ಮನರಂಜನೆ

‘ಪುಷ್ಪ 2’ ಚಿತ್ರದ ಡಿಜಿಟಲ್‍ ಹಕ್ಕುಗಳು ಮಾರಾಟವಾಗಿದ್ದು ಎಷ್ಟಕ್ಕೆ ಗೊತ್ತಾ?

ಅಲ್ಲು ಅರ್ಜುನ್‍ ಅಭಿನಯದ ‘ಪುಷ್ಪ 2’ ಚಿತ್ರವು ಆಗಸ್ಟ್ 15ಕ್ಕೆ ಬಿಡುಗಡೆಯಾಗಬೇಕಿತ್ತು. ಆದರೆ, ಚಿತ್ರೀಕರಣದಲ್ಲಾದ ವಿಳಂಬದಿಂದ ಚಿತ್ರದ ಬಿಡುಗಡೆ ಮುಂದಕ್ಕೆ ಹೋಗಿದೆ. ಈಗ ಚಿತ್ರವು ಡಿಸೆಂಬರ್‍ 06ಕ್ಕೆ ಚಿತ್ರವು ಜಗತ್ತಿನಾದ್ಯಂತ ಬಿಡುಗಡೆಯಾಗಲಿದೆ. ಚಿತ್ರತಂಡವು ಚಿತ್ರದ ಕೊನೆಯ ಹಂತದ ಚಿತ್ರೀಕರಣದಲ್ಲಿ ತೊಡಗಿಸಿಕೊಂಡಿದ್ದು, ಸದ್ಯದಲ್ಲೇ ಮುಕ್ತಾಯವಾಗಲಿದೆ.

ಈ ಮಧ್ಯೆ, ‘ಪುಷ್ಪ 2’ ಚಿತ್ರದ ಕುರಿತು ಬಿಸಿಬಿಸಿ ಸುದ್ದಿಯೊಂದು ಬಂದಿದೆ. ಚಿತ್ರದ ವ್ಯಾಪಾರ ಶುರುವಾಗಿದ್ದು, ಸ್ಯಾಟಿಲೈಟ್‍, ಡಿಜಿಟಲ್‍, ಓವರ್‍ಸೀಸ್‍, ವಿತರಣೆ … ಹೀಗೆ ಹಲವು ಹಕ್ಕುಗಳನ್ನು ಕೊಳ್ಳುವುದಕ್ಕೆ ದೊಡ್ಡ ಪೈಪೋಟಿಯೇ ನಡೆದಿದೆಯಂತೆ. ಮೂಲಗಳ ಪ್ರಕಾರ, ಈ ಪೈಕಿ ಚಿತ್ರದ ಡಿಜಿಟಲ್‍ ಹಕ್ಕುಗಳು ದಾಖಲೆಯ 270 ಕೋಟಿ ರೂ.ಗಳಿಗೆ ಮಾರಾಟವಾಗಿದೆ ಎಂದು ಹೇಳಲಾಗಿದೆ. ನೆಟ್‍ಫ್ಲಿಕ್ಸ್ ಸಂಸ್ಥೆಯು ಚಿತ್ರದ ಅಷ್ಟೂ ಭಾಷೆಗಳ ಹಕ್ಕುಗಳನ್ನು ಕೊಂಡಿದೆ ಎಂದು ಹೇಳಲಾಗಿದೆ.

