ಮನರಂಜನೆ

ಬಿಡುಗಡೆಗೂ ಮುನ್ನವೇ 1000 ಕೋಟಿ ಕ್ಲಬ್‍ ಸೇರಿದ ‘ಪುಷ್ಪ 2’

ಅಲ್ಲು ಅರ್ಜುನ್‍ ಅಭಿನಯದ ಬಹುನಿರೀಕ್ಷೆಯ ಚಿತ್ರವಾದ ‘ಪುಷ್ಪ 2’, ಡಿಸೆಂಬರ್‍ 6ರಂದು ಜಗತ್ತಿನಾದ್ಯಂತ ಬಿಡುಗಡೆಯಾಗುತ್ತಿದೆ. ಚಿತ್ರ ಬಿಡುಗಡೆಗೂ ಮುನ್ನವೇ 1000 ಕೋಟಿ ರೂ ಕ್ಲಬ್‍ ಸೇರುವ ಮೂಲಕ ಬ್ಲಾಕ್‌ ಬಸ್ಟರ್ ಎಂದೆನಿಸಿಕೊಂಡಿದೆ.

ಹೌದು, ‘ಪುಷ್ಪ 2’ ಚಿತ್ರದ ವಿತರಣೆ, ಡಿಜಿಟಲ್‍, ಸ್ಯಾಟ್‌ಲೈಟ್‍ ಹಕ್ಕುಗಳಿಂದ 1000 ಕೋಟಿ ರೂ ಗಳಿಸಿದೆ ಎಂದು ಹೇಳಲಾಗಿದೆ. ಈ ಪೈಕಿ ವಿತರಣೆ ಹಕ್ಕುಗಳಿಂದ ಚಿತ್ರಕ್ಕೆ 640 ಕೋಟಿ ರೂ. ಬಂದರೆ, ಬೇರೆ ಹಕ್ಕುಗಳಿಂದ 425 ಕೋಟಿ ರೂ. ಗಳಿಕೆ ಎಂದು ಹೇಳಲಾಗುತ್ತಿದೆ. ಅವೆರಡೂ ಸೇರಿ ಚಿತ್ರ 1000 ಕೋಟಿ ರೂ. ಕ್ಲಬ್‍ಗೆ ಸೇರ್ಪಡೆಯಾಗಿದೆ.

ಮೂಲಗಳ ಪ್ರಕಾರ, ಆಂಧ್ರಪ್ರದೇಶ ಮತ್ತು ತೆಲಂಗಾಣದ ವಿತರಕರಿಂದ ಚಿತ್ರವನ್ನು ಎರಡೂ ರಾಜ್ಯಗಳ ಚಿತ್ರಮಂದಿರಗಳಲ್ಲಿ ಚಿತ್ರ ಬಿಡುಗಡೆ ಮಾಡುವುದಕ್ಕೆ ಸುಮಾರು 220 ಕೋಟಿ ರೂ. ಸಿಕ್ಕಿದೆಯಂತೆ. ಮಿಕ್ಕಂತೆ ಉತ್ತರ ಭಾರತದಿಂದ 200 ಕೋಟಿ ಬಂದರೆ, ಹೊರದೇಶಗಳಿಂದ 140 ಕೋಟಿ ರೂ.ಗಳಿಗೆ ಮಾರಾಟವಾಗಿದೆ. ಇನ್ನು, ಕರ್ನಾಟಕ, ತಮಿಳುನಾಡು ಮತ್ತು ಕೇರಳ ರಾಜ್ಯಗಳಿಗೆ 100 ಕೋಟಿ ರೂ. ವಿತರಣೆಯಿಂದಲೇ ಬಂದಿದೆ.

ಇನ್ನು, ಚಿತ್ರದ ಡಿಜಿಟಲ್‍ ಹಕ್ಕುಗಳನ್ನು ನೆಟ್‌ಫ್ಲಿಕ್ಸ್ 275 ಕೋಟಿ ರೂ.ಗಳಿಗೆ ಪಡೆದರೆ, ಸ್ಯಾಟ್‌ಲೈಟ್‍ ಹಕ್ಕುಗಳು 85 ಕೋಟಿ ರೂ.ಗಳಿಗೆ ಮಾರಾಟವಾಗಿದೆಯಂತೆ. ಸಂಗೀತದ ಹಕ್ಕುಗಳು ದಾಖಲೆಯ 65 ಕೋಟಿ ರೂ.ಗಳಿಗೆ ಮಾರಾಟವಾಗಿದೆ ಎಂದು ಹೇಳಲಾಗುತ್ತಿದೆ. ಅಲ್ಲಿಗೆ, ಬರೀ ಹಕ್ಕುಗಳಿಂದಲೇ 425 ಕೋಟಿ ರೂ.ಗಳನ್ನು ಚಿತ್ರತಂಡ ಗಳಿಸಿದೆ.

