ಮನರಂಜನೆ

ಜಾಕಿ ರಿ ರಿಲೀಸ್; ತೆರೆ ಮೇಲೆ ಅಪ್ಪು ನೋಡಿ ಭಾವುಕರಾದ ಅಶ್ವಿನಿ ಪುನೀತ್‌ ರಾಜ್‌ಕುಮಾರ್

ಬೆಂಗಳೂರು: ಮಾ.17 ರಂದು ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಹುಟ್ಟು ಹಬ್ಬವಿದ್ದು ಅದರ ಬೆನ್ನಲ್ಲೇ ಅಪ್ಪು ನಟನೆಯ ಆಲ್‌ಟೈಮ್‌ ಬ್ಲಾಕ್‌ಬಸ್ಟರ್‌ ಜಾಕಿ ಚಲನಚಿತ್ರವನ್ನು ಕೆಆರ್‌ಜಿ ಸ್ಟುಡಿಯೋ ಸುಮಾರು 120ಕ್ಕೂ ಹೆಚ್ಚು ಸ್ಕ್ರೀನ್ ಗಳಲ್ಲಿ ಮರು ಬಿಡುಗಡೆ ಮಾಡಿದೆ. ಈ ಸಿನಿಮಾವನ್ನು ಬಹುತೇಕ ಹೊಸ ಚಲನಚಿತ್ರವನ್ನು ರಿಲೀಸ್ ಮಾಡಿದಂತೆ ರಿಲೀಸ್ ಮಾಡಲಾಗಿದ್ದು, ಎಲ್ಲ ಕಡೆ ಉತ್ತಮವಾದ ಪತ್ರತಿಕ್ರಿಯೆ ಸಿಕ್ಕಿರುವುದು ಸಹಜವಾಗಿ ಖುಷಿ ಕೊಟ್ಟಿದೆ.

ಕೆಆರ್‌ಜಿ ಸ್ಟುಡಿಯೋದ ಕಾರ್ತಿಕ್ ಮತ್ತು ಅಪ್ಪುವಿನ ನಡುವೆ ಉತ್ತಮ ಭಾಂದವ್ಯವನ್ನು ಹೊಂದಿದ್ದು, ಈ ಚಿತ್ರವನ್ನು ಅದ್ದೂರಿಯಾಗಿ ವಿತರಣೆ ಮಾಡಿದ್ದಾರೆ. ಸೂರಿ ನಿರ್ದೇಶನದ ಈ ಚಿತ್ರ ಬೆಳಗ್ಗೆ 4.30ರಿಂದಲೇ ಪ್ರದರ್ಶನವನ್ನು ಆರಂಭಿಸಿದೆ. ಇದಕ್ಕೆಂದು ಅಭಿಮಾನಿಗಳು ಚಿತ್ರಮಂದಿರಗಳನ್ನು ಸಿಂಗಾರಗೊಳಿಸಿ, ಅಪ್ಪು ಕಟ್‌ಔಟ್‌ಗೆ ಹಾರ ಹಾಕಿ ಖುಷಿ ಪಟ್ಟಿದ್ದಾರೆ.

ಇನ್ನು ಪತಿ ನಟಿಸಿದ ಚಿತ್ರ ನೋಡುವುದಕ್ಕೆ ಅಶ್ವಿನಿ ಪುನೀತ್ ರಾಜ್‌ಕುಮಾರ್‌ ಅವರು ನಗರದ ಗಾಂಧಿನಗರದಲ್ಲಿರುವ ನರ್ತಕಿ ಚಿತ್ರಮಂದಿರಕ್ಕೆ ಭೇಟಿ ನೀಡಿದ್ದಾರೆ. ಈ ಸಂದರ್ಭದಲ್ಲಿ ಅಶ್ವಿನಿಯವರು ತೆರೆಯ ಮೇಲೆ ಪುನೀತ್ ರಾಜ್ ಕುಮಾರ್ ಅವರನ್ನು ನೋಡಿ ಭಾವುಕರಾಗಿದ್ದು, ಈ ದೃಶ್ಯವು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ವೇಳೆ ದೊಡ್ಮನೆಯ ವಿನಯ್ ರಾಜ್ ಕುಮಾರ್, ಧೀರೇನ್ ಕುಮಾರ್, ಧನ್ಯರಾಮ್ ಕುಮಾರ್ ಮತ್ತು ವಿತರಕ ಕಾರ್ತಿಕ್ ಗೌಡ ಸೇರಿದಂತೆ ಆಪ್ತರೊಡನೆ ಸಿನಿಮಾ ವೀಕ್ಷಿಸಿದ್ದಾರೆ.

