ಅಲ್ಲು ಅರ್ಜುನ್ ಅಭಿನಯದ ಬಹುನಿರೀಕ್ಷೆಯ ಚಿತ್ರವಾದ ‘ಪುಷ್ಪ 2’, ಡಿಸೆಂಬರ್ 6ರಂದು ಜಗತ್ತಿನಾದ್ಯಂತ ಬಿಡುಗಡೆಯಾಗುತ್ತಿದೆ. ಚಿತ್ರ ಬಿಡುಗಡೆಗೂ ಮುನ್ನವೇ 1000 ಕೋಟಿ ರೂ ಕ್ಲಬ್ ಸೇರುವ ಮೂಲಕ ಬ್ಲಾಕ್ ಬಸ್ಟರ್ ಎಂದೆನಿಸಿಕೊಂಡಿದೆ.
ಹೌದು, ‘ಪುಷ್ಪ 2’ ಚಿತ್ರದ ವಿತರಣೆ, ಡಿಜಿಟಲ್, ಸ್ಯಾಟ್ಲೈಟ್ ಹಕ್ಕುಗಳಿಂದ 1000 ಕೋಟಿ ರೂ ಗಳಿಸಿದೆ ಎಂದು ಹೇಳಲಾಗಿದೆ. ಈ ಪೈಕಿ ವಿತರಣೆ ಹಕ್ಕುಗಳಿಂದ ಚಿತ್ರಕ್ಕೆ 640 ಕೋಟಿ ರೂ. ಬಂದರೆ, ಬೇರೆ ಹಕ್ಕುಗಳಿಂದ 425 ಕೋಟಿ ರೂ. ಗಳಿಕೆ ಎಂದು ಹೇಳಲಾಗುತ್ತಿದೆ. ಅವೆರಡೂ ಸೇರಿ ಚಿತ್ರ 1000 ಕೋಟಿ ರೂ. ಕ್ಲಬ್ಗೆ ಸೇರ್ಪಡೆಯಾಗಿದೆ.
ಮೂಲಗಳ ಪ್ರಕಾರ, ಆಂಧ್ರಪ್ರದೇಶ ಮತ್ತು ತೆಲಂಗಾಣದ ವಿತರಕರಿಂದ ಚಿತ್ರವನ್ನು ಎರಡೂ ರಾಜ್ಯಗಳ ಚಿತ್ರಮಂದಿರಗಳಲ್ಲಿ ಚಿತ್ರ ಬಿಡುಗಡೆ ಮಾಡುವುದಕ್ಕೆ ಸುಮಾರು 220 ಕೋಟಿ ರೂ. ಸಿಕ್ಕಿದೆಯಂತೆ. ಮಿಕ್ಕಂತೆ ಉತ್ತರ ಭಾರತದಿಂದ 200 ಕೋಟಿ ಬಂದರೆ, ಹೊರದೇಶಗಳಿಂದ 140 ಕೋಟಿ ರೂ.ಗಳಿಗೆ ಮಾರಾಟವಾಗಿದೆ. ಇನ್ನು, ಕರ್ನಾಟಕ, ತಮಿಳುನಾಡು ಮತ್ತು ಕೇರಳ ರಾಜ್ಯಗಳಿಗೆ 100 ಕೋಟಿ ರೂ. ವಿತರಣೆಯಿಂದಲೇ ಬಂದಿದೆ.
ಇನ್ನು, ಚಿತ್ರದ ಡಿಜಿಟಲ್ ಹಕ್ಕುಗಳನ್ನು ನೆಟ್ಫ್ಲಿಕ್ಸ್ 275 ಕೋಟಿ ರೂ.ಗಳಿಗೆ ಪಡೆದರೆ, ಸ್ಯಾಟ್ಲೈಟ್ ಹಕ್ಕುಗಳು 85 ಕೋಟಿ ರೂ.ಗಳಿಗೆ ಮಾರಾಟವಾಗಿದೆಯಂತೆ. ಸಂಗೀತದ ಹಕ್ಕುಗಳು ದಾಖಲೆಯ 65 ಕೋಟಿ ರೂ.ಗಳಿಗೆ ಮಾರಾಟವಾಗಿದೆ ಎಂದು ಹೇಳಲಾಗುತ್ತಿದೆ. ಅಲ್ಲಿಗೆ, ಬರೀ ಹಕ್ಕುಗಳಿಂದಲೇ 425 ಕೋಟಿ ರೂ.ಗಳನ್ನು ಚಿತ್ರತಂಡ ಗಳಿಸಿದೆ.
