ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷ ನರಸಿಂಹಲು ಅವರ ಮಗ ರವಿಕಿರಣ್ ಈ ಹಿಂದೆ ‘ತಾರಕಾಸುರ’ ಎಂಬ ಚಿತ್ರದಲ್ಲಿ ನಾಯಕನಾಗಿ ಕಾಣಿಸಿಕೊಂಡಿದ್ದರು. ಈಗ ‘ಅಪ್ಪು ಅಭಿಮಾನಿ’ಯಾಗಿ ಅವರು ಹೊಸ ಚಿತ್ರವೊಂದರ ಮೂಲಕ ಬರುತ್ತಿದ್ದಾರೆ.
‘ಅಪ್ಪು ಅಭಿಮಾನಿ’ ಎಂಬ ಹೆಸರೇ ಹೇಳುವಂತೆ, ಈ ಚಿತ್ರದಲ್ಲಿ ರವಿಕಿರಣ್, ಪುನೀತ್ ಅಭಿಮಾನಿಯಾಗಿ ಕಾಣಿಸಿಕೊಂಡಿದ್ದಾರೆ. ಅಪ್ಪು ಅಭಿಮಾನಿಯೊಬ್ಬ ಜೀವನದಲ್ಲಿ ಏನೆಲ್ಲಾ ಸಾಧಿಸುತ್ತಾನೆ ಎಂದು ಸಾರುವ ಈ ಚಿತ್ರದಲ್ಲಿ ರವಿಕಿರಣ್ ಜೊತೆಗೆ ರಾಘವೇಂದ್ರ ರಾಜಕುಮಾರ್, ಶರತ್ ಲೋಹಿತಾಶ್ವ, ಸುಮನ್, ಚಿದಾನಂದ್, ಥ್ರಿಲ್ಲರ್ ಮಂಜು, ಶಿವಪ್ಪ ಕುಡ್ಲೂರು ಮುಂತಾದವರು ನಟಿಸುತ್ತಿದ್ದಾರೆ.
ಬಿಡುಗಡೆಗೆ ಸಿದ್ಧವಾಗುತ್ತಿರುವ ಈ ಚಿತ್ರದ ಪ್ರಚಾರದ ಮೊದಲ ಹಂತವಾಗಿ ಇತ್ತೀಚೆಗೆ ಚಿತ್ರತಂಡವು ನರ್ತಕಿ ಚಿತ್ರಮಂದಿರದ ಎದುರು ಪುನೀತ್ ಅವರ 50 ಅಡಿ ಕಟೌಟ್ ನಿಲ್ಲಿಸಿದೆ. ಪುನೀತ್ ನಾಯಕನಾಗಿ ಅಭಿನಯಿಸಿರುವ ಮೊದಲ ಚಿತ್ರ ‘ಅಪ್ಪು’ ಇತ್ತೀಚೆಗೆ ಮರುಬಿಡುಗಡೆ ಮಾಡಲಾಗಿದೆ. ಈ ಸಂದರ್ಭದಲ್ಲಿ ‘ಅಪ್ಪು ಅಭಿಮಾನಿ’ ಚಿತ್ರತಂಡದ ವತಿಯಿಂದ ‘ಅಪ್ಪು ಅಭಿಮಾನಿ’ ಚಿತ್ರದ 50 ಅಡಿ ಕಟೌಟ್ ನಿಲ್ಲಿಸಲಾಗಿದೆ. ಚಿತ್ರದಲ್ಲಿ ನಾಯಕ ರವಿ ಕಿರಣ್, ಪುನೀತ್ ರಾಜಕುಮಾರ್ ಅವರ ಅಪ್ಪಟ ಅಭಿಮಾನಿಯಾಗಿರುವುದರಿಂದ ಕಟ್ಔಟ್ನಲ್ಲಿ ಅಪ್ಪು ನಂತರ ನಾಯಕನ ಚಿತ್ರವೂ ಇದೆ.
