ಮನರಂಜನೆ

ಜಾಕಿ ರಿ ರಿಲೀಸ್; ತೆರೆ ಮೇಲೆ ಅಪ್ಪು ನೋಡಿ ಭಾವುಕರಾದ ಅಶ್ವಿನಿ ಪುನೀತ್‌ ರಾಜ್‌ಕುಮಾರ್

ಬೆಂಗಳೂರು: ಮಾ.17 ರಂದು ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಹುಟ್ಟು ಹಬ್ಬವಿದ್ದು ಅದರ ಬೆನ್ನಲ್ಲೇ ಅಪ್ಪು ನಟನೆಯ ಆಲ್‌ಟೈಮ್‌ ಬ್ಲಾಕ್‌ಬಸ್ಟರ್‌ ಜಾಕಿ ಚಲನಚಿತ್ರವನ್ನು ಕೆಆರ್‌ಜಿ ಸ್ಟುಡಿಯೋ ಸುಮಾರು 120ಕ್ಕೂ ಹೆಚ್ಚು ಸ್ಕ್ರೀನ್ ಗಳಲ್ಲಿ ಮರು ಬಿಡುಗಡೆ ಮಾಡಿದೆ. ಈ ಸಿನಿಮಾವನ್ನು ಬಹುತೇಕ ಹೊಸ ಚಲನಚಿತ್ರವನ್ನು ರಿಲೀಸ್ ಮಾಡಿದಂತೆ ರಿಲೀಸ್ ಮಾಡಲಾಗಿದ್ದು, ಎಲ್ಲ ಕಡೆ ಉತ್ತಮವಾದ ಪತ್ರತಿಕ್ರಿಯೆ ಸಿಕ್ಕಿರುವುದು ಸಹಜವಾಗಿ ಖುಷಿ ಕೊಟ್ಟಿದೆ.

ಕೆಆರ್‌ಜಿ ಸ್ಟುಡಿಯೋದ ಕಾರ್ತಿಕ್ ಮತ್ತು ಅಪ್ಪುವಿನ ನಡುವೆ ಉತ್ತಮ ಭಾಂದವ್ಯವನ್ನು ಹೊಂದಿದ್ದು, ಈ ಚಿತ್ರವನ್ನು ಅದ್ದೂರಿಯಾಗಿ ವಿತರಣೆ ಮಾಡಿದ್ದಾರೆ. ಸೂರಿ ನಿರ್ದೇಶನದ ಈ ಚಿತ್ರ ಬೆಳಗ್ಗೆ 4.30ರಿಂದಲೇ ಪ್ರದರ್ಶನವನ್ನು ಆರಂಭಿಸಿದೆ. ಇದಕ್ಕೆಂದು ಅಭಿಮಾನಿಗಳು ಚಿತ್ರಮಂದಿರಗಳನ್ನು ಸಿಂಗಾರಗೊಳಿಸಿ, ಅಪ್ಪು ಕಟ್‌ಔಟ್‌ಗೆ ಹಾರ ಹಾಕಿ ಖುಷಿ ಪಟ್ಟಿದ್ದಾರೆ.

ಇನ್ನು ಪತಿ ನಟಿಸಿದ ಚಿತ್ರ ನೋಡುವುದಕ್ಕೆ ಅಶ್ವಿನಿ ಪುನೀತ್ ರಾಜ್‌ಕುಮಾರ್‌ ಅವರು ನಗರದ ಗಾಂಧಿನಗರದಲ್ಲಿರುವ ನರ್ತಕಿ ಚಿತ್ರಮಂದಿರಕ್ಕೆ ಭೇಟಿ ನೀಡಿದ್ದಾರೆ. ಈ ಸಂದರ್ಭದಲ್ಲಿ ಅಶ್ವಿನಿಯವರು ತೆರೆಯ ಮೇಲೆ ಪುನೀತ್ ರಾಜ್ ಕುಮಾರ್ ಅವರನ್ನು ನೋಡಿ ಭಾವುಕರಾಗಿದ್ದು, ಈ ದೃಶ್ಯವು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ವೇಳೆ ದೊಡ್ಮನೆಯ ವಿನಯ್ ರಾಜ್ ಕುಮಾರ್, ಧೀರೇನ್ ಕುಮಾರ್, ಧನ್ಯರಾಮ್ ಕುಮಾರ್ ಮತ್ತು ವಿತರಕ ಕಾರ್ತಿಕ್ ಗೌಡ ಸೇರಿದಂತೆ ಆಪ್ತರೊಡನೆ ಸಿನಿಮಾ ವೀಕ್ಷಿಸಿದ್ದಾರೆ.