ಪ್ರಭಾಸ್‍ ಅಭಿನಯದ ‘ಕಲ್ಕಿ 2898 ಎಡಿ’ ಚಿತ್ರದ ಹಕ್ಕುಗಳು, ಇದುವರೆಗೂ ಅತೀ ಹೆಚ್ಚು ಬೆಲೆಗೆ ಮಾರಾಟವಾಗಿರುವ ಸುದ್ದಿ ಇದೆ. ಚಿತ್ರದ ಹಕ್ಕುಗಳನ್ನು ಒಟ್ಟಾರೆ 375 ಕೋಟಿ ರೂ.ಗಳಿಗೆ ಮಾರಾಟವಾಗಿದ್ದು, ಈ ಪೈಕಿ ಅಮೇಜಾನ್‍ ಪ್ರೈಮ್‍ ಸಂಸ್ಥೆಯು ತೆಲುಗು, ತಮಿಳು, ಕನ್ನಡ ಮತ್ತು ಮಲಯಾಳಂ ಭಾಷೆಗಳ ಹಕ್ಕುಗಳನ್ನು 200 ಕೋಟಿ ರೂ.ಗಳಿಗೆ ಪಡೆದರೆ, ನೆಟ್‍ಫ್ಲಿಕ್ಸ್ ಸಂಸ್ಥೆಯು ಬರೀ ಹಿಂದಿ ಅವತರಣಿಕೆಯ ಹಕ್ಕುಗಳನ್ನು 175 ಕೋಟಿ ರೂ.ಗಳಿಗೆ ತನ್ನದಾಗಿಸಿಕೊಂಡಿತ್ತು.

‘ಪುಷ್ಪ – ದಿ ರೂಲ್‍’ ಚಿತ್ರವು ಕೆಲವು ವರ್ಷಗಳ ಹಿಂದೆ ಬಿಡುಗಡೆಯಾದ ‘ಪುಷ್ಪ – ದಿ ರೈಸ್‍’ ಚಿತ್ರದ ಮುಂದುವರೆದ ಭಾಗವಾಗಿದೆ. ಪುಷ್ಪರಾಜ್‍ ಎಂಬ ಗ್ಯಾಂಗ್‍ಸ್ಟರ್‍ ಜೀವನದಲ್ಲಿ ನಡೆಯುವ ಕಥೆ ಇರುವ ಈ ಚಿತ್ರದಲ್ಲಿ ಪುಷ್ಪರಾಜ್‍ ಆಗಿ ಅಲ್ಲು ಅರ್ಜುನ್‍ ನಟಿಸಿದ್ದಾರೆ. ಇನ್ನು, ಅವರಿಗೆ ನಾಯಕಿಯಾಗಿ ಕನ್ನಡದ ರಶ್ಮಿಕಾ ಮಂದಣ್ಣ ನಟಿಸಿದ್ದಾರೆ.

ಮಿಕ್ಕಂತೆ ಧನಂಜಯ್‍, ಫಹಾದ್‍ ಫಾಸಿಲ್‍, ಸುನೀಲ್, ಅನುಸೂಯ ಭಾರದ್ವಾಜ್‍ ಸೇರಿದಂತೆ ಹಲವರು ಈ ಚಿತ್ರದಲ್ಲಿ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಮೈತ್ರಿ ಮೂವಿ ಮೇಕರ್ಸ್ ನಿರ್ಮಾಣದ ಈ ಚಿತ್ರಕ್ಕೆ ಸುಕುಮಾರ್‍ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ‘ರಾಕ್‍ಸ್ಟಾರ್‍’ ದೇವಿಶ್ರೀ ಪ್ರಸಾದ್‍ ಈ ಚಿತ್ರಕ್ಕೆ ಸಂಗೀತ ಸಂಯೋಜಿಸಿದ್ದಾರೆ.

ಭೂಮಿಕಾ

Recent Posts

ಮೈಸೂರು ಕೇಂದ್ರೀಯ ಸಂಪರ್ಕ ಬ್ಯೂರೋ-CBC ಕಚೇರಿ ಸ್ಥಗಿತ ಬೇಡ : ಕೇಂದ್ರ ವಾರ್ತಾ ಸಚಿವ ಅಶ್ವಿನಿ ವೈಷ್ಣವ್‌ಗೆ ಪತ್ರ ಬರೆದ ಸಚಿವ ಎಚ್‌ಡಿಕೆ

ಹೊಸದಿಲ್ಲಿ : ಕೇಂದ್ರ ಸರ್ಕಾರದ ವಾರ್ತಾ ಮತ್ತು ಪ್ರಸಾರ ಸಚಿವಾಲಯದ ಅಧೀನದಲ್ಲಿ ಮೈಸೂರಿನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕೇಂದ್ರೀಯ ಸಂಪರ್ಕ ಬ್ಯೂರೋ…