ಈ ಸಂದರ್ಭದಲ್ಲಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ನರಸಿಂಹಲು, ರಾಘವೇಂದ್ರ ರಾಜಕುಮಾರ್, ಸಾ.ರಾ. ಗೋವಿಂದು, ಎಂ.ಎನ್. ಸುರೇಶ್ ಮುಂತಾದವರು ಹಾಜರಿದ್ದರು.
ಅಕ್ಷಯ ಮೂವಿ ಫ್ಯಾಕ್ಟರಿ ಸಂಸ್ಥೆ ನಿರ್ಮಿಸಿರುವ ಈ ಚಿತ್ರವನ್ನು ಡಾ. ರೆಡ್ಡಿ ನಿರ್ದೇಶನ ಮಾಡಿದ್ದಾರೆ. ಶೇಖ್ ಮುನೀರ್ ಪಾಷಾ ಕಥೆ, ಮಣಿಕಾಂತ್ ಕದ್ರಿ ಸಂಗೀತ ಈ ಚಿತ್ರಕ್ಕಿದೆ.
ಹನೂರು: ತಾಲ್ಲೂಕಿನ ಮಾರ್ಟಳ್ಳಿ ಸಮೀಪದ ವಡ್ಡರದೊಡ್ಡಿ ಗ್ರಾಮದಲ್ಲಿ ಮನೆಯೊಂದರಲ್ಲಿ ಕಳ್ಳತನ ನಡೆದಿರುವ ಕುರಿತು ವರದಿಯಾಗಿದೆ. ಗ್ರಾಮದ ನಿವಾಸಿ ಸೆಲ್ವಂ ಅವರು…
ಹೊಸದಿಲ್ಲಿ: ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ರಾಜ್ಯ ಸಚಿವ ಜಾರ್ಜ್ ಕುರಿಯನ್ ಅವರು ಕೇಂದ್ರ ಸಚಿವ ಸಂಪುಟಕ್ಕೆ ರಾಜೀನಾಮೆ ನೀಡಿದ್ದಾರೆ. ರಾಷ್ಟ್ರಪತಿ…
ಗುಂಡ್ಲುಪೇಟೆ: ಪಟ್ಟಣದ ಹೊರವಲಯದ ಕಲ್ಯಾಣಿ ಕೊಳದ ಬಳಿ ಸೇತುವೆಯಿಂದ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿರುವ ಘಟನೆ ನಡೆದಿದೆ. ಮಂಡ್ಯ ಮೂಲದ…
ಸೋಮವಾರಪೇಟೆ: ಶಾಂತಳ್ಳಿ ಹೋಬಳಿ ವ್ಯಾಪ್ತಿಯ ಗ್ರಾಮಗಳಲ್ಲಿ ಕಾಡಾನೆಗಳ ಹಾವಳಿ ಮತ್ತೆ ಮುಂದುವರೆದಿದ್ದು, ಬೆಳೆ ನಷ್ಟದ ಪ್ರಮಾಣ ಹೆಚ್ಚಾಗುತ್ತಿದೆ. ಕಳೆದ ಎರಡು…
ಬೆಂಗಳೂರು: ರಾಜ್ಯದಲ್ಲಿ ಒಂದು ವಾರ ಮುಂಗಾರು ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜೂನ್.28ರವರೆಗೂ ಕರ್ನಾಟಕದಲ್ಲಿ ಮಳೆ…
ನವದೆಹಲಿ: ನೀಟ್ ಮರು ಪರೀಕ್ಷೆ ಅಂಗವಾಗಿ ಭಾರತದಲ್ಲಿ ಟೆಲಿಗ್ರಾಂ ಮೇಲೆ ಹೇರಲಾಗಿದ್ದ ನಿಷೇಧವನ್ನು ತೆರವುಗೊಳಿಸಲಾಗಿದೆ. ಸದ್ಯ ಪ್ಲೇ ಸ್ಟೋರ್ ಹಾಗೂ…