ಮುಳ್ಳೂರು ಶಿವಪ್ರಸಾದ್

ಮೂಲತಃ ನಂಜನಗೂಡು ತಾಲೂಕಿನ ಮುಳ್ಳೂರು ಗ್ರಾಮದವನಾದ ನಾನು ನಂಜನಗೂಡಿನ ಕೆಎಚ್ ಬಿ ಕಾಲೋನಿಯಲ್ಲಿ ವಾಸವಿದ್ದೇನೆ. ಮೈಸೂರು ಮಹಾರಾಜ ಕಾಲೇಜಿನಲ್ಲಿ ಬಿ.ಎ. ಪದವಿ ಪಡೆದ ನನಗೆ ಪತ್ರಿಕಾರಂಗದಲ್ಲಿ 20 ವರ್ಷಗಳ ಅನುಭವವಿದೆ. ನಂಜನಗೂಡಿನಲ್ಲಿ ಕಪಿಲ ವಾರ್ತೆ ದಿನಪತ್ರಿಕೆಯಲ್ಲಿ ಕೆಲಸ ಆರಂಭಿಸಿ, ನಿಜದನಿ, ಸತ್ಯಪ್ರಭ ಪತ್ರಿಕೆಗಳಲ್ಲೂ ವರದಿಗಾರಿಕೆ, 2012 ಜನವರಿ 4ರಂದು ಆಂದೋಲನ ದಿನಪತ್ರಿಕೆ ಬಳಗಕ್ಕೆ ಸೇರ್ಪಡೆಯಾಗಿದ್ದು, ಅದರಲ್ಲಿಯೇ ಮುಂದುವರಿದಿದ್ದೇನೆ. ದಿನಪತ್ರಿಕೆಗಳು, ಕಾದಂಬರಿಗಳನ್ನು ಓದುವ ಹವ್ಯಾಸ. ಮೊಬೈಲ್: 98453 41388

Recent Posts

ಅಂಗನವಾಡಿಗಳಿಗೆ ೬ ತಿಂಗಳಿಂದ ಬಾರದ ಮೊಟ್ಟೆ ಹಣ!

ಚಾಮರಾಜನಗರ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ತಾಲ್ಲೂಕಿನ ಅಂಗನವಾಡಿ ಕೇಂದ್ರಗಳಿಗೆ ಕೋಳಿಮೊಟ್ಟೆ ವಿತರಣೆಗಾಗಿ ನೀಡಲಾಗುವ ಅನುದಾನ ಕಳೆದ ೬ತಿಂಗಳಿಂದ…

1 hour ago

‘ತ್ಯಾಜ್ಯ ಸಂಸ್ಕರಣೆ, ವಿಲೇವಾರಿಗೆ ಕ್ರಮಕೈಗೊಳ್ಳಬೇಕು’

ಗುತ್ತಲು ಕೆರೆ, ಕಾಳೇನಹಳ್ಳಿ ಘನ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಜಿಲ್ಲಾಧಿಕಾರಿ ಡಾ.ಕುಮಾರ ಭೇಟಿ ಮಂಡ್ಯ: ನಗರದ ಗುತ್ತಲು ಕೆರೆಗೆ ತ್ಯಾಜ್ಯ…

1 hour ago

ಕೇಂದ್ರೀಯ ಬಸ್ ನಿಲ್ದಾಣದಲ್ಲಿ ಕುಡಿಯುವ ನೀರಿಗೆ ಪರದಾಟ

ಪ್ರಶಾಂತ್ ಎಸ್. ಆರು ತಿಂಗಳಿನಿಂದ ಶುದ್ಧ ಕುಡಿಯುವ ನೀರಿನ ಘಟಕ ಸ್ಥಗಿತ ನೀರಿನ ಘಟಕ ನಿರ್ವಹಣೆ ಮಾಡುವಲ್ಲಿ ಕೆಎಸ್‌ಆರ್‌ಟಿಸಿ ವಿಫಲ…

1 hour ago

ವರ್ಷಾಂತ್ಯ: ಗರಿಗೆದರದ ಮೈಸೂರು ಪ್ರವಾಸೋದ್ಯಮ

ಗಿರೀಶ್ ಹುಣಸೂರು ಹೊಸ ವರ್ಷಾಚರಣೆ, ಕ್ರಿಸ್‌ಮಸ್ ರಜೆ ನಿರೀಕ್ಷೆಯಲ್ಲಿ ವ್ಯಾಪಾರಸ್ಥರು, ಉದ್ಯಮಿಗಳು ಮೈಸೂರು: ೨೦೨೫ನೇ ವರ್ಷಕ್ಕೆ ವಿದಾಯ ಹೇಳಿ, ೨೦೨೬ರ…

1 hour ago

ಮಂಡ್ಯ | ಕೊಬ್ಬರಿ ಶೆಡ್‌ಗೆ ಬೆಂಕಿ : ಲಕ್ಷಾಂತರ ರೂ.ಮೌಲ್ಯದ ಕೊಬ್ಬರಿ ನಾಶ

ಮಂಡ್ಯ : ಕೊಬ್ಬರಿ ಶೆಡ್ ಗೆ ಬೆಂಕಿ ಬಿದ್ದು ಲಕ್ಷಾಂತರ ರೂ. ಮೌಲ್ಯದ ಕೊಬ್ಬರಿ ನಾಶವಾಗಿರುವ ಘಟನೆ ತಾಲೂಕಿನ ಗುನ್ನಾಯಕನಹಳ್ಳಿಯಲ್ಲಿ…

10 hours ago