ಬೆಂಗಳೂರು: ಮಾ.17 ರಂದು ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಹುಟ್ಟು ಹಬ್ಬವಿದ್ದು ಅದರ ಬೆನ್ನಲ್ಲೇ ಅಪ್ಪು ನಟನೆಯ ಆಲ್ಟೈಮ್ ಬ್ಲಾಕ್ಬಸ್ಟರ್ ಜಾಕಿ ಚಲನಚಿತ್ರವನ್ನು ಕೆಆರ್ಜಿ ಸ್ಟುಡಿಯೋ ಸುಮಾರು 120ಕ್ಕೂ ಹೆಚ್ಚು ಸ್ಕ್ರೀನ್ ಗಳಲ್ಲಿ ಮರು ಬಿಡುಗಡೆ ಮಾಡಿದೆ. ಈ ಸಿನಿಮಾವನ್ನು ಬಹುತೇಕ ಹೊಸ ಚಲನಚಿತ್ರವನ್ನು ರಿಲೀಸ್ ಮಾಡಿದಂತೆ ರಿಲೀಸ್ ಮಾಡಲಾಗಿದ್ದು, ಎಲ್ಲ ಕಡೆ ಉತ್ತಮವಾದ ಪತ್ರತಿಕ್ರಿಯೆ ಸಿಕ್ಕಿರುವುದು ಸಹಜವಾಗಿ ಖುಷಿ ಕೊಟ್ಟಿದೆ.
ಕೆಆರ್ಜಿ ಸ್ಟುಡಿಯೋದ ಕಾರ್ತಿಕ್ ಮತ್ತು ಅಪ್ಪುವಿನ ನಡುವೆ ಉತ್ತಮ ಭಾಂದವ್ಯವನ್ನು ಹೊಂದಿದ್ದು, ಈ ಚಿತ್ರವನ್ನು ಅದ್ದೂರಿಯಾಗಿ ವಿತರಣೆ ಮಾಡಿದ್ದಾರೆ. ಸೂರಿ ನಿರ್ದೇಶನದ ಈ ಚಿತ್ರ ಬೆಳಗ್ಗೆ 4.30ರಿಂದಲೇ ಪ್ರದರ್ಶನವನ್ನು ಆರಂಭಿಸಿದೆ. ಇದಕ್ಕೆಂದು ಅಭಿಮಾನಿಗಳು ಚಿತ್ರಮಂದಿರಗಳನ್ನು ಸಿಂಗಾರಗೊಳಿಸಿ, ಅಪ್ಪು ಕಟ್ಔಟ್ಗೆ ಹಾರ ಹಾಕಿ ಖುಷಿ ಪಟ್ಟಿದ್ದಾರೆ.
ಇನ್ನು ಪತಿ ನಟಿಸಿದ ಚಿತ್ರ ನೋಡುವುದಕ್ಕೆ ಅಶ್ವಿನಿ ಪುನೀತ್ ರಾಜ್ಕುಮಾರ್ ಅವರು ನಗರದ ಗಾಂಧಿನಗರದಲ್ಲಿರುವ ನರ್ತಕಿ ಚಿತ್ರಮಂದಿರಕ್ಕೆ ಭೇಟಿ ನೀಡಿದ್ದಾರೆ. ಈ ಸಂದರ್ಭದಲ್ಲಿ ಅಶ್ವಿನಿಯವರು ತೆರೆಯ ಮೇಲೆ ಪುನೀತ್ ರಾಜ್ ಕುಮಾರ್ ಅವರನ್ನು ನೋಡಿ ಭಾವುಕರಾಗಿದ್ದು, ಈ ದೃಶ್ಯವು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ವೇಳೆ ದೊಡ್ಮನೆಯ ವಿನಯ್ ರಾಜ್ ಕುಮಾರ್, ಧೀರೇನ್ ಕುಮಾರ್, ಧನ್ಯರಾಮ್ ಕುಮಾರ್ ಮತ್ತು ವಿತರಕ ಕಾರ್ತಿಕ್ ಗೌಡ ಸೇರಿದಂತೆ ಆಪ್ತರೊಡನೆ ಸಿನಿಮಾ ವೀಕ್ಷಿಸಿದ್ದಾರೆ.
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…
ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…
ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…
ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…
ಗೋವಿಂದರಾಜು ಲಕ್ಷ್ಮೀಪುರ, ಇಂಗ್ಲಿಷ್ ಸಹಪ್ರಾಧ್ಯಾಪಕ, ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು, ಮೈಸೂರು ಐಪಿಎಸ್ ಅಧಿಕಾರಿ ಚೆನ್ನಬಸವಣ್ಣ ಅವರ ಅಲ್ಕೆಬುಲಾನದ ಹೃದಯದಿಂದ…
ವೈಡ್ ಆಂಗಲ್ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ‘ಫಸ್ಟ್ , ಯು ಹ್ಯಾವ್ ಟು ಬಿಲೀವ್ ಇನ್ ಇಟ್, ದೆನ್…