ಮುಳ್ಳೂರು ಶಿವಪ್ರಸಾದ್

ಮೂಲತಃ ನಂಜನಗೂಡು ತಾಲೂಕಿನ ಮುಳ್ಳೂರು ಗ್ರಾಮದವನಾದ ನಾನು ನಂಜನಗೂಡಿನ ಕೆಎಚ್ ಬಿ ಕಾಲೋನಿಯಲ್ಲಿ ವಾಸವಿದ್ದೇನೆ. ಮೈಸೂರು ಮಹಾರಾಜ ಕಾಲೇಜಿನಲ್ಲಿ ಬಿ.ಎ. ಪದವಿ ಪಡೆದ ನನಗೆ ಪತ್ರಿಕಾರಂಗದಲ್ಲಿ 20 ವರ್ಷಗಳ ಅನುಭವವಿದೆ. ನಂಜನಗೂಡಿನಲ್ಲಿ ಕಪಿಲ ವಾರ್ತೆ ದಿನಪತ್ರಿಕೆಯಲ್ಲಿ ಕೆಲಸ ಆರಂಭಿಸಿ, ನಿಜದನಿ, ಸತ್ಯಪ್ರಭ ಪತ್ರಿಕೆಗಳಲ್ಲೂ ವರದಿಗಾರಿಕೆ, 2012 ಜನವರಿ 4ರಂದು ಆಂದೋಲನ ದಿನಪತ್ರಿಕೆ ಬಳಗಕ್ಕೆ ಸೇರ್ಪಡೆಯಾಗಿದ್ದು, ಅದರಲ್ಲಿಯೇ ಮುಂದುವರಿದಿದ್ದೇನೆ. ದಿನಪತ್ರಿಕೆಗಳು, ಕಾದಂಬರಿಗಳನ್ನು ಓದುವ ಹವ್ಯಾಸ. ಮೊಬೈಲ್: 98453 41388

Recent Posts

ಮೇ.3ರಂದು ನಡೆದಿದ್ದ ನೀಟ್‌ ಪರೀಕ್ಷೆ ರದ್ದು

ನವದೆಹಲಿ: ಮೇ.3ರಂದು ನಡೆದಿದ್ದ ನೀಟ್‌ ಯುಜಿ ಪರೀಕ್ಷೆಯನ್ನು ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ ರದ್ದುಗೊಳಿಸಿದೆ. ಪ್ರಶ್ನೆ ಪತ್ರಿಕೆ ಸೋರಿಕೆಯಾದ ಹಿನ್ನೆಲೆಯಲ್ಲಿ ಎನ್‌ಜಿಎ…

54 mins ago

ಅಸ್ಸಾಂ ಸಿಎಂ ಆಗಿ ಹಿಮಂತ ಬಿಸ್ವಾ ಶರ್ಮಾ ಪ್ರಮಾಣವಚನ ಸ್ವೀಕಾರ

ಗುವಾಹಟಿ: ಹಿಮಂತ ಬಿಸ್ವಾ ಶರ್ಮಾ ಅವರು ಸತತ ಎರಡನೇ ಬಾರಿಗೆ ಅಸ್ಸಾಂನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಗುವಾಹಟಿಯ ಖಾನಾಪಾರಾದಲ್ಲಿರುವ ಪಶುವೈದ್ಯಕೀಯ…

2 hours ago

SIR ಮೂಲಕ ರಾಜ್ಯದ 86 ಲಕ್ಷ ಮತದಾರರ ಹಕ್ಕಿಗೆ ಕನ್ನ: ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್‌ ಆರೋಪ

ಮೈಸೂರು: SIR ಮೂಲಕ ರಾಜ್ಯದ 86 ಲಕ್ಷ ಮತದಾರರ ಹಕ್ಕಿಗೆ ಕನ್ನ ಹಾಕುವ ಪರಿಸ್ಥಿತಿ ನಿರ್ಮಾಣವಾಗಲಿದೆ ಎಂದು ಕೆಪಿಸಿಸಿ ವಕ್ತಾರ…

3 hours ago

ತಮಿಳುನಾಡು ಸ್ಪೀಕರ್‌ ಆಗಿ ಶಾಸಕ ಪ್ರಭಾಕರ್‌ ಅವಿರೋಧ ಆಯ್ಕೆ

ಚೆನ್ನೈ: ತಮಿಳುನಾಡು ವಿಧಾನಸಭಾ ಸ್ಪೀಕರ್‌ ಆಗಿ ಶಾಸಕ ಜೆಸಿಡಿ ಪ್ರಭಾಕರ್‌ ಅವರಿಂದು ಸರ್ವಾನುಮತದಿಂದ ಆಯ್ಕೆಯಾದರು. ಸಿಎಂ ವಿಜಯ್‌ ಅವರು ಪ್ರಭಾಕರ್‌…

4 hours ago

90 ಅಡಿಗೆ ಕುಸಿದ ಕೆಆರ್‌ಎಸ್‌ ನೀರಿನ ಮಟ್ಟ

ಮಂಡ್ಯ: ರಾಜ್ಯದಲ್ಲಿ ತಾಪಮಾನ ಏರಿಕೆಯಾಗುತ್ತಿದ್ದಂತೆ ಕೆಆರ್‌ಎಸ್‌ ಜಲಾಶಯದ ನೀರಿನ ಮಟ್ಟ 90 ಅಡಿಗೆ ಕುಸಿದಿದೆ. 124.80 ಅಡಿ ಗರಿಷ್ಠ ಮಟ್ಟವನ್ನು…

4 hours ago

ವಿಜಯ್ ಸಿಎಂ ಆದ ಹಿನ್ನೆಲೆ: ಗೋಪಿನಾಥಂನಲ್ಲಿ ಅಭಿಮಾನಿಗಳಿಂದ ಸಂಭ್ರಮಾಚರಣೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಮಿಳುನಾಡಿನ ಮುಖ್ಯಮಂತ್ರಿಯಾಗಿ ಟಿವಿಕೆ ಪಕ್ಷದ ಮುಖ್ಯಸ್ಥ ಹಾಗೂ ನಟ ಸಿ…

5 hours ago