ಮನರಂಜನೆ

ಜಾಕಿ ರಿ ರಿಲೀಸ್; ತೆರೆ ಮೇಲೆ ಅಪ್ಪು ನೋಡಿ ಭಾವುಕರಾದ ಅಶ್ವಿನಿ ಪುನೀತ್‌ ರಾಜ್‌ಕುಮಾರ್

ಬೆಂಗಳೂರು: ಮಾ.17 ರಂದು ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಹುಟ್ಟು ಹಬ್ಬವಿದ್ದು ಅದರ ಬೆನ್ನಲ್ಲೇ ಅಪ್ಪು ನಟನೆಯ ಆಲ್‌ಟೈಮ್‌ ಬ್ಲಾಕ್‌ಬಸ್ಟರ್‌ ಜಾಕಿ ಚಲನಚಿತ್ರವನ್ನು ಕೆಆರ್‌ಜಿ ಸ್ಟುಡಿಯೋ ಸುಮಾರು 120ಕ್ಕೂ ಹೆಚ್ಚು ಸ್ಕ್ರೀನ್ ಗಳಲ್ಲಿ ಮರು ಬಿಡುಗಡೆ ಮಾಡಿದೆ. ಈ ಸಿನಿಮಾವನ್ನು ಬಹುತೇಕ ಹೊಸ ಚಲನಚಿತ್ರವನ್ನು ರಿಲೀಸ್ ಮಾಡಿದಂತೆ ರಿಲೀಸ್ ಮಾಡಲಾಗಿದ್ದು, ಎಲ್ಲ ಕಡೆ ಉತ್ತಮವಾದ ಪತ್ರತಿಕ್ರಿಯೆ ಸಿಕ್ಕಿರುವುದು ಸಹಜವಾಗಿ ಖುಷಿ ಕೊಟ್ಟಿದೆ.

ಕೆಆರ್‌ಜಿ ಸ್ಟುಡಿಯೋದ ಕಾರ್ತಿಕ್ ಮತ್ತು ಅಪ್ಪುವಿನ ನಡುವೆ ಉತ್ತಮ ಭಾಂದವ್ಯವನ್ನು ಹೊಂದಿದ್ದು, ಈ ಚಿತ್ರವನ್ನು ಅದ್ದೂರಿಯಾಗಿ ವಿತರಣೆ ಮಾಡಿದ್ದಾರೆ. ಸೂರಿ ನಿರ್ದೇಶನದ ಈ ಚಿತ್ರ ಬೆಳಗ್ಗೆ 4.30ರಿಂದಲೇ ಪ್ರದರ್ಶನವನ್ನು ಆರಂಭಿಸಿದೆ. ಇದಕ್ಕೆಂದು ಅಭಿಮಾನಿಗಳು ಚಿತ್ರಮಂದಿರಗಳನ್ನು ಸಿಂಗಾರಗೊಳಿಸಿ, ಅಪ್ಪು ಕಟ್‌ಔಟ್‌ಗೆ ಹಾರ ಹಾಕಿ ಖುಷಿ ಪಟ್ಟಿದ್ದಾರೆ.

ಇನ್ನು ಪತಿ ನಟಿಸಿದ ಚಿತ್ರ ನೋಡುವುದಕ್ಕೆ ಅಶ್ವಿನಿ ಪುನೀತ್ ರಾಜ್‌ಕುಮಾರ್‌ ಅವರು ನಗರದ ಗಾಂಧಿನಗರದಲ್ಲಿರುವ ನರ್ತಕಿ ಚಿತ್ರಮಂದಿರಕ್ಕೆ ಭೇಟಿ ನೀಡಿದ್ದಾರೆ. ಈ ಸಂದರ್ಭದಲ್ಲಿ ಅಶ್ವಿನಿಯವರು ತೆರೆಯ ಮೇಲೆ ಪುನೀತ್ ರಾಜ್ ಕುಮಾರ್ ಅವರನ್ನು ನೋಡಿ ಭಾವುಕರಾಗಿದ್ದು, ಈ ದೃಶ್ಯವು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ವೇಳೆ ದೊಡ್ಮನೆಯ ವಿನಯ್ ರಾಜ್ ಕುಮಾರ್, ಧೀರೇನ್ ಕುಮಾರ್, ಧನ್ಯರಾಮ್ ಕುಮಾರ್ ಮತ್ತು ವಿತರಕ ಕಾರ್ತಿಕ್ ಗೌಡ ಸೇರಿದಂತೆ ಆಪ್ತರೊಡನೆ ಸಿನಿಮಾ ವೀಕ್ಷಿಸಿದ್ದಾರೆ.

