ಮನರಂಜನೆ

ಜಾಕಿ ರಿ ರಿಲೀಸ್; ತೆರೆ ಮೇಲೆ ಅಪ್ಪು ನೋಡಿ ಭಾವುಕರಾದ ಅಶ್ವಿನಿ ಪುನೀತ್‌ ರಾಜ್‌ಕುಮಾರ್

ಬೆಂಗಳೂರು: ಮಾ.17 ರಂದು ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಹುಟ್ಟು ಹಬ್ಬವಿದ್ದು ಅದರ ಬೆನ್ನಲ್ಲೇ ಅಪ್ಪು ನಟನೆಯ ಆಲ್‌ಟೈಮ್‌ ಬ್ಲಾಕ್‌ಬಸ್ಟರ್‌ ಜಾಕಿ ಚಲನಚಿತ್ರವನ್ನು ಕೆಆರ್‌ಜಿ ಸ್ಟುಡಿಯೋ ಸುಮಾರು 120ಕ್ಕೂ ಹೆಚ್ಚು ಸ್ಕ್ರೀನ್ ಗಳಲ್ಲಿ ಮರು ಬಿಡುಗಡೆ ಮಾಡಿದೆ. ಈ ಸಿನಿಮಾವನ್ನು ಬಹುತೇಕ ಹೊಸ ಚಲನಚಿತ್ರವನ್ನು ರಿಲೀಸ್ ಮಾಡಿದಂತೆ ರಿಲೀಸ್ ಮಾಡಲಾಗಿದ್ದು, ಎಲ್ಲ ಕಡೆ ಉತ್ತಮವಾದ ಪತ್ರತಿಕ್ರಿಯೆ ಸಿಕ್ಕಿರುವುದು ಸಹಜವಾಗಿ ಖುಷಿ ಕೊಟ್ಟಿದೆ.

ಕೆಆರ್‌ಜಿ ಸ್ಟುಡಿಯೋದ ಕಾರ್ತಿಕ್ ಮತ್ತು ಅಪ್ಪುವಿನ ನಡುವೆ ಉತ್ತಮ ಭಾಂದವ್ಯವನ್ನು ಹೊಂದಿದ್ದು, ಈ ಚಿತ್ರವನ್ನು ಅದ್ದೂರಿಯಾಗಿ ವಿತರಣೆ ಮಾಡಿದ್ದಾರೆ. ಸೂರಿ ನಿರ್ದೇಶನದ ಈ ಚಿತ್ರ ಬೆಳಗ್ಗೆ 4.30ರಿಂದಲೇ ಪ್ರದರ್ಶನವನ್ನು ಆರಂಭಿಸಿದೆ. ಇದಕ್ಕೆಂದು ಅಭಿಮಾನಿಗಳು ಚಿತ್ರಮಂದಿರಗಳನ್ನು ಸಿಂಗಾರಗೊಳಿಸಿ, ಅಪ್ಪು ಕಟ್‌ಔಟ್‌ಗೆ ಹಾರ ಹಾಕಿ ಖುಷಿ ಪಟ್ಟಿದ್ದಾರೆ.

ಇನ್ನು ಪತಿ ನಟಿಸಿದ ಚಿತ್ರ ನೋಡುವುದಕ್ಕೆ ಅಶ್ವಿನಿ ಪುನೀತ್ ರಾಜ್‌ಕುಮಾರ್‌ ಅವರು ನಗರದ ಗಾಂಧಿನಗರದಲ್ಲಿರುವ ನರ್ತಕಿ ಚಿತ್ರಮಂದಿರಕ್ಕೆ ಭೇಟಿ ನೀಡಿದ್ದಾರೆ. ಈ ಸಂದರ್ಭದಲ್ಲಿ ಅಶ್ವಿನಿಯವರು ತೆರೆಯ ಮೇಲೆ ಪುನೀತ್ ರಾಜ್ ಕುಮಾರ್ ಅವರನ್ನು ನೋಡಿ ಭಾವುಕರಾಗಿದ್ದು, ಈ ದೃಶ್ಯವು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ವೇಳೆ ದೊಡ್ಮನೆಯ ವಿನಯ್ ರಾಜ್ ಕುಮಾರ್, ಧೀರೇನ್ ಕುಮಾರ್, ಧನ್ಯರಾಮ್ ಕುಮಾರ್ ಮತ್ತು ವಿತರಕ ಕಾರ್ತಿಕ್ ಗೌಡ ಸೇರಿದಂತೆ ಆಪ್ತರೊಡನೆ ಸಿನಿಮಾ ವೀಕ್ಷಿಸಿದ್ದಾರೆ.

ಮುಳ್ಳೂರು ಶಿವಪ್ರಸಾದ್

ಮೂಲತಃ ನಂಜನಗೂಡು ತಾಲೂಕಿನ ಮುಳ್ಳೂರು ಗ್ರಾಮದವನಾದ ನಾನು ನಂಜನಗೂಡಿನ ಕೆಎಚ್ ಬಿ ಕಾಲೋನಿಯಲ್ಲಿ ವಾಸವಿದ್ದೇನೆ. ಮೈಸೂರು ಮಹಾರಾಜ ಕಾಲೇಜಿನಲ್ಲಿ ಬಿ.ಎ. ಪದವಿ ಪಡೆದ ನನಗೆ ಪತ್ರಿಕಾರಂಗದಲ್ಲಿ 20 ವರ್ಷಗಳ ಅನುಭವವಿದೆ. ನಂಜನಗೂಡಿನಲ್ಲಿ ಕಪಿಲ ವಾರ್ತೆ ದಿನಪತ್ರಿಕೆಯಲ್ಲಿ ಕೆಲಸ ಆರಂಭಿಸಿ, ನಿಜದನಿ, ಸತ್ಯಪ್ರಭ ಪತ್ರಿಕೆಗಳಲ್ಲೂ ವರದಿಗಾರಿಕೆ, 2012 ಜನವರಿ 4ರಂದು ಆಂದೋಲನ ದಿನಪತ್ರಿಕೆ ಬಳಗಕ್ಕೆ ಸೇರ್ಪಡೆಯಾಗಿದ್ದು, ಅದರಲ್ಲಿಯೇ ಮುಂದುವರಿದಿದ್ದೇನೆ. ದಿನಪತ್ರಿಕೆಗಳು, ಕಾದಂಬರಿಗಳನ್ನು ಓದುವ ಹವ್ಯಾಸ. ಮೊಬೈಲ್: 98453 41388

