ಮನರಂಜನೆ

ಬಿಡುಗಡೆಗೂ ಮುನ್ನವೇ 1000 ಕೋಟಿ ಕ್ಲಬ್‍ ಸೇರಿದ ‘ಪುಷ್ಪ 2’

ಅಲ್ಲು ಅರ್ಜುನ್‍ ಅಭಿನಯದ ಬಹುನಿರೀಕ್ಷೆಯ ಚಿತ್ರವಾದ ‘ಪುಷ್ಪ 2’, ಡಿಸೆಂಬರ್‍ 6ರಂದು ಜಗತ್ತಿನಾದ್ಯಂತ ಬಿಡುಗಡೆಯಾಗುತ್ತಿದೆ. ಚಿತ್ರ ಬಿಡುಗಡೆಗೂ ಮುನ್ನವೇ 1000 ಕೋಟಿ ರೂ ಕ್ಲಬ್‍ ಸೇರುವ ಮೂಲಕ ಬ್ಲಾಕ್‌ ಬಸ್ಟರ್ ಎಂದೆನಿಸಿಕೊಂಡಿದೆ.

ಹೌದು, ‘ಪುಷ್ಪ 2’ ಚಿತ್ರದ ವಿತರಣೆ, ಡಿಜಿಟಲ್‍, ಸ್ಯಾಟ್‌ಲೈಟ್‍ ಹಕ್ಕುಗಳಿಂದ 1000 ಕೋಟಿ ರೂ ಗಳಿಸಿದೆ ಎಂದು ಹೇಳಲಾಗಿದೆ. ಈ ಪೈಕಿ ವಿತರಣೆ ಹಕ್ಕುಗಳಿಂದ ಚಿತ್ರಕ್ಕೆ 640 ಕೋಟಿ ರೂ. ಬಂದರೆ, ಬೇರೆ ಹಕ್ಕುಗಳಿಂದ 425 ಕೋಟಿ ರೂ. ಗಳಿಕೆ ಎಂದು ಹೇಳಲಾಗುತ್ತಿದೆ. ಅವೆರಡೂ ಸೇರಿ ಚಿತ್ರ 1000 ಕೋಟಿ ರೂ. ಕ್ಲಬ್‍ಗೆ ಸೇರ್ಪಡೆಯಾಗಿದೆ.

ಮೂಲಗಳ ಪ್ರಕಾರ, ಆಂಧ್ರಪ್ರದೇಶ ಮತ್ತು ತೆಲಂಗಾಣದ ವಿತರಕರಿಂದ ಚಿತ್ರವನ್ನು ಎರಡೂ ರಾಜ್ಯಗಳ ಚಿತ್ರಮಂದಿರಗಳಲ್ಲಿ ಚಿತ್ರ ಬಿಡುಗಡೆ ಮಾಡುವುದಕ್ಕೆ ಸುಮಾರು 220 ಕೋಟಿ ರೂ. ಸಿಕ್ಕಿದೆಯಂತೆ. ಮಿಕ್ಕಂತೆ ಉತ್ತರ ಭಾರತದಿಂದ 200 ಕೋಟಿ ಬಂದರೆ, ಹೊರದೇಶಗಳಿಂದ 140 ಕೋಟಿ ರೂ.ಗಳಿಗೆ ಮಾರಾಟವಾಗಿದೆ. ಇನ್ನು, ಕರ್ನಾಟಕ, ತಮಿಳುನಾಡು ಮತ್ತು ಕೇರಳ ರಾಜ್ಯಗಳಿಗೆ 100 ಕೋಟಿ ರೂ. ವಿತರಣೆಯಿಂದಲೇ ಬಂದಿದೆ.

ಇನ್ನು, ಚಿತ್ರದ ಡಿಜಿಟಲ್‍ ಹಕ್ಕುಗಳನ್ನು ನೆಟ್‌ಫ್ಲಿಕ್ಸ್ 275 ಕೋಟಿ ರೂ.ಗಳಿಗೆ ಪಡೆದರೆ, ಸ್ಯಾಟ್‌ಲೈಟ್‍ ಹಕ್ಕುಗಳು 85 ಕೋಟಿ ರೂ.ಗಳಿಗೆ ಮಾರಾಟವಾಗಿದೆಯಂತೆ. ಸಂಗೀತದ ಹಕ್ಕುಗಳು ದಾಖಲೆಯ 65 ಕೋಟಿ ರೂ.ಗಳಿಗೆ ಮಾರಾಟವಾಗಿದೆ ಎಂದು ಹೇಳಲಾಗುತ್ತಿದೆ. ಅಲ್ಲಿಗೆ, ಬರೀ ಹಕ್ಕುಗಳಿಂದಲೇ 425 ಕೋಟಿ ರೂ.ಗಳನ್ನು ಚಿತ್ರತಂಡ ಗಳಿಸಿದೆ.