ಮುಳ್ಳೂರು ಶಿವಪ್ರಸಾದ್

ಮೂಲತಃ ನಂಜನಗೂಡು ತಾಲೂಕಿನ ಮುಳ್ಳೂರು ಗ್ರಾಮದವನಾದ ನಾನು ನಂಜನಗೂಡಿನ ಕೆಎಚ್ ಬಿ ಕಾಲೋನಿಯಲ್ಲಿ ವಾಸವಿದ್ದೇನೆ. ಮೈಸೂರು ಮಹಾರಾಜ ಕಾಲೇಜಿನಲ್ಲಿ ಬಿ.ಎ. ಪದವಿ ಪಡೆದ ನನಗೆ ಪತ್ರಿಕಾರಂಗದಲ್ಲಿ 20 ವರ್ಷಗಳ ಅನುಭವವಿದೆ. ನಂಜನಗೂಡಿನಲ್ಲಿ ಕಪಿಲ ವಾರ್ತೆ ದಿನಪತ್ರಿಕೆಯಲ್ಲಿ ಕೆಲಸ ಆರಂಭಿಸಿ, ನಿಜದನಿ, ಸತ್ಯಪ್ರಭ ಪತ್ರಿಕೆಗಳಲ್ಲೂ ವರದಿಗಾರಿಕೆ, 2012 ಜನವರಿ 4ರಂದು ಆಂದೋಲನ ದಿನಪತ್ರಿಕೆ ಬಳಗಕ್ಕೆ ಸೇರ್ಪಡೆಯಾಗಿದ್ದು, ಅದರಲ್ಲಿಯೇ ಮುಂದುವರಿದಿದ್ದೇನೆ. ದಿನಪತ್ರಿಕೆಗಳು, ಕಾದಂಬರಿಗಳನ್ನು ಓದುವ ಹವ್ಯಾಸ. ಮೊಬೈಲ್: 98453 41388

Recent Posts

ಎಸ್‌ಐಆರ್‌ | ರಾಜ್ಯಾದ್ಯಂತ ಏಕಕಾಲಕ್ಕೆ ಆರಂಭ ; ನಾಳೆಯಿಂದ ಮನೆ ಮನೆಗೆ ಭೇಟಿ

ಬೆಂಗಳೂರು : ಭಾರತೀಯ ಚುನಾವಣಾ ಆಯೋಗದ ನಿರ್ದೇಶನದಂತೆ, ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಕಾರ್ಯಕ್ರಮವು ಮಂಗಳವಾರ (ಜೂ.30)…

10 mins ago

ಮಾದಪ್ಪನ ದರ್ಶನ ಮುಗಿಸಿ ಬರುವಾಗ ಬಸ್‌ ಪಲ್ಟಿ : ಇಬ್ಬರು ಸಾವು ; ಹಲವರು ಗಂಭೀರ

ಕೊಳ್ಳೇಗಾಲ : ಮಹದೇಶ್ವರ ಬೆಟ್ಟಕ್ಕೆ ತೆರಳಿ ದರ್ಶನ ಪಡೆದು ವಾಪಸ್ ಬರುವಾಗ ಕೆ.ಎಸ್.ಆರ್.ಟಿ.ಸಿ ಬಸ್ ಪಲ್ಟಿಯಾಗಿ ಇಬ್ಬರು ಸಾವನ್ನಪ್ಪಿ, 10…

2 hours ago

ಮೈಸೂರು | ವ್ಯಕ್ತಿ ಅನುಮಾನಾಸ್ಪದ ಸಾವು ; ಹೆಂಡತಿಯಿಂದಲೇ ಕೊಲೆಯ ಶಂಕೆ

ಮೈಸೂರು : ಇಲ್ಲಿನ ಕುವೆಂಪುನಗರದಲ್ಲಿ ನಡೆದಿದ್ದ ನಿತ್ಯಾನಂದ ಅವರ ಅನುಮಾನಾಸ್ಪದ ಸಾವಿನ ಪ್ರಕರಣ ಕೊಲೆ ಪ್ರಕರಣವಾಗಿ ತಿರುಗಿದ್ದು, ಪತ್ನಿ ಸುಶೀಲ…

4 hours ago

ಬಿಜೆಪಿ ವಕ್ತಾರ ಎಂ.ಜಿ.ಮಹೇಶ್‌ 6 ವರ್ಷ ಪಕ್ಷದಿಂದ ಉಚ್ಛಾಟನೆ

ಬೆಂಗಳೂರು : ಬಿಜೆಪಿ ಪಕ್ಷದ ರಾಷ್ಟೀಯ ಮತ್ತು ರಾಜ್ಯ ಮಟ್ಟದ ನಾಯಕರ ವಿರುದ್ಧ ಅವಹೇಳನಕಾರಿ ಹಾಗೂ ಆಧಾರರಹಿತ ಆರೋಪಗಳನ್ನು ಮಾಡಿ…

5 hours ago

ಅಸ್ಸಾಂನಲ್ಲಿ ಭೀಕರ ಪ್ರವಾಹ: ಜನಜೀವನ ಅಸ್ತವ್ಯಸ್ತ

ದಿಸ್ಪುರ್:‌ ನೆರೆಯ ರಾಜ್ಯ ಅರುಣಾಚಲ ಪ್ರದೇಶದಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಭೀಕರ ಪ್ರವಾಹ ಸೃಷ್ಟಿಯಾಗಿದೆ. ಭಾರೀ…

8 hours ago

ಕೈಕೊಟ್ಟ ಮುಂಗಾರು: ಕಬಿನಿ ಜಲಾಶಯದ ನೀರಿನ ಮಟ್ಟ ಮತ್ತಷ್ಟು ಕುಸಿತ

ಎಚ್.ಡಿ.ಕೋಟೆ: ಈ ಬಾರಿ ಮುಂಗಾರು ಮಳೆ ಕೈಕೊಟ್ಟ ಪರಿಣಾಮ ರಾಜ್ಯದ ಜಲಾಶಯಗಳು ಬರಿದಾಗುತ್ತಿವೆ. ರಾಜ್ಯದಲ್ಲಿ ಮೊದಲು ಭರ್ತಿಯಾಗುವ ಜಲಾಶಯ ಎಂಬ…

9 hours ago