ಮನರಂಜನೆ

ಜಾಕಿ ರಿ ರಿಲೀಸ್; ತೆರೆ ಮೇಲೆ ಅಪ್ಪು ನೋಡಿ ಭಾವುಕರಾದ ಅಶ್ವಿನಿ ಪುನೀತ್‌ ರಾಜ್‌ಕುಮಾರ್

ಬೆಂಗಳೂರು: ಮಾ.17 ರಂದು ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಹುಟ್ಟು ಹಬ್ಬವಿದ್ದು ಅದರ ಬೆನ್ನಲ್ಲೇ ಅಪ್ಪು ನಟನೆಯ ಆಲ್‌ಟೈಮ್‌ ಬ್ಲಾಕ್‌ಬಸ್ಟರ್‌ ಜಾಕಿ ಚಲನಚಿತ್ರವನ್ನು ಕೆಆರ್‌ಜಿ ಸ್ಟುಡಿಯೋ ಸುಮಾರು 120ಕ್ಕೂ ಹೆಚ್ಚು ಸ್ಕ್ರೀನ್ ಗಳಲ್ಲಿ ಮರು ಬಿಡುಗಡೆ ಮಾಡಿದೆ. ಈ ಸಿನಿಮಾವನ್ನು ಬಹುತೇಕ ಹೊಸ ಚಲನಚಿತ್ರವನ್ನು ರಿಲೀಸ್ ಮಾಡಿದಂತೆ ರಿಲೀಸ್ ಮಾಡಲಾಗಿದ್ದು, ಎಲ್ಲ ಕಡೆ ಉತ್ತಮವಾದ ಪತ್ರತಿಕ್ರಿಯೆ ಸಿಕ್ಕಿರುವುದು ಸಹಜವಾಗಿ ಖುಷಿ ಕೊಟ್ಟಿದೆ.

ಕೆಆರ್‌ಜಿ ಸ್ಟುಡಿಯೋದ ಕಾರ್ತಿಕ್ ಮತ್ತು ಅಪ್ಪುವಿನ ನಡುವೆ ಉತ್ತಮ ಭಾಂದವ್ಯವನ್ನು ಹೊಂದಿದ್ದು, ಈ ಚಿತ್ರವನ್ನು ಅದ್ದೂರಿಯಾಗಿ ವಿತರಣೆ ಮಾಡಿದ್ದಾರೆ. ಸೂರಿ ನಿರ್ದೇಶನದ ಈ ಚಿತ್ರ ಬೆಳಗ್ಗೆ 4.30ರಿಂದಲೇ ಪ್ರದರ್ಶನವನ್ನು ಆರಂಭಿಸಿದೆ. ಇದಕ್ಕೆಂದು ಅಭಿಮಾನಿಗಳು ಚಿತ್ರಮಂದಿರಗಳನ್ನು ಸಿಂಗಾರಗೊಳಿಸಿ, ಅಪ್ಪು ಕಟ್‌ಔಟ್‌ಗೆ ಹಾರ ಹಾಕಿ ಖುಷಿ ಪಟ್ಟಿದ್ದಾರೆ.

ಇನ್ನು ಪತಿ ನಟಿಸಿದ ಚಿತ್ರ ನೋಡುವುದಕ್ಕೆ ಅಶ್ವಿನಿ ಪುನೀತ್ ರಾಜ್‌ಕುಮಾರ್‌ ಅವರು ನಗರದ ಗಾಂಧಿನಗರದಲ್ಲಿರುವ ನರ್ತಕಿ ಚಿತ್ರಮಂದಿರಕ್ಕೆ ಭೇಟಿ ನೀಡಿದ್ದಾರೆ. ಈ ಸಂದರ್ಭದಲ್ಲಿ ಅಶ್ವಿನಿಯವರು ತೆರೆಯ ಮೇಲೆ ಪುನೀತ್ ರಾಜ್ ಕುಮಾರ್ ಅವರನ್ನು ನೋಡಿ ಭಾವುಕರಾಗಿದ್ದು, ಈ ದೃಶ್ಯವು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ವೇಳೆ ದೊಡ್ಮನೆಯ ವಿನಯ್ ರಾಜ್ ಕುಮಾರ್, ಧೀರೇನ್ ಕುಮಾರ್, ಧನ್ಯರಾಮ್ ಕುಮಾರ್ ಮತ್ತು ವಿತರಕ ಕಾರ್ತಿಕ್ ಗೌಡ ಸೇರಿದಂತೆ ಆಪ್ತರೊಡನೆ ಸಿನಿಮಾ ವೀಕ್ಷಿಸಿದ್ದಾರೆ.

ಮುಳ್ಳೂರು ಶಿವಪ್ರಸಾದ್

ಮೂಲತಃ ನಂಜನಗೂಡು ತಾಲೂಕಿನ ಮುಳ್ಳೂರು ಗ್ರಾಮದವನಾದ ನಾನು ನಂಜನಗೂಡಿನ ಕೆಎಚ್ ಬಿ ಕಾಲೋನಿಯಲ್ಲಿ ವಾಸವಿದ್ದೇನೆ. ಮೈಸೂರು ಮಹಾರಾಜ ಕಾಲೇಜಿನಲ್ಲಿ ಬಿ.ಎ. ಪದವಿ ಪಡೆದ ನನಗೆ ಪತ್ರಿಕಾರಂಗದಲ್ಲಿ 20 ವರ್ಷಗಳ ಅನುಭವವಿದೆ. ನಂಜನಗೂಡಿನಲ್ಲಿ ಕಪಿಲ ವಾರ್ತೆ ದಿನಪತ್ರಿಕೆಯಲ್ಲಿ ಕೆಲಸ ಆರಂಭಿಸಿ, ನಿಜದನಿ, ಸತ್ಯಪ್ರಭ ಪತ್ರಿಕೆಗಳಲ್ಲೂ ವರದಿಗಾರಿಕೆ, 2012 ಜನವರಿ 4ರಂದು ಆಂದೋಲನ ದಿನಪತ್ರಿಕೆ ಬಳಗಕ್ಕೆ ಸೇರ್ಪಡೆಯಾಗಿದ್ದು, ಅದರಲ್ಲಿಯೇ ಮುಂದುವರಿದಿದ್ದೇನೆ. ದಿನಪತ್ರಿಕೆಗಳು, ಕಾದಂಬರಿಗಳನ್ನು ಓದುವ ಹವ್ಯಾಸ. ಮೊಬೈಲ್: 98453 41388

