ಮನರಂಜನೆ

ಪುನೀತ್ ಅಭಿಮಾನಿಯ ಕಥೆ ಹೇಳುವ ‘ಪುನೀತ್‍ ನಿವಾಸ’

ಪುನೀತ್ ರಾಜಕುಮಾರ್‍ ನೆನಪಲ್ಲಿ ಈಗಾಗಲೇ ಕೆಲವು ಚಿತ್ರಗಳು ಪ್ರಾರಂಭವಾಗಿದ್ದು, ಆ ಚಿತ್ರಗಳು ಇನ್ನಷ್ಟೇ ಬಿಡುಗಡೆ ಆಗಬೇಕಿವೆ. ಈ ಮಧ್ಯೆ, ಪುನೀತ್‍ ಅಭಿಮಾನಿಯ ಕಥೆ ಹೇಳುವ ‘ಪುನೀತ್‍ ನಿವಾಸ’ ಸದ್ದಿಲ್ಲದೆ ಮುಗಿದಿದ್ದು, ಇತ್ತೀಚೆಗೆ ಚಿತ್ರದ ಟ್ರೇಲರ್‍ ಬಿಡುಗಡೆಯಾಗಿದೆ.

‘ಪುನೀತ್‍ ನಿವಾಸ’ ಚಿತ್ರದಲ್ಲಿ ಮಾಸ್ಟರ್ ವಿಠ್ಠಲ್, ಅಭಿಜಿತ್‍, ಶಂಕರ್ ಭಟ್, ಎಂ.ಎಸ್. ಉಮೇಶ್, ಡಿಂಗ್ರಿ ನಾಗರಾಜ್, ಟೆನ್ನಿಸ್ ಕೃಷ್ಣ, ರೇಖಾ ದಾಸ್, ಗಣೇಶ್‌ ರಾವ್ ಕೇಸರಕರ್ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದು, ಈ ಚಿತ್ರಕ್ಕೆ ನಾಗೇಂದ್ರ ಪ್ರಸಾದ್ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಶ್ರೀ ಪಂಚಮಿ ಸಿನಿ ಕ್ರಿಯೇಷನ್ಸ್ ಮೂಲಕ ಎಸ್.ಮೋಹನ್ ಈ ಚಿತ್ರವನ್ನು ನಿರ್ಮಿಸಿದ್ದಾರೆ.

ಇದು ಮಲ್ಲು ಎಂಬ ಪುನೀತ್‍ ಅಭಿಮಾನಿಯ ಕಥೆಯಂತೆ. ಒಂದು ಸಿನಿಮಾ ಮಾಡಬೇಕೆಂದು ಹೊರಟ ಆತ ಕೊನೆಗೂ ಆ ಸಿನಿಮಾ ಮಾಡುತ್ತಾನಾ? ಪುನೀತ್‌ರ ಆದರ್ಶಗಳನ್ನು ಆತ ಹೇಗೆ ಪಾಲಿಸುತ್ತಾನೆ ಎಂಬುದನ್ನು ಈ ಚಿತ್ರದ ಮೂಲಕ ಹೇಳುವ ಪ್ರಯತ್ನ ಮಾಡಲಾಗಿದೆ. ಈ ಚಿತ್ರದ ಶೀರ್ಷಿಕೆಯನ್ನು ನಾಲ್ಕು ವರ್ಷಗಳ ಹಿಂದೆಯೇ ನಿರ್ಮಾಪಕ ಮೋಹನ್‍ ದಾಖಲಿಸಿದ್ದರಂತೆ. ‘2021ರಲ್ಲೇ ನಾನು ಈ ಶೀರ್ಷಿಕೆ ರಿಜಿಸ್ಟರ್ ಮಾಡಿಸಿದ್ದೆ. ಅದಕ್ಕೆ ತಕ್ಕಂತೆ 50 ಕಥೆಗಳನ್ನು ಮಾಡಿದೆ. ಆದರೆ, ಯಾವುದೂ ಸರಿಹೊಂದಲಿಲ್ಲ, ಕೊನೆಗೆ ಈ ಕಥೆಯನ್ನು ಚಿತ್ರರೂಪಕ್ಕೆ ತಂದಿದ್ದೇವೆ. ಸಿನಿಮಾ ಮಾಡಬೇಕೆಂದು ಹಣ ಕೂಡಿಟ್ಟುಕೊಂಡಿದ್ದ ಒಬ್ಬ ಬಡ ಹುಡುಗ ಕೊನೆಗೆ ತನ್ನ ಕನಸಿನ ಸಿನಿಮಾವನ್ನು ಹೇಗೆ ನಿರ್ಮಿಸುತ್ತಾನೆ ಅನ್ನೋದೇ ಚಿತ್ರದ ಕಥೆ’ ಎಂದರು.