‘ಪುಷ್ಪ – ದಿ ರೂಲ್‍’ ಚಿತ್ರವು ಕೆಲವು ವರ್ಷಗಳ ಹಿಂದೆ ಬಿಡುಗಡೆಯಾದ ‘ಪುಷ್ಪ – ದಿ ರೈಸ್‍’ ಚಿತ್ರದ ಮುಂದುವರೆದ ಭಾಗವಾಗಿದೆ. ಪುಷ್ಪರಾಜ್‍ ಎಂಬ ಗ್ಯಾಂಗ್‍ಸ್ಟರ್‍ ಜೀವನದಲ್ಲಿ ನಡೆಯುವ ಕಥೆ ಇರುವ ಈ ಚಿತ್ರದಲ್ಲಿ ಪುಷ್ಪರಾಜ್‍ ಆಗಿ ಅಲ್ಲು ಅರ್ಜುನ್‍ ನಟಿಸಿದ್ದಾರೆ. ಇನ್ನು, ರಶ್ಮಿಕಾ ಮಂದಣ್ಣ ನಟಿಸಿದ್ದು, ಮಿಕ್ಕಂತೆ ಧನಂಜಯ್‍, ಫಹಾದ್‍ ಫಾಸಿಲ್‍, ಸುನೀಲ್, ಅನುಸೂಯ ಭಾರದ್ವಾಜ್‍ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ಸಂಸದ ಯದುವೀರ್‌ ಪ್ರಯತ್ನದ ಫಲಶ್ರುತಿ : ತಂಬಾಕು ಮಾರಾಟಕ್ಕೆ ಅನುಮತಿ

ಅಧಿಸೂಚನೆ ಹೊರಡಿಸಿದ ಕೇಂದ್ರ ಸರ್ಕಾರ ಮೈಸೂರು : ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ತಂಬಾಕು ಬೆಳೆಗಾರರ ಸಮಸ್ಯೆಗಳು ಹಾಗೂ ಮಾರಾಟ…

4 hours ago

ಅರಮನೆ ಫಲಪುಷ್ಪ ಪ್ರದರ್ಶನ | ಸಂಗೀತ ಸಂಜೆಯಲ್ಲಿ ಪ್ರೇಕ್ಷಕರು ತಲ್ಲೀನ

ಮೈಸೂರು : ಮೈಸೂರು ಅರಮನೆ ಮಂಡಳಿ ವತಿಯಿಂದ ಕ್ರಿಸ್‌ಮಸ್ ಹಾಗೂ ಹೊಸವರ್ಷದ ಪ್ರಯುಕ್ತ 10 ದಿನಗಳ ‘ಅರಮನೆ ಫಲಪುಷ್ಪ ಪ್ರದರ್ಶನ’…

6 hours ago

ಎತ್ತಿನ ಗಾಡಿಗೆ ಸಾರಿಗೆ ಬಸ್‌ ಡಿಕ್ಕಿ : ಎತ್ತು ಸಾವು

ಹಲಗೂರು : ಎತ್ತಿನ ಗಾಡಿ ತೆರಳುತ್ತಿದ್ದ ವೇಳೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಎತ್ತು ಸ್ಥಳದಲ್ಲೇ ಮೃತಪಟ್ಟ ಘಟನೆ…

6 hours ago

ಮುತ್ತತ್ತಿ : ಕಾವೇರಿ ನದಿ ಸೆಳೆತಕ್ಕೆ ಸಿಲುಕಿ ಯುವಕ ಸಾವು

ಹಲಗೂರು : ಇಲ್ಲಿಗೆ ಸಮೀಪದ ಮುತ್ತತ್ತಿ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದ ವೇಳೆ ನೀರಿನ ಸೆಳೆತಕ್ಕೆ ಸಿಲುಕಿ ಯುವಕ ಮೃತಪಟ್ಟಿರುವ ಘಟನೆ…

6 hours ago

ಪೊಲೀಸ್‌ ಭದ್ರತೆಯಲ್ಲಿ ದೇಗುಲ ಪ್ರವೇಶಿಸಿದ ದಲಿತ ಮಹಿಳೆಯರು : ಶಾಂತಿ ಸಭೆಯಲ್ಲಿ ಪಂಚ ಬೇಡಿಕೆ

ಭಾರತೀನಗರ : ಇಲ್ಲಿಗೆ ಸಮೀಪದ ಕೆ.ಶೆಟ್ಟಹಳ್ಳಿ ಗ್ರಾಮದಲ್ಲಿ ಪೊಲೀಸರ ಭದ್ರತೆಯೊಂದಿಗೆ ಗ್ರಾಮದ ಪರಿಶಿಷ್ಟ ಜಾನಾಂಗದ ಮಹಿಳೆಯರು, ಪುರುಷರು ದೇವಾಲಯಗಳಿಗೆ ಪ್ರವೇಶಿಸಿದರು.…

6 hours ago

ಅಕ್ರಮ ವಿದ್ಯುತ್‌ ಸಂಪರ್ಕ: 31 ಪ್ರಕರಣ ದಾಖಲು, 2.17 ಲಕ್ಷ ರೂ. ದಂಡ

ಮೈಸೂರು : ಅಕ್ರಮವಾಗಿ ವಿದ್ಯುತ್‌ ಸಂಪರ್ಕ ಪಡೆದಿರುವ ಸಂಬಂಧ ಯಶಸ್ವಿ ಕಾರ್ಯಾಚರಣೆ ನಡೆಸಿದ ಚಾಮುಂಡೇಶ್ವರಿ ವಿದ್ಯುತ್‌ ಸರಬರಾಜು ನಿಗಮ ನಿಯಮಿತ(ಚಾವಿಸನಿನಿ)…

6 hours ago