ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷ ನರಸಿಂಹಲು ಅವರ ಮಗ ರವಿಕಿರಣ್ ಈ ಹಿಂದೆ ‘ತಾರಕಾಸುರ’ ಎಂಬ ಚಿತ್ರದಲ್ಲಿ ನಾಯಕನಾಗಿ ಕಾಣಿಸಿಕೊಂಡಿದ್ದರು. ಈಗ ‘ಅಪ್ಪು ಅಭಿಮಾನಿ’ಯಾಗಿ ಅವರು ಹೊಸ ಚಿತ್ರವೊಂದರ ಮೂಲಕ ಬರುತ್ತಿದ್ದಾರೆ.
‘ಅಪ್ಪು ಅಭಿಮಾನಿ’ ಎಂಬ ಹೆಸರೇ ಹೇಳುವಂತೆ, ಈ ಚಿತ್ರದಲ್ಲಿ ರವಿಕಿರಣ್, ಪುನೀತ್ ಅಭಿಮಾನಿಯಾಗಿ ಕಾಣಿಸಿಕೊಂಡಿದ್ದಾರೆ. ಅಪ್ಪು ಅಭಿಮಾನಿಯೊಬ್ಬ ಜೀವನದಲ್ಲಿ ಏನೆಲ್ಲಾ ಸಾಧಿಸುತ್ತಾನೆ ಎಂದು ಸಾರುವ ಈ ಚಿತ್ರದಲ್ಲಿ ರವಿಕಿರಣ್ ಜೊತೆಗೆ ರಾಘವೇಂದ್ರ ರಾಜಕುಮಾರ್, ಶರತ್ ಲೋಹಿತಾಶ್ವ, ಸುಮನ್, ಚಿದಾನಂದ್, ಥ್ರಿಲ್ಲರ್ ಮಂಜು, ಶಿವಪ್ಪ ಕುಡ್ಲೂರು ಮುಂತಾದವರು ನಟಿಸುತ್ತಿದ್ದಾರೆ.
ಬಿಡುಗಡೆಗೆ ಸಿದ್ಧವಾಗುತ್ತಿರುವ ಈ ಚಿತ್ರದ ಪ್ರಚಾರದ ಮೊದಲ ಹಂತವಾಗಿ ಇತ್ತೀಚೆಗೆ ಚಿತ್ರತಂಡವು ನರ್ತಕಿ ಚಿತ್ರಮಂದಿರದ ಎದುರು ಪುನೀತ್ ಅವರ 50 ಅಡಿ ಕಟೌಟ್ ನಿಲ್ಲಿಸಿದೆ. ಪುನೀತ್ ನಾಯಕನಾಗಿ ಅಭಿನಯಿಸಿರುವ ಮೊದಲ ಚಿತ್ರ ‘ಅಪ್ಪು’ ಇತ್ತೀಚೆಗೆ ಮರುಬಿಡುಗಡೆ ಮಾಡಲಾಗಿದೆ. ಈ ಸಂದರ್ಭದಲ್ಲಿ ‘ಅಪ್ಪು ಅಭಿಮಾನಿ’ ಚಿತ್ರತಂಡದ ವತಿಯಿಂದ ‘ಅಪ್ಪು ಅಭಿಮಾನಿ’ ಚಿತ್ರದ 50 ಅಡಿ ಕಟೌಟ್ ನಿಲ್ಲಿಸಲಾಗಿದೆ. ಚಿತ್ರದಲ್ಲಿ ನಾಯಕ ರವಿ ಕಿರಣ್, ಪುನೀತ್ ರಾಜಕುಮಾರ್ ಅವರ ಅಪ್ಪಟ ಅಭಿಮಾನಿಯಾಗಿರುವುದರಿಂದ ಕಟ್ಔಟ್ನಲ್ಲಿ ಅಪ್ಪು ನಂತರ ನಾಯಕನ ಚಿತ್ರವೂ ಇದೆ.
ಈ ಸಂದರ್ಭದಲ್ಲಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ನರಸಿಂಹಲು, ರಾಘವೇಂದ್ರ ರಾಜಕುಮಾರ್, ಸಾ.ರಾ. ಗೋವಿಂದು, ಎಂ.ಎನ್. ಸುರೇಶ್ ಮುಂತಾದವರು ಹಾಜರಿದ್ದರು.
ಅಕ್ಷಯ ಮೂವಿ ಫ್ಯಾಕ್ಟರಿ ಸಂಸ್ಥೆ ನಿರ್ಮಿಸಿರುವ ಈ ಚಿತ್ರವನ್ನು ಡಾ. ರೆಡ್ಡಿ ನಿರ್ದೇಶನ ಮಾಡಿದ್ದಾರೆ. ಶೇಖ್ ಮುನೀರ್ ಪಾಷಾ ಕಥೆ, ಮಣಿಕಾಂತ್ ಕದ್ರಿ ಸಂಗೀತ ಈ ಚಿತ್ರಕ್ಕಿದೆ.
ಬೆಂಗಳೂರು: ಬಜೆಟ್ ಅಧಿವೇಶನದ ನಡುವೆಯೇ ಸಿಎಂ ಸಿದ್ದರಾಮಯ್ಯ ನಾಳೆ ಮೈಸೂರಿಗೆ ಆಗಮಿಸಲಿದ್ದಾರೆ. ನಾಳೆ ಬೆಳಿಗ್ಗೆ 10 ಗಂಟೆಗೆ ಎಚ್ಎಎಲ್ ವಿಮಾನ…
ಬೆಂಗಳೂರು: ಇರಾನ್-ಇಸ್ರೇಲ್ ಯುದ್ಧ ಭಾರತದ ಮೇಲೂ ಪರಿಣಾಮ ಬೀರಿದ್ದು, ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದೆ. ಈ ಬಗ್ಗೆ ಗೃಹ…
ಟೆಹರಾನ್: ಇರಾನ್ ಸಂಘರ್ಷ ಹನ್ನೊಂದನೇ ದಿನಕ್ಕೆ ಕಾಲಿಟ್ಟಿದೆ. ಆದರೆ ಅಮೇರಿಕಾದ ಶ್ವೇತಭವನದ ಹೇಳಿಕೆಗಳನ್ನು ಗಮನಿಸಿದರೆ, ಈ ಯುದ್ಧದ ಅಂತ್ಯ ಯಾವಾಗ…
ಭೇರ್ಯ ಮಹೇಶ್: ಕೆ.ಆರ್.ನಗರ ತಾಲ್ಲೂಕು ವರದಿಗಾರರು ಕೆ.ಆರ್.ನಗರ: ಧಾರ್ಮಿಕ ಸ್ಥಳಗಳು ಕಟುಕರ ಕೇರಿಗಳಾಗಬಾರದು. ಜೀವ ತೆಗೆಯುವ ಮೃತ್ಯು ಕೂಪವಾಗಬಾರದು, ಪ್ರಾಣಿಹಿಂಸೆ…
ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಪ್ರಸಿದ್ಧ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಕಾಣಿಸಿಕೊಂಡಿದ್ದು, ಭಕ್ತರಲ್ಲಿ…
ಟೆಹರಾನ್: ಕಳೆದ ಕೆಲ ದಿನಗಳಿಂದ ಇರಾನ್ ಮೇಲೆ ಇಸ್ರೇಲ್ ಹಾಗೂ ಅಮೇರಿಕಾ ಜಂಟಿ ದಾಳಿ ನಡೆಸುತ್ತಿರುವ ಪರಿಣಾಮ ಅಕ್ಷರಶಃ ಇರಾನ್…