ಈ ಚಿತ್ರದ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿರುವ ನಟ ಅಭಿಜಿತ್ ಮಾತನಾಡಿ, ‘ಈ ಶೀರ್ಷಿಕೆಗೆ ದೊಡ್ಡ ಪವರ್ ಇದೆ. ಶೀರ್ಷಿಕೆ ಹೇಳಿದಾಗ ನನಗೂ ರೋಮಾಂಚನವಾಗಿ, ತಕ್ಷಣವೇ ಒಪ್ಪಿಕೊಂಡೆ. ನಾನು ಪುನೀತ್ ಅವರ ಜತೆ ನಟಿಸುವುದಕ್ಕೆ ಸಾಧ್ಯವಾಗಿರಲಿಲ್ಲ. ಈಗ ಅವರ ಹೆಸರಿನ ಚಿತ್ರದಲ್ಲಿ ಅಭಿನಯಿಸಿದ್ದೇನೆ. ನಿರ್ಮಾಪಕ ಮೋಹನ್ ಅವರು ಪುನೀತ್‌ರ ಆದರ್ಶಗಳನ್ನು ಮೈಗೂಡಿಸಿಕೊಂಡಿದ್ದಾರೆ. ಚಿತ್ರಕ್ಕಾಗಿ ಒಂದು ನಿಜವಾದ ಮನೆಯನ್ನೇ ಕಟ್ಟಿಸಿದ್ದಾರೆ’ ಎಂದು ಹೇಳಿದರು.

ಈ ಚಿತ್ರಕ್ಕೆ ಎಂ.ಎನ್‍. ಕೃಪಾಕರ್‍ ಸಂಗೀತ ಸಂಯೋಜಿಸಿದ್ದಾರೆ. ಚಿತ್ರದ ತಾಯಿ ಸೆಂಟಿಮೆಂಟ್‍ ಹಾಡನನ್ನು ಅಭಿಜಿತ್‍ ಹಾಡಿದ್ದಾರೆ. ಚಿತ್ರಕ್ಕೆ ಬಾಲು ಛಾಯಾಗ್ರಹಣ, ಜೆಮ್ ಶಿವು ಸಂಭಾಷಣೆ, ಮುತ್ತುರಾಜ್ ಅವರ ಸಂಕಲನವಿದೆ.

ಆಂದೋಲನ ಡೆಸ್ಕ್

Recent Posts

ಮಾನವ ಕಲಿಯಬೇಕಾದ ಬದುಕಿನ ಪಾಠಗಳು

ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ  ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…

4 hours ago

ಸಾವಿರಾರು ಹೆರಿಗೆ ಮಾಡಿಸಿದ ಫ್ಲಾರೆನ್ಸ್ ನೈಟಿಂಗೇಲ್ ಗೀತಾ ‘ಮಾ’

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…

4 hours ago

ಸಿದ್ದರಾಮಯ್ಯ ಸಿದ್ಧಾಂತದ ಹೋರಾಟಕ್ಕೆ ಅಂತ್ಯವೆಂಬುದೇ ಇಲ್ಲ

ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…

4 hours ago

ಕಣ್ಮನ ಸೆಳೆಯುತ್ತಿದೆ ಮಲ್ಲಳ್ಳಿ ಜಲಪಾತ!

ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…

4 hours ago

ಓದುಗರ ಪತ್ರ: ಸ್ಥಾನ…ಮಾನ !

ಸ್ಥಾನ...ಮಾನ ! ಅಳೆದೂ ಸುರಿದು ಅಲ್ಲಿಂದಿಲ್ಲಿಗೆ ಓಡಾಡಿ ಕೊಟ್ಟೂ ಕೊಡಲಾಗದೆ ಬಿಟ್ಟೂ ಇರಲಾಗದೆ ಉಳಿಸಿಕೊಂಡಿರುವುದು ಒಂದೇ ಒಂದು ಮಂತ್ರಿ ಸ್ಥಾನ…

4 hours ago

ಓದುಗರ ಪತ್ರ: ಸಚಿವ ಸ್ಥಾನ: ಹಿರಿಯರ ನಿರ್ಲಕ್ಷ್ಯ ಸರಿಯಲ್ಲ

ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ನೇತೃತ್ವದ ಮಂತ್ರಿಮಂಡಲ ವಿಸ್ತರಣೆಯಾಗಿ ೨೦ ಸ್ಥಾನಗಳ ಪೈಕಿ ೧೯ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕಾರ…

4 hours ago