Recent Posts

ಪರವಾನಗಿ ಅಮಾನತ್ತು : ನಾಲ್ವರ ವಿರುದ್ಧ ಶಿಸ್ತು ಕ್ರಮ

ಚಾಮರಾಜನಗರ : ರಾಜ್ಯ ಆಹಾರ ಆಯೋಗದ ಅಧ್ಯಕ್ಷರಾದ ಡಾ. ಎಚ್.ಕೃಷ್ಣ ಅವರು ತಮ್ಮ ದಿಢೀರ್ ಭೇಟಿ ಸಂದರ್ಭದಲ್ಲಿ ನ್ಯೂನತೆ ಕಂಡುಬಂದಿರುವ…

3 hours ago

ಸಿ.ಟಿ.ರವಿ ಯಾವ ಕಡೆಯಿಂದಲೂ ಒಳಗೆ ಬರತಕ್ಕದ್ದಲ್ಲ : ಚೀಫ್ ಮಾರ್ಷಲ್​​ಗೆ ಸಭಾಪತಿ ಸೂಚನೆ

ಬೆಂಗಳೂರು : ಸಭಾಪತಿಗಳ ಆದೇಶಕ್ಕೆ ಗೌರವ ನೀಡದೆ, ಗೈರು ಹಾಜರಾಗಿದ್ದ ಹಿನ್ನೆಲೆಯಲ್ಲಿ ಬಿಜೆಪಿ ಸದಸ್ಯ ಸಿ.ಟಿ.ರವಿ ಅವರನ್ನು ವಿಧಾನ ಪರಿಷತ್ತಿನಿಂದ…

3 hours ago

ಮಂಡ್ಯ | 60 ಲಕ್ಷ ಲಂಚಕ್ಕೆ ಬೇಡಿಕೆ ; ಅಬಕಾರಿ ಉಪ ಆಯುಕ್ತ ಅಮಾನತು

ಮಂಡ್ಯ : ಹೊಸದಾಗಿ ಬಾರ್ ಆರಂಭಿಸಲು ಸಿಎಲ್ 7 ಲೈಸೆನ್ಸ್ ನೀಡಲು ಲಂಚ ಕೇಳಿದ ಆರೋಪದಡಿ ಮಂಡ್ಯ ಅಬಕಾರಿ ಉಪ…

4 hours ago

ಮೈಸೂರಿನಲ್ಲಿ ಮತ್ತೆ ಡ್ರಗ್ಸ್‌ ಪತ್ತೆ ; ಮೂವರ ಬಂಧನ

ಮೈಸೂರು : ಮೈಸೂರಲ್ಲಿ ಪದೇ ಪದೇ ಡ್ರಗ್ಸ್‌ ಪ್ರಕರಣಗಳು ಪತ್ತೆಯಾಗುತ್ತಿರುವುದು ಪೊಲೀಸರನ್ನು ನಿದ್ದೆಗೆಡಿಸಿದೆ. ಈ ಸಂಬಂಧ ಹೈಕೋರ್ಟ್‌ ಸಹ ಕಳವಳ…

5 hours ago

ಮೈ-ಬೆಂ ಹೆದ್ದಾರಿಯಲ್ಲಿ ಸುಲಿಗೆ,ದರೋಡೆ ; 34 ಪ್ರಕರಣಗಳಲ್ಲಿ 28 ಕೇಸ್‌ ಸಾಲ್ವ್‌!

ಮಂಡ್ಯ : ಮೈಸೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ (ಎನ್‌ಎಚ್-275) ಹಾಗೂ ಸರ್ವಿಸ್ ರಸ್ತೆಗಳಲ್ಲಿ ತಡರಾತ್ರಿ ಪ್ರಯಾಣಿಕರನ್ನು ತಡೆದು ಸುಲಿಗೆ, ದರೋಡೆ ಮಾಡುತ್ತಿರುವುದಕ್ಕೆ…

5 hours ago

ಮೂರು ಬಾಲಕಿಯರನ್ನು ಬಲಿ ಪಡೆದ ಆನ್‌ಲೈನ್‌ ಗೇಮ್‌ ; ಮಹಡಿಯಿಂದ ಹಾರಿ ಆತ್ಮಹತ್ಯೆ

ಗಾಜಿಯಾಬಾದ್ : ಆನ್‌ಲೈನ್ ಗೇಮ್ ಆಡಬೇಡಿ ಎಂದಿದ್ದಕ್ಕೆ ಮೂವರು ಅಪ್ರಾಪ್ತ ಸಹೋದರಿಯರು ಹೌಸಿಂಗ್ ಸೊಸೈಟಿಯ 9ನೇ ಮಹಡಿಯಿಂದ ಹಾರಿ ಆತ್ಮಹತ್ಯೆ…

6 hours ago