ಮನರಂಜನೆ

‘ಪುಷ್ಪ 2’ ಚಿತ್ರದ ಡಿಜಿಟಲ್‍ ಹಕ್ಕುಗಳು ಮಾರಾಟವಾಗಿದ್ದು ಎಷ್ಟಕ್ಕೆ ಗೊತ್ತಾ?

ಅಲ್ಲು ಅರ್ಜುನ್‍ ಅಭಿನಯದ ‘ಪುಷ್ಪ 2’ ಚಿತ್ರವು ಆಗಸ್ಟ್ 15ಕ್ಕೆ ಬಿಡುಗಡೆಯಾಗಬೇಕಿತ್ತು. ಆದರೆ, ಚಿತ್ರೀಕರಣದಲ್ಲಾದ ವಿಳಂಬದಿಂದ ಚಿತ್ರದ ಬಿಡುಗಡೆ ಮುಂದಕ್ಕೆ ಹೋಗಿದೆ. ಈಗ ಚಿತ್ರವು ಡಿಸೆಂಬರ್‍ 06ಕ್ಕೆ ಚಿತ್ರವು ಜಗತ್ತಿನಾದ್ಯಂತ ಬಿಡುಗಡೆಯಾಗಲಿದೆ. ಚಿತ್ರತಂಡವು ಚಿತ್ರದ ಕೊನೆಯ ಹಂತದ ಚಿತ್ರೀಕರಣದಲ್ಲಿ ತೊಡಗಿಸಿಕೊಂಡಿದ್ದು, ಸದ್ಯದಲ್ಲೇ ಮುಕ್ತಾಯವಾಗಲಿದೆ.

ಈ ಮಧ್ಯೆ, ‘ಪುಷ್ಪ 2’ ಚಿತ್ರದ ಕುರಿತು ಬಿಸಿಬಿಸಿ ಸುದ್ದಿಯೊಂದು ಬಂದಿದೆ. ಚಿತ್ರದ ವ್ಯಾಪಾರ ಶುರುವಾಗಿದ್ದು, ಸ್ಯಾಟಿಲೈಟ್‍, ಡಿಜಿಟಲ್‍, ಓವರ್‍ಸೀಸ್‍, ವಿತರಣೆ … ಹೀಗೆ ಹಲವು ಹಕ್ಕುಗಳನ್ನು ಕೊಳ್ಳುವುದಕ್ಕೆ ದೊಡ್ಡ ಪೈಪೋಟಿಯೇ ನಡೆದಿದೆಯಂತೆ. ಮೂಲಗಳ ಪ್ರಕಾರ, ಈ ಪೈಕಿ ಚಿತ್ರದ ಡಿಜಿಟಲ್‍ ಹಕ್ಕುಗಳು ದಾಖಲೆಯ 270 ಕೋಟಿ ರೂ.ಗಳಿಗೆ ಮಾರಾಟವಾಗಿದೆ ಎಂದು ಹೇಳಲಾಗಿದೆ. ನೆಟ್‍ಫ್ಲಿಕ್ಸ್ ಸಂಸ್ಥೆಯು ಚಿತ್ರದ ಅಷ್ಟೂ ಭಾಷೆಗಳ ಹಕ್ಕುಗಳನ್ನು ಕೊಂಡಿದೆ ಎಂದು ಹೇಳಲಾಗಿದೆ.

ಪ್ರಭಾಸ್‍ ಅಭಿನಯದ ‘ಕಲ್ಕಿ 2898 ಎಡಿ’ ಚಿತ್ರದ ಹಕ್ಕುಗಳು, ಇದುವರೆಗೂ ಅತೀ ಹೆಚ್ಚು ಬೆಲೆಗೆ ಮಾರಾಟವಾಗಿರುವ ಸುದ್ದಿ ಇದೆ. ಚಿತ್ರದ ಹಕ್ಕುಗಳನ್ನು ಒಟ್ಟಾರೆ 375 ಕೋಟಿ ರೂ.ಗಳಿಗೆ ಮಾರಾಟವಾಗಿದ್ದು, ಈ ಪೈಕಿ ಅಮೇಜಾನ್‍ ಪ್ರೈಮ್‍ ಸಂಸ್ಥೆಯು ತೆಲುಗು, ತಮಿಳು, ಕನ್ನಡ ಮತ್ತು ಮಲಯಾಳಂ ಭಾಷೆಗಳ ಹಕ್ಕುಗಳನ್ನು 200 ಕೋಟಿ ರೂ.ಗಳಿಗೆ ಪಡೆದರೆ, ನೆಟ್‍ಫ್ಲಿಕ್ಸ್ ಸಂಸ್ಥೆಯು ಬರೀ ಹಿಂದಿ ಅವತರಣಿಕೆಯ ಹಕ್ಕುಗಳನ್ನು 175 ಕೋಟಿ ರೂ.ಗಳಿಗೆ ತನ್ನದಾಗಿಸಿಕೊಂಡಿತ್ತು.

‘ಪುಷ್ಪ – ದಿ ರೂಲ್‍’ ಚಿತ್ರವು ಕೆಲವು ವರ್ಷಗಳ ಹಿಂದೆ ಬಿಡುಗಡೆಯಾದ ‘ಪುಷ್ಪ – ದಿ ರೈಸ್‍’ ಚಿತ್ರದ ಮುಂದುವರೆದ ಭಾಗವಾಗಿದೆ. ಪುಷ್ಪರಾಜ್‍ ಎಂಬ ಗ್ಯಾಂಗ್‍ಸ್ಟರ್‍ ಜೀವನದಲ್ಲಿ ನಡೆಯುವ ಕಥೆ ಇರುವ ಈ ಚಿತ್ರದಲ್ಲಿ ಪುಷ್ಪರಾಜ್‍ ಆಗಿ ಅಲ್ಲು ಅರ್ಜುನ್‍ ನಟಿಸಿದ್ದಾರೆ. ಇನ್ನು, ಅವರಿಗೆ ನಾಯಕಿಯಾಗಿ ಕನ್ನಡದ ರಶ್ಮಿಕಾ ಮಂದಣ್ಣ ನಟಿಸಿದ್ದಾರೆ.

ಮಿಕ್ಕಂತೆ ಧನಂಜಯ್‍, ಫಹಾದ್‍ ಫಾಸಿಲ್‍, ಸುನೀಲ್, ಅನುಸೂಯ ಭಾರದ್ವಾಜ್‍ ಸೇರಿದಂತೆ ಹಲವರು ಈ ಚಿತ್ರದಲ್ಲಿ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಮೈತ್ರಿ ಮೂವಿ ಮೇಕರ್ಸ್ ನಿರ್ಮಾಣದ ಈ ಚಿತ್ರಕ್ಕೆ ಸುಕುಮಾರ್‍ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ‘ರಾಕ್‍ಸ್ಟಾರ್‍’ ದೇವಿಶ್ರೀ ಪ್ರಸಾದ್‍ ಈ ಚಿತ್ರಕ್ಕೆ ಸಂಗೀತ ಸಂಯೋಜಿಸಿದ್ದಾರೆ.

ಭೂಮಿಕಾ

Recent Posts

ಮಹದೇಶ್ವರ ಬೆಟ್ಟ ಮುಖ್ಯರಸ್ತೆ ಬದಿಯಲ್ಲಿ ಒಂಟಿಸಲಗ ದರ್ಶನ: ಭಯಭೀತರಾದ ವಾಹನ ಸವಾರರು

ಮಹಾದೇಶ್‌ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆಯ ಮೂಲಕ ತೆರಳುತ್ತಿದ್ದ ಬಾಲಕನ…

4 hours ago

ಸೈಬರ್ ಕ್ರೈಂ ಪೊಲೀಸರ ಕ್ಷಿಪ್ರ ಕಾರ್ಯಾಚರಣೆ: ಕಳೆದುಹೋಗಿದ್ದ 104 ಮೊಬೈಲ್ ವಶಕ್ಕೆ

ಮಡಿಕೇರಿ: ಕೊಡಗು ಜಿಲ್ಲೆಯ ಸೈಬರ್ ಕ್ರೈಂ ಪೊಲೀಸರು ಒಂದು ತಿಂಗಳ ಕಾಲ ಕ್ಷಿಪ್ರ ಕಾರ್ಯಾಚರಣೆ ಮಾಡುವ ಮೂಲಕ ನಾಗರಿಕರು ಕಳೆದುಕೊಂಡ…

4 hours ago

ಮಕ್ಕಳಿಗೆ ಜಂತುಹುಳು ಮಾತ್ರೆ ನೀಡಿದ ಶಾಸಕ ಅನಿಲ್ ಚಿಕ್ಕಮಾದು

ಎಚ್.ಡಿ.ಕೋಟೆ: ಮಾದಾಪುರ ಗ್ರಾಮದ ಚಂದ್ರಮೌಳೇಶ್ವರ ಮಲ್ಲಿಕಾರ್ಜುನ ಸ್ವಾಮಿ ಜಾತ್ರಾ ಮಹೋತ್ಸವದಲ್ಲಿ ರಾಷ್ಟ್ರೀಯ ಜಂತುಹುಳು ನಿವಾರಣಾ ದಿನದ ಪ್ರಯುಕ್ತ ಅರಣ್ಯ ಮತ್ತು…

4 hours ago

ಕಾಯಕ ಶರಣರ ಆದರ್ಶ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕು: ಡಾ.ಬಿ.ವಿ.ನಂದೀಶ್

ಮಂಡ್ಯ: ಕಾಯಕ ಶರಣರು ಸಮಾಜಕ್ಕೆ ವಚನಗಳ ಮೂಲಕ ಅನೇಕ ಕೊಡುಗೆಗಳನ್ನು ನೀಡಿದ್ದಾರೆ. ಯುವ ಜನತೆಯೂ ಕಾಯಕ ಶರಣರ ಆದರ್ಶ, ಮೌಲ್ಯಗಳನ್ನು…

4 hours ago

ಮಕ್ಕಳು ಅಂತರ್ಜಾಲದ ಬಳಕೆ ಕಡಿಮೆ ಮಾಡಬೇಕು: ಬಿ.ಸಿ.ಶಿವಾನಂದ ಮೂರ್ತಿ

ಮಂಡ್ಯ: ಪ್ರಸ್ತುತ ಕಾಲದಲ್ಲಿ ಮಕ್ಕಳು ಅಂತರ್ಜಾಲ ಬಳಕೆಯನ್ನು ಹೆಚ್ಚು ಮಾಡುತ್ತಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಮುಳುಗಿ ಹೋಗಿದ್ದಾರೆ ಇದರಿಂದ ಮಕ್ಕಳ ಮನಸ್ಥಿತಿ…

4 hours ago

ಮಂಡ್ಯ ಜಿಲ್ಲೆ ಇ-ಪೌತಿ ಖಾತಾ ಆಂದೋಲನದಲ್ಲಿ ರಾಜ್ಯಕ್ಕೆ ಪ್ರಥಮ

ಮಂಡ್ಯ: ಪೌತಿ ಖಾತೆ ಪ್ರಕ್ರಿಯೆಯನ್ನು ಮಂಡ್ಯ ಜಿಲ್ಲೆಯು ಈ ಪೌತಿ ಖಾತೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದು, ಈ ಪೌತಿ ಖಾತೆಯನ್ನು…

4 hours ago