Recent Posts

ಹನೂರು | ಬಾವಿಗೆ ಬಿದ್ದ ಶ್ವಾನ, ಅಗ್ನಿಶಾಮಕ ಠಾಣಾ ಸಿಬ್ಬಂದಿಗಳಿಂದ ರಕ್ಷಣೆ

ಹನೂರು : ನೀರಿರುವ ಬಾವಿಗೆ ಬಿದ್ದಿದ್ದ ಶ್ವಾನವನ್ನು ರಕ್ಷಣೆ ಮಾಡುವಲ್ಲಿ ಅಗ್ನಿಶಾಮಕ ಠಾಣಾ ಸಿಬ್ಬಂದಿಗಳು ಯಶಸ್ವಿಯಾಗಿದ್ದಾರೆ. ಘಟನೆಯ ವಿವರ ಹನೂರು…

19 mins ago

ಎಲ್‌ಪಿಜಿ ಕೊರತೆ ಪರಿಸ್ಥಿತಿ ; ಹಾಲಿನ ವಹಿವಾಟು ಯಥಾಸ್ಥಿತಿ

ಕೆ.ಬಿ.ರಮೇಶ ನಾಯಕ ಮೈಸೂರು : ಮಧ್ಯಪ್ರಾಚ್ಯ ದೇಶಗಳಲ್ಲಿ ನಡೆಯುತ್ತಿರುವಯುದ್ಧದ ಪರಿಣಾಮದಿಂದಾಗಿ ಭಾರತದಲ್ಲಿ ಎಲ್‌ಪಿಜಿ ಸಿಲಿಂಡರ್ ಪೂರೈಕೆಗೆ ದೊಡ್ಡ ಹೊಡೆತ ಬಿದ್ದು…

45 mins ago

ಓದುಗರ ಪತ್ರ | ಶಾಸನಸಭೆಗಳಲ್ಲಿ ಹೊಸ ಯೋಜನೆಗಳ ಚರ್ಚೆಯಾಗಲಿ

ಕರ್ನಾಟಕ ವಿಧಾನಸಭೆ ಹಾಗೂ ಸಂಸತ್‌ ಮೇಲನೆ ಹಾಗೂ ಕೆಳಮನೆಗಳಲ್ಲಿ 2026ರ (ಬಜೆಟ್ ಮೇಲಿನ ಚರ್ಚೆ) ಮುಂದುವರಿದ ಅಧಿವೇಶನಗಳು ನಡೆಯುತ್ತಿವೆ. ಬಜೆಟ್…

55 mins ago

ಓದುಗರ ಪತ್ರ | ಒಳ ಮೀಸಲಾತಿ ಸಮಾನವಾಗಿ ಹಂಚಿಕೆಯಾಗಲಿ

ಒಳ ಮೀಸಲಾತಿ ಕುರಿತು ಮಾ.27ರಂದು ನಡೆಯಲಿರುವ ಸಚಿವ ಸಂಪುಟ ಸಭೆಯ ಮೇಲೆ ಎಲ್ಲರ ಗಮನ ಕೇಂದ್ರೀಕೃತವಾಗಿದೆ. ಸಂಪುಟ ಸಭೆಯು ಎಲ್ಲಾ…

1 hour ago

ಓದುಗರ ಪತ್ರ | ಮೇಕ್ ಇನ್ ಇಂಡಿಯಾಗೆ ಕಾಲ ಪಕ್ವ

ಕೊಲ್ಲಿಯಲ್ಲಿ ಇಸ್ರೇಲ್-ಅಮೆರಿಕ ದೇಶಗಳು ಜಂಟಿಯಾಗಿ ಇರಾನ್ ವಿರುದ್ಧ ಸಾರಿರುವ ಸಮರ ದಿನೇ ದಿನೇ ಉಗ್ರಸ್ವರೂಪ ಪಡೆಯುತ್ತಿದ್ದು, ಇಡೀ ವಿಶ್ವಕ್ಕೆ ಕಂಟಕಪ್ರಾಯವಾಗಿದೆ.…

1 hour ago

ಓದುಗರ ಪತ್ರ | ಮದ್ಯಪ್ರಿಯರ ತಾಣವಾಗಿರುವ ಬಸ್ ತಂಗುದಾಣ

ಚಾಮರಾಜನಗರ ತಾಲ್ಲೂಕಿನ ಮುಕ್ಕಡಹಳ್ಳಿಯ ಬಸ್ ತಂಗುದಾಣವು ರಾತ್ರಿಯ ವೇಳೆಯಲ್ಲಿ ಮದ್ಯಪಾನದಂತಹ ಅನೈತಿಕ ಚಟುವಟಿಕೆಗೆ ವೇದಿಕೆಯಾಗಿದೆ. ಕುಡಿದು ಬಾಟಲಿಗಳು, ಮದ್ಯದ ಪೌಚ್‌ಗಳು,…

1 hour ago