ಮನರಂಜನೆ

‘ಪುಷ್ಪ 2’ ಚಿತ್ರದ ಡಿಜಿಟಲ್‍ ಹಕ್ಕುಗಳು ಮಾರಾಟವಾಗಿದ್ದು ಎಷ್ಟಕ್ಕೆ ಗೊತ್ತಾ?

ಅಲ್ಲು ಅರ್ಜುನ್‍ ಅಭಿನಯದ ‘ಪುಷ್ಪ 2’ ಚಿತ್ರವು ಆಗಸ್ಟ್ 15ಕ್ಕೆ ಬಿಡುಗಡೆಯಾಗಬೇಕಿತ್ತು. ಆದರೆ, ಚಿತ್ರೀಕರಣದಲ್ಲಾದ ವಿಳಂಬದಿಂದ ಚಿತ್ರದ ಬಿಡುಗಡೆ ಮುಂದಕ್ಕೆ ಹೋಗಿದೆ. ಈಗ ಚಿತ್ರವು ಡಿಸೆಂಬರ್‍ 06ಕ್ಕೆ ಚಿತ್ರವು ಜಗತ್ತಿನಾದ್ಯಂತ ಬಿಡುಗಡೆಯಾಗಲಿದೆ. ಚಿತ್ರತಂಡವು ಚಿತ್ರದ ಕೊನೆಯ ಹಂತದ ಚಿತ್ರೀಕರಣದಲ್ಲಿ ತೊಡಗಿಸಿಕೊಂಡಿದ್ದು, ಸದ್ಯದಲ್ಲೇ ಮುಕ್ತಾಯವಾಗಲಿದೆ.

ಈ ಮಧ್ಯೆ, ‘ಪುಷ್ಪ 2’ ಚಿತ್ರದ ಕುರಿತು ಬಿಸಿಬಿಸಿ ಸುದ್ದಿಯೊಂದು ಬಂದಿದೆ. ಚಿತ್ರದ ವ್ಯಾಪಾರ ಶುರುವಾಗಿದ್ದು, ಸ್ಯಾಟಿಲೈಟ್‍, ಡಿಜಿಟಲ್‍, ಓವರ್‍ಸೀಸ್‍, ವಿತರಣೆ … ಹೀಗೆ ಹಲವು ಹಕ್ಕುಗಳನ್ನು ಕೊಳ್ಳುವುದಕ್ಕೆ ದೊಡ್ಡ ಪೈಪೋಟಿಯೇ ನಡೆದಿದೆಯಂತೆ. ಮೂಲಗಳ ಪ್ರಕಾರ, ಈ ಪೈಕಿ ಚಿತ್ರದ ಡಿಜಿಟಲ್‍ ಹಕ್ಕುಗಳು ದಾಖಲೆಯ 270 ಕೋಟಿ ರೂ.ಗಳಿಗೆ ಮಾರಾಟವಾಗಿದೆ ಎಂದು ಹೇಳಲಾಗಿದೆ. ನೆಟ್‍ಫ್ಲಿಕ್ಸ್ ಸಂಸ್ಥೆಯು ಚಿತ್ರದ ಅಷ್ಟೂ ಭಾಷೆಗಳ ಹಕ್ಕುಗಳನ್ನು ಕೊಂಡಿದೆ ಎಂದು ಹೇಳಲಾಗಿದೆ.

ಪ್ರಭಾಸ್‍ ಅಭಿನಯದ ‘ಕಲ್ಕಿ 2898 ಎಡಿ’ ಚಿತ್ರದ ಹಕ್ಕುಗಳು, ಇದುವರೆಗೂ ಅತೀ ಹೆಚ್ಚು ಬೆಲೆಗೆ ಮಾರಾಟವಾಗಿರುವ ಸುದ್ದಿ ಇದೆ. ಚಿತ್ರದ ಹಕ್ಕುಗಳನ್ನು ಒಟ್ಟಾರೆ 375 ಕೋಟಿ ರೂ.ಗಳಿಗೆ ಮಾರಾಟವಾಗಿದ್ದು, ಈ ಪೈಕಿ ಅಮೇಜಾನ್‍ ಪ್ರೈಮ್‍ ಸಂಸ್ಥೆಯು ತೆಲುಗು, ತಮಿಳು, ಕನ್ನಡ ಮತ್ತು ಮಲಯಾಳಂ ಭಾಷೆಗಳ ಹಕ್ಕುಗಳನ್ನು 200 ಕೋಟಿ ರೂ.ಗಳಿಗೆ ಪಡೆದರೆ, ನೆಟ್‍ಫ್ಲಿಕ್ಸ್ ಸಂಸ್ಥೆಯು ಬರೀ ಹಿಂದಿ ಅವತರಣಿಕೆಯ ಹಕ್ಕುಗಳನ್ನು 175 ಕೋಟಿ ರೂ.ಗಳಿಗೆ ತನ್ನದಾಗಿಸಿಕೊಂಡಿತ್ತು.

‘ಪುಷ್ಪ – ದಿ ರೂಲ್‍’ ಚಿತ್ರವು ಕೆಲವು ವರ್ಷಗಳ ಹಿಂದೆ ಬಿಡುಗಡೆಯಾದ ‘ಪುಷ್ಪ – ದಿ ರೈಸ್‍’ ಚಿತ್ರದ ಮುಂದುವರೆದ ಭಾಗವಾಗಿದೆ. ಪುಷ್ಪರಾಜ್‍ ಎಂಬ ಗ್ಯಾಂಗ್‍ಸ್ಟರ್‍ ಜೀವನದಲ್ಲಿ ನಡೆಯುವ ಕಥೆ ಇರುವ ಈ ಚಿತ್ರದಲ್ಲಿ ಪುಷ್ಪರಾಜ್‍ ಆಗಿ ಅಲ್ಲು ಅರ್ಜುನ್‍ ನಟಿಸಿದ್ದಾರೆ. ಇನ್ನು, ಅವರಿಗೆ ನಾಯಕಿಯಾಗಿ ಕನ್ನಡದ ರಶ್ಮಿಕಾ ಮಂದಣ್ಣ ನಟಿಸಿದ್ದಾರೆ.

