ರಮದಿಂದ ಆಚರಿಸಿದ್ದಾರೆ.

ನಗರದ ಪ್ರಮುಖ ಬೀದಿಗಳಲ್ಲಿ ಪುನೀತರಿಗೆ ಗೌರವ ನಮನ ಸಲ್ಲಿಸಿರುವ ಅಭಿಮಾನಿಗಳು, ನಟನ ಹೆಸರಿನಲ್ಲಿ ಸಾರ್ವಜನಿಕರಿಗೆ ಅನ್ನದಾನ ಮಾಡಿದ್ದಾರೆ.

ವಿಶ್ವದಾಖಲೆಯ ಆರ್ಟಿಸ್ಟ್‌ ಪುನೀತ್‌ ಕುಮಾರ್‌, ರಂಗೋಲಿ ಕಲೆಗಾರ್ತಿ ಲಕ್ಷ್ಮೀ ಮತ್ತು ತಂಡದಿಂದ ಅರಮನೆಯ ಕೋಟೆ ಆಂಜನೇಯ ದೇವಾಲಯದ ಮುಂಭಾಗ ರಂಗೋಲಿಯಿಂದ ಪುನೀತ್‌ ರಾಜ್‌ಕುಮಾರ್‌ ಅವರ ಚಿತ್ರವನ್ನು ಬಿಡಿಸಿದ್ದಾರೆ.

ಇನ್ನು ಮೈಸೂರಿನ ಅಗ್ರಹಾರ ವೃತ್ತದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಪುನೀತ್‌ ಅವರ 50 ಅಡಿ ಕಟೌಟ್‌ ನಿರ್ಮಿಸಿ ಅಭಿಮಾನ ಮೆರೆದಿದ್ದಾರೆ.

ಪುನೀತ್‌ ರಾಜ್‌ಕುಮಾರ್‌ ಗೆ ದೇಶ ಮಾತ್ರವಲ್ಲದೇ ವಿದೇಶದಲ್ಲಿಯೂ ಫ್ಯಾನ್ಸ್‌ ಫಾಲೋಯಿಂಗ್‌ ಇರುವುದು ಗೊತ್ತೇಯಿದೆ. ಅದರಂತೆ ಅಮೆರಿಕದ ನ್ಯೂಯಾರ್ಕ್ ಸಿಟಿಯ ಎಂಟರ್‌ಟೈನ್‌ಮೆಂಟ್ ಹಬ್ ಎಂದು ಕರೆಯುವ ಟೈಮ್ ಸ್ಕ್ವೇರ್‌ನಲ್ಲಿ ಕನ್ನಡ ಚಿತ್ರ ನಟ ದಿ. ಪುನೀತ್ ರಾಜ್‌ಕುಮಾರ್ ಅಭಿಮಾನಿಗಳು ಅವರ ಹುಟ್ಟುಹಬ್ಬವನ್ನು ಅದ್ಧೂರಿಯಾಗಿ ಆಚರಿಸಿದ್ದಾರೆ. ಟೈಮ್ ಸ್ಕ್ವೇರ್ ಮೇಲೆ ಪುನೀತ್ ರಾಜ್‌ಕುಮಾರ್ ಮತ್ತು ಅವರ ಪತ್ನಿ ಅಶ್ವಿನಿ ಪುನೀತ್ ರಾಜ್‌ಕುಮಾರ್ ಅವರ ಫೋಟೋ ಹಾಕಿ ಸಂಭ್ರಮಿಸಲಾಗಿದೆ. ಈ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ.

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ತಮ್ಮ ಫೇಸ್‌ ಬುಕ್‌ನಲ್ಲಿ ಪುನೀತ್‌ ಅವರ ಫೋಟೋ ಒಂದನ್ನು ಹಾಕಿ ಶುಭ ಕೋರಿದ್ದು, ಪುನೀತ್ ರಾಜ್‌ಕುಮಾರ್ ಅವರ ಸಾಮಾಜಿಕ ಕಾರ್ಯಗಳು ಬಹಳಷ್ಟು ಜನರಿಗೆ ಪ್ರೇರಣೆಯಾಗಿವೆ ಎಂದು ಸಾಲುಗಳನ್ನು ಬರೆದುಕೊಂಡಿದ್ದಾರೆ.

