ಮನರಂಜನೆ

ಕನ್ನಡ ಆಯ್ತು, ತಮಿಳಿನಲ್ಲೂ ಆರ್ ಚಂದ್ರು ಚಿತ್ರ ನಿರ್ಮಾಣ

ಆರ್. ಚಂದ್ರು ತಮ್ಮ ಆರ್‍.ಸಿ. ಸ್ಟುಡಿಯೋಸ್‍ ಬ್ಯಾನರ್‍ನಡಿ ಐದು ಚಿತ್ರಗಳನ್ನು ನಿರ್ಮಿಸುತ್ತಿರುವುದಾಗಿ ಘೋಷಿಸಿದ್ದರು. ಈ ಪೈಕಿ ಮೊದಲ ಚಿತ್ರವಾದ ‘ಫಾದರ್‍’ ಚಿತ್ರೀಕರಣ ಈಗಾಗಲೇ ಪ್ರಾರಂಭವಾಗಿದೆ. ಮೈಸೂರಿನಲ್ಲಿ ‘ಡಾರ್ಲಿಂಗ್‍’ ಕೃಷ್ಣ ಮುಂತಾದವರು ಅಭಿನಯಿಸುತ್ತಿರುವ ದೃಶ್ಯಗಳನ್ನು ಚಿತ್ರೀಕರಣ ಮಾಡಲಾಗಿದೆ. ಈ ಮಧ್ಯೆ, ಅವರು ತಮಿಳಿಗೆ ಹೊರಟು ನಿಂತಿದ್ದಾರೆ. ತಮಿಳಿನಲ್ಲಿ ಚಂದ್ರು ಒಂದು ಚಿತ್ರ ನಿರ್ಮಿಸುತ್ತಿದ್ದು, ಈ ಚಿತ್ರವನ್ನು ದಯಾಳ್‍ ಪದ್ಮನಾಭನ್‍ ನಿರ್ದೇಶನ ಮಾಡುತ್ತಿದ್ದಾರೆ.

ದಯಾಳ್‍ಗೆ ತಮಿಳು ಚಿತ್ರರಂಗ ಹೊಸದೇನಲ್ಲ. ಈ ಹಿಂದೆ ತಮ್ಮದೇ ‘ಆ ಕರಾಳ ರಾತ್ರಿ’ ಚಿತ್ರವನ್ನು ತಮಿಳಿಗೆ ‘ಕೊಂಡ್ರಾಳ್‍ ಪಾವಂ’ ಎಂಬ ಹೆಸರಿನಲ್ಲಿ ರೀಮೇಕ್ ಮಾಡಿದ್ದರು. ನಂತರ ‘ಮಾರುತಿ ನಗರ್‍ ಪೊಲೀಸ್‍ ಸ್ಟೇಶನ್‍’ ಎಂಬ ಇನ್ನೊಂದು ಚಿತ್ರವನ್ನೂ ತಮಿಳಿನಲ್ಲಿ ನಿರ್ದೇಶಿಸಿದ್ದರು. ಈಗ ಮೂರನೆಯ ಚಿತ್ರವಾಗಿ, ಚಂದ್ರು ನಿರ್ಮಾಣದ ಚಿತ್ರವನ್ನು ಕೈಗೆತ್ತಿಕೊಳ್ಳುತ್ತಿದ್ದಾರೆ ದಯಾಳ್‍. ಇನ್ನೂ ಹೆಸರಿಡದ ಈ ಚಿತ್ರವು ಆಗಸ್ಟ್ ಮಧ್ಯದಲ್ಲಿ ಪ್ರಾರಂಭವಾಲಿದೆ.

