ಮನರಂಜನೆ

ಪುನೀತ್‍ ನೆನಪಲ್ಲಿ 50 ಅಡಿ ಕಟೌಟ್‍; ಇದು ‘ಅಪ್ಪು ಅಭಿಮಾನಿ’ಯ ಕಥೆ

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷ ನರಸಿಂಹಲು ಅವರ ಮಗ ರವಿಕಿರಣ್‍ ಈ ಹಿಂದೆ ‘ತಾರಕಾಸುರ’ ಎಂಬ ಚಿತ್ರದಲ್ಲಿ ನಾಯಕನಾಗಿ ಕಾಣಿಸಿಕೊಂಡಿದ್ದರು. ಈಗ ‘ಅಪ್ಪು ಅಭಿಮಾನಿ’ಯಾಗಿ ಅವರು ಹೊಸ ಚಿತ್ರವೊಂದರ ಮೂಲಕ ಬರುತ್ತಿದ್ದಾರೆ.

‘ಅಪ್ಪು ಅಭಿಮಾನಿ’ ಎಂಬ ಹೆಸರೇ ಹೇಳುವಂತೆ, ಈ ಚಿತ್ರದಲ್ಲಿ ರವಿಕಿರಣ್, ಪುನೀತ್‍ ಅಭಿಮಾನಿಯಾಗಿ ಕಾಣಿಸಿಕೊಂಡಿದ್ದಾರೆ. ಅಪ್ಪು ಅಭಿಮಾನಿಯೊಬ್ಬ ಜೀವನದಲ್ಲಿ ಏನೆಲ್ಲಾ ಸಾಧಿಸುತ್ತಾನೆ ಎಂದು ಸಾರುವ ಈ ಚಿತ್ರದಲ್ಲಿ ರವಿಕಿರಣ್‍ ‍ಜೊತೆಗೆ ರಾಘವೇಂದ್ರ ರಾಜಕುಮಾರ್, ಶರತ್‌ ಲೋಹಿತಾಶ್ವ, ಸುಮನ್, ಚಿದಾನಂದ್, ಥ್ರಿಲ್ಲರ್‌ ಮಂಜು, ಶಿವಪ್ಪ ಕುಡ್ಲೂರು ಮುಂತಾದವರು ನಟಿಸುತ್ತಿದ್ದಾರೆ.

ಬಿಡುಗಡೆಗೆ ಸಿದ್ಧವಾಗುತ್ತಿರುವ ಈ ಚಿತ್ರದ ಪ್ರಚಾರದ ಮೊದಲ ಹಂತವಾಗಿ ಇತ್ತೀಚೆಗೆ ಚಿತ್ರತಂಡವು ನರ್ತಕಿ ಚಿತ್ರಮಂದಿರದ ಎದುರು ಪುನೀತ್‍ ಅವರ 50 ಅಡಿ ಕಟೌಟ್‍ ನಿಲ್ಲಿಸಿದೆ. ಪುನೀತ್‍ ನಾಯಕನಾಗಿ ಅಭಿನಯಿಸಿರುವ ಮೊದಲ ಚಿತ್ರ ‘ಅಪ್ಪು’ ಇತ್ತೀಚೆಗೆ ಮರುಬಿಡುಗಡೆ ಮಾಡಲಾಗಿದೆ. ಈ ಸಂದರ್ಭದಲ್ಲಿ ‘ಅಪ್ಪು ಅಭಿಮಾನಿ’ ಚಿತ್ರತಂಡದ ವತಿಯಿಂದ ‘ಅಪ್ಪು ಅಭಿಮಾನಿ’ ಚಿತ್ರದ 50 ಅಡಿ ಕಟೌಟ್‍ ನಿಲ್ಲಿಸಲಾಗಿದೆ. ಚಿತ್ರದಲ್ಲಿ ನಾಯಕ ರವಿ ಕಿರಣ್, ಪುನೀತ್‌ ರಾಜಕುಮಾರ್ ಅವರ ಅಪ್ಪಟ ಅಭಿಮಾನಿಯಾಗಿರುವುದರಿಂದ ಕಟ್‌ಔಟ್‌ನಲ್ಲಿ ಅಪ್ಪು ನಂತರ ನಾಯಕನ ಚಿತ್ರವೂ ಇದೆ.

ಈ ಸಂದರ್ಭದಲ್ಲಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ನರಸಿಂಹಲು, ರಾಘವೇಂದ್ರ ರಾಜಕುಮಾರ್, ಸಾ.ರಾ. ಗೋವಿಂದು, ಎಂ.ಎನ್. ಸುರೇಶ್ ಮುಂತಾದವರು ಹಾಜರಿದ್ದರು.

ಅಕ್ಷಯ ಮೂವಿ ಫ್ಯಾಕ್ಟರಿ ಸಂಸ್ಥೆ ನಿರ್ಮಿಸಿರುವ ಈ ಚಿತ್ರವನ್ನು ಡಾ. ರೆಡ್ಡಿ ನಿರ್ದೇಶನ ಮಾಡಿದ್ದಾರೆ. ಶೇಖ್ ಮುನೀರ್ ಪಾಷಾ ಕಥೆ, ಮಣಿಕಾಂತ್ ಕದ್ರಿ ಸಂಗೀತ ಈ ಚಿತ್ರಕ್ಕಿದೆ.

ಆಂದೋಲನ ಡೆಸ್ಕ್

Recent Posts

ಮಾನವ ಕಲಿಯಬೇಕಾದ ಬದುಕಿನ ಪಾಠಗಳು

ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ  ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…

7 hours ago

ಸಾವಿರಾರು ಹೆರಿಗೆ ಮಾಡಿಸಿದ ಫ್ಲಾರೆನ್ಸ್ ನೈಟಿಂಗೇಲ್ ಗೀತಾ ‘ಮಾ’

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…

7 hours ago

ಸಿದ್ದರಾಮಯ್ಯ ಸಿದ್ಧಾಂತದ ಹೋರಾಟಕ್ಕೆ ಅಂತ್ಯವೆಂಬುದೇ ಇಲ್ಲ

ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…

7 hours ago

ಕಣ್ಮನ ಸೆಳೆಯುತ್ತಿದೆ ಮಲ್ಲಳ್ಳಿ ಜಲಪಾತ!

ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…

7 hours ago

ಓದುಗರ ಪತ್ರ: ಸ್ಥಾನ…ಮಾನ !

ಸ್ಥಾನ...ಮಾನ ! ಅಳೆದೂ ಸುರಿದು ಅಲ್ಲಿಂದಿಲ್ಲಿಗೆ ಓಡಾಡಿ ಕೊಟ್ಟೂ ಕೊಡಲಾಗದೆ ಬಿಟ್ಟೂ ಇರಲಾಗದೆ ಉಳಿಸಿಕೊಂಡಿರುವುದು ಒಂದೇ ಒಂದು ಮಂತ್ರಿ ಸ್ಥಾನ…

7 hours ago

ಓದುಗರ ಪತ್ರ: ಸಚಿವ ಸ್ಥಾನ: ಹಿರಿಯರ ನಿರ್ಲಕ್ಷ್ಯ ಸರಿಯಲ್ಲ

ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ನೇತೃತ್ವದ ಮಂತ್ರಿಮಂಡಲ ವಿಸ್ತರಣೆಯಾಗಿ ೨೦ ಸ್ಥಾನಗಳ ಪೈಕಿ ೧೯ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕಾರ…

7 hours ago