‘ಪುಷ್ಪ – ದಿ ರೂಲ್‍’ ಚಿತ್ರವು ಕೆಲವು ವರ್ಷಗಳ ಹಿಂದೆ ಬಿಡುಗಡೆಯಾದ ‘ಪುಷ್ಪ – ದಿ ರೈಸ್‍’ ಚಿತ್ರದ ಮುಂದುವರೆದ ಭಾಗವಾಗಿದೆ. ಪುಷ್ಪರಾಜ್‍ ಎಂಬ ಗ್ಯಾಂಗ್‍ಸ್ಟರ್‍ ಜೀವನದಲ್ಲಿ ನಡೆಯುವ ಕಥೆ ಇರುವ ಈ ಚಿತ್ರದಲ್ಲಿ ಪುಷ್ಪರಾಜ್‍ ಆಗಿ ಅಲ್ಲು ಅರ್ಜುನ್‍ ನಟಿಸಿದ್ದಾರೆ. ಇನ್ನು, ರಶ್ಮಿಕಾ ಮಂದಣ್ಣ ನಟಿಸಿದ್ದು, ಮಿಕ್ಕಂತೆ ಧನಂಜಯ್‍, ಫಹಾದ್‍ ಫಾಸಿಲ್‍, ಸುನೀಲ್, ಅನುಸೂಯ ಭಾರದ್ವಾಜ್‍ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ವೈಯಕ್ತಿಕ ದ್ವೇಷ: ಕಾರ್ಮಿಕನನ್ನು ಕೊಲೆಗೈಯ್ದು ಶರಣಾದ ಆರೋಪಿ

ಚೆಟ್ಟಳ್ಳಿ: ಕಾಫಿ ತೋಟದ ಲೈನ್ ಮನೆಯಲ್ಲಿ ವಾಸವಿದ್ದ ಕಾರ್ಮಿಕನೊಬ್ಬ ಮತ್ತೊಬ್ಬ ಕಾರ್ಮಿಕನನ್ನು ಹತ್ಯೆಗೈದು ಪೊಲೀಸ್ ಠಾಣೆಗೆ ಬಂದು ಶರಣಾದ ಘಟನೆ…

5 hours ago

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರೇ ಈಗ ರಾಜ್ಯಸಭೆ ಅಭ್ಯರ್ಥಿ

ನವದೆಹಲಿ: ರಾಜ್ಯಸಭೆ ಚುನಾವಣೆಗೆ ಬಿಜೆಪಿ 9 ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ನಿತಿನ್‌ ನಬಿನ್‌ ಅವರು ಬಿಹಾರದಿಂದ…

5 hours ago

ದುಬೈನಲ್ಲಿ ಸಿಲುಕಿರುವ ಕನ್ನಡಿಗರಿಗೆ ವಿಡಿಯೋ ಕಾಲ್‌ ಮಾಡಿ ಧೈರ್ಯ ಹೇಳಿದ ವಿಜಯೇಂದ್ರ

ಬೆಂಗಳೂರು: ಅಮೇರಿಕಾ, ಇಸ್ರೇಲ್‌-ಇರಾನ್‌ ಯುದ್ಧ ನಡೆಯುತ್ತಿರುವ ಸಂದರ್ಭದಲ್ಲಿ ದುಬೈನಲ್ಲಿ ಸಿಲುಕಿ ಆತಂಕದಲ್ಲಿರುವ ಕನ್ನಡಿಗರ ಜೊತೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಮಾತನಾಡಿ…

6 hours ago

ಬೂದಬಾಳು ಗ್ರಾಮದ ಕೆರೆಗೆ ಬಾಗಿನ ಸಮರ್ಪಿಸಿದ ಶಾಸಕ ಎಂ.ಆರ್.ಮಂಜುನಾಥ್

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಬರಪೀಡಿತ ಪ್ರದೇಶಗಳಲ್ಲಿ ಒಂದಾದ ಬೂದಬಾಳು ಕೆರೆಗೆ ಕಾವೇರಿ ನದಿ ಮೂಲದಿಂದ…

6 hours ago

ಸರ್ಕಾರದಿಂದ ಸಿಗುವ ಸೌಲಭ್ಯವನ್ನು ಪ್ರತಿಯೊಬ್ಬ ರೈತರಿಗೂ ದೊರಕಿಸಿ: ಬಿಜೆಪಿ ಜಿಲ್ಲಾಧ್ಯಕ್ಷ ನಿರಂಜನ್ ಕುಮಾರ್

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಷೇರುದಾರರು ನಿಮ್ಮ ಮೇಲೆ ವಿಶ್ವಾಸವಿಟ್ಟು ಕೃಷಿ ಪತ್ತಿನ ಸಹಕಾರ ಸಂಘದ…

6 hours ago

ಹಾರ್ಮುಜ್‌ ಜನಸಂಧಿಯನ್ನು ಮುಚ್ಚಿದ ಇರಾನ್: ತೈಲ ಬೆಲೆಯಲ್ಲಿ ಭಾರೀ ಏರಿಕೆ

ಟೆಹರಾನ್:‌ ಅಮೇರಿಕಾ ಹಾಗೂ ಇಸ್ರೇಲ್‌ ದೇಶಗಳು ಇರಾನ್‌ ಜೊತೆ ನಡೆಸುತ್ತಿರುವ ಯುದ್ಧವು ಇದೀಗ ವಿಶ್ವದ ಅತ್ಯಂತ ನಿರ್ಣಾಯಕ ಇಂಧನ ಮಾರ್ಗಗಳಲ್ಲಿ…

6 hours ago