ಇದೊಂದು ಪ್ಯಾನ್‍ ಇಂಡಿಯಾ ಚಿತ್ರವಾಗಿದ್ದು ಐದು ಭಾಷೆಗಳಲ್ಲಿ ಬಿಡುಗಡೆಯಾಗಲಿದೆ. ಸಾಮಾನ್ಯವಾಗಿ ಪ್ಯಾನ್‍ ಇಂಡಿಯಾದ ಚಿತ್ರವೆಂದರೆ, ಗ್ರಾಫಿಕ್ಸ್, ಫ್ಯಾಂಟಸಿ ಎಲ್ಲವೂ ಹೆಚ್ಚಿರುತ್ತದೆ. ಆದರೆ, ಇದು ಕಂಟೆಂಟ್ ಇರುವ ಕ್ರೈಂ ಥ್ರಿಲ್ಲರ್‍ ಚಿತ್ರವಂತೆ. ಚಿತ್ರದಲ್ಲಿ ಗುರು ಸೋಮಸುಂದರಂ ಮತ್ತು ನಿಹಾರಿಕಾ ಕೊನಿಡೆಲಾ ನಾಯಕ-ನಾಯಕಿಯಾಗಿ ನಟಿಸುತ್ತಿದ್ದಾರೆ. ಅಚ್ಯುತ್‍ ಕುಮಾರ್‍, ಲಿಝಿ ಆ್ಯಂಟೋನಿ ಪ್ರಮುಖ ಪಾತ್ರಗಳಲ್ಲಿ ನಟಿಸುತ್ತಿದ್ದಾರೆ. ಈಗಾಗಲೇ ಪ್ರೀ-ಪ್ರೊಡಕ್ಷನ್ ಕೆಲಸಗಳು ಒಂದು ಹಂತಕ್ಕೆ ಬಂದಿದ್ದು, ಚಿತ್ರೀಕರಣ ಮಾತ್ರ ಬಾಕಿ ಇದೆ.

ವಿಶೇಷವೆಂದರೆ, ಒಂದು ಕಾಲಕ್ಕೆ ದಯಾಳ್‍ ಚಿತ್ರಗಳಿಗೆ ಆರ್. ಚಂದ್ರು ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡಿದ್ದರು. ಈಗ ದಯಾಳ್‍, ಅದೇ ಚಂದ್ರು ನಿರ್ಮಾಣದಲ್ಲಿ ಚಿತ್ರ ನಿರ್ಮಿಸುತ್ತಿರುವುದು ವಿಶೇಷ.

ಈ ಮಧ್ಯೆ, ಚಂದ್ರು ನಿರ್ಮಾಣದ ‘ಫಾದರ್‍’ ಚಿತ್ರಕ್ಕೂ ದಯಾಳ್‍ ಕಾರ್ಯಕಾರಿ ನಿರ್ಮಾಪಕರಾಗಿ ಕೆಲಸ ಮಾಡುತ್ತಿದ್ದಾರೆ. ಈ ಹಿಂದೆ ಅವರು ‘ಗಾಳಿಪಟ’ ಮತ್ತು ‘ಸಂತು ಸ್ಟ್ರೇಟ್‍ ಫಾರ್ವರ್ಡ್’ ಚಿತ್ರಗಳ ಕಾರ್ಯಕಾರಿ ನಿರ್ಮಾಪಕರಾಗಿದ್ದವರು. ಈಗ ಮೂರನೆಯ ಬಾರಿಗೆ ದಯಾಳ್‍, ‘ಫಾದರ್‍’ ಚಿತ್ರವನ್ನು ಕಾರ್ಯಕಾರಿ ನಿರ್ಮಾಪಕರಾಗಿ ಮುನ್ನಡೆಸುತ್ತಿದ್ದಾರೆ.

ಭೂಮಿಕಾ

Recent Posts

2.20ಕೋಟಿ ರೂ.ಮೌಲ್ಯದ ಚಿನ್ನಾಭರಣ ವಶ ; 26 ಮಂದಿ ಬಂಧನ.