‘ಪುಷ್ಪ – ದಿ ರೂಲ್’ ಚಿತ್ರವು ಕೆಲವು ವರ್ಷಗಳ ಹಿಂದೆ ಬಿಡುಗಡೆಯಾದ ‘ಪುಷ್ಪ – ದಿ ರೈಸ್’ ಚಿತ್ರದ ಮುಂದುವರೆದ ಭಾಗವಾಗಿದೆ. ಪುಷ್ಪರಾಜ್ ಎಂಬ ಗ್ಯಾಂಗ್ಸ್ಟರ್ ಜೀವನದಲ್ಲಿ ನಡೆಯುವ ಕಥೆ ಇರುವ ಈ ಚಿತ್ರದಲ್ಲಿ ಪುಷ್ಪರಾಜ್ ಆಗಿ ಅಲ್ಲು ಅರ್ಜುನ್ ನಟಿಸಿದ್ದಾರೆ. ಇನ್ನು, ರಶ್ಮಿಕಾ ಮಂದಣ್ಣ ನಟಿಸಿದ್ದು, ಮಿಕ್ಕಂತೆ ಧನಂಜಯ್, ಫಹಾದ್ ಫಾಸಿಲ್, ಸುನೀಲ್, ಅನುಸೂಯ ಭಾರದ್ವಾಜ್ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.
ಬೆಂಗಳೂರು: ಅಗತ್ಯ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಬಂಡೀಪುರ ಹಾಗೂ ನಾಗರಹೊಳೆ ಉದ್ಯಾನಗಳಲ್ಲಿ ಸಫಾರಿ ಆರಂಭಿಸಿ ಎಂದು ಸಿಎಂ ಡಿ.ಕೆ.ಶಿವಕುಮಾರ್…
ವೆನೆಜುವೆಲಾ: ಇಲ್ಲಿ ಬುಧವಾರ ಸಂಜೆ ಸಂಭವಿಸಿದ ಎರಡು ಪ್ರಬಲ ಭೂಕಂಪಗಳಲ್ಲಿ ಮೃತಪಟ್ಟವರ ಸಂಖ್ಯೆ 1700ಕ್ಕೆ ಏರಿಕೆಯಾಗಿದೆ. ಈ ದುರಂತದಲ್ಲಿ 5000ಕ್ಕೂ…
ಜೈಪುರ: ರಾಜಸ್ಥಾನ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಪ್ಯಾರಾಮೆಡಿಕಲ್ ಪರೀಕ್ಷೆಯಲ್ಲಿ ಸಾಮೂಹಿಕ ನಕಲು ನಡೆಯುತ್ತಿದ್ದ ವೇಳೆಯೇ ಪರೀಕ್ಷೆ ಹಾಲ್ ಮೇಲೆ ಪೊಲೀಸರು…
ಹಾಸನ: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯು ಆರಂಭವಾಗಿದೆ. ಹಾಸನದಲ್ಲಿ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್…
ಬೆಂಗಳೂರು: ನಾಡಿನ ಖ್ಯಾತ ಹಾಗೂ ಅಂತರಾಷ್ಟ್ರೀಯ ಖ್ಯಾತಿಯ ಕಲಾವಿದರಾದ, ದಲಿತ ಸಂಘರ್ಷ ಸಮಿತಿಯ ಕಾರ್ಯಕರ್ತ ಕೆ.ಟಿ. ಶಿವಪ್ರಸಾದ್(77) ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.…
ನವದೆಹಲಿ: ದೇಶದಲ್ಲಿ ಈ ಬಾರಿ ಮುಂಗಾರು ಮಳೆ ಸಂಪೂರ್ಣವಾಗಿ ಕೈಕೊಟ್ಟಿದ್ದು, ಕಳೆದ 126 ವರ್ಷಗಳ ಇತಿಹಾಸದಲ್ಲೇ ಜೂನ್ ತಿಂಗಳಿನಲ್ಲಿ ಮೂರನೇ…