ಮಿಕ್ಕಂತೆ ಧನಂಜಯ್‍, ಫಹಾದ್‍ ಫಾಸಿಲ್‍, ಸುನೀಲ್, ಅನುಸೂಯ ಭಾರದ್ವಾಜ್‍ ಸೇರಿದಂತೆ ಹಲವರು ಈ ಚಿತ್ರದಲ್ಲಿ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಮೈತ್ರಿ ಮೂವಿ ಮೇಕರ್ಸ್ ನಿರ್ಮಾಣದ ಈ ಚಿತ್ರಕ್ಕೆ ಸುಕುಮಾರ್‍ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ‘ರಾಕ್‍ಸ್ಟಾರ್‍’ ದೇವಿಶ್ರೀ ಪ್ರಸಾದ್‍ ಈ ಚಿತ್ರಕ್ಕೆ ಸಂಗೀತ ಸಂಯೋಜಿಸಿದ್ದಾರೆ.

ಭೂಮಿಕಾ

Recent Posts

ಮಕ್ಕಳನ್ನು ಪ್ರಚೋದಿಸಬೇಡಿ, ಸರಿಯಾದ ದಾರಿ ತೋರಿಸಿ: ಪ್ರಧಾನಿ ಮೋದಿ ಮಹತ್ವದ ಸಂದೇಶ

ನವದೆಹಲಿ: ನೀಟ್‌-ಯುಜಿ 2026 ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ಕುರಿತು ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ನಡುವೆ ಪ್ರಧಾನಿ ನರೇಂದ್ರ ಮೋದಿ…

5 hours ago

ಪ್ರಧಾನಿ ನಿವಾಸದ ಎದುರು ರಾಹುಲ್‌, ಪ್ರಿಯಾಂಕಾ ಪ್ರತಿಭಟನೆ

ನವದೆಹಲಿ: ದೆಹಲಿಯಲ್ಲಿ ಸಿಜೆಪಿ ಬೆಂಬಲಿಗರ ಮೇಲಿನ ಪೊಲೀಸರ ಕ್ರಮ ಖಂಡಿಸಿ, ಲೋಕಸಭೆಯ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಅವರಿಂದು ಪ್ರಧಾನಿ…

5 hours ago

ಖಾಸಗಿ ಆಸ್ಪತ್ರೆಗೆ ಸೋನಮ್‌ ವಾಂಗ್ಚುಕ್‌ ಸ್ಥಳಾಂತರಕ್ಕೆ ದೆಹಲಿ ಹೈಕೋರ್ಟ್‌ ಸೂಚನೆ

ನವದೆಹಲಿ: ಪರೀಕ್ಷಾ ಅಕ್ರಮಗಳ ಆರೋಪದ ಹಿನ್ನೆಲೆಯಲ್ಲಿ ಜೂನ್.‌28ರಿಂದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಸೋನಮ್‌ ವಾಂಗ್ಚುಕ್‌ ಅವರನ್ನು ಇಲ್ಲಿನ ಸಫ್ದರ್‌ಜಂಗ್‌…

6 hours ago

ಹಾರಂಗಿ ಜಲಾಶಯ ಭರ್ತಿಗೆ 8 ಅಡಿ ಬಾಕಿ: ಅನ್ನದಾತರ ಮೊಗದಲ್ಲಿ ಮಂದಹಾಸ

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮುಂಗಾರು ಮಳೆಯ ಆರ್ಭಟ ಮುಂದುವರಿದಿದ್ದು, ಹಾರಂಗಿ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿದೆ. ಹಾರಂಗಿ ಜಲಾಶಯಕ್ಕೆ 3 ಸಾವಿರಕ್ಕೂ…

7 hours ago

ಹುಣಸೂರು: ಇಬ್ಬರು ಮಕ್ಕಳು, ಹೆಂಡತಿಯನ್ನು ಕೊಂದು ಪತಿ ಆತ್ಮಹತ್ಯೆ

ಮೈಸೂರು: ಇಬ್ಬರು ಮಕ್ಕಳು ಹಾಗೂ ಹೆಂಡತಿಯನ್ನು ಕೊಂದು ಬಳಿಕ ಪತಿಯೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ ನಡೆದಿದೆ.…

7 hours ago

ಇಂದು ಚಲೋ ಸಂಸದ್ ಮುಂದುವರಿಯಲಿದೆ: ಅಭಿಜಿತ್‌ ದೀಪ್ಕೆ ಘೋಷಣೆ

ನವದೆಹಲಿ: ಇಂದು ತಮ್ಮ ಪ್ರತಿಭಟನೆ ಹಾಗು ಚಲೋ ಸಂಸದ್‌ ಮುಂದುವರಿಯಲಿದೆ ಎಂದು ಕಾಕ್ರೋಚ್‌ ಜನತಾ ಪಾರ್ಟಿ ಸಂಸ್ಥಾಪಕ ಅಭಿಜಿತ್‌ ದೀಪ್ಕೆ…

10 hours ago