ಮಂಡ್ಯ : ಜಿಲ್ಲೆಯ ನಾಲ್ಕು ಪೊಲೀಸ್ ಉಪ ವಿಭಾಗಗಳಲ್ಲಿ ನಡೆದಿದ್ದ ಕಳ್ಳತನ ಪ್ರಕರಣಗಳನ್ನು ಪೊಲೀಸರು ಬೇಧಿಸಿದ್ದಾರೆ. 28 ಮಂದಿ ಆರೋಪಿಗಳನ್ನು…

10 hours ago

ತಳಸಮುದಾಯಕ್ಕೆ ಆರ್ಥಿಕ ಸಾಮಾಜಿಕ ಶಕ್ತಿ ಅಗತ್ಯ : ಸಿಎಂ

ಬಾಗಲಕೋಟೆ : ಕಾಂಗ್ರೆಸ್ ಸರ್ಕಾರ ಮಹಿಳೆಯರು, ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು ಸೇರಿದಂತೆ ಶೋಷಿತ ವರ್ಗಗಳ ಏಳಿಗೆಗೆ ಶ್ರಮಿಸುತ್ತಿದೆ. ತಳಸಮುದಾಯದವರಿಗೆ ಆರ್ಥಿಕ…

10 hours ago

ಅಭಿವೃದ್ಧಿ ವಿಷಯದಲ್ಲಿ ರಾಜ್ಯ ಸರ್ಕಾರದ ಜತೆ ನಿಲ್ಲುತ್ತೇನೆ : ಕೇಂದ್ರ ಸಚಿವ ಎಚ್‌ಡಿಕೆ

ರಾಯಚೂರು : ಜಿಲ್ಲೆಯ ಸಿಂಧನೂರು ಪಟ್ಟಣದ ಶ್ರೀ ಕೃಷ್ಣದೇವರಾಯ ವಿದ್ಯಾಸಂಸ್ಥೆಯಲ್ಲಿ ನೂತನವಾಗಿ ಸ್ಥಾಪಿಸಲಾಗಿರುವ ಸೈನಿಕ ಶಾಲೆಯನ್ನು ಕೇಂದ್ರದ ಬೃಹತ್ ಕೈಗಾರಿಕೆ…

10 hours ago

IPL 2026 | ಮುಂಬೈ ವಿರುದ್ಧ ಡೆಲ್ಲಿಗೆ ಭರ್ಜರಿ ಜಯ

ನವದೆಹಲಿ : ಸಮೀರ್ ರಿಜ್ವಿ ಸ್ಫೋಟಕ ಬ್ಯಾಟಿಂಗ್ ಜತೆಗೆ ಸಂಘಟಿತ ಬೌಲಿಂಗ್ ನೆರವಿನಿಂದ ಮುಂಬೈ ಇಂಡಿಯನ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್…

11 hours ago

ಇರಾನ್ ಮೇಲೆ ಕ್ಷಿಪಣಿ ದಾಳಿ ; ಬುಶೆಹರ್ ಅಣುಸ್ಥಾವರದ ಬಳಿ ಹಾನಿ

ಟೆಹ್ರಾನ್ : ಅಮೆರಿಕದ ಮಿತ್ರರಾಷ್ಟ್ರಗಳಲ್ಲಿನ ಸೇನಾ ನೆಲೆಗಳ ಮೇಲೆ ಇರಾನ್ ಕ್ಷಿಪಣಿ ದಾಳಿ ಮುಂದುವರಿದಿರುವಂತೆಯೇ ಇತ್ತ ಇರಾನ್ ಮೇಲೆ ಮುಗಿಬಿದ್ದಿರುವ…

11 hours ago

ಇಂಧನ ವ್ಯತ್ಯಯ ಆತಂಕ ; ಎಲೆಕ್ಟ್ರಿಕ್‌ ವಾಹನ ಮಾರಾಟದಲ್ಲಿ ಏರಿಕೆ

ಬೆಂಗಳೂರು : ಯುದ್ಧದ ಪರಿಣಾಮ ಕೆಲ ಉದ್ಯಮಗಳಿಗೆ ಹೊಡೆತ ನೀಡಿದರೆ, ಇನ್ನೂ ಕೆಲವು ಕ್ಷೇತ್ರಗಳಿಗೆ ಅದೇ ಅವಕಾಶವಾಗಿ ಪರಿಣಮಿಸಿದೆ. ಅದರಲ್ಲೂ…

11 hours ago