9 hours ago

ಉನ್ನಾವೋ ಅತ್ಯಾಚಾರ ಪ್ರಕರಣ : ರಾಹುಲ್‌ಗಾಂಧಿ ಭೇಟಿಯಾದ ಸಂತ್ರಸ್ತೆ ಕುಟುಂಬ

ಹೊಸದಿಲ್ಲಿ : ಉನ್ನಾವೋ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಮತ್ತು ಆಕೆಯ ತಾಯಿ ಬುಧವಾರ ಸಂಜೆ ಕಾಂಗ್ರೆಸ್‌ನ ರಾಹುಲ್ ಗಾಂಧಿ ಅವರನ್ನು…

9 hours ago

ಉನ್ನಾವೊ ಪ್ರಕರಣ : ಸೆಂಗರ್‌ ಶಿಕ್ಷೆ ಅಮಾನತು ; ಸಂತ್ರಸ್ತೆ ತಾಯಿ ಹೇಳಿದಿಷ್ಟು?

ಹೊಸದಿಲ್ಲಿ : 2017ರ ಉನ್ನಾವೋ ಅತ್ಯಾಚಾರ ಪ್ರಕರಣದ ಪ್ರಮುಖ ಆರೋಪಿ ಕುಲದೀಪ್ ಸಿಂಗ್ ಸೆಂಗಾರ್‌ಗೆ ಜಾಮೀನು ದೊರೆತಿರುವುದನ್ನು ವಿರೋಧಿಸಿ ಸಂತ್ರಸ್ತೆ…

10 hours ago

ಚಂದನವನದಲ್ಲಿ ಸ್ಟಾರ್‌ ವಾರ್‌ : ನಟಿ ರಕ್ಷಿತಾ ಪ್ರೇಮ್‌ ಹೇಳಿದಿಷ್ಟು?

ಬೆಂಗಳೂರು : ಮಾರ್ಕ್‌ʼ ಸಿನಿಮಾದ ಪ್ರೀ-ರಿಲೀಸ್‌ ಈವೆಂಟ್‌ನಲ್ಲಿ ಕಿಚ್ಚ ಸುದೀಪ್‌ ಹೇಳಿದ ಮಾತೊಂದು ಸೋಶಿಯಲ್‌ ಮೀಡಿಯಾದಲ್ಲಿ ಚರ್ಚೆಗೆ ಕಾರಣವಾಗಿದ್ದು, ಈ…

10 hours ago

ರೈತರಿಗೆ ಅಗತ್ಯವಿರುವ ಸೌಲಭ್ಯ ಒದಗಿಸಲು ಸರ್ಕಾರ ಬದ್ದ : ಸಚಿವ ಕೆ.ವೆಂಕಟೇಶ್

ಚಾಮರಾಜನಗರ : ಅನ್ನದಾತರಾಗಿರುವ ರೈತರ ಬಗ್ಗೆ ಆತ್ಮೀಯ ಕಾಳಜಿಯಿದ್ದು, ಅವರ ಹಿತ ಕಾಪಾಡುವ ನಿಟ್ಟಿನಲ್ಲಿ ಸರ್ಕಾರ ಪ್ರಾಮಾಣಿಕ ಕೆಲಸವನ್ನು ಮಾಡುತ್ತಿದೆ…

10 hours ago

ಸರ್ಕಾರಿ ಆಯುರ್ವೇದ ವೈದ್ಯಕೀಯ ಕಾಲೇಜಿನಲ್ಲಿ ನೇಮಕಾತಿ ; ಆಸಕ್ತರು ಇಂದೇ ಅರ್ಜಿ ಸಲ್ಲಿಸಿ

ಬೆಂಗಳೂರು : ಸರ್ಕಾರಿ ಆಯುರ್ವೇದ ವೈದ್ಯಕೀಯ ಕಾಲೇಜು ಅಧಿಕೃತ ಅಧಿಸೂಚನೆಯ ಮೂಲಕ ಪ್ರಾಧ್ಯಾಪಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು…

10 hours ago