ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷ ನರಸಿಂಹಲು ಅವರ ಮಗ ರವಿಕಿರಣ್ ಈ ಹಿಂದೆ ‘ತಾರಕಾಸುರ’ ಎಂಬ ಚಿತ್ರದಲ್ಲಿ ನಾಯಕನಾಗಿ ಕಾಣಿಸಿಕೊಂಡಿದ್ದರು. ಈಗ ‘ಅಪ್ಪು ಅಭಿಮಾನಿ’ಯಾಗಿ ಅವರು ಹೊಸ ಚಿತ್ರವೊಂದರ ಮೂಲಕ ಬರುತ್ತಿದ್ದಾರೆ.
‘ಅಪ್ಪು ಅಭಿಮಾನಿ’ ಎಂಬ ಹೆಸರೇ ಹೇಳುವಂತೆ, ಈ ಚಿತ್ರದಲ್ಲಿ ರವಿಕಿರಣ್, ಪುನೀತ್ ಅಭಿಮಾನಿಯಾಗಿ ಕಾಣಿಸಿಕೊಂಡಿದ್ದಾರೆ. ಅಪ್ಪು ಅಭಿಮಾನಿಯೊಬ್ಬ ಜೀವನದಲ್ಲಿ ಏನೆಲ್ಲಾ ಸಾಧಿಸುತ್ತಾನೆ ಎಂದು ಸಾರುವ ಈ ಚಿತ್ರದಲ್ಲಿ ರವಿಕಿರಣ್ ಜೊತೆಗೆ ರಾಘವೇಂದ್ರ ರಾಜಕುಮಾರ್, ಶರತ್ ಲೋಹಿತಾಶ್ವ, ಸುಮನ್, ಚಿದಾನಂದ್, ಥ್ರಿಲ್ಲರ್ ಮಂಜು, ಶಿವಪ್ಪ ಕುಡ್ಲೂರು ಮುಂತಾದವರು ನಟಿಸುತ್ತಿದ್ದಾರೆ.
ಬಿಡುಗಡೆಗೆ ಸಿದ್ಧವಾಗುತ್ತಿರುವ ಈ ಚಿತ್ರದ ಪ್ರಚಾರದ ಮೊದಲ ಹಂತವಾಗಿ ಇತ್ತೀಚೆಗೆ ಚಿತ್ರತಂಡವು ನರ್ತಕಿ ಚಿತ್ರಮಂದಿರದ ಎದುರು ಪುನೀತ್ ಅವರ 50 ಅಡಿ ಕಟೌಟ್ ನಿಲ್ಲಿಸಿದೆ. ಪುನೀತ್ ನಾಯಕನಾಗಿ ಅಭಿನಯಿಸಿರುವ ಮೊದಲ ಚಿತ್ರ ‘ಅಪ್ಪು’ ಇತ್ತೀಚೆಗೆ ಮರುಬಿಡುಗಡೆ ಮಾಡಲಾಗಿದೆ. ಈ ಸಂದರ್ಭದಲ್ಲಿ ‘ಅಪ್ಪು ಅಭಿಮಾನಿ’ ಚಿತ್ರತಂಡದ ವತಿಯಿಂದ ‘ಅಪ್ಪು ಅಭಿಮಾನಿ’ ಚಿತ್ರದ 50 ಅಡಿ ಕಟೌಟ್ ನಿಲ್ಲಿಸಲಾಗಿದೆ. ಚಿತ್ರದಲ್ಲಿ ನಾಯಕ ರವಿ ಕಿರಣ್, ಪುನೀತ್ ರಾಜಕುಮಾರ್ ಅವರ ಅಪ್ಪಟ ಅಭಿಮಾನಿಯಾಗಿರುವುದರಿಂದ ಕಟ್ಔಟ್ನಲ್ಲಿ ಅಪ್ಪು ನಂತರ ನಾಯಕನ ಚಿತ್ರವೂ ಇದೆ.
ಈ ಸಂದರ್ಭದಲ್ಲಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ನರಸಿಂಹಲು, ರಾಘವೇಂದ್ರ ರಾಜಕುಮಾರ್, ಸಾ.ರಾ. ಗೋವಿಂದು, ಎಂ.ಎನ್. ಸುರೇಶ್ ಮುಂತಾದವರು ಹಾಜರಿದ್ದರು.
ಅಕ್ಷಯ ಮೂವಿ ಫ್ಯಾಕ್ಟರಿ ಸಂಸ್ಥೆ ನಿರ್ಮಿಸಿರುವ ಈ ಚಿತ್ರವನ್ನು ಡಾ. ರೆಡ್ಡಿ ನಿರ್ದೇಶನ ಮಾಡಿದ್ದಾರೆ. ಶೇಖ್ ಮುನೀರ್ ಪಾಷಾ ಕಥೆ, ಮಣಿಕಾಂತ್ ಕದ್ರಿ ಸಂಗೀತ ಈ ಚಿತ್ರಕ್ಕಿದೆ.
ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…
ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…
ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…
ಸ್ಥಾನ...ಮಾನ ! ಅಳೆದೂ ಸುರಿದು ಅಲ್ಲಿಂದಿಲ್ಲಿಗೆ ಓಡಾಡಿ ಕೊಟ್ಟೂ ಕೊಡಲಾಗದೆ ಬಿಟ್ಟೂ ಇರಲಾಗದೆ ಉಳಿಸಿಕೊಂಡಿರುವುದು ಒಂದೇ ಒಂದು ಮಂತ್ರಿ ಸ್ಥಾನ…
ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ನೇತೃತ್ವದ ಮಂತ್ರಿಮಂಡಲ ವಿಸ್ತರಣೆಯಾಗಿ ೨೦ ಸ್ಥಾನಗಳ ಪೈಕಿ ೧೯ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕಾರ…