ಮನರಂಜನೆ

‘ಪುಷ್ಪ 2’ ಚಿತ್ರದ ಡಿಜಿಟಲ್‍ ಹಕ್ಕುಗಳು ಮಾರಾಟವಾಗಿದ್ದು ಎಷ್ಟಕ್ಕೆ ಗೊತ್ತಾ?

ಅಲ್ಲು ಅರ್ಜುನ್‍ ಅಭಿನಯದ ‘ಪುಷ್ಪ 2’ ಚಿತ್ರವು ಆಗಸ್ಟ್ 15ಕ್ಕೆ ಬಿಡುಗಡೆಯಾಗಬೇಕಿತ್ತು. ಆದರೆ, ಚಿತ್ರೀಕರಣದಲ್ಲಾದ ವಿಳಂಬದಿಂದ ಚಿತ್ರದ ಬಿಡುಗಡೆ ಮುಂದಕ್ಕೆ ಹೋಗಿದೆ. ಈಗ ಚಿತ್ರವು ಡಿಸೆಂಬರ್‍ 06ಕ್ಕೆ ಚಿತ್ರವು ಜಗತ್ತಿನಾದ್ಯಂತ ಬಿಡುಗಡೆಯಾಗಲಿದೆ. ಚಿತ್ರತಂಡವು ಚಿತ್ರದ ಕೊನೆಯ ಹಂತದ ಚಿತ್ರೀಕರಣದಲ್ಲಿ ತೊಡಗಿಸಿಕೊಂಡಿದ್ದು, ಸದ್ಯದಲ್ಲೇ ಮುಕ್ತಾಯವಾಗಲಿದೆ.

ಈ ಮಧ್ಯೆ, ‘ಪುಷ್ಪ 2’ ಚಿತ್ರದ ಕುರಿತು ಬಿಸಿಬಿಸಿ ಸುದ್ದಿಯೊಂದು ಬಂದಿದೆ. ಚಿತ್ರದ ವ್ಯಾಪಾರ ಶುರುವಾಗಿದ್ದು, ಸ್ಯಾಟಿಲೈಟ್‍, ಡಿಜಿಟಲ್‍, ಓವರ್‍ಸೀಸ್‍, ವಿತರಣೆ … ಹೀಗೆ ಹಲವು ಹಕ್ಕುಗಳನ್ನು ಕೊಳ್ಳುವುದಕ್ಕೆ ದೊಡ್ಡ ಪೈಪೋಟಿಯೇ ನಡೆದಿದೆಯಂತೆ. ಮೂಲಗಳ ಪ್ರಕಾರ, ಈ ಪೈಕಿ ಚಿತ್ರದ ಡಿಜಿಟಲ್‍ ಹಕ್ಕುಗಳು ದಾಖಲೆಯ 270 ಕೋಟಿ ರೂ.ಗಳಿಗೆ ಮಾರಾಟವಾಗಿದೆ ಎಂದು ಹೇಳಲಾಗಿದೆ. ನೆಟ್‍ಫ್ಲಿಕ್ಸ್ ಸಂಸ್ಥೆಯು ಚಿತ್ರದ ಅಷ್ಟೂ ಭಾಷೆಗಳ ಹಕ್ಕುಗಳನ್ನು ಕೊಂಡಿದೆ ಎಂದು ಹೇಳಲಾಗಿದೆ.

ಪ್ರಭಾಸ್‍ ಅಭಿನಯದ ‘ಕಲ್ಕಿ 2898 ಎಡಿ’ ಚಿತ್ರದ ಹಕ್ಕುಗಳು, ಇದುವರೆಗೂ ಅತೀ ಹೆಚ್ಚು ಬೆಲೆಗೆ ಮಾರಾಟವಾಗಿರುವ ಸುದ್ದಿ ಇದೆ. ಚಿತ್ರದ ಹಕ್ಕುಗಳನ್ನು ಒಟ್ಟಾರೆ 375 ಕೋಟಿ ರೂ.ಗಳಿಗೆ ಮಾರಾಟವಾಗಿದ್ದು, ಈ ಪೈಕಿ ಅಮೇಜಾನ್‍ ಪ್ರೈಮ್‍ ಸಂಸ್ಥೆಯು ತೆಲುಗು, ತಮಿಳು, ಕನ್ನಡ ಮತ್ತು ಮಲಯಾಳಂ ಭಾಷೆಗಳ ಹಕ್ಕುಗಳನ್ನು 200 ಕೋಟಿ ರೂ.ಗಳಿಗೆ ಪಡೆದರೆ, ನೆಟ್‍ಫ್ಲಿಕ್ಸ್ ಸಂಸ್ಥೆಯು ಬರೀ ಹಿಂದಿ ಅವತರಣಿಕೆಯ ಹಕ್ಕುಗಳನ್ನು 175 ಕೋಟಿ ರೂ.ಗಳಿಗೆ ತನ್ನದಾಗಿಸಿಕೊಂಡಿತ್ತು.

‘ಪುಷ್ಪ – ದಿ ರೂಲ್‍’ ಚಿತ್ರವು ಕೆಲವು ವರ್ಷಗಳ ಹಿಂದೆ ಬಿಡುಗಡೆಯಾದ ‘ಪುಷ್ಪ – ದಿ ರೈಸ್‍’ ಚಿತ್ರದ ಮುಂದುವರೆದ ಭಾಗವಾಗಿದೆ. ಪುಷ್ಪರಾಜ್‍ ಎಂಬ ಗ್ಯಾಂಗ್‍ಸ್ಟರ್‍ ಜೀವನದಲ್ಲಿ ನಡೆಯುವ ಕಥೆ ಇರುವ ಈ ಚಿತ್ರದಲ್ಲಿ ಪುಷ್ಪರಾಜ್‍ ಆಗಿ ಅಲ್ಲು ಅರ್ಜುನ್‍ ನಟಿಸಿದ್ದಾರೆ. ಇನ್ನು, ಅವರಿಗೆ ನಾಯಕಿಯಾಗಿ ಕನ್ನಡದ ರಶ್ಮಿಕಾ ಮಂದಣ್ಣ ನಟಿಸಿದ್ದಾರೆ.

ಮಿಕ್ಕಂತೆ ಧನಂಜಯ್‍, ಫಹಾದ್‍ ಫಾಸಿಲ್‍, ಸುನೀಲ್, ಅನುಸೂಯ ಭಾರದ್ವಾಜ್‍ ಸೇರಿದಂತೆ ಹಲವರು ಈ ಚಿತ್ರದಲ್ಲಿ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಮೈತ್ರಿ ಮೂವಿ ಮೇಕರ್ಸ್ ನಿರ್ಮಾಣದ ಈ ಚಿತ್ರಕ್ಕೆ ಸುಕುಮಾರ್‍ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ‘ರಾಕ್‍ಸ್ಟಾರ್‍’ ದೇವಿಶ್ರೀ ಪ್ರಸಾದ್‍ ಈ ಚಿತ್ರಕ್ಕೆ ಸಂಗೀತ ಸಂಯೋಜಿಸಿದ್ದಾರೆ.

ಭೂಮಿಕಾ

Recent Posts

ಎರಡು ಕ್ಷೇತ್ರಗಳ ಉಪಚುನಾವಣೆ ಮತದಾನ ಮುಕ್ತಾಯ: ವೋಟಿಂಗ್‌ ಪ್ರಮಾಣವೆಷ್ಟು.?

ದಾವಣಗೆರೆ/ಬಾಗಲಕೋಟೆ: ರಾಜ್ಯದ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಇಂದು ಮತದಾನ ನಡೆದಿದ್ದು, ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.…

14 mins ago

ಚಾಮುಂಡಿಬೆಟ್ಟದಲ್ಲಿ ನಡೆಯುತ್ತಿದ್ದ ಕಾಮಗಾರಿಗಳಿಗೆ ಹೈಕೋರ್ಟ್‌ ತಡೆಯಾಜ್ಞೆ

ಬೆಂಗಳೂರು: ನಾಡಿನ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಕೇಂದ್ರ ಸರ್ಕಾರದ ಅನುದಾನದಡಿ ನಡೆಯುತ್ತಿದ್ದ ಕಾಮಗಾರಿಗಳಿಗೆ ಹೈಕೋರ್ಟ್‌ ತಡೆಯಾಜ್ಞೆ ನೀಡಿದೆ. ಹೈಕೋರ್ಟ್‌…

27 mins ago

ಬೆಂಗಳೂರಿನಲ್ಲಿ ಮುಂದಿನ ಮೂರು ದಿನ ಬಿಸಿ ಗಾಳಿ ಎಚ್ಚರಿಕೆ

ಬೆಂಗಳೂರು: ನಗರದಲ್ಲಿ ಮುಂದಿನ ಮೂರು ದಿನಗಳ ಕಾಲ ಅಧಿಕ ಉಷ್ಣಾಂಶ ದಾಖಲಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಬಿಸಿ…

35 mins ago

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಗೆದ್ದರೆ ಆರು ಗ್ಯಾರಂಟಿ ಜಾರಿ: ಪ್ರಧಾನಿ ನರೇಂದ್ರ ಮೋದಿ

ಕೋಲ್ಕತ್ತಾ: ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಬಿಜೆಪಿ ಗೆದ್ದರೆ ಜನರಿಗೆ ಆರು ಗ್ಯಾರಂಟಿಗಳನ್ನು ನೀಡುತ್ತೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.…

53 mins ago

ಭಾರತ ತಲುಪಿದ ಗ್ರೀನ್‌ ಆಶಾ: 15,000 ಟನ್‌ ಎಲ್‌ಪಿಜಿ ಹೊತ್ತು ತಂದ ನೌಕೆ

ಮುಂಬೈ: ಪಶ್ಚಿಮ ಏಷ್ಯಾ ಸಂಘರ್ಷದ ಮಧ್ಯೆ ಭಾರತದ ಧ್ವಜ ಹೊಂದಿರುವ 15,400 ಟನ್‌ ಎಲ್‌ಪಿಜಿ ಹೊತ್ತ ಟ್ಯಾಂಕರ್‌ ಹಾರ್ಮುಜ್‌ ಜಲಸಂಧಿಯನ್ನು…

1 hour ago

ರೈತರ ಅಭ್ಯುದಯಕ್ಕೆ ಸರ್ಕಾರ ಬದ್ಧ: ಸಚಿವ ಪ್ರಿಯಾಂಕ್ ಖರ್ಗೆ.

ಚಿತ್ತಾಪುರ: ಕಾಂಗ್ರೆಸ್ ಸರ್ಕಾರ ರೈತರ ಅಭ್ಯುದಯಕ್ಕೆ ಶ್ರಮಿಸುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ನುಡಿದರು.…

1 hour ago