andolanait

Recent Posts

ಕರ್ನಾಟಕದವರಿಗೆ, ವೋಟ್‌ ಇದ್ದವರಿಗೆ ಮಾತ್ರ ಗ್ಯಾರಂಟಿ ಕೊಡುತ್ತೇವೆ: ಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಕರ್ನಾಟಕದವರಿಗೆ, ವೋಟ್‌ ಇದ್ದವರಿಗೆ ಮಾತ್ರ ನಾವು ಗ್ಯಾರಂಟಿ ಕೊಡುತ್ತೇವೆ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ…

2 hours ago

ರಾಮನಗರ ಶಾಸಕ ಇಕ್ಬಾಲ್‌ ಹುಸೇನ್‌ಗೆ ಹೃದಯಾಘಾತ: ಆಸ್ಪತ್ರೆಗೆ ದಾಖಲು

ಬೆಂಗಳೂರು: ರಾಮನಗರ ಶಾಸಕ ಇಕ್ಬಾಲ್‌ ಹುಸೇನ್‌ಗೆ ಹೃದಯಾಘಾತವಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇಕ್ಬಾಲ್‌ ಹುಸೇನ್‌ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ…

3 hours ago

ಹಿರಿಯ ಸಾಹಿತಿ ಪಿ.ಲಂಕೇಶ್‌ ಪತ್ನಿ ಇಂದಿರಾ ಲಂಕೇಶ್‌ ನಿಧನ

ಬೆಂಗಳೂರು: ಲಂಕೇಶ್‌ ಪತ್ರಿಕೆಯ ಸಂಪಾದಕರಾಗಿದ್ದ ಖ್ಯಾತ ಪತ್ರಕರ್ತ ಪಿ.ಲಂಕೇಶ್‌ ಅವರ ಪತ್ನಿ ಇಂದಿರಾ ಲಂಕೇಶ್‌ ಅವರು ಬೆಂಗಳೂರಿನ ಉತ್ತರಹಳ್ಳಿಯಲ್ಲಿರುವ ತಮ್ಮ…

4 hours ago

ಮಹಾರಾಷ್ಟ್ರ| ತೆರೆದ ಬಾವಿಗೆ ಬಿದ್ದ ಪಿಕ್‌ಅಪ್‌ ವಾಹನ: 8 ಮಂದಿ ದುರ್ಮರಣ

ಮುಂಬೈ: ಪಿಕ್‌ ಅಪ್‌ ವಾಹನವೊಂದು ರಸ್ತೆ ಬದಿಯ ತೆರೆದ ಬಾವಿಗೆ ಬಿದ್ದ ಪರಿಣಾಮ ನಾಲ್ವರು ಮಹಿಳೆಯರು ಹಾಗೂ ನಾಲ್ವರು ಮಕ್ಕಳು…

4 hours ago

ಗ್ಯಾರಂಟಿ ಪರಿಷ್ಕರಣೆ; ಅರ್ಹರಿಗೆ ಅನ್ಯಾಯ ಆಗಬಾರದು

೨೦೨೩ರ ವಿಧಾನಸಭಾ ಚುನಾವಣೆಯಲ್ಲಿ ನೀಡಿದ್ದ ಭರವಸೆಯಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಜಾರಿಗೊಳಿಸಿದ್ದರು. ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹಜ್ಯೋತಿ,…

9 hours ago

ರಾಜ್ಯ ರಾಜಕಾರಣದ ಬೆಳವಣಿಗೆಯ ಲಾಭ ಪಡೆಯಲು ಬಿಜೆಪಿ-ಜಾ.ದಳ ಮಿತ್ರಕೂಟ ಯತ್ನ

ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ  ಮುಂಬರುವ ವಿಧಾನಸಭಾ ಚುನಾವಣೆಗೆ ತಂತಮ್ಮ ಪಕ್ಷದ ವೈಯಕ್ತಿಕ ಬಲ ಹೆಚ್ಚಿಸಿಕೊಳ್ಳಲೂ ಕೂಡ ತಂತ್ರ ರಾಜ್ಯ ಕಾಂಗ್ರೆಸ್‌